ವಿದ್ಯಾರ್ಥಿಗಳನ್ನು ಬೌದ್ಧಿಕ ಮತ್ತು ದೈಹಿಕವಾಗಿ ಸದೃಢರನ್ನಾಗಿ ಮಾಡಲು ಸ್ಮಾರ್ಟ್ ಕ್ಲಾಸ್ ಮತ್ತು ಕ್ರೀಡಾ ಸೌಲಭ್ಯ: ಸಚಿವ ಪಾಟೀಲ
ಸಪ್ತಸಾಗರ ವಾರ್ತೆ, ವಿಜಯಪುರ, ನ. 21: ವಿದ್ಯಾರ್ಥಿಗಳನ್ನು ಬೌದ್ಧಿಕ ಮತ್ತು ದೈಹಿಕವಾಗಿ ಸದೃಢರನ್ನಾಗಿ ಮಾಡಲು ಸಿ.ಎಸ್.ಆರ್ ಅನುದಾನಡಿ ಸ್ಮಾರ್ಟ್ ಕ್ಲಾಸ್ ಮತ್ತು ಕ್ರೀಡಾ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ತಿಳಿಸಿದ್ದಾರೆ.ಶುಕ್ರವಾರ ತಿಕೋಟಾ ತಾಲೂಕಿನ ಹೊನವಾಡ ಗ್ರಾಮದಲ್ಲಿ ಉನ್ನತೀಕರಿಸಿದ ಸರಕಾರಿ ಪ್ರೌಢಶಾಲೆ ಪ್ರಾರಂಭೋತ್ಸವದ ಅಂಗವಾಗಿ 9ನೇ ತರಗತಿ ಉದ್ಘಾಟನೆ, ಸರಸ್ವತಿ ಪೂಜೆ ಹಾಗೂ ಸಿ.ಎಸ್.ಆರ್ ಅನುದಾನದಲ್ಲಿ ಶಾಲಾ ಮಕ್ಕಳಿಗಾಗಿ ಅಳವಡಿಸಿರುವ ಕ್ರೀಡಾ ಸಲಕರಣೆಗಖನ್ನು ವಿದ್ಯಾರ್ಥಿಗಳಿಂದ ಉದ್ಘಾಟಿಸಿದ…


