ವಿಜಯಪುರದಲ್ಲಿ ತಾರಕಕ್ಕೇರಿದ ಸಚಿವ ಲಾಬಿ

ಎಂ.ಬಿ. ಪಾಟೀಲ್ ಬಳಿಕ ಮತ್ತೊಬ್ಬರಿಗೆ ಸಚಿವಗಿರಿಯ ಭಾಗ್ಯ? ಶಿವಾನಂದ ಪಾಟೀಲ, ಯಶವಂತರಾಯಗೌಡ ಪಾಟೀಲ, ಸಿ. ಎಸ್. ನಾಡಗೌಡ ನಡುವೆ ತೀವ್ರ ಪೈಪೋಟಿ ರುದ್ರಪ್ಪ ಆಸಂಗಿಸಪ್ತಸಾಗರ ವಾರ್ತೆ,ಬೆಂಗಳೂರು/ವಿಜಯಪುರ, ಜು. 31:ಕರ್ನಾಟಕ ಕಾಂಗ್ರೆಸ್ ಸರ್ಕಾರದ ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ಅಂತಿಮ ಘಟ್ಟ ತಲುಪುತ್ತಿದ್ದಂತೆ ರಾಜ್ಯ ರಾಜಕೀಯದಲ್ಲಿ ತೆರೆಮರೆಯ ಚಟುವಟಿಕೆಗಳು ಚುರುಕುಗೊಂಡಿವೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಮುಂದಿರುವ ಸವಾಲು ಕೇವಲ ಖಾಲಿ ಸಚಿವ ಸ್ಥಾನಗಳನ್ನು ಭರ್ತಿ ಮಾಡುವುದಲ್ಲ; ಅಸಮಾಧಾನಗೊಂಡಿರುವ ಶಾಸಕರನ್ನು ಸಮಾಧಾನಪಡಿಸುವುದು, ಪ್ರಾದೇಶಿಕ ಮತ್ತು ಸಾಮಾಜಿಕ ಸಮತೋಲನ ಕಾಯ್ದುಕೊಳ್ಳುವುದು,…

Read More

ವಿಶ್ವ ಶ್ರೇಷ್ಠ ಸಾಹಿತ್ಯದ ಅನರ್ಘ್ಯ ಪ್ರತಿಭೆ ಮಧುರಚೆನ್ನರು: ಸಂತೋಷ ಬಂಡೆ

ಸಪ್ತಸಾಗರ ವಾರ್ತೆ,ಇಂಡಿ, ಜು. 31: ಹಳ್ಳಿಯೊಂದರಲ್ಲಿ ಹುಟ್ಟಿ, ಸರಳ ಬದುಕಿನಲ್ಲೇ ಕನ್ನಡ ಸಾಹಿತ್ಯಕ್ಕೆ ಅಪೂರ್ವ ಕೊಡುಗೆ ನೀಡಿದ ಮಧುರಚೆನ್ನರು ವಿಶ್ವ ಶ್ರೇಷ್ಠ ಸಾಹಿತ್ಯವನ್ನು ರಚಿಸಿದ ಅನರ್ಘ್ಯ ಪ್ರತಿಭೆ ಎಂದು ಶಿಕ್ಷಕ-ಸಾಹಿತಿ ಸಂತೋಷ ಬಂಡೆ ಹೇಳಿದರು.ತಾಲೂಕಿನ ಹಿರೇರೂಗಿ ಗ್ರಾಮದ ಅರಿವು ಕೇಂದ್ರದಲ್ಲಿ ಶುಕ್ರವಾರ ಆಯೋಜಿಸಿದ್ದ ಮಧುರಚೆನ್ನರ 123ನೇ ಜನ್ಮದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಹಲಸಂಗಿ ಗೆಳೆಯರ ಬಳಗವನ್ನು ಕಟ್ಟಿಕೊಂಡು, ಗ್ರಾಮೀಣ ಮಹಿಳೆಯರು ಹಾಡುತ್ತಿದ್ದ ಜಾನಪದ ಗೀತೆಗಳನ್ನು ಸಂಗ್ರಹಿಸಿ ಪ್ರಕಟಿಸುವ ಮೂಲಕ ಮಧುರಚೆನ್ನರು ಕನ್ನಡ ಜಾನಪದ ಸಾಹಿತ್ಯಕ್ಕೆ ಅಮೂಲ್ಯ ಸೇವೆ…

Read More

ಸಾಮಾಜಿಕ ಭದ್ರತಾ ಪಿಂಚಣಿಗೆ ₹30 ಸಾವಿರ ಆದಾಯ ಮಿತಿ ಹಿಂಪಡೆಯಿರಿ: ಅಪ್ಪುರಾಜ್ ನಿಮಾದಾರ ಆಗ್ರಹ

ಸಪ್ತಸಾಗರ ವಾರ್ತೆ, ವಿಜಯಪುರ,ಜು. 31:ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆಗಳಿಗೆ ₹30 ಸಾವಿರ ವಾರ್ಷಿಕ ಆದಾಯ ಮಿತಿ ನಿಗದಿಪಡಿಸಿರುವ ಕ್ರಮವನ್ನು ಹಿಂಪಡೆದು, ಅದನ್ನು ಕನಿಷ್ಠ ₹35 ಸಾವಿರಕ್ಕೆ ಹೆಚ್ಚಿಸಬೇಕು ಎಂದು ಭೀಮ್ ರಾಜ್ಯ ದಲಿತ್ ಸೇವಾ ಸಮಿತಿ(ರಿ) ರಾಜ್ಯಾಧ್ಯಕ್ಷ ಅಪ್ಪುರಾಜ್ ನಿಮಾದಾರ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.ಈ ಕುರಿತು ಪ್ರಕಟಣೆ ನೀಡಿರುವ ಅವರು, ಸಂಧ್ಯಾ ಸುರಕ್ಷಾ ಯೋಜನೆ, ಇಂದಿರಾ ಗಾಂಧಿ ರಾಷ್ಟ್ರೀಯ ವೃದ್ಧಾಪ್ಯ ಪಿಂಚಣಿ, ನಿರ್ಗತಿಕ ವಿಧವಾ ವೇತನ, ಅಂಗವಿಕಲರ ಪಿಂಚಣಿ ಸೇರಿದಂತೆ ವಿವಿಧ ಸಾಮಾಜಿಕ ಭದ್ರತಾ ಯೋಜನೆಗಳಿಗೆ ನಿಗದಿಪಡಿಸಿರುವ…

Read More

ವಿಜಯಪುರ ವಿಮಾನ ನಿಲ್ದಾಣಕ್ಕೆ ಚುರುಕು: ಕೇಂದ್ರ ಸಚಿವರೊಂದಿಗೆ ಜಿಗಜಿಣಗಿ ಮಹತ್ವದ ಚರ್ಚೆ

ಸಪ್ತಸಾಗರ ವಾರ್ತೆ,ನವದೆಹಲಿ/ವಿಜಯಪುರ, ಜು. 31:ವಿಜಯಪುರ ವಿಮಾನ ನಿಲ್ದಾಣದ ಕಾರ್ಯಾರಂಭಕ್ಕೆ ಉಳಿದಿರುವ ತಾಂತ್ರಿಕ ಹಾಗೂ ಆಡಳಿತಾತ್ಮಕ ಪ್ರಕ್ರಿಯೆಗಳನ್ನು ಶೀಘ್ರ ಪೂರ್ಣಗೊಳಿಸುವ ನಿಟ್ಟಿನಲ್ಲಿ ಸಂಸದ ರಮೇಶ ಜಿಗಜಿಣಗಿ ಅವರು ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವ ಭೂಪೇಂದ್ರ ಯಾದವ್ ಅವರನ್ನು ಭೇಟಿಯಾಗಿ ಮಹತ್ವದ ಸಮಾಲೋಚನೆ ನಡೆಸಿದರು.ಸಂಸತ್ ಅಧಿವೇಶನದ ವೇಳೆ ನಡೆದ ಈ ಭೇಟಿಯಲ್ಲಿ, ವಿಜಯಪುರ ವಿಮಾನ ನಿಲ್ದಾಣಕ್ಕೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಅನುಮತಿ ಹಾಗೂ ಪರಿಸರ ಸಂಬಂಧಿತ ಪ್ರಕ್ರಿಯೆಗಳನ್ನು ತ್ವರಿತಗೊಳಿಸುವಂತೆ ಜಿಗಜಿಣಗಿ ಮನವಿ ಮಾಡಿದರು. ಇದಕ್ಕೆ ಸ್ಪಂದಿಸಿದ…

Read More

ಪುನರ್ವಸತಿ ವಿಳಂಬ ಬೇಡ; ಮೂಲಸೌಕರ್ಯ ಕಲ್ಪಿಸಿ ಕಾಮಗಾರಿ ತ್ವರಿತಗೊಳಿಸಿ

ಖಾಜಾ ನಗರ–ಟಿಪ್ಪು ನಗರದ ನಿವಾಸಿಗಳ ಸ್ಥಳಾಂತರಕ್ಕೆ ಜಿಲ್ಲಾಡಳಿತಕ್ಕೆ ದಲಿತ ಸ್ವರಾಜ್ಯ ಸೇನೆ ಆಗ್ರಹ ಸಪ್ತಸಾಗರ ವಾರ್ತೆ,ವಿಜಯಪುರ, ಜು.31:ನಗರದ ಖಾಜಾ ನಗರ ಹಾಗೂ ಟಿಪ್ಪು ನಗರದ ಕೊಳಚೆ ಪ್ರದೇಶದ ನಿವಾಸಿಗಳ ಪುನರ್ವಸತಿ ಯೋಜನೆಯನ್ನು ತ್ವರಿತವಾಗಿ ಜಾರಿಗೊಳಿಸಿ, ಮಂಜೂರಾಗಿರುವ ಜಾಗದಲ್ಲಿ ಅಗತ್ಯ ಮೂಲಸೌಕರ್ಯಗಳನ್ನು ಕೂಡಲೇ ಕಲ್ಪಿಸುವಂತೆ ದಲಿತ ಸ್ವರಾಜ್ಯ ಸೇನೆ–ಕರ್ನಾಟಕ ಸಂಘಟನೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದೆ.ಬುರಣಾಪುರ ಗ್ರಾಮದ ಸರ್ವೇ ನಂ.67/1ರಲ್ಲಿ ಪುನರ್ವಸತಿಗಾಗಿ 5 ಎಕರೆ ಜಮೀನು ಮಂಜೂರು ಮಾಡಿರುವ ಸರ್ಕಾರ ಹಾಗೂ ಜಿಲ್ಲಾಡಳಿತದ ಕ್ರಮವನ್ನು ಸಂಘಟನೆ ಸ್ವಾಗತಿಸಿದ್ದು, ಜಮೀನು ಮಂಜೂರಿನಲ್ಲೇ…

Read More

ಮಾನವ ಕಳ್ಳಸಾಗಾಣಿಕೆ ತಡೆಗೆ ಜನಜಾಗೃತಿ ಅತ್ಯಗತ್ಯ: ನ್ಯಾಯಾಧೀಶ ಅರವಿಂದ ಹಾಗರಗಿ

ಸಪ್ತಸಾಗರ ವಾರ್ತೆ,ವಿಜಯಪುರ, ಜುಲೈ 31:ಮಾನವ ಕಳ್ಳಸಾಗಾಣಿಕೆ ಎಂಬುದು ಸಮಾಜದ ಭದ್ರತೆ ಹಾಗೂ ಮಾನವ ಹಕ್ಕುಗಳಿಗೆ ಗಂಭೀರ ಸವಾಲಾಗಿದ್ದು, ಕೇವಲ ಒಂದು ದಿನ ಆಚರಿಸುವುದಕ್ಕಿಂತ ಸಾರ್ವಜನಿಕರಲ್ಲಿ ನಿರಂತರ ಜಾಗೃತಿ ಮೂಡಿಸುವುದು ಅತ್ಯಗತ್ಯ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಅರವಿಂದ ಎಸ್. ಹಾಗರಗಿ ಹೇಳಿದರು.ನಗರದ ರಾಘವೇಂದ್ರ ಕಾಲೋನಿಯ ರುಡ್‌ಸೆಟ್ ಸಂಸ್ಥೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಂಯುಕ್ತವಾಗಿ…

Read More

ಉಕ್ಕಲಿಯಲ್ಲಿ ಬಿಎಲ್‌ಡಿಇ ಟೆಲಿಮೆಡಿಸಿನ್ ಯೋಜನೆಗೆ ಚಾಲನೆ

ಗ್ರಾಮೀಣರಿಗೆ ತಜ್ಞ ವೈದ್ಯರ ಸೇವೆ ಡಿಜಿಟಲ್ ಮೂಲಕ ಮನೆಬಾಗಿಲಿಗೆ ಸಪ್ತಸಾಗರ ವಾರ್ತೆ,ವಿಜಯಪುರ, ಜು. 31:ಗ್ರಾಮೀಣ ಪ್ರದೇಶದ ಜನರಿಗೆ ಗುಣಮಟ್ಟದ ಆರೋಗ್ಯ ಸೇವೆಯನ್ನು ಡಿಜಿಟಲ್ ತಂತ್ರಜ್ಞಾನದ ಮೂಲಕ ತಲುಪಿಸುವ ಮಹತ್ವಾಕಾಂಕ್ಷಿ ಹೆಜ್ಜೆಯಾಗಿ, ಬಿಎಲ್‌ಡಿಇ ಡೀಮ್ಡ್ ವಿಶ್ವವಿದ್ಯಾಲಯವು ಉಕ್ಕಲಿ ಗ್ರಾಮೀಣ ಆರೋಗ್ಯ ತರಬೇತಿ ಕೇಂದ್ರದಲ್ಲಿ ಟೆಲಿಮೆಡಿಸಿನ್ ಯೋಜನೆಗೆ ಚಾಲನೆ ನೀಡಿದೆ.ಕಾರ್ಯಕ್ರಮವನ್ನು ನವದೆಹಲಿಯ ಸೆಂಟರ್ ಫಾರ್ ಕ್ರಾನಿಕ್ ಡಿಸೀಸ್ ಕಂಟ್ರೋಲ್ (CCDC) ಕಾರ್ಯನಿರ್ವಾಹಕ ನಿರ್ದೇಶಕ ಪ್ರೊ. ಡಿ. ಪ್ರಭಾಕರನ್ ಉದ್ಘಾಟಿಸಿ ಮಾತನಾಡಿ, ದೂರದ ಹಾಗೂ ಹಿಂದುಳಿದ ಪ್ರದೇಶಗಳ ಜನರಿಗೆ ಸಮಾನ ಮತ್ತು…

Read More

ಆಗಸ್ಟ್ 5ರಿಂದ 20ರವರೆಗೆ 10 ಕೋಟಿ ಜನರಿಂದ ವ್ಯಸನಮುಕ್ತ ಪ್ರತಿಜ್ಞೆ ಅಭಿಯಾನ: ರಾಜಯೋಗಿನಿ ಬಿ.ಕೆ. ಸರೋಜಾ

ಸಪ್ತಸಾಗರ ವಾರ್ತೆ,ವಿಜಯಪುರ, ಜು.30:ಮಾದಕ ವ್ಯಸನವು ವ್ಯಕ್ತಿಯ ಜೀವನವಷ್ಟೇ ಅಲ್ಲ, ಕುಟುಂಬ ಮತ್ತು ಸಮಾಜದ ಭವಿಷ್ಯವನ್ನೂ ಹಾಳು ಮಾಡುವ ಗಂಭೀರ ಸಾಮಾಜಿಕ ಪಿಡುಗಾಗಿದ್ದು, ಪ್ರತಿಯೊಬ್ಬರೂ ವ್ಯಸನಮುಕ್ತ ಜೀವನಕ್ಕೆ ಸಂಕಲ್ಪ ಮಾಡಬೇಕು ಎಂದು ವಿಜಯಪುರ ಬ್ರಹ್ಮಕುಮಾರಿ ಸೇವಾಕೇಂದ್ರದ ಸಂಚಾಲಕಿ ರಾಜಯೋಗಿನಿ ಬಿ.ಕೆ. ಸರೋಜಾ ಕರೆ ನೀಡಿದರು.ತಿಕೋಟಾ ತಾಲ್ಲೂಕಿನ ಲೋಹಗಾಂವ ಗ್ರಾಮದ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಆಶ್ರಮದಲ್ಲಿ ಗುರುಪೂರ್ಣಿಮೆ ಹಾಗೂ ವ್ಯಸನಮುಕ್ತ ಪ್ರತಿಜ್ಞಾ ವಿಧಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಲೋಹಗಾಂವ ಹಿರೇಮಠದ ಅಲ್ಲಮಪ್ರಭು ಮಹಾರಾಜರು ದಿವ್ಯ ಸಾನ್ನಿಧ್ಯ ವಹಿಸಿ ಮಾತನಾಡಿ, ಇಂದಿನ…

Read More

ವಿಜಯಪುರ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಿ: ರೈತ ಸಂಘ ಆಗ್ರಹ

ಮಳೆ ಮಾಪನ ಕೇಂದ್ರಗಳ ಕಾರ್ಯವೈಖರಿ ತನಿಖೆಗೆ ಒತ್ತಾಯ – ಪ್ರತಿ ಎಕರೆಗೆ ₹25 ಸಾವಿರ ಪರಿಹಾರ ನೀಡುವಂತೆ ಮನವಿ ಸಪ್ತಸಾಗರ ವಾರ್ತೆ,ವಿಜಯಪುರ, ಜು.30:ಜಿಲ್ಲೆಯಾದ್ಯಂತ ಸಮರ್ಪಕ ಮಳೆಯಾಗದೇ ರೈತರು ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆಯಲ್ಲಿ ವಿಜಯಪುರ ಜಿಲ್ಲೆಯ ಎಲ್ಲ 13 ತಾಲೂಕುಗಳನ್ನು ತಕ್ಷಣವೇ ಬರಪೀಡಿತ ಪ್ರದೇಶವೆಂದು ಘೋಷಿಸಿ, ಪ್ರತಿ ಎಕರೆಗೆ ₹25 ಸಾವಿರ ಪರಿಹಾರ ನೀಡಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಒತ್ತಾಯಿಸಿದೆ.ಈ ಕುರಿತು ಅಪರ ಜಿಲ್ಲಾಧಿಕಾರಿ ಡಾ. ಔದ್ರಾಮ್ ಅವರ ಮೂಲಕ ರಾಜ್ಯ…

Read More

ಕಾವೇರಿ ನೀರು: ರೈತರ ಹಿತ ಕಾಪಾಡಲು ಸರ್ಕಾರ ದೃಢ ನಿಲುವು ತಾಳಲಿ

ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಒತ್ತಾಯ ಸಪ್ತಸಾಗರ ವಾರ್ತೆ,ವಿಜಯಪುರ, ಜು. 30:ಕಾವೇರಿ ನೀರಿನ ಸಮಸ್ಯೆ ದಿನದಿಂದ ದಿನಕ್ಕೆ ಉಲ್ಬಣವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ರೈತರ ಹಿತಾಸಕ್ತಿಯನ್ನು ಮೊದಲ ಆದ್ಯತೆಯಾಗಿ ಪರಿಗಣಿಸಿ ದೃಢ ನಿಲುವು ತಾಳಬೇಕು ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಎಕ್ಸ್ ನಲ್ಲಿ ಆಗ್ರಹಿಸಿದ್ದಾರೆ.“ರೋಮ್ ಹೊತ್ತಿ ಉರಿಯುವಾಗ ದೊರೆ ನೀರೋ ಪಿಟೀಲು ಬಾರಿಸುತ್ತಿದ್ದ” ಎಂಬ ಮಾತನ್ನು ಉಲ್ಲೇಖಿಸಿದ ಯತ್ನಾಳ್, ಕಾವೇರಿ ನೀರಿನ ಸಮಸ್ಯೆ ತೀವ್ರವಾಗಿರುವ ಸಂದರ್ಭದಲ್ಲಿಯೂ ಮುಖ್ಯಮಂತ್ರಿ ದೆಹಲಿ ಪ್ರವಾಸ ಹಾಗೂ…

Read More