ನೇರ–ದಿಟ್ಟ ವಚನಗಳ ಮೂಲಕ ಕಾಯಕಜೀವಿಗಳ ಧ್ವನಿಯಾದವರು ನಿಜಶರಣ ಅಂಬಿಗರ ಚೌಡಯ್ಯ-ಡಾ. ಔದ್ರಾಮ
ಸಪ್ತಸಾಗರ ವಾರ್ತೆ, ವಿಜಯಪುರ, ಜ.21: ವಚನ ಪರಂಪರೆ, ತನ್ನ ನೇರ ವಚನಗಳ ಮೂಲಕ ಸಾಮಾಜಿಕ ಸಮಾನತೆಯ ಸಾರಿದವರು ನಿಜಶರಣ ಅಂಬಿಗರ ಚೌಡಯ್ಯನವರು ಎಂದು ಅಪರ ಜಿಲ್ಲಾಧಿಕಾರಿ ಡಾ. ಔದ್ರಾಮ ಹೇಳಿದರು.ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಬುಧವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ನಿಜಶರಣ ಅಂಬಿಗರ ಚೌಡಯ್ಯ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.ಅಂಬಿಗರ ಚೌಡಯ್ಯ ಅವರು ಕೇವಲ ವಚನಕಾರ ಮಾತ್ರವಲ್ಲ, ಶ್ರಮಜೀವಿಗಳ ಆಶಯ…


