ಚಾಣಕ್ಯ ಆಡಳಿತ ತರಬೇತಿ ಯೋಜನೆ: ಅರ್ಜಿ ಆಹ್ವಾನ

ಸಪ್ತಸಾಗರ ವಾರ್ತೆ, ವಿಜಯಪಯರ, ನ. 27:ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯು ರಾಜ್ಯ ಬ್ರಾಹ್ಮಣ ಸಮುದಾಯದ ಪ್ರತಿಭಾವಂತ ಪದವೀಧರರಿಗೆ ನಾಗರಿಕ ಸೇವೆಗಳಾದ ಐ.ಎ.ಎಸ್ ಅಥವಾ ಕೆ.ಎ.ಎಸ್ ಸ್ಪಧಾತ್ಮಕ ಪರೀಕ್ಷೆಗಳನ್ನು ಬರೆಯಲು ಉತ್ತೇಜನ ನೀಡುವ ಸಲುವಾಗಿ ಚಾಣಕ್ಯ ಆಡಳಿತ ತರಬೇತಿ ಯೋಜನೆಯನ್ನು ಹಮ್ಮಿಕೊಳ್ಳಲಾಗಿದೆ.ಐ.ಎ.ಎಸ್ ಅಥವಾ ಕೆ.ಎ.ಎಸ್. ಸ್ಪಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ತರಬೇತಿ ಪಡೆಯುವ ಸಂಬಂಧ 2025-26ನೇ ಸಾಲಿನಲ್ಲಿ ಪ್ರವೇಶಾತಿ ಪಡೆದು, ಪಾವತಿಸಲಾದ ತರಬೇತಿ ಶುಲ್ಕದ ಮೊತ್ತದಲ್ಲಿ ಗರಿಷ್ಠ ರೂ.1 ಲಕ್ಷ ಗಳಿಗೆ ಮಿತಿಗೊಳಿಸಿ ಡಿಬಿಟಿ ಮೂಲಕ ನೇರವಾಗಿ ವಿದ್ಯಾರ್ಥಿಗಳಿಗೆ…

Read More

ವಿವಿಧ ವೈದ್ಯರ ಗುತ್ತಿಗೆ ಆಧಾರ ನೇಮಕಾತಿಗೆ ನೇರ ಸಂದರ್ಶನಕ್ಕೆ ಅರ್ಜಿ ಆಹ್ವಾನ

ಸಪ್ತಸಾಗರ ವಾರ್ತೆ, ವಿಜಯಪುರ, ನ.27: ಜಿಲ್ಲಾಸ್ಪತ್ರೆಯ ಆವರಣದಲ್ಲಿರುವ ಶ್ರೀ ಪುಟ್ಟರಾಜ ಗವಾಯಿ ಟ್ರಾಮಾಕೇರ್ ನಲ್ಲಿ ತಜ್ಞ ವೈದ್ಯರು, ಹಿರಿಯ ವೈದ್ಯಾಧಿಕಾರಿ, ತುರ್ತು ಚಿಕಿತ್ಸಾ ವೈದ್ಯಾಧಿಕಾರಿ ಹಾಗೂ ಅರೆ ವೈದ್ಯಕೀಯ ಹುದ್ದೆಗಳನ್ನು ತಾತ್ಕಾಲಿಕವಾಗಿ ಒಂದು ವರ್ಷದ ಅವಧಿಗೆ ಗುತ್ತಿಗೆ ಆಧಾರದ ಮೇರೆಗೆ ಷರತ್ತು ಹಾಗೂ ನಿಬಂಧನೆಗೊಳಪಟ್ಟು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ನೇರ ಸಂದರ್ಶನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.ಜನರಲ್ ಸರ್ಜರಿ ತಜ್ಞ, ಮೂಳೆ ಮತ್ತು ಕೀಲು ಶಸ್ತ್ರಚಿಕಿತ್ಸಕ ತಜ್ಞ,,ಅನಸ್ತೇಸಿಯಾ ತಜ್ಞ, ರೇಡಿಯಾಲಜಿ ತಜ್ಞ, ನ್ಯೂರೊ ಸರ್ಜರಿ ತಜ್ಞ ಹಾಗೂ ಹಿರಿಯ…

Read More

ಈರುಳ್ಳಿ ದರ ಕುಸಿಯದಂತೆ ಕ್ರಮಕ್ಕೆ ಅಧಿಕಾರಿಗಳಿಗೆ ಸಚಿವರ ಸೂಚನೆ

ಸಪ್ತಸಾಗರ ವಾರ್ತೆ, ವಿಜಯಪುರ, ನ. 27 : ರಾಜ್ಯದಲ್ಲಿ ಈರುಳ್ಳಿ ಬೆಳೆಗೆ ದರ ಕುಸಿಯದಂತೆ ಹಾಗೂ ರೈತರಿಗೆ ಅನ್ಯಾಯವಾಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಕೃಷಿ ಮಾರುಕಟ್ಟೆ ಸಚಿವರು ಇಲಾಖೆಯ ಅಧಿಕಾರಿಗೆ ನಿರ್ದೇಶನ ನೀಡಿದ್ದಾರೆ.ಗುರುವಾರ ಬಸವನಬಾಗೇವಾಡಿ ಕೃಷಿ ಮಾರುಕಟ್ಟೆಯಲ್ಲಿ ವ್ಯಾಪಾರಿಗಳು ಕಡಿಮೆ ದರಕ್ಕೆ ಈರುಳ್ಳಿ ಖರೀದಿಸುತ್ತಿದ್ದಾರೆ ಎಂಬ ಮಾಹಿತಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಕೂಡಲೇ ಕೃಷಿ ಮಾರುಕಟ್ಟೆ, ಜವಳಿ, ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ಸಚಿವರಾದ ಶಿವಾನಂದ ಪಾಟೀಲ ಅವರು ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿ, ಸ್ಥಳಕ್ಕೆ ತೆರಳಿ…

Read More

ತಿಕೋಟಾದಲ್ಲಿ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆ

ಸಪ್ತಸಾಗರ ವಾರ್ತೆ, ವಿಜಯಪುರ, ನ. 27: ಜಿಲ್ಲೆಯ ತಿಕೋಟಾ ತಾಲೂಕಿನ ಹೊನವಾಡ ಗ್ರಾಮ ಪಂಚಾಯಿತಿ ಕಾರ್ಯಾಲಯದಲ್ಲಿ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಜರುಗಿತು.ಈ ಸಭೆಯಲ್ಲಿ ತಿಕೋಟಾ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಯ ಸಮಿತಿಯ ಅಧ್ಯಕ್ಷ ಗುರುಪಾದಗೌಡ ದಾಶ್ಯಾಳ ಅವರು ಮಾತನಾಡಿ, ‘ಪ್ರಜಾಪ್ರಭುತ್ವ’- ಜನರಿಗಾಗಿ, ಜನರಿಂದ, ಜನರಿಗೋಸ್ಕರ ಇರುವ ಆಡಳಿತ. ಅದು ನಮ್ಮೆಲ್ಲರ ಜೀವನಶೈಲಿ ಮತ್ತು ನಾವು ಪ್ರತಿದಿನ ಎದುರಿಸುವ ಹಕ್ಕುಗಳು ಹಾಗೂ ಜವಾಬ್ದಾರಿಗಳ ಸಂಕೇತವಾಗಿದೆ. ಪ್ರತಿಯೊಬ್ಬ ಪ್ರಜೆಯನ್ನೂ ಸಮಾನತೆಯೆಡೆಗೆ ಕರೆದೊಯ್ಯವುದೇ ಸಂವಿದಾನದ ಆಶಯವಾಗಿತ್ತು. ಸಂವಿಧಾನ ಜಾರಿಗೆ…

Read More

ಕೃಷಿ ಸೇನಾನಿಯ ಸಾಧನೆ: ಸಕ್ಕರೆ ಸಚಿವರ ಮೆಚ್ಚುಗೆ

ಸಪ್ತಸಾಗರ ವಾರ್ತೆ, ವಿಜಯಪುರ, ನ. 27 : ತಮ್ಮ ಕ್ಷೇತ್ರದಲ್ಲಿ ಹನಿ ನೀರಾವರಿ ಪದ್ಧತಿಯಲ್ಲಿ ಸಂಶೋಧನಾ ಹಂತದಲ್ಲಿರುವ ಕಬ್ಬು ಬೆಳೆದು, ಅಧಿಕ ಇಳುವರಿಯ ಸಾಧನೆ ಮಾಡಿರುವ ಮಾಜಿ ಸೈನಿಕ-ರೈತನನ್ನು ಸ್ವಯಂ ಕಬ್ಬು ಅಭಿವೃದ್ಧಿ, ಸಕ್ಕರೆ ಸಚಿವರೇ ಸನ್ಮಾನಿಸಿ, ಗೌರವಿಸಿ, ಪ್ರೋತ್ಸಾಹ ನೀಡಿದ್ದಾರೆ.ಬಸವನಬಾಗೇವಾಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ನಿಡಗುಂದಿ ತಾಲೂಕಿನ ಗೊಳಸಂಗಿ ಗ್ರಾಮದಲ್ಲಿ ಮಾಜಿ ಸೈನಿಕ ನಾರಾಯಣ ಸಾಳುಂಕೆ ಎಂಬವರು ಕೇವಲ ಮೂರು ವರ್ಷದಲ್ಲಿ ಕಬ್ಬು ಬೆಳೆಯಲ್ಲಿ ಅನುಕರಣೀಯ ಸಾಧನೆ ಮಾಡಿದ್ದಾರೆ. ಇದನ್ನರಿತ ಕ್ಷೇತ್ರದ ಶಾಸಕರೂ ಆಗಿರುವ ಕಬ್ಬು…

Read More

ನೂತನ ವಿಜಯಪುರ ಸೌಹಾರ್ದ ಸಹಕಾರಿಗಳ ಒಕ್ಕೂಟದ ಕಚೇರಿ ಪ್ರಾರಂಭ

ಸಪ್ತಸಾಗರ ವಾರ್ತೆ, ವಿಜಯಪುರ, ನ. 26: ನೂತನವಾಗಿ ನೋಂದಣಿಯಾಗಿರುವ ವಿಜಯಪುರ ಸೌಹಾರ್ದ ಸಹಕಾರಿಗಳ ಒಕ್ಕೂಟದ (ಯುನಿಯನ್) ಕಚೇರಿ ನಗರದ ಸೊಲ್ಲಾಪುರ ರಸ್ತೆ ಚಾಲುಕ್ಯ ನಗರದಲ್ಲಿ ಮಹಾಲಕ್ಷ್ಮಿ ಪೂಜೆಯನ್ನು ನೆರವೇರಿಸಿ ಪ್ರಾರಂಭ ಮಾಡಲಾಯಿತು.ಈ ಸಂದರ್ಭದಲ್ಲಿ ಒಕ್ಕೂಟದ ಅಧ್ಯಕ್ಷ ಸಂಜಯ ಪಾಟೀಲ ಕನಮಡಿ , ಉಪಾಧ್ಯಕ್ಷ ಚಂದ್ರಶೇಖರ ಕವಟಗಿ,ನೂತನ ಆಡಳಿತ ಮಂಡಳಿ ಸದಸ್ಯರಾದ ಅರುಣ ವಾರದ , ಸುರೇಶ ಬಿರಾದಾರ, ಸಿದ್ದು ಮಲ್ಲಿಕಾರ್ಜುನಮಠ, ಅರುಣ ಮಠ, ಮೌನೇಶ ಪತ್ತಾರ, ಸತೀಶ ಶಿಂತ್ರೆ , ವಿವೇಕಾನಂದ ಶಿರೋಳ್ಕರ್ , ಯಮನಪ್ಪ ಸಾತಿಹಾಳ…

Read More

2.50 ಲಕ್ಷ ಖಾಲಿ ಹುದ್ದೆ ಭರ್ತಿಗೆ ಕ್ರಮ:ಪರಮೇಶ್ವರ್

ಸಪ್ತಸಾಗರ ವಾರ್ತೆ,ವಿಜಯಪುರ, ನ. 26:ರಾಜ್ಯದ ಪೊಲೀಸ್ ಇಲಾಖೆಯಲ್ಲಿ ಖಾಲಿ ಬಿದ್ದಿರುವ 2.50 ಲಕ್ಷ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದರು.ಬುಧವಾರ ನಗರದಲ್ಲಿ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ ಸಂದರ್ಭದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದರು.ಚುನಾವಣೆಯಲ್ಲಿ ಮುಂದಿನ ಐದು ವರ್ಷಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುತ್ತೇವೆಂದು ಹೇಳಿದ್ದೇವು.ಒಳ ಮೀಸಲಾತಿಯಿಂದ ತಡವಾಗಿದೆ.ಈಗ ನೇಮಕಾತಿ ಮಾಡುತ್ತೇವೆ. ಭರವಸೆಯಂತೆ ನಡೆದುಕೊಳ್ಳುತ್ತಿದ್ದೇವೆ ಎಂದರು.ಪೊಲೀಸ್ ಇಲಾಖೆಯಲ್ಲಿ ಬಡ್ತಿ ವಿಳಂಬ ವಿಚಾರವಾಗಿ ಪ್ರತಿಕ್ರಿಯೆ ನೀಡಿ,ಹಿಂದೆ ನಾನು ಗೃಹ ಸಚಿವನಾಗಿದ್ದಾಗ12000…

Read More

ಸಂವಿಧಾನದ ಆಶಯ ಯುವಜನತೆ ಅರಿತುಕೊಳ್ಳಬೇಕು- ಸಂಗಮೇಶ ಬಬಲೇಶ್ವರ ಕರೆ

ಸಪ್ತಸಾಗರ ವಾರ್ತೆ, ವಿಜಯಪುರ ನ.26:ಸಮಾಜದಲ್ಲಿ ನಾವೆಲ್ಲರೂ ಸಮಾನರು, ತಾರತಮ್ಯ ಬೇಧ-ಭಾವ ತೊರೆದು ಎಲ್ಲರೂ ಸಮಾನರೆಂಬುದು ಸಂವಿಧಾನ ತಿಳಿಸುತ್ತದೆ. ನಮ್ಮ ಸಂವಿಧಾನದ ಆಶಯಗಳಿಗನುಗುಣವಾಗಿ ನಡೆಯೋಣ ಎಂದು ಧಾರವಾಡದ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷರಾದ ಸಂಗಮೇಶ್ವರ ಬಬಲೇಶ್ಚರ ಅವರು ಹೇಳಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಮಂಗಳವಾರ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ನಡೆದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಹಾಗೂ ಭಾರತದ ಸಂವಿಧಾನ ಪ್ರಸ್ತಾವನೆಗೆ ಪುಷ್ಪಾರ್ಚನೆ ಮಾಡಿ, ಅವರು…

Read More

ಡಿ.1ರಂದು ಫೋನ್-ಇನ್ ಕಾರ್ಯಕ್ರಮ

ಸಪ್ತಸಾಗರ ವಾರ್ತೆ, ವಿಜಯಪುರ ನ.26:ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಮೂಲಕ ಪ್ರಯಾಣಿಕರ ಅನುಕೂಲಕ್ಕಾಗಿ ಅಹವಾಲು ಮತ್ತು ಕುಂದು-ಕೊರತೆಗಳನ್ನು ಆಲಿಸಲುದಿನಾಂಕ: 01-12-2025ರ ಸೋಮವಾರ ಮಧ್ಯಾಹ್ನ 3.30 ರಿಂದ 4.30ರವರೆಗೆ ಫೋನ್-ಇನ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.ದೂರವಾಣಿ 6366423887 ಸಂಖ್ಯೆಗೆ ಸಾರ್ವಜನಿಕರು ಕರೆ ಮಾಡಿ, ತಮ್ಮ ಕುಂದು-ಕೊರತೆಗಳನ್ನು ಪರಿಹರಿಸಿಕೊಳ್ಳಬಹುದಾಗಿದ್ದು, ಸಾರ್ವಜನಿಕರು ಫೋನ್-ಇನ್ ಕಾರ್ಯಕ್ರಮದಲ್ಲಿ ಭಾಗವಹಿಸಿ, ಸದುಪಯೋಗ ಪಡೆದುಕೊಳ್ಳಬೇಕೆಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿ ನಾರಾಯಣಪ್ಪ ಕುರುಬರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ನ.28ರಂದು ವಿಕಲಚೇತನರ ಕುಂದು ಕೊರತೆ ಸಭೆ

ಸಪ್ತಸಾಗರ ವಾರ್ತೆ, ವಿಜಯಪುರ ನ.26:ವಿಕಲಚೇತನರ ಜಿಲ್ಲಾ ಮಟ್ಟದ ಕುಂದು-ಕೊರತೆ ಸಭೆಯನ್ನು ಜಿಲ್ಲಾಧಿಕಾರಿ ಅವರ ಅಧ್ಯಕ್ಷತೆಯಲ್ಲಿ ನವೆಂಬರ್ 28ರ ಬೆಳಿಗ್ಗೆ 11ಗಂಟೆಗೆ ನಗರದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.ಜಿಲ್ಲೆಯಲ್ಲಿ ವಿಕಲಚೇತನರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಸ್ವಯಂ ಸೇವಾ ಸಂಸ್ಥೆಗಳ ಮುಖ್ಯಸ್ಥರು ಹಾಗೂ ವಿಕಲಚೇತನರು ಸಭೆಗೆ ಹಾಜರಾಗುವಂತೆ ಕೋರಲಾಗಿದ್ದು, ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಕನಕದಾಸ ಬಡಾವಣೆ, ಜಿಲ್ಲಾ ಪಂಚಾಯತಿ ಆವರಣ, ವಿಜಯಪುರ ಇವರನ್ನು ಅಥವಾ ದೂರವಾಣಿ ಸಂಖ್ಯೆ 08352-796060 ಮೂಲಕ…

Read More