ಇನಕ್ಯೂಬೆಶನ್ – ಅರಿವು ಮೂಡಿಸುವ ಕಾರ್ಯಕ್ರಮ ಯಶಸ್ವಿ

ಸಪ್ತಸಾಗರ ವಾರ್ತೆ, ವಿಜಯಪುರ,ನ.17: ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರ, ಬೆಂಗಳೂರಿನ ಕೆ.ಸಿ.ಟಿ.ಯು ಹಾಗೂ ಬೆಂಗಳೂರಿನ ವಿ ಕೇರ್ ಸೊಸೈಟಿ ಇವರ ಸಹಯೋಗದಲ್ಲಿ ಎಂ.ಎಸ್. ಎಂ.ಇ. ಇವರ ಕಾರ್ಯಕ್ಷಮತೆಯನ್ನು ಹೆಚ್ಚಿಸುವುದು ಮತ್ತು ವೇಗಗೊಳಿಸುವ ಯೋಜನೆಯಡಿಯಲ್ಲಿ ಇನಕ್ಯೂಬೆಶನ್ ಅರಿವು ಮೂಡಿಸುವ ಕಾರ್ಯಕ್ರಮವನ್ನು ಸಿಕ್ಯಾಬ್ ಇನ್ ಸ್ಟಿಟ್ಯೂಟ್ ಆಫ್ ಇಂಜನಿಯರಿಂಗ್ ಮತ್ತು ಟೆಕ್ನಾಲಜಿ ಕಾಲೇಜಿನಲ್ಲಿ ಶನಿವಾರ ಹಮ್ಮಿಕೊಳ್ಳಲಾಗಿತ್ತು.ಸಿಡಾಕ್‌ನ ಜಂಟಿ ನಿರ್ದೇಶಕಿ ಸುಪ್ರಿತಾ ಬಳ್ಳಾರಿ ಮಾತನಾಡಿ, ಇಂಜಿನಿಯರಿಂಗ್ ಪದವಿಯ ನಂತರ ಸ್ವಂತ ಉದ್ಯಮ ಸ್ಥಾಪಿಸಲು ಪಡೆಯಬೇಕಾದ ಅಗತ್ಯ ವೃತ್ತಿ…

Read More

ಅಜಾದ್ ಅವರ ಕೊಡುಗೆ ಉನ್ನತ ಶಿಕ್ಷಣಕ್ಕೆ ಅಮೂಲ್ಯ: ಡಾ. ರಾಮು ಸಜ್ಜನ

ಸಪ್ತಸಾಗರ ವಾರ್ತೆ, ವಿಜಯಪುರ, ನ. 17: ಮೌಲಾನಾ ಅಜಾದ್ ಅವರು ಉನ್ನತ ಶಿಕ್ಷಣ ಕ್ಷೇತ್ರಕ್ಕೆ ನೀಡಿದ ಕೊಡುಗೆ ಅಪ್ರತಿಮವಾಗಿದ್ದು, ಅವರ ತತ್ವಗಳು ಇಂದಿನ ಪೀಳಿಗೆಗೂ ಮಾರ್ಗದರ್ಶಕವಾಗಿವೆ ಎಂದು ಮುದ್ದೇಬಿಹಾಳದ ಎಂ.ಜಿ.ವಿ.ಸಿ. ಕಲಾ, ವಾಣಿಜ್ಯ ಮತ್ತು ವಿಜ್ಞಾನ ಮಹಾವಿದ್ಯಾಲಯದ ಇತಿಹಾಸ ವಿಭಾಗದ ಸಹ ಪ್ರಾಧ್ಯಾಪಕ ಡಾ. ರಾಮು ಹಸನಪ್ಪ ಸಜ್ಜನ ಹೇಳಿದರು.ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಮೌಲಾನಾ ಅಜಾದ್ ಅಧ್ಯಯನ ಕೇಂದ್ರದ ವತಿಯಿಂದ ಇತ್ತೀಚಿಗೆ ಹಮ್ಮಿಕೊಂಡಿದ್ದ ಮೌಲಾನಾ ಅಜಾದ್ ಅವರ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಶಿಕ್ಷಣ…

Read More

ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿಗೆ ರಾಜ್ಯ ಮಟ್ಟದ ಸಾಧಕಿ ಪ್ರಶಸ್ತಿ

ಸಪ್ತಸಾಗರ ವಾರ್ತೆ, ವಿಜಯಪುರ, ನ. 17: ವಿಜಯಪುರ ಜಿಲ್ಲಾ ಸಾಂಸ್ಕ್ರತಿಕ ವೇದಿಕೆ ವತಿಯಿಂದ ಇತ್ತೀಚೆಗೆ ನಗರದ ಕಂದಗಲ್ಲ ಹನಮಂತರಾಯ ರಂಗಮಂದಿರದಲ್ಲಿ ಹಮ್ಮಿಕೊಂಡಿದ್ದ ನಾಡಗೀತೆ ನೂರರ ಸಂಭ್ರಮ ಕಾರ್ಯಕ್ರಮದಲ್ಲಿ ಮಹಿಳಾ ವಿವಿಯ ಕುಲಪತಿ ಪ್ರೊ. ವಿಜಯಾ ಕೋರಿಶೆಟ್ಟಿ ಅವರಿಗೆ ರಾಜ್ಯ ಮಟ್ಟದ ಸಾಧಕಿ ಪ್ರಶಸ್ತಿ ಲಭಿಸಿದೆ.ಪ್ರೊ.ವಿಜಯಾ ಕೋರಿಶೆಟ್ಟಿ ಅವರು ಕಳೆದ ಮೂರು ದಶಕಗಳಲ್ಲಿ ಶೈಕ್ಷಣಿಕ ಕ್ಷೇತ್ರದಲ್ಲಿ ಗಮನಾರ್ಹ ಸಾಧನೆ ಮಾಡಿ ಹೆಜ್ಜೆ ಗುರುತು ಮೂಡಿಸಿದ್ದಾರೆ. ಸಮಾಜಮುಖಿ ಬದುಕಿಗೆ ಮಾದರಿಯಾಗಿರುವ ಅವರ ಅನುಪಮ ಮತ್ತು ಅಮೋಘ ಸೇವೆಯನ್ನು ಪರಿಗಣಿಸಿ ಈ…

Read More

ಬೆಳಗಾವಿ ಚಳಿಗಾಲ ಅಧಿವೇಶನ:ಉತ್ತರ ಕರ್ನಾಟಕದ ಸಮಗ್ರ ಅಭಿವೃದ್ಧಿ ವಿಷಯ ಚರ್ಚೆಗೆ ಅವಕಾಶ ಕೋರಿ ಶಾಸಕ ಯತ್ನಾಳ ಪತ್ರ

ಸಪ್ತಸಾಗರ ವಾರ್ತೆ, ವಿಜಯಪುರ, ನ. 17: ಬರುವ ಡಿಸೆಂಬರ್ 8 ರಿಂದ ಬೆಳಗಾವಿಯ ಚಳಿಗಾಲ ಅಧಿವೇಶನದಲ್ಲಿ ಉತ್ತರ ಕರ್ನಾಟಕ ಭಾಗದ ಸಮಗ್ರ ಅಭಿವೃದ್ಧಿ ವಿಷಯ ಕುರಿತು ಚರ್ಚೆಗೆ ಅಧಿವೇಶನದ ಮೊದಲ ಅವಧಿಯಲ್ಲೇ ಹೆಚ್ಚಿನ ಸಮಯಾವಕಾಶ ಕಲ್ಪಿಸುವಂತೆ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಸಭಾಧ್ಯಕ್ಷ ಯು.ಟಿ.ಖಾದರ್ ಅವರಿಗೆ ಸೋಮವಾರ ಪತ್ರ ಬರೆದಿದ್ದಾರೆ.ಉತ್ತರ ಕರ್ನಾಟಕ ಮತ್ತು ದಕ್ಷಿಣ ಕರ್ನಾಟಕ ಭಾಗಗಳ ಅಭಿವೃದ್ಧಿ ಹಾಗೂ ಸ್ಥಾನಮಾನಗಳ ಹಂಚಿಕೆಯಲ್ಲಿ ಪ್ರಾದೇಶಿಕ ತಾರತಮ್ಯವನ್ನು ನಿವಾರಿಸುವುದು ಅತೀ ಅವಶ್ಯವಿದೆ. ಆದರೆ, ಪ್ರತಿ ಬಾರಿ…

Read More

ಮಹಿಳೆಯಿಂದ ಯುವಕನ ಕೊಲೆ

ಸಪ್ತಸಾಗರ ವಾರ್ತೆ ವಿಜಯಪುರ, ನ. 17:ಮಹಿಳೆಯೊಬ್ಬಳು ಯುವಕನನ್ನು ಕತ್ತು ಹಿಚುಕಿ ಕೊಲೆ ಮಾಡಿದ ಘಟನೆ ನಗರದ ಜುಮ್ಮಾ ಮಸೀದಿ ಬಳಿಯ ಅಮನ್ ಕಾಲೋನಿಯಲ್ಲಿ ನಡೆದಿದೆ.ಸಮೀರ್ ಉರ್ಫ ಪಿಕೆ ಇನಾಂದಾರ್ (26) ಕೊಲೆಯಾದ ಯುವಕ.ಲೀವಿಂಗ್ ರಿಲೇಷನ್ ನಲ್ಲಿದ್ದ ಮಹಿಳೆಯಿಂದ ಪ್ರಿಯಕರನ‌ ಕೊಲೆ ನಡೆದಿದ್ದು, ಸಹೋದರನ‌ ಸಹಾಯದಿಂದ ಲೀವಿಂಗ್ ರಿಲೇಷನ್ ನಲ್ಲಿದ್ದ ವ್ಯಕ್ತಿಯ ಕೊಲೆಯಾಗಿದೆ. ತಯ್ಯಬಾ ಬಾಗವಾನ್ ಎಂಬ ಮಹಿಳೆಯಿಂದ ಈ ಕೃತ್ಯ ನಡೆದಿದೆ.ತಯ್ಯಾಬಾ ಸಹೋದರಅಸ್ಲಮ್ ಬಾಗವಾನ್ ಸಹಾಯದಿಂದ ಕತ್ತು ಹಿಸುಕಿ ಕೊಲೆ ಮಾಡಲಾಗಿದೆ.ಸಮೀರ್ ನ ಕಿರುಕುಳದಿಂದ ಬೇಸತ್ತು ಮಹಿಳೆ…

Read More

ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳಿಗೆ ಛತ್ರಪತಿ ಶಿವಾಜಿ ಮಹಾರಾಜ ಶಿಕ್ಷಣ ಸಂಸ್ಥೆಯ ವತಿಯಿಂದ ಸನ್ಮಾನ

ಸಪ್ತಸಾಗರ ವಾರ್ತೆ, ವಿಜಯಪುರ, ನ. 17: ನಗರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ಛತ್ರಪತಿ ಶಿವಾಜಿ ಮಹಾರಾಜ ಶಿಕ್ಷಣ ಸಂಸ್ಥೆಯ ವತಿಯಿಂದ ವಿಜಯಪುರ ಜಿಲ್ಲಾ ಕಾರ್ಯ ನಿರತ ಪತ್ರಕರ್ತ ಸಂಘದ ಅಧ್ಯಕ್ಷರಾಗಿ ಚುನಾಯಿತರಾದ ಅಧ್ಯಕ್ಷ ಹಾಗೂ ಪದಾಧಿಕಾರಿಗಳಿಗೆ ಸನ್ಮಾನಿಸಲಾಯಿತು. ನಗರದ ರವೀಂದ್ರನಾಥ ಠಾಗೋರ್ ಶಾಲಾ ಕಾಲೇಜಿನ ಆಡಳಿತ ಮಂಡಳಿಯ ಕಚೇರಿಯಲ್ಲಿ ಸಂಸ್ಥೆಯ ಅಧ್ಯಕ್ಷ ಶಿವಾಜಿ ಗಾಯಕವಾಡ ಇವರು ನೂತನ ಅಧ್ಯಕ್ಷ ಅಶೋಕ ಯಡಳ್ಳಿ, ಉಪಾಧ್ಯಕ್ಷ ಶಶಿ ಮೆಂಡೆಗಾರ, ಖಜಾಂಜಿ ರಾಹುಲ್ ಆಪ್ಟೆ ಹಾಗೂ ಕಾರ್ಯಕಾರಣಿ ಸದಸ್ಯ ಗುರುರಾಜ ಗದ್ದನಕೇರಿ…

Read More

ಕಲಬುರಗಿ ವಲಯ ಮಟ್ಟದ ಪುರುಷರ ಹಗ್ಗ ಜಗ್ಗಾಟ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ

ಸಪ್ತಸಾಗರ ವಾರ್ತೆ, ವಿಜಯಪುರ, ನ. 16: ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎ.ವಿ.ಎಸ್ ಆಯರ್ವೇದ ಮಹಾವಿದ್ಯಾಲಯದ ಪುರುಷರ ಹಗ್ಗ ಜಗ್ಗಾಟ ತಂಡ ಶುಕ್ರವಾರ ನಡೆದ ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ಕಲಬುರಗಿ ವಲಯ ಮಟ್ಟದ ಪುರುಷರ ಹಗ್ಗ ಜಗ್ಗಾಟ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಪಡೆಯುವ ಮೂಲಕ ಕಾಲೇಜು ಮತ್ತು ಜಿಲ್ಲೆಗೆ ಕೀರ್ತಿ ತಂದಿದ್ದಾರೆ.ಬಾಗಲಕೋಟೆ ಜಿಲ್ಲೆಯ ಇಳಕಲ ನಗರದ ಎಸ್. ವಿ. ಎಂ ಆಯುರ್ವೇದ ಮಹಾವಿದ್ಯಾಲಯದಲ್ಲಿ ನಡೆದ ಈ ಪಂದ್ಯಾವಳಿಯಲ್ಲಿ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಈರಪ್ಪ ಇಕ್ಕಳಕಿ ಅವರ…

Read More

ಉಚಿತ ಮಧುಮೇಹ ಪಾದರೋಗದ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ

ಸಪ್ತಸಾಗರ ವಾರ್ತೆ, ವಿಜಯಪುರ, ನ. 16: ವಿಶ್ವ ಮಧುಮೇಹ ರೋಗ ದಿನದ ಅಂಗವಾಗಿ ನಗರದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯದ ಶಸ್ತ್ರ ಚಿಕಿತ್ಸೆ ವಿಭಾಗ, ವಿಜಯಪುರ ಜಿಲ್ಲಾ ಶಸ್ತ್ರ ಚಿಕಿತ್ಸಕರ ಸಂಘ ಹಾಗೂ ಭಾರತೀಯ ವೈದ್ಯಕೀಯ ಸಂಘದ ಜಿಲ್ಲಾ ಘಟಕದ ಸಹಯೋಗದಲ್ಲಿ ಉಚಿತ ಮಧುಮೇಹ ಪಾದರೋಗದ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ ಶುಕ್ರವಾರ ನಡೆಯಿತು.ನಗರದ ಸರಕಾರಿ ಪಾಲಿಟೆಕ್ನಿಕ್ ಹಿಂಭಾಗದಲ್ಲಿರುವ ಬಿ.ಎಲ್.ಡಿ.ಇ ಸಂಸ್ಥೆಯ ಎ. ವಿ. ಎಸ್. ಆಯುರ್ವೇದ ಕಾಲೇಜಿನ ನಗರ…

Read More

ವೃಕ್ಷಥಾನ್ ಹೆರಿಟೇಜ್ ರನ್-2025ರ ಅಂಗವಾಗಿ ಮಕ್ಕಳಿಗೆ ಸ್ಥಳದಲ್ಲಿಯೇ ಚಿತ್ರ ಬಿಡಿಸುವ ಸ್ಪರ್ಧೆ

ಸಪ್ತಸಾಗರ ವಾರ್ತೆ, ವಿಜಯಪುರ, ನ. 16: ನಗರದಲ್ಲಿ ಡಿಸೆಂಬರ್ 7 ರಂದು ನಡೆಯಲಿರುವ ವೃಕ್ಷಥಾನ್ ಹೆರಿಟೇಜ್ ರನ್-2025ರ ಅಂಗವಾಗಿ ಮಕ್ಕಳಿಗೆ ಸ್ಥಳದಲ್ಲಿಯೇ ಚಿತ್ರ ಬಿಡಿಸುವ ಸ್ಪರ್ಧೆ ಭಾನುವಾರ ನಗರದ ಪ್ರಾಚೀನ ಸ್ಮಾರಕ ಗಗನ ಮಹಲ್ ಆವರಣದಲ್ಲಿ ನಡೆಯಿತು.ಪ್ರಾಥಮಿಕ ವಿಭಾಗ, ಹೈಸ್ಕೂಲು ವಿಭಾಗ ಹಾಗೂ ಪಿಯು ಕಾಲೇಜು ವಿಭಾಗ ಒಟ್ಟು ಮೂರು ವಿಭಾಗಗಳಲ್ಲಿ ನಡೆದ ಈ ಸ್ಪರ್ಧೆಯಲ್ಲಿ ಸುಮಾರು 400 ವಿದ್ಯಾರ್ಥಿಗಳು ಪಾಲ್ಗೊಂಡರು. ವಿದ್ಯಾರ್ಥಿಗಳಿಗಿಂತ ವಿದ್ಯಾರ್ಥಿನಿಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದು ಗಮನ ಸೆಳೆಯಿತು.ಹೆರಿಟೇಜ್ ರನ್ 21 ಕಿ. ಮೀ….

Read More

ಪುಸ್ತಕಗಳೆಂದರೆ ಹುಟ್ಟಲಿರುವ ಜನಾಂಗದ ಆಸ್ತಿ: ಶಂಕರ ಬೈಚಬಾಳ ಅಭಿಮತ

ಸಪ್ತ ಸಾಗರ ವಾರ್ತೆ, ವಿಜಯಪುರ, ನ. 15: ಲೇಖಕ, ಪುಸ್ತಕ, ಪ್ರಕಾಶಕ ಹಾಗೂ ಓದುಗರ ನಡುವೆ ಅವಿನಾಭಾವ ಸಂಬಂಧವಿದೆ. ಈ ನಾಲ್ಕು ಪ್ರಮುಖರನ್ನು ಒಂದೇ ಕಡೆ ಸೇರಿಸುವ ಮೂಲಕ ಕನ್ನಡ ಪುಸ್ತಕ ಪರಿಷತ್ತು ಆಗಾಗ್ಗೆ ತನ್ನ ಪುಸ್ತಕ ಪ್ರಿಯ ಕನ್ನಡದ ಕೆಲಸ ಮಾಡುತ್ತಲೆ ಇದೆ. ಪುಸ್ತಕೋದ್ಯಮ ಈಗ ಸವಾಲುಗಳನ್ನು ಎದುರಿಸುತ್ತಲಿದೆ. ಪುಸ್ತಕಗಳೆಂದರೆ ಹುಟ್ಟಲಿರುವ ಜನಾಂಗದ ಆಸ್ತಿ ಎಂದು ಸಾಹಿತಿ ಶಂಕರ ಬೈಚಬಾಳ ಹೇಳಿದರು.ನಗರದ ಪ್ರಗತಿ ಹೈಸ್ಕೂಲ್ ಸಭಾಂಗಣದಲ್ಲಿ ನಡೆದ ಕನ್ನಡ ಪುಸ್ತಕ ಪರಿಷತ್ ಸಮ್ಮೇಳನದ ಪೂರ್ವಭಾವಿ ಸಭೆಯಲ್ಲಿ…

Read More