ವಿಜಯಪುರ ಜಿಲ್ಲಾ ಸಂಜೆವಾಣಿ ವರದಿಗಾರ ರುದ್ರಪ್ಪ ಆಸಂಗಿಯವರಿಗೆ ಮಾಧ್ಯಮ ಅಕಾಡೆಮಿ ಪ್ರಶಸ್ತಿ

ಸಪ್ತಸಾಗರ ವಾರ್ತೆ, ವಿಜಯಪುರ, ಜ. 9:ಕರ್ನಾಟಕ ಸರ್ಕಾರದ ಮಾಧ್ಯಮ ಅಕಾಡೆಮಿ ಹಾಗೂ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದೆ.ರಾಜ್ಯದ 30 ಜಿಲ್ಲೆಗಳ 40 ಪತ್ರಕರ್ತರಿಗೆ ಮಾಧ್ಯಮ ಅಕಾಡೆಮಿ ಹಾ ಗೂ ದತ್ತಿ ಪ್ರಶಸ್ತಿಗಳನ್ನು ಘೋಷಿಸಿದ್ದು, ಈ ಪ್ರಶಸ್ತಿಯು ನಗದು 50,000 ಹಾಗೂ ಫಲಕ ಹೊಂದಿದೆ. ಶ್ರೀಮತಿ ಸರಿತಾ ರೈ ಅವರಿಗೆ 2025ನೇ ಸಾಲಿನ ವಿಶೇಷ ಪ್ರಶಸ್ತಿ ಲಭಿಸಿದ್ದು, ಈ ಪ್ರಶಸ್ತಿ ನಗದು ಒಂದು ಲಕ್ಷ ರೂಪಾಯಿ ಹಾಗೂ ಫಲಕ ಹೊಂದಿದೆ.ವಿಜಯಪುರ ಜಿಲ್ಲೆಯ ಹಿರಿಯ ಪತ್ರಕರ್ತ ರುದ್ರಪ್ಪ ಆಸಂಗಿ ಅವರು ಪ್ರಸಕ್ತ ಸಾಲಿನ…

Read More

ರಾಯಣ್ಣ ಪುತ್ಥಳಿ ಸ್ಥಾಪನೆಗೆ ಸಿಎಂಗೆ ಕುರುಬರ ನಿಯೋಗದಿಂದ ಮನವಿ

ಸಪ್ತಸಾಗರ ವಾರ್ತೆ, ವಿಜಯಪುರ, ಜ. 8 : ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ನೆರವೇರುತ್ತಿರುವ ಕಿತ್ತೂರ ರಾಣಿ ಚೆನ್ನಮ್ಮ ಪುತ್ಥಳಿ ಪಕ್ಕದಲ್ಲಿ ಸಂಗೊಳ್ಳಿ ರಾಯಣ್ಣ ಪುತ್ಥಳಿ ಕೂಡಾ ಸ್ಥಾಪಿಸಬೇಕು ಎಂದು ಒತ್ತಾಯಿಸಿ ಕುರುಬ ಸಮಾಜದ ನಿಯೋಗವು ಸಿಎಂ ಸಿದ್ಧರಾಮಯ್ಯನವರಿಗೆ ಬೆಂಗಳೂರಿನಲ್ಲಿ ಮನವಿ ಸಲ್ಲಿಸಿತು.ಈ ಸಂದರ್ಭದಲ್ಲಿ ಅಧ್ಯಕ್ಷ ರಾಜು ಕಗ್ಗೋಡ, ಅಹಿಂದ ಮುಖಂಡ ಸೋಮನಾಥ ಕಳ್ಳಿಮನಿ ಜಂಟಿಯಾಗಿ ಮಾತನಾಡಿ, ಮುಂದಿನ ಪೀಳಿಗೆಗೆ ಚೆನ್ನಮ್ಮಾ ರಾಯಣ್ಣ ಭಾಂದವ್ಯ ಮತ್ತು ನಿಷ್ಟೆಯ ಶೌರ್ಯ ಸಂದೇಶ ರವಾನೆಯಾಗಬೇಕು ಎಂದರು.ಕುರುಬ ಸಮಾಜದ ಹಲವಾರು ಗಂಭೀರ…

Read More

ವಿವೇಕ ವಿದ್ಯಾರ್ಥಿ ಪರೀಕ್ಷೆ+ ಎಕ್ಸಲಂಟ್ ವಿದ್ಯಾರ್ಥಿಗಳ ಸಾಧನೆ

ಸಪ್ತಸಾಗರ ವಾರ್ತೆ, ವಿಜಯಪುರ, ಜ. 8: ರಾಮಕೃಷ್ಣ ವಿವೇಕಾನಂದ ಭಾವ ಪ್ರಚಾರ ಪರಿಷತ್, ಕರ್ನಾಟಕ ಇವರು ಇತ್ತೀಚೆಗೆ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ರಾಜ್ಯ ಮಟ್ಟದ ಸ್ಪರ್ಧಾತ್ಮಕ “ವಿವೇಕ ವಿದ್ಯಾರ್ಥಿ” ಲಿಖಿತ ಪರೀಕ್ಷೆಯಲ್ಲಿ ನಗರದ ಹೊರವಲಯದಲ್ಲಿರುವ ಎಕ್ಸಲಂಟ್ ಆಂಗ್ಲ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢಶಾಲೆ ವಿದ್ಯಾರ್ಥಿನಿಯರಾದ ಶ್ರೇಯಾ ಅಸ್ಕಿ ಪ್ರಥಮ ಸ್ಥಾನ, ಪೂರ್ವಿ ನಾಗರಳ್ಳಿ ದ್ವೀತಿಯ ಸ್ಥಾನ ಹಾಗೂ ಪ್ರತೀಕ್ಷಾ ರಾಠೋಡ ತೃತೀಯ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಅವರ ಈ ಸಾಧನೆಯನ್ನು ಕಂಡು ಎಕ್ಸಲಂಟ್ ಸಂಸ್ಥೆಯ ಪ್ರಧಾನ…

Read More

ಅಶ್ಲೀಲ ಸಾಹಿತ್ಯ ಮತ್ತು ಸಿನಿಮಾಗಳನ್ನು ನಿಷೇಧಿಸುವಂತೆ ಕೆಆರ್‌ಎಸ್ ಪಕ್ಷ ಆಗ್ರಹ

ಸಪ್ತಸಾಗರ ವಾರ್ತೆ, ವಿಜಯಪುರ, ಜ. 8 : ಉತ್ತರ ಕರ್ನಾಟಕದಲ್ಲಿ ಅಶ್ಲೀಲ ಸಾಹಿತ್ಯ ಮತ್ತು ಸಂಗೀತದಿಂದಾಗಿ ಈ ಭಾಗದ ಮಕ್ಕಳ ಮನಸ್ಸಿನ ಮೇಲೆ ವ್ಯಾಪಕವಾದ ಪರಿಣಾಮಗಳು ಬೀರುತ್ತವೆ. ಇದರಿಂದಾಗಿ ಮಕ್ಕಳ ಶೈಕ್ಷಣಿಕ ಮಟ್ಟ ಕುಸಿಯುತ್ತಿದೆ. ಸಮಾಜದಲ್ಲಿ ಮೌಲ್ಯಗಳು ಕುಸಿತಗೊಂಡು ಸಾಮಾಜಿಕ ಸ್ವಾಸ್ಥ್ಯ ಹಾಳಾಗುತ್ತಿದೆ. ರಾಜ್ಯದ ಹಿತದೃಷ್ಟಿಯಿಂದಾಗಿ ಉತ್ತರ ಕರ್ನಾಟಕದ ಜಾನಪದ ಸಾಹಿತ್ಯ ಸಿನಿಮಾ/ಚಲನಚಿತ್ರಗಳಲ್ಲಿ ಹಿಂಸೆಯನ್ನು ಪ್ರಚೋದಿಸುವ ಬಂದೂಕು, ಮಚ್ಚು, ಲಾಂಗು, ರಾಬರಿ, ಐಟಂ ಸಾಂಗ್ ಮತ್ತು ಅತ್ಯಾಚಾರದಂತ ದೃಶ್ಯಗಳನ್ನು ಹೆಚ್ಚಾಗಿ ಬಳಸದಂತೆ ರಾಜ್ಯದಿಂದ ನಿಷೇಧಿಸಬೇಕು ಎಂದು ರಾಜ್ಯ…

Read More

ಜಿಲ್ಲೆಯ ಜನತೆ ಪರವಾಗಿ ಸಿ.ಎಂ. ಸಿದ್ದುಗೆ ಕೃತಜ್ಞತೆ- ಸಚಿವ ಶಿವಾನಂದ ಪಾಟೀಲ

ಸಪ್ತಸಾಗರ ವಾರ್ತೆ, ವಿಜಯಪುರ, ಜ. 8 : ರಾಜ್ಯದ ಸುದೀರ್ಘ ಆಡಳಿತ ನಡೆಸಿದ ಮುಖ್ಯಮಂತ್ರಿ ಎಂಬ ದಾಖಲೆ ಮಾಡಿದ ಬಳಿಕ ಜಿಲ್ಲೆಗೆ ವೈದ್ಯಕೀಯ ಕಾಲೇಜಿನ‌ ಕೊಡುಗೆ ನೀಡಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ ಮೊದಲ ಬಾರಿಗೆ ಜಿಲ್ಲೆಗೆ ಆಗಮಿಸುತ್ತಿದ್ದಾರೆ. ಹೀಗಾಗಿ ಮುಖ್ಯಮಂತ್ರಿಗಳನ್ನು ಜಿಲ್ಲೆಯ ಜನತೆಯ ಪರವಾಗಿ ಹೃತ್ಪೂರ್ವಕ ಸ್ವಾಗಿತಿಸಿ, ಕೃತಜ್ಞತೆ ಸಲ್ಲಿಸುವುದಾಗಿ ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ ಹೇಳಿದರು.ಗುರುವಾರ ನಗರದ ವಿಡಿಸಿಸಿ ಬ್ಯಾಂಕ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸುದೀರ್ಘ ಕಾಲದವರೆಗೆ…

Read More

ಮನುಕುಲಕ್ಕೆ ಸನ್ಮಾರ್ಗ ತೋರಿದ ಸಿದ್ಧೇಶ್ವರ ಶ್ರೀಗಳು-ನಿಜಶರಣಾನಂದ ಸ್ವಾಮೀಜಿ

ಸಪ್ತಸಾಗರ ವಾರ್ತೆ, ವಿಜಯಪುರ, ಜ. 8: ಮನುಕುಲಕ್ಕೆ ಸುಂದರ ಬದುಕಿನ ದಾರಿ ತೋರಿದ ಜಗತ್ತಿನ ಶ್ರೇಷ್ಠ ಸಂತ ಸಿದ್ಧೇಶ್ವರ ಸ್ವಾಮೀಜಿಯವರ ಜೀವನ, ಚಿಂತನೆಗಳು ನಮ್ಮೆಲ್ಲರ ಜೀವನಕ್ಕೆ ಮಾರ್ಗದರ್ಶಿಯಾಗಿವೆ ಎಂದು ನಿಜಶರಣಾನಂದ ಸ್ವಾಮೀಜಿಹೇಳಿದರು.ತಾಲೂಕಿನ ನಾಗಠಾಣ ಗ್ರಾಮದ ಕಲ್ಲಯಾರೂಢ ಮಠದಲ್ಲಿ ಹಮ್ಮಿಕೊಂಡ ಶ್ರೀ ಸಿದ್ದೇಶ್ವರ ಮಹಾಸ್ವಾಮಿಗಳ 3ನೇ ಗುರುನಮನ ಕಾರ್ಯಕ್ರಮವನ್ನು ಉದ್ಧೇಶಿಸಿ ಮಾತನಾಡಿದರು.ಅಧ್ಯಾತ್ಮದ ಮೇರು ಪರ್ವತ, ಸದ್ಗುಣಗಳ ಪ್ರತಿರೂಪವಾಗಿದ್ದ ಸಿದ್ದೇಶ್ವರ ಶ್ರೀಗಳು ಸರಳ ಜೀವನ, ಆಳವಾದ ಆಧ್ಯಾತ್ಮಿಕ ಜ್ಞಾನದೊಂದಿಗೆ ಜಾತಿ, ಮತ, ಪಂಥದ ಭೇದಭಾವವಿಲ್ಲದೆ ಎಲ್ಲರಿಗೂ ತತ್ವಶಾಸ್ತ್ರವನ್ನು ಅರ್ಥವಾಗುವ ಭಾಷೆಯಲ್ಲಿ…

Read More

ಸಿಎಂ ಸರ್ಕಾರಿ ವೈದ್ಯಕೀಯ ಕಾಲೇಜು ಘೋಷಣೆ : ದಲಿತ ವಿದ್ಯಾರ್ಥಿ ಪರಿಷತ್ತಿನಿಂದ ಸಂಭ್ರಮಾಚರಣೆ

ಸಪ್ತಸಾಗರ ವಾರ್ತೆ, ವಿಜಯಪುರ,ಜ.8 : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿನ್ನೆ (ಜನವರಿ 7) ಹಾವೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಜಯಪುರದ ಬಹುದಿನಗಳ ಕನಸಾಗಿದ್ದ ಸರ್ಕಾರಿ ಮೆಡಿಕಲ್ ಕಾಲೇಜು ಸ್ಥಾಪನೆ ಮಾಡುವ ಬಗ್ಗೆ ಘೋಷಣೆ ಮಾಡಿರುವುದನ್ನು ದಲಿತ ವಿದ್ಯಾರ್ಥಿ ಪರಿಷತ್ ಸ್ವಾಗತಿಸಿ ಗುರುವಾರ ಸಂಭ್ರಮಾಚರಣೆ ಮಾಡಿತು.ಮುಖ್ಯಮಂತ್ರಿಗಳು ಜಿಲ್ಲೆಗೆ ಸರ್ಕಾರಿ ಮೆಡಿಕಲ್ ಕಾಲೇಜು ಮಾಡುವ ಬಗ್ಗೆ ಘೋಷಿಸಿದ ಹಿನ್ನೆಲೆಯಲ್ಲಿ ದಲಿತ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ನಗರದ ಅಂಬೇಡ್ಕರ್ ಸರ್ಕಲ್ ಬಳಿ ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದರು.ಈ ವೇಳೆ ಮಾತನಾಡಿದ ಪರಿಷತ್ ಜಿಲ್ಲಾ…

Read More

ನಾಳೆ ಮುಖ್ಯಮಂತ್ರಿಗಳಿಂದ ಜಿಲ್ಲೆಯ ವಿವಿಧ ಯೋಜನೆಯ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕು ಸ್ಥಾಪನೆ

ಸಪ್ತಸಾಗರ ವಾರ್ತೆ, ವಿಜಯಪುರ,ಜ.8: ಜಿಲ್ಲೆಯ ವಿವಿಧ ಯೋಜನೆಯ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಸಮಾರಂಭವು ಜ.9ರಂದು ನಗರದ ವಿ.ಬಿ ದರ್ಬಾರ ಹೈಸ್ಕೂಲ್ ಮೈದಾನದ ಆವರಣದಲ್ಲಿ ನಡೆಯಲಿದೆ.ಅಂದು ಬೆಳಿಗ್ಗೆ 11:45ಕ್ಕೆ ನಡೆಯುವ ಜಿಲ್ಲೆಯ ವಿವಿಧ ಯೋಜನೆಯ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೆರವೇರಿಸಲಿದ್ದಾರೆ.ಉಪ ಮುಖ್ಯಮಂತ್ರಿ ಹಾಗೂಜಲ ಸಂಪನ್ಮೂಲ ಸಚಿವರು ಮತ್ತು ಬೆಂಗಳೂರು ನಗರಾಭಿವೃದ್ಧಿ ಸಚಿವಡಿ. ಕೆ. ಶಿವಕುಮಾರ, ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವ ಮತ್ತು ವಿಜಯಪುರ ಜಿಲ್ಲಾ ಉಸ್ತುವಾರಿ…

Read More

ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಸಿಎಂ ಸಿದ್ದರಾಮಯ್ಯ ವಿಶೇಷ ಪ್ಯಾಕೇಜ್ ಘೋಷಿಸುವರೆ?

ರುದ್ರಪ್ಪ ಆಸಂಗಿಸಪ್ತಸಾಗರ ವಾರ್ತೆ, ವಿಜಯಪುರ, ಜ. 7:ನಾಡಿನ ದೊರೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಕೇಂದ್ರ ಬಸ್ ನಿಲ್ದಾಣ ಆವರಣದಲ್ಲಿ ಕಿತ್ತೂರ ರಾಣಿ ಚೆನ್ನಮ್ಮ ಮೂರ್ತಿ ಅನಾವರಣ, ಕೇಂದ್ರ ಬಸ್ ನಿಲ್ದಾಣಕ್ಕೆ ರಾಣಿ ಚೆನ್ನಮ್ಮ ಹೆಸರು ನಾಮಕರಣ ಹಾಗೂ ಸೈಕ್ಲಿಂಗ್ ವೆಲೋಡ್ರೋಮ ಉದ್ಘಾಟನೆ, ಪ್ರಜಾ ಸೌಧಕ್ಕೆ ಶಂಕು ಸ್ಥಾಪನೆ ನೆರವೇರಿಸುವ ಸಲುವಾಗಿ ಜ. 9ರಂದು ವಿಜಯಪುರಕ್ಕೆ ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಬಾರಿ ಜಿಲ್ಲೆಗೆ ಏನಾದರೂ ವಿಶೇಷ ಕೊಡುಗೆ ನೀಡುವರೆ? ಎಂದು ಸಿಎಂ ಬರುವಿಕೆಗಾಗಿ ಜನರು…

Read More

ಜ.9ರಂದು ಸಾರಿಗೆ ಸಂಚಾರದ ಮಾರ್ಗ ಬದಲಾವಣೆ : ಪರ್ಯಾಯ ವ್ಯವಸ್ಥೆ

ಸಪ್ತಸಾಗರ ವಾರ್ತೆ, ವಿಜಯಪುರ, ಜ.7: ಜ.9 ರಂದು ಮುಖ್ಯಮಂತ್ರಿಗಳು ನಗರಕ್ಕೆ ಆಗಮಿಸಿ, ನಗರದ ಕೇಂದ್ರ ಬಸ್ ನಿಲ್ದಾಣದ ಆವರಣದಲ್ಲಿ ಕಿತ್ತೂರ ರಾಣಿ ಚೆನ್ನಮ್ಮನ ಪ್ರತಿಮೆ ಅನಾವರಣ, ಬಸ್ ನಿಲ್ದಾಣ ನಾಮಕರಣ ಹಾಗೂ ಭೂತನಾಳ ತಾಂಡಾದ ಹತ್ತಿರವಿರುವ ಸೈಕ್ಲಿಂಗ್ ವೆಲೋಡ್ರೋಮ್ ಉದ್ಘಾಟನೆ ಹಾಗೂ ದರ್ಬಾರ ಹೈಸ್ಕೂಲ್ ಮೈದಾನದಲ್ಲಿ ನಡೆಯುವ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಸಂದರ್ಭದಲ್ಲಿ ಸಾರ್ವಜನಿಕ ರಸ್ತೆ ಸಂಚಾರಕ್ಕೆ ಯಾವುದೇ ಅಡೆತಡೆ ಆಗದಂತೆ ಸಂಚಾರ ಮಾರ್ಗ ಬದಲಾಯಿಸಿ ಪರ್ಯಾಯ ಮಾರ್ಗ ಹಾಗೂ…

Read More