ಶಾಸಕ ಬಸನಗೌಡರಿಗೆ ಶ್ರೀಕೃಷ್ಣಮಠದಿಂದಗೌರವ

ಸಪ್ತಸಾಗರ ವಾರ್ತೆ, ವಿಜಯಪುರ, ಫೆ. 13:ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಅಖಿಲ ಭಾರತ ಮಾಧ್ವ ಮಹಾಮಂಡಳ ವಿದ್ಯಾರ್ಥಿ ನಿಲಯಕ್ಕೆ ತಮ್ಮ ಶಾಸಕ ನಿಧಿಯಿಂದ ರೂ.25 ಲಕ್ಷ ಮಂಜೂರಿ ಮಾಡಿದ್ದನ್ನು ಪರಿಗಣಿಸಿ ನಗರದ ಶ್ರೀಕೃಷ್ಣ-ವಾದಿರಾಜ ಮಠದಿಂದ ಶೇಷವಸ್ತ್ರ ಫಲ ನೀಡಿ ಗೌರವಿಸಲಾಯಿತು.ಶ್ರೀ ಮಠದ ಗೌರವಾಧ್ಯಕ್ಷ ಗೋಪಾಲ ನಾಯಕ ಮಾತನಾಡಿ, ಕಳೆದ ನಾಲ್ಕು ದಶಕಗಳಿಂದ ಬಸನಗೌಡರು ವಿದ್ಯಾರ್ಥಿ ನಿಲಯ ಮತ್ತು ಶ್ರೀಕೃಷ್ಣ ಮಠಕ್ಕೆ ಅನುದಾನ ನೀಡುತ್ತ ಬಂದಿದ್ದಾರೆ. ಮಠದ ಕಟ್ಟಡಕ್ಕೂ ಅವರು ರೂ.10 ಲಕ್ಷ ದೇಣಿಗೆ ಕೊಟ್ಟಿದ್ದರು….

Read More

ಜಾನಪದಸಾಹಿತಿಡಾ. ಸಿಂಪಿಲಿಂಗಣ್ಣನವರ 121ನೇಜನ್ಮದಿನಾಚರಣೆ

ಸಪ್ತಸಾಗರ ವಾರ್ತೆ, ವಿಜಯಪುರ, ಫೆ. 12:ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಹಲಸಂಗಿ ಗೆಳೆಯರ ಪ್ರತಿಷ್ಠಾನದ ವತಿಯಿಂದ ಡಾ. ಸಿಂಪಿ ಲಿಂಗಣ್ಣವರ 121ನೇ ಜನ್ಮ ದಿನಾಚರಣೆಯನ್ನು ಬುಧವಾರ ನಗರದ ಬಿ.ಎಲ್.ಡಿ.ಇ ರಸ್ತೆಯ ದಿ ಪ್ರೆಸಿಡೆನ್ಸಿ ಶಿಕ್ಷಣ ಮಹಾವಿದ್ಯಾಲಯದಲ್ಲಿ (ಬಸವೇಶ್ವರ ವಿದ್ಯಾವರ್ಧಕ ಸಂಸ್ಥೆ) ಆಯೋಜಿಸಲಾಗಿತ್ತು.ಈ ಕಾರ್ಯಕ್ರಮದಲ್ಲಿ ಬಸವೇಶ್ವರ ವಿದ್ಯಾವರ್ಧಕ ಸಂಸ್ಥೆಯ ಪ್ರಾಚಾರ್ಯ ಡಾ. ಎಸ್.ಟಿ. ಬೋಳರಡ್ಡಿ ಅವರು, ವಿದ್ಯಾರ್ಥಿಗಳಿಗೆ ಜಾನಪದ ಹಾಗೂ ಸಾಹಿತ್ಯದ ವಿಷಯಗಳನ್ನು ಅರಿಯಲು ಅವಕಾಶ ಒದಗಿದೆ ಎಂದರು.ಡಾ. ಮಲ್ಲಿಕಾರ್ಜುನ ಮೇತ್ರಿ ಮಾತನಾಡಿ, ಜಾನಪದ ದಿಗ್ಗಜ ರಾಷ್ಟ್ರ…

Read More

ಜನ-ಜಾನುವಾರುಗಳಿಗೆ ನೀರಿನ ಸಮಸ್ಯೆಯಾಗದಂತೆ ಯೋಜನಾಬದ್ಧವಾಗಿ ಕಾರ್ಯ ನಿರ್ವಹಿಸಿ-ಡಾ.ಆನಂದ.ಕೆ ಸೂಚನೆ

ಸಪ್ತಸಾಗರ ವಾರ್ತೆ,ವಿಜಯಪುರ, ಫೆ.12: ಬೇಸಿಗೆಯಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಲು ಜಿಲ್ಲೆಯಲ್ಲಿರುವ ಕೆರೆಗಳನ್ನು ಕಾಲುವೆ ಜಾಲಗಳ ಮೂಲಕ ಹರಿಸಲಾಗುತ್ತಿರುವ ನೀರನ್ನು ತುಂಬಿಸಿಟ್ಟುಕೊಂಡು, ನಿಗಾ ವಹಿಸುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ.ಕೆ ಅವರು ಸೂಚನೆ ನೀಡಿದರು.ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಗುರುವಾರ ನಡೆದ ಜಿಲ್ಲೆಯ ವಿವಿಧ ತಾಲೂಕಾ ತಹಶೀಲ್ದಾರರು, ತಾಲೂಕಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ಜಿಲ್ಲೆಯ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ನಿರ್ವಹಣಾ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ…

Read More

ನರ್ಸಿಂಗ್ ಕ್ಷೇತ್ರದಲ್ಲಿ ಸಂಶೋಧನೆಗಳ ಪ್ರಮಾಣ ಹೆಚ್ಚಳ: ರೋಗಿಗಳಿಗೆ ಗುಣಮಟ್ಟದ ಚಿಕಿತ್ಸೆ

ಸಪ್ತಸಾಗರ ವಾರ್ತೆ, ವಿಜಯಪುರ, ಫೆ. 11: ನರ್ಸಿಂಗ್ ಕ್ಷೇತ್ರದಲ್ಲಿ ಸಂಶೋಧನೆಗಳ ಪ್ರಮಾಣ ಹೆಚ್ಚುತ್ತಿರುವುದರಿಂದ ರೋಗಿಗಳಿಗೆ ಗುಣಮಟ್ಟದ ಚಿಕಿತ್ಸೆ ನೀಡಲು ಅನುಕೂಲವಾಗುತ್ತಿದೆ ಎಂದು ಬಿ.ಎಲ್.ಡಿ.ಇ ಆಯುರ್ವೇದ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಅಶೋಕ ಪಾಟೀಲ ಹೇಳಿದ್ದಾರೆ.ಮಂಗಳವಾರ ನಗರದ ಪ್ರತಿಷ್ಠಿತ ಬಿ.ಎಲ್.ಡಿ.ಇ ಸಂಸ್ಥೆಯ ಶ್ರೀ ಬಿ.ಎಂ. ಪಾಟೀಲ್ ನರ್ಸಿಂಗ್ ಮಹಾವಿದ್ಯಾಲಯದಲ್ಲಿ, ಬಿ.ಎಲ್.ಡಿ.ಇ ಮೆಡಿಕಲ್ ಕಾಲೇಜಿನ ಸಹಯೋಗದೊಂದಿಗೆ ಆಯೋಜಿಸಲಾದ ರಾಜ್ಯಮಟ್ಟದ ಒಂದು ದಿನದ ಕಾರ್ಯಾಗಾರದಲ್ಲಿ ಅವರು ಮುಖ್ಯ ಭಾಷಣ ಮಾಡಿದರು.ಆಯುರ್ವೇದದಲ್ಲಿ ವಿವರಿಸಿದಂತೆ ರೋಗಿಗೆ ವೈದ್ಯರ ಅವಶ್ಯಕತೆ ಎಷ್ಟು ಮುಖ್ಯವೋ, ಅಷ್ಟೇ ಮಹತ್ವ ನರ್ಸಿಂಗ್…

Read More

ಡಾ. ಕುಸಾಲ ದಾಸ ಅವರಿಗೆ ಡಾ. ಡಿ. ಕೆ. ಅಗರವಾಲ ಓರಿಯೇಶನ್ ಅವಾರ್ಡ್

ಸಪ್ತಸಾಗರ ವಾರ್ತೆ,ವಿಜಯಪುರ, ಫೆ. 11: ನಗರದ ಪ್ರತಿಷ್ಠಿತ ಬಿ. ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಶರೀರ ಕ್ರಿಯಾ ಶಾಸ್ತ್ರವಿಭಾಗದ ಡಿಸ್ಟಿಂಗ್ವಿಷ್ ಚೇರ್ ಪರ್ಸನ್ ಡಾ. ಕುಸಾಲ ದಾಸ ಅವರಿಗೆ ಡಾ. ಡಿ. ಕೆ. ಅಗರವಾಲ ಓರಿಯೇಶನ್ ಅವಾರ್ಡ್-2026 ಲಭಿಸಿದೆ.ಫೆ. 5 ರಂದು ಗುರುವಾರ ನವದೆಹಲಿಯ ಜಾಮೀಯಾ ಹಮದರ್ದ್ ವಿಶ್ವವಿದ್ಯಾಲಯದಲ್ಲಿ ಅಂತಾರಾಷ್ಟ್ರೀಯ ಹೃದಯ ರಕ್ತನಾಳ ವಿಜ್ಞಾನ ಅಕಾಡೆಮಿ ಆಯೋಜಿಸಿದ್ದ ಸಮ್ಮೇಳನದಲ್ಲಿ ಈ ಪ್ರಶಸ್ತಿ ಪ್ರಧಾನ ಮಾಡಲಾಯಿತು. ಸರ್ಬಿಯಾದ ಕರಗುಜೆವಿಕ್ ವಿವಿಯ ಶರೀರಕ್ರಿಯಾ ಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಮತ್ತು ಯುರೋಪ ಅಕಾಡೆಮಿಯ…

Read More

ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ನಿವೇಶನ ಒದಗಿಸಿ:ಶಾಸಕರಿಗೆ ಮನವಿ

ಸಪ್ತಸಾಗರ ವಾರ್ತೆ,ಇಂಡಿ, ಫೆ. 10: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯಚಟುವಟಿಕೆಗಳಿಗಾಗಿ ಸ್ವಂತ ಪತ್ರಿಕಾ ಭವನದ ಕಟ್ಟಡ, ನಿವೇಶನ ಒದಗಿಸಲು ಸಂಘದ ಪದಾಧಿಕಾರಿಗಳು ಇಂಡಿ ಶಾಸಕ ಯಶವಂತರಾಯಗಿಡ ಪಾಟೀಲ ಅವರಿಗೆ ಮಂಗಳವಾರ ಮನವಿ ಸಲ್ಲಿಸಿದರು.ಸಂಘದ ಪದಾಧಿಕಾರಿಗಳು ಇಂಡಿ ಪ್ರವಾಸಿ ಮಂದಿರದಲ್ಲಿ ಮನವಿ ಸಲ್ಲಿಸಿದರು.ಸಂಘದ ಕಾರ್ಯ ಚಟುವಟಿಕೆಗಾಗಿ ತ್ವರಿತವಾಗಿ ಪತ್ರಿಕಾ ಭವನದ ಕಟ್ಟಡಕ್ಕಾಗಿ ನಿವೇಶನ ಮಂಜೂರು ಮಾಡಿಸಿಕೊಡಬೇಕು ಎಂದು ಇಂಡಿ ತಾಲೂಕಾ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರ ಹಾಗೂ ಪ್ರಧಾನಕಾರ್ಯದರ್ಶಿಗಳ ನೇತೃತ್ವದಲ್ಲಿ ಮನವಿ ಸಲ್ಲಿಸಿದರು.ಶಾಸಕರು ಪ್ರತಿಕ್ರಿಯಿಸಿ ಈ…

Read More

ರೈಲ್ವೆ ಗ್ರಾಹಕರಿಗೆ ಸಿಹಿ ಸುದ್ದಿ

ಸಪ್ತಸಾಗರ ವಾರ್ತೆ, ಹುಬ್ಬಳ್ಳಿ, ಫೆ. 10: ರೈಲ್ವೆಗ್ರಾಹಕರಿಗೆ ಸಿಹಿ ಸುದ್ದಿ. ರೇಲ್ವೆ ಸೇವೆ ಎಲ್ಲವೂ ಒಂದೇ ಕಡೆ ಸಿಗುವಂತೆ ರೈಲ್ವೆ ಇಲಾಖೆ ರೈಲ್ಒನ್ ಸೂಪರ್ ಆ್ಯಪ್ ಅಭಿವೃದ್ಧಿ ಪಡಿಸಿದೆ.ಭಾರತೀಯ ರೈಲ್ವೆಯು ತನ್ನ ಅಧಿಕೃತ ‘ಆಲ್-ಇನ್-ಒನ್’ ಸೂಪರ್ ಆ್ಯಪ್ ಆದ ‘ರೈಲ್ಒನ್‘ (RailOne) ಅನ್ನು ಬಿಡುಗಡೆ ಮಾಡಿದೆ. ಇದು ಪ್ರಯಾಣಿಕರಿಗೆ ಹಲವಾರು ರೈಲ್ವೆ ಸೇವೆಗಳನ್ನು ಪಡೆಯಲು ಸುಲಭ ಮತ್ತು ಅನುಕೂಲಕರ ಡಿಜಿಟಲ್ ವೇದಿಕೆಯನ್ನು ಒದಗಿಸುತ್ತದೆ. ಈ ಅಪ್ಲಿಕೇಶನ್ ಹಲವಾರು ಪ್ರಯಾಣಿಕ ಸೌಲಭ್ಯಗಳನ್ನು ಒಂದೇ ಅಪ್ಲಿಕೇಶನ್’ನಲ್ಲಿ ಒಳಗೊಂಡಿದ್ದು, ರೈಲ್ವೆ ಪ್ರಯಾಣವನ್ನು…

Read More

ಜಿಲ್ಲೆಯ ಸಹಕಾರ ಸಂಘಗಳು ಲೆಕ್ಕ ಪರಿಶೋಧಕರ ನೇಮಕಾತಿಗೆ ಸೂಚನೆ

ಸಪ್ತಸಾಗರ ವಾರ್ತೆ,ವಿಜಯಪುರ, ಫೆ.10: ಜಿಲ್ಲೆಯಲ್ಲಿರುವ ನೋಂದಾಯಿತ ಸಹಕಾರ ಸಂಘಗಳು 2025-26ನೇ ಸಾಲಿನ ಲೆಕ್ಕಪರಿಶೋಧನೆಗೆ ಈವರೆಗೂ ಠರಾವನ್ನು ಸಲ್ಲಿಸದ ಸಹಕಾರ ಸಂಘಗಳು ಈ ಪ್ರಕಟಣೆಯ 7 ದಿನಗಳೊಳಗಾಗಿ ವಾರ್ಷಿಕ ಮಹಾಸಭೆಯಲ್ಲಿ ಲೆಕ್ಕಪರಿಶೋಧಕರನ್ನು-ಲೆಕ್ಕಪರಿಶೋಧನಾ ಫರ್ಮನ್ನು ನೇಮಕಾತಿ ಮಾಡಿಕೊಂಡು ಸಂಘದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಹಾಗೂ ಅಧ್ಯಕ್ಷರ ಸಹಿಯೊಂದಿಗೆ ಮಾಹಿತಿಯನ್ನು ಜಂಟಿ ನಿರ್ದೇಶಕರ ಕಚೇರಿ, ಲೆಕ್ಕಪರಿಶೋಧನಾ ಇಲಾಖೆ, ಕಾರ್ಮಿಕ ಇಲಾಖಾ ಕಟ್ಟಡ, ಸಿಂದಗಿ ನಾಕಾ ಹತ್ತಿರ, ಅಲ್ಲಾಪೂರ ಓಣಿ, ವಿಜಯಪುರ ಕಚೇರಿಗೆ ಸಲ್ಲಿಸುವಂತೆ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಈ ಕುರಿತಂತೆ ಹೆಚ್ಚಿನ…

Read More

ವಿದ್ಯುತ್ ಶಾರ್ಟ್ ಸರ್ಕ್ಯೂಟ್: ಆರು ಎಕರೆ ಕಬ್ಬು ನಾಶ

ಸಪ್ತಸಾಗರ ವಾರ್ತೆ, ವಿಜಯಪುರ, ಫೆ. 10 :ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಆರು ಎಕರೆಯಲ್ಲಿದ್ದ ಕಬ್ಬು ಸುಟ್ಟು ಕರಕಲಾಗಿರುವ ಘಟನೆ ಸಿಂದಗಿ ತಾಲೂಕಿನ ಸುಂಗಠಾಣ ಗ್ರಾಮದಲ್ಲಿ ನಡೆದಿದೆ.ಸುಂಗಠಾಣ ಗ್ರಾಮದ ಹನಮಂತಪ್ಪ ಗುರಲಿಂಗಪ್ಪ ಬಿರಾದಾರ ಉರ್ಫ್ ಕುರನಳ್ಳಿ ಅವರ 6 ಎಕರೆ ಜಮೀನಿನಲ್ಲಿ ಬೆಳೆದು ನಿಂತ ಕಬ್ಬು ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಸಂಪೂರ್ಣವಾಗಿ ಸುಟ್ಟಿದೆ.ಮಂಗಳವಾರ ಮಧ್ಯಾಹ್ನ ಸುಮಾರು 3 ಗಂಟೆ ಸುಮಾರಿಗೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಅವಘಡ ಸಂಭವಿಸಿದೆ.ಜಮೀನಿನಲ್ಲಿ ಬೆಳೆದು ನಿಂತಿರುವ ಅಂದಾಜು 7…

Read More

ಸರ್ಕಾರಿ ಕಡತಗಳಲ್ಲಿ ವಿಜಯಪುರ ಬರೆಯಿರಿ- ಸಂದೀಪ

ಸಪ್ತಸಾಗರ ವಾರ್ತೆ, ವಿಜಯಪುರ, ಫೆ. 10:ವಿಜಯಪುರ ಐತಿಹಾಸಿಕ ವೈಶಿಷ್ಟ್ಯಗಳನ್ನು ಹೊಂದಿರುವ ಅಪೂರ್ವ ನಗರ. 2014 ರಲ್ಲಿಯೇ ಮಹಾನಗರವಾಗಿ ರೂಪುಗೊಂಡಿದೆ. ಆದರೂ ಇಂದಿಗೂ ಅನೇಕ ಕಡೆಗಳಲ್ಲಿ, ಸರ್ಕಾರಿ ದಸ್ತಾವೇಜುಗಳಲ್ಲಿ ನಗರ ಎಂದೇ ಬರೆಯಲಾಗುತ್ತದೆ, ಹೀಗಾಗಿ ಕಡ್ಡಾಯವಾಗಿ ವಿಜಯಪುರ ಮಹಾನಗರ ಎಂದು ಬರೆಯುವಂತಾಗಬೇಕು ಎಂದು ಬಿಜೆಪಿ ನಗರ ಅಧ್ಯಕ್ಷ ಸಂದೀಪ ಪಾಟೀಲ ತಿಳಿಸಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಅವರು, ಇನ್ನೂ ಅನೇಕರು ವಿಜಯಪುರ ನಗರ ಎಂದೇ ಪದ ಪ್ರಯೋಗಿಸುತ್ತಿದ್ದಾರೆ. ಹೀಗಾಗಿ ವಿಜಯಪುರ ಮಹಾನಗರ ಎಂಬ ಉದ್ಘೋಷದೊಂದಿಗೆ ಜನಮಾನಸದಲ್ಲಿರಬೇಕು ಎಂಬದು…

Read More