ಭಯೋತ್ಪಾದನೆ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಎಲ್ಲರೂ ಕೈಜೋಡಿಸಿ-ಸಂತೋಷ ಬಂಡೆ

ಸಪ್ತಸಾಗರ ವಾರ್ತೆ ವಿಜಯಪುರ, ಮೇ. 21:ಭಯೋತ್ಪಾದನೆಯು ಇಡೀ ಮಾನವಕುಲಕ್ಕೆ ದೊಡ್ಡ ಶಾಪವಾಗಿದ್ದು, ಜನರಲ್ಲಿ ಶಾಂತಿ, ಏಕತೆ, ಸಾಮರಸ್ಯ, ಮಾನವೀಯತೆಯನ್ನು ಜೀವಂತವಾಗಿಟ್ಟಾಗ ಭಯೋತ್ಪಾದನೆಯನ್ನು ನಿಗ್ರಹಿಸಲು ಸಾಧ್ಯ ಎಂದು ಶಿಕ್ಷಕ ಸಾಹಿತಿ ಸಂತೋಷ ಬಂಡೆ ಹೇಳಿದರು.ಗುರುವಾರ ತಾಲೂಕಿನ ನಾಗಠಾಣ ಗ್ರಾಮದ ಶ್ರೀ ಮಲ್ಲಿಕಾರ್ಜುನ ಹಿರಿಯ ಪ್ರಾಥಮಿಕ ಮತ್ತು ಪ್ರೌಢ ಶಾಲೆಯಲ್ಲಿ ಹಮ್ಮಿಕೊಂಡ ರಾಷ್ಟ್ರೀಯ ಭಯೋತ್ಪಾದನಾ ವಿರೋಧಿ ದಿನದ ಕಾರ್ಯಕ್ರಮದಲ್ಲಿ ‘ಭಯೋತ್ಪಾದನೆ- ಮಾನವೀಯತೆಗೆ ಮಾರಕ’ ಕುರಿತು ಅವರು ಮಾತನಾಡಿದರು.ಯುವ ಜನತೆಗೆ ದೇಶಭಕ್ತಿ, ಸತ್ಯ, ಅಹಿಂಸೆಯ ಮೌಲ್ಯ ತಿಳಿಸಿಕೊಟ್ಟು, ಅವರು ತಪ್ಪು ದಾರಿಗೆ…

Read More

ಮನೆಯ ಮೇಲ್ಛಾವಣೆ ಕುಸಿದು ವೃದ್ಧೆ ಸಾವು

ಸಪ್ತಸಾಗರ ವಾರ್ತೆ,ವಿಜಯಪುರ, ಮೇ. 21:ಮನೆಯ ಮೇಲ್ಚಾವಣಿ ಕುಸಿದು ಮಹಿಳೆ ಜೀವಂತ ಸಮಾಧಿಯಾಗಿರುವ ದುರಂತಜಿಲ್ಲೆಯ ನಿಡಗುಂದಿ ಪಟ್ಟಣದಗೌರೀಶ್ವರ ದೇವಸ್ಥಾನ ಬಳಿ ಗುರುವಾರ ನಸುಕಿನಲ್ಲಿ ನಡೆದಿದೆ.ನಿಡಗುಂದಿ ನಿವಾಸಿ ಮಹಾದೇವಿ ವಾರದ (55) ಮೃತಪಟ್ಟ ಮಹಿಳೆ.ಮೊನ್ನೆ ಸುರಿದ ಮಳೆಗೆ ನೆನೆದಿದ್ದ ಹಳೆಯ ಮನೆ ಮೇಲ್ಚಾವಣಿ ಕುಸಿದು ಈ ಅವಘಡ ಸಂಭವಿಸಿದೆ.ನಸುಕಿನ ಜಾವ ಮನೆಯ ಮೇಲ್ಚಾವಣಿ ಕುಸಿದು ಮಹಾದೇವಿ ಜೀವಂತ ಸಮಾಧಿಯಾಗಿದ್ದಾರೆ.ಮನೆಯ ಹೊರಗೆ ಮಲಗಿದ್ದ ಪತಿಶಿವಾನಂದ ಅಪಾಯದಿಂದ ಪಾರಾಗಿದ್ದಾರೆ.ಸ್ಥಳಕ್ಕೆ ನಿಡಗುಂದಿ ಪೊಲೀಸರು ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.ಮಹಾದೇವಿ…

Read More

ವಿದ್ಯುತ್ ಚಿತಾಗಾರ ನಿರ್ಮಾಣ: ಶಾಸಕ ಯತ್ನಾಳ ಭೂಮಿಪೂಜೆ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ. 20:ನಗರದ ವಾರ್ಡ್ ನಂ.8 ರಲ್ಲಿ ಬರುವ ಚಾಲುಕ್ಯ ನಗರ ಪೂರ್ವ ಭಾಗದ ದೇವಗಿರಕರ ಸ್ಮಶಾನದಲ್ಲಿ ನಗರ ಮೂಲಸೌಕರ್ಯ ಅಭಿವೃದ್ಧಿ ನಿಧಿ ಅಡಿಯಲ್ಲಿ ಮಂಜೂರಿಸಲಾದ ರೂ.4 ಕೋಟಿ ಅನುದಾನದಲ್ಲಿ ವಿದ್ಯುತ್ ಚಿತಾಗಾರ ನಿರ್ಮಾಣ ಕಾಮಗಾರಿಗೆ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಮಂಗಳವಾರ ಭೂಮಿಪೂಜೆ ನೆರವೇರಿಸಿದರು.ಭೂಮಿಪೂಜೆ ಬಳಿಕ ಸಾರ್ವಜನಿಕರಿಂದ ಅಹವಾಲು ಆಲಿಸಿ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವುದಾಗಿ ಸಕರಾತ್ಮಕವಾಗಿ ಸ್ಪಂದಿಸಿದರು. ಮಹಾನಗರ ಪಾಲಿಕೆ ಮೇಯರ್ ಎಂ.ಎಸ್.ಕರಡಿ, ಸದಸ್ಯರಾದ ರಾಜಶೇಖರ ಮಗಿಮಠ, ಪ್ರೇಮಾನಂದ ಬಿರಾದಾರ, ಅಶೋಕ…

Read More

ವಿಜಯಪುರದ ರಾಣಿ ಚೆನ್ನಮ್ಮ ಕೇಂದ್ರ ಬಸ್ ನಿಲ್ದಾಣದಲ್ಲಿ ಕುಡಿಯುವ ನೀರಿನ ಅವ್ಯವಸ್ಥೆ ವಿರುದ್ಧ ದ್ರಾವಿಡ ವಿದ್ಯಾರ್ಥಿ ಪರಿಷತ್ ಮನವಿ

ಸಪ್ತಸಾಗರ ವಾರ್ತೆ, ವಿಜಯಪುರ, ಮೇ. 20:ನಗರದ ಪ್ರಮುಖ ಸಾರಿಗೆ ಕೇಂದ್ರವಾಗಿರುವ ರಾಣಿ ಚೆನ್ನಮ್ಮ ಕೇಂದ್ರ ಬಸ್ ನಿಲ್ದಾಣದಲ್ಲಿ ಸಾರ್ವಜನಿಕರು ಪ್ರತಿನಿತ್ಯ ಅನುಭವಿಸುತ್ತಿರುವ ಮೂಲಭೂತ ಸಮಸ್ಯೆಗಳು, ಅಕ್ರಮ ಶುಲ್ಕ ವಸೂಲಿ ಹಾಗೂ ಕುಡಿಯುವ ನೀರಿನ ಅವ್ಯವಸ್ಥೆ ವಿರುದ್ಧ ದ್ರಾವಿಡ ವಿದ್ಯಾರ್ಥಿ ಪರಿಷತ್ ತೀವ್ರ ಆಕ್ರೋಶ ವ್ಯಕ್ತಪಡಿಸಿ ಅಪರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದೆ.ಅಕ್ಷಯ್ ಕುಮಾರ್ ಅಜಮನಿ ಮಾತನಾಡಿ, ನಿತ್ಯ ಸಾವಿರಾರು ಪ್ರಯಾಣಿಕರು, ವಿದ್ಯಾರ್ಥಿಗಳು, ಮಹಿಳೆಯರು ಮತ್ತು ಕಾರ್ಮಿಕರು ಬಸ್ ನಿಲ್ದಾಣವನ್ನು ಅವಲಂಬಿಸಿಕೊಂಡಿದ್ದರೂ, ಅಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ ಸ್ಪಷ್ಟವಾಗಿ ಎದ್ದು…

Read More

ಬಸವನ ಬಾಗೇವಾಡಿಯಲ್ಲಿ ಇಂಧನ, ಅಡುಗೆ ಅನಿಲ ಕೃತಕ ಅಭಾವ: ದಾಸ್ತಾನು ಪರಿಶೀಲಿಸಲು ಶಂಕರಗೌಡ ಬಿರಾದಾರ ಆಗ್ರಹ

ಸಪ್ತಸಾಗರ ವಾರ್ತೆ,ಬಸವನಬಾಗೇವಾಡಿ, ಮೇ. 20:ಪಟ್ಟಣದಲ್ಲಿ ಕಳೆದ ಕೆಲವು ದಿನಗಳಿಂದ ಪೆಟ್ರೋಲ್, ಡೀಸೆಲ್ ಹಾಗೂ ವಾಣಿಜ್ಯ ಅಡುಗೆ ಅನಿಲದ ತೀವ್ರ ಕೃತಕ ಅಭಾವ ಸೃಷ್ಟಿಯಾಗುತ್ತಿದ್ದು, ಸಾರ್ವಜನಿಕರು, ರೈತರು ಹಾಗೂ ಬಡ ವ್ಯಾಪಾರಸ್ಥರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ರಾಷ್ಟ್ರೀಯ ಬಸವಸೈನ್ಯದ ಸಂಸ್ಥಾಪಕ ಅಧ್ಯಕ್ಷ ಶಂಕರಗೌಡ ಬಿರಾದಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, “ಪಟ್ಟಣದ ಪೆಟ್ರೋಲ್ ಬಂಕ್‌ಗಳಲ್ಲಿ ಸಕಾಲಕ್ಕೆ ಇಂಧನ ಸಿಗದೆ ಸಾರ್ವಜನಿಕರು ಹಾಗೂ ಕೃಷಿ ಚಟುವಟಿಕೆಗಳಿಗಾಗಿ ಡೀಸೆಲ್ ನಂಬಿಕೊಂಡಿರುವ ರೈತರು ನಿತ್ಯ ಪರದಾಡುವಂತಾಗಿದೆ. ಇನ್ನೊಂದೆಡೆ,…

Read More

ಕುಮಾರಸ್ವಾಮಿ ಪಂಥಾಹ್ವಾನಕ್ಕೆ ಸಿದ್ಧ:ಡಿಕೆಶಿ

ಸಪ್ತಸಾಗರ ವಾರ್ತೆ,ಬೆಂಗಳೂರು, ಮೇ 20:“ಬಿಡದಿ ಟೌನ್ ಶಿಪ್ ವಿಚಾರವಾಗಿ ಕುಮಾರಸ್ವಾಮಿ ಅವರು ಪಂಥಾಹ್ವಾನ ಕರೆದಿದ್ದಾರಂತೆ. ಅವರ ಪಂಥಾಹ್ವಾನವನ್ನು ನಾನು ಸ್ವೀಕರಿಸುವೆ. ನನಗೆ ಮೂರು ದಿನ ಸಮಯ ಸಾಕು. ಯಾವತ್ತು ಸಮಯ ನಿಗದಿ ಮಾಡುವಿರೋ ನಾನು ಅಂದು ತಯಾರಿದ್ದೇನೆ. ಜಾಗ ಹಾಗೂ ಸಮಯ ಅವರೇ ನಿಗದಿ ಮಾಡಲಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.ಸರ್ಕಾರಿ ಗೃಹ ಕಚೇರಿ ಕುಮಾರಪಾರ್ಕ್ ನಲ್ಲಿ ಶಿವಕುಮಾರ್ ಅವರು ಬುಧವಾರ ಬಿಡದಿ ಟೌನ್ ಶಿಪ್ ಯೋಜನೆ ಕುರಿತು ಆ ಭಾಗದ ರೈತರೊಂದಿಗೆ ಸಭೆ…

Read More

ರಾಜ್ಯ ಕಾಂಗ್ರೆಸ್ ಸರ್ಕಾರದ ಮೂರು ವರ್ಷದ ಅವಧಿಯಲ್ಲಿ 300 ವೈಫಲ್ಯ: ಜಿಗಜಿಣಗಿ ಟೀಕೆ

ಸಪ್ತಸಾಗರ ವಾರ್ತೆ, ವಿಜಯಪುರ, ಮೇ. 19:ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೂರು ವರ್ಷದ ಆಡಳಿತದಲ್ಲಿ 300 ವೈಫಲ್ಯಗಳಿವೆ ಎಂದು ವಿಜಯಪುರ ಸಂಸದ ರಮೇಶ ಜಿಗಜಿಣಗಿ ಟೀಕಿಸಿದ್ದಾರೆಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಸರ್ಕಾರದ ಮೂರು ವರ್ಷಗಳ ಅವಧಿಯಲ್ಲಿ ಅಭಿವೃದ್ಧಿ ಶೂನ್ಯವಾಗಿದೆ. ಅವರ ಕೊರಳಿಗೆ 300 ವೈಫಲ್ಯಗಳ ಹಾರ ಹಾಕುವುದಾಗಿ ಹೇಳಿದರು.ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ಸಿದ್ದರಾಮಯ್ಯನವರು ಪ್ರತಿಯೊಂದು ವಸ್ತುವಿನ ಮೇಲೆ ದುಬಾರಿ ತೆರಿಗೆ ಹಾಕಿ ಗ್ಯಾರಂಟಿ ಯೋಜನೆಗಳಿಗೆ ನೀಡುತ್ತಿದ್ದಾರೆ. ಬಡವರಿಗೆ ಗ್ಯಾರಂಟಿ ಯೋಜನೆಗಳನ್ನು ಕೊಡಲು ನಮ್ಮದೇನೂ ಅಭ್ಯಂತರವಿಲ್ಲ. ಸರ್ಕಾರದ…

Read More

ವಿಜಯಪುರ ಜಿಲ್ಲಾ ಆಸ್ಪತ್ರೆಯಲ್ಲಿ ಅವ್ಯವಸ್ಥೆ ಖಂಡಿಸಿ ವೈದ್ಯಕೀಯ ಕಾಲೇಜು ಹೋರಾಟ ಸಮಿತಿ ಆಕ್ರೋಶ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ. 19:ಇಲ್ಲಿನ ಜಿಲ್ಲಾಸ್ಪತ್ರೆಯ ಖಂಡಿಸಿ ಸರ್ಕಾರಿ ವೈದ್ಯಕೀಯ ಕಾಲೇಜು ಹೋರಾಟ ಸಮಿತಿ ಮಂಗಳವಾರ ಪ್ರತಿಭಟನೆ ನಡೆಸಿದೆ.ನಗರದ ಜಿಲ್ಲಾ ಆಸ್ಪತ್ರೆಯಲ್ಲಿ ತೀವ್ರ ಅವ್ಯವಸ್ಥೆಯಿಂದ ರೋಗಿಗಳು ದುರಂತ ಅನುಭವಿಸುತ್ತಿದ್ದಾರೆ. ಪ್ರತಿದಿನ 2,000 ರಿಂದ 3,000ಕ್ಕೂ ಹೆಚ್ಚು ಹೊರ ರೋಗಿಗಳು ಇಂಡಿ, ಮುದ್ದೇಬಿಹಾಳ, ಸಿಂದಗಿ ತಾಲ್ಲೂಕುಗಳಿಂದ, ಬಾಗಲಕೋಟೆ , ಬೆಳಗಾವಿ ಜಿಲ್ಲೆಗಳಿಂದ ಹಾಗೂ ಮಹಾರಾಷ್ಟ್ರದ ಸಾಂಗ್ಲಿ ಮತ್ತು ಜತ್ತ ಜಿಲ್ಲೆಗಳಿಂದ ಬರುತ್ತಿದ್ದರೂ ಸಹ, ಆಸ್ಪತ್ರೆಯಲ್ಲಿ ಕನಿಷ್ಠ ಮೂಲಭೂತ ವ್ಯವಸ್ಥೆಯನ್ನೂ ಕಲ್ಪಿಸಲಾಗಿಲ್ಲ ಎಂದು ವಿಜಯಪುರ ಸರ್ಕಾರಿ ವೈದ್ಯಕೀಯ ಕಾಲೇಜು ಹೋರಾಟ…

Read More

ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಯತ್ನಾಳರಿಂದ ಭೂಮಿಪೂಜೆ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ. 19:ನಗರದಲ್ಲಿ ಸೋಮವಾರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು, ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿ, ಸಾರ್ವಜನಿಕರ ಅಹವಾಲು ಆಲಿಸಿದರು.ನಗರದ ವಾರ್ಡ್ ನಂ.33 ರಲ್ಲಿ ಬರುವ ಶಹಾಪೇಟೆ ಲೇಔಟ್ ದಲ್ಲಿ 2025-26ನೇ ಸಾಲಿನ‌ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿಯಲ್ಲಿ ಮಂಜೂರಿಸಲಾದ ರೂ.10 ಲಕ್ಷ ಅನುದಾನದಲ್ಲಿ ವಿಜಯಲಕ್ಷ್ಮೀ ಸರ್ವೋತ್ತಮ ದೇಶಪಾಂಡೆ ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಂಸ್ಥೆ ಕಟ್ಟಡ ನಿರ್ಮಾಣ ಕಾಮಗಾರಿಗೆ ಹಾಗೂ ಬನಶಂಕರಿ ದೇವಸ್ಥಾನದ ಆವರಣದಲ್ಲಿ 2025-26ನೇ ಸಾಲಿನ‌ ಮುಖ್ಯಮಂತ್ರಿಯವರ ಮೂಲಸೌಕರ್ಯ ಅಭಿವೃದ್ಧಿ…

Read More

ಶರಣರ ವಚನಗಳಲ್ಲಿ ಹೃದಯತುಂಬಿದ ಅನುಭಾವ: ರೆಡ್ಡಿ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ. 19:ಶರಣರು ತಮ್ಮ ವಚನಗಳ ಮೂಲಕ ಸತ್ಯ, ನಿಷ್ಠೆ ಬದುಕಿನ ಶಿವಪಥವನ್ನು ಲೋಕಕ್ಕೆ ನೀಡಿದ ಮಹಾಂತರು, ಅದರಲ್ಲಿ ಕಾಯಕ, ದಾಸೋಹ ಪೂಜೆಯಾಗಬೇಕು. ಶರಣರ ವಚನಗಳಲ್ಲಿ ಹೃದಯ ತುಂಬಿದ ಅನುಭಾವ ಎಂದು ಉಪನ್ಯಾಸಕ ಸಂಗನಬಸಪ್ಪ ರೆಡ್ಡಿಹೇಳಿದರು.ನಗರದ ಅ.ಭಾ.ವಿ. ಲಿಂಗಾಯತ ಮಹಾಸಭೆಯ ಜಿಲ್ಲಾ ಘಟಕದವರು ವೀರಶೈವ ಲಿಂಗಾಯತ ಸಭಾಭವನದಲ್ಲಿ ಏರ್ಪಡಿಸಿದ 77ನೇ ಮಾಸಿಕ ಶಿವಾನುಭವ ಗೋಷ್ಠಿಯಲ್ಲಿ ಶರಣ ಸಕಲೇಶ ಮಾದರಸ ಅವರ ಅನುಭಾವ ಕುರಿತು ಮಾತನಾಡಿದರು.ರಾಜ ಪರಿವಾರದ ಸಕಲೇಶರು ಸಂಸಾರವನ್ನುತ್ಯಾಗಮಾಡಿ ಸದ್ಗುರುವನ್ನು ಕಾಣಲು ಶ್ರೀಶೈಲಕ್ಕೆ ಹೋಗುತ್ತಾರೆ. ಶಿವನ…

Read More