ಧೂಮಪಾನ ನಿಷೇಧಕ್ಕೆ ಜನರ ಸ್ವಯಂ ಜಾಗೃತಿ ಅತ್ಯಗತ್ಯ- ಸಂತೋಷ ಬಂಡೆ
ಸಪ್ತಸಾಗರ ವಾರ್ತೆ,ಇಂಡಿ, ಮಾ. 11: ಧೂಮಪಾನವು ಗಂಭೀರ ವ್ಯಸನವಾಗಿದ್ದು, ಇದು ವ್ಯಕ್ತಿಯ ಆರೋಗ್ಯ, ಸುತ್ತಲಿನ ಪರಿಸರದ ಮೇಲೆ ಹಾನಿಕಾರಕ ಪರಿಣಾಮ ಬೀರುತ್ತದೆ. ಧೂಮಪಾನ ಎಂದರೆ ದೇಹತ್ಯಾಗ ಎಂದರಿತುಕೊಂಡು ಆರೋಗ್ಯಕರ ಜೀವನಕ್ಕಾಗಿ ಎಲ್ಲರೂ ಧೂಮಪಾನದಿಂದ ದೂರವಿರುವುದು ಅತ್ಯಗತ್ಯ ಎಂದು ಶಿಕ್ಷಕ ಸಂತೋಷ ಬಂಡೆ ಹೇಳಿದರು.ಬುಧವಾರ ತಾಲೂಕಿನ ಹಿರೇರೂಗಿ ಗ್ರಾಮದ ಯುಬಿಎಸ್ ಶಾಲೆಯಲ್ಲಿ ಧೂಮಪಾನ ನಿಷೇಧ ದಿನದ ನಿಮಿತ್ತ ಹಮ್ಮಿಕೊಂಡ ಧೂಮಪಾನದ ದುಷ್ಪರಿಣಾಮ ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಧೂಮಪಾನವು ನಿಧಾನಗತಿಯ ವಿಷವಾಗಿದೆ. ಅದು ಶ್ವಾಸಕೋಶದ ಕ್ಯಾನ್ಸರ್, ಹೃದಯರಕ್ತನಾಳದ ಕಾಯಿಲೆ,…


