ಮಧ್ಯಪ್ರಾಚ್ಯ ದೇಶಗಳಲ್ಲಿನ ಬಿಕ್ಕಟ್ಟು – ವಿಜಯಪುರ ಜಿಲ್ಲೆಯ ಪ್ರಯಾಣಿಕರ ನೆರವಿಗಾಗಿ ಸಹಾಯವಾಣಿ

ಸಪ್ತಸಾಗರ ವಾರ್ತೆ, ವಿಜಯಪುರ,ಮಾ. 2:ಮಧ್ಯಪ್ರಾಚ್ಯದ ಕೆಲವು ದೇಶಗಳಲ್ಲಿ ಪ್ರಚಲಿತದಲ್ಲಿರುವ ಅಸ್ಥಿರ ಪರಿಸ್ಥಿತಿಯಿಂದಾಗಿ ಅಂತರಾಷ್ಟ್ರೀಯ ವಿಮಾನಯಾನ ಸೇವೆಗಳಲ್ಲಿ ವ್ಯತ್ಯಯ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ವಿಜಯಪುರ ಜಿಲ್ಲೆಯ ಸಾರ್ವಜನಿಕರ ಹಿತದೃಷ್ಟಿಯಿಂದ ಜಿಲ್ಲಾಡಳಿತವು ಈ ಕೆಳಗಿನ ಮಾಹಿತಿಯನ್ನು ಹಂಚಿಕೊಂಡಿದೆ. ​ವೈಮಾನಿಕ ನಿರ್ಬಂಧ ಮತ್ತು ಪ್ರಚಲಿತ ಸ್ಥಿತಿ​ಇರಾನ್, ಇಸ್ರೇಲ್, ಲೆಬನಾನ್, ಸೌದಿ ಅರೇಬಿಯಾ ಸೇರಿದಂತೆ ಒಟ್ಟು 11 ದೇಶಗಳ ವೈಮಾನಿಕ ಮಾರ್ಗಗಳನ್ನು (Airspace) ಮಾರ್ಚ್ 2ರವರೆಗೆ ಮುಚ್ಚಲಾಗಿದೆ.​ಈ ಅನಿರೀಕ್ಷಿತ ಅಡಚಣೆಯಿಂದಾಗಿ ಹಾಗೂ ಕರ್ನಾಟಕದ ಅನೇಕ ಪ್ರಯಾಣಿಕರು ಯುಎಇ (ದುಬೈ) ಸೇರಿದಂತೆ ವಿವಿಧ ಮಧ್ಯಪ್ರಾಚ್ಯ…

Read More

ಬೆಳೆ ಸಮೀಕ್ಷೆದಾರರ ಸಂಘಟನೆಯಿಂದ ಮುಖ್ಯಮಂತ್ರಿಗಳ ಬಳಿ ನಿಯೋಗಕ್ಕೆ ಚಿಂತನೆ

ಸಪ್ತಸಾಗರ ವಾರ್ತೆ,ವಿಜಯಪುರ, ಮಾ. 1 :ನಗರದ ಪ್ರವಾಸಿ ಮಂದಿರದಲ್ಲಿ ಶನಿವಾರ ನಡೆದ ಮಾಸಿಕ ಸಭೆಯಲ್ಲಿ ಬೆಳೆ ಸಮೀಕ್ಷೆದಾರರ ಹಿತಾಸಕ್ತಿ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ “ನಮ್ಮೆಲ್ಲರ ಚಿತ್ತ ಸಂಘಟನೆಯ ನವನಿರ್ಮಾಣದತ್ತ ” ಎಂಬ ಶೀರ್ಷಿಕೆಯಡಿ ಹಲವಾರು ನಿರ್ಣಯವನ್ನು ತೆಗೆದುಕೊಳ್ಳಲಾಯಿತು..ಸಭೆಯ ನಂತರ ವಿಜಯಪುರ ಜಿಲ್ಲಾ ಕಾಂಗ್ರೆಸ್ ಸಮಿತಿ ಜಿಲ್ಲಾ ಅಧ್ಯಕ್ಷ ಮಲ್ಲಿಕಾರ್ಜುನ ಲೋಣಿ ಅವರಿಗೆ ಭೇಟಿ ನೀಡಿ ಅವರ ನೇತೃತ್ವದಲ್ಲಿಯೇ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅವರ ಬಳಿ 31 ಜಿಲ್ಲೆಯ ಬೆಳೆ ಸಮೀಕ್ಷೆದಾರರ ತಂಡದಿಂದ ಖುದ್ದಾಗಿ ಭೇಟಿಯಾಗಲು ಮತ್ತು ಪ್ರಧಾನ…

Read More

ಸಮರ್ಪಕ ವಿದ್ಯುತ್ ಸರಬರಾಜು ಮಾಡುವಂತೆ ರೈತರ ಆಗ್ರಹ

ಸಪ್ತಸಾಗರ ವಾರ್ತೆ,ವಿಜಯಪುರ, ಮಾ. 1 :ತಾಲೂಕಿನ ಬೊಮ್ಮನಹಳ್ಳಿ, ಗುಣಕಿ, ಮಿಂಚನಾಳ, ಡೋಮನಾಳ, ಕನ್ನಾಳ ಗ್ರಾಮದಲ್ಲಿ ವಿದ್ಯುತ್ ಕಣ್ಣುಮುಚ್ಚಾಲೆಯಿಂದ ರೈತರು ತೀವ್ರ ತೊಂದರೆ ಅನುಭವಿಸುತ್ತಿದ್ದು ಸಾಕಾಗಿದೆ ೨ ವರ್ಷಗಳ ಹಿಂದೆ ಕನ್ನೂರಿನಲ್ಲಿ ಉದ್ಘಾಟನೆ ಆಗಬೇಕಿರುವ ೧೧೦ ಕೆ.ವಿ ಕೆ.ಇ.ಬಿ ಇನ್ನು ಉದ್ಘಾಟನೆ ಮಾಡದೇ ಅಧಿಕಾರಿಗಳು ಹಾಗೂ ಗುತ್ತಿಗೆದಾರರ ನಿರ್ಲಕ್ಷö್ಯದಿಂದ ಈ ಬಾಗದ ಸಾರ್ಚಜನಿಕರಿಗೆ, ರೈತರಿಗೆ , ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಸಾಕಷ್ಟು ತೊಂದರೆಯಾಗುತ್ತಿದೆ.ಕನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ವಿಜಯಪುರದ ಗ್ರಾಮೀಣವಲಯದ ಸಹಾಯಕ ಕಾರ್ಯನಿರ್ವಾಹಕ…

Read More

ವಿಜಯಪುರ ನಗರದಲ್ಲಿ ಮಾರ್ಚ್ 3 ರಿಂದ 8ರ ವರೆಗೆ ಸುದರ್ಶನ ಕ್ರಿಯಾ ಶಿಬಿರ

ಸಪ್ತಸಾಗರ ವಾರ್ತೆ,ವಿಜಯಪುರ, ಮಾ.1 :ಆರ್ಟ್ ಆಫ್ ಲಿವಿಂಗ್ ವತಿಯಿಂದ ವಿಜಯಪುರದಲ್ಲಿ ಸಂತಸದ ಕಾರ್ಯಕ್ರಮ ಹಾಗೂ ಸುದರ್ಶನ ಕ್ರಿಯಾ ಶಿಬಿರವನ್ನು ಸೋಮವಾರ ಮಾರ್ಚ್ 02 ರಿಂದ 08 ರ ವರೆಗೆ ಹಮ್ಮಿಕೊಳ್ಳಲಾಗಿದೆ.ಯೋಗ, ಧ್ಯಾನ, ಪ್ರಾಣಾಯಾಮ, ವಿಶೇಷವಾಗಿ ಸುದರ್ಶನ ಕ್ರಿಯಾ, ಆರೋಗ್ಯ ಒತ್ತಡರಹಿತ ಜೀವನ, ಮಾನಸಿಕ ಸದೃಢತೆ ಹಾಗೂ ಜೀವನ ಕಲೆ ಸೂತ್ರಗಳನ್ನು ಒಳಗೊಂಡಿರುವ ಈ ಕಾರ್ಯಕ್ರಮವು ಆರ್ಟ್ ಆಫ್ ಲಿವಿಂಗ್ ನ ನುರಿತ ಹಿರಿಯ ಅನುಭವಿ ಗುರುಗಳಾದ ಡಾ. ಬಿ ಎಂ. ಪಾಟೀಲ ಗುರೂಜಿ ಅವರ ನೇತೃತ್ವದಲ್ಲಿ ಬೆಳಗ್ಗೆ…

Read More

ದ್ವಿತೀಯ ಪಿಯುಸಿ ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ. ಆನಂದ ಭೇಟಿ, ಪರಿಶೀಲನೆ

ಸಪ್ತಸಾಗರ ವಾರ್ತೆ,ವಿಜಯಪುರ ಫೆ.28:ಜಿಲ್ಲೆಯ ಹದಿಮೂರು ತಾಲೂಕಿನ 64 ಪರೀಕ್ಷಾ ಕೇಂದ್ರಗಳಲ್ಲಿ (ಫೆ.28) ದ್ವಿತೀಯ ಪಿಯುಸಿ ಪರೀಕ್ಷೆ ಆರಂಭಗೊಂಡಿದ್ದು, ಶನಿವಾರ ಕನ್ನಡ ಮತ್ತು ಅರೆಬಿಕ್ ಪರೀಕ್ಷೆ ನಡೆಯಿತು. ಜಿಲ್ಲಾಧಿಕಾರಿ ಡಾ. ಆನಂದ‌.ಕೆ ಅವರು ನಗರದ ವಿ.ಬಿ. ದರಬಾರ ಕಾಲೇಜ್, ಎಸ್.ಎಸ್. ಪದವಿ ಪೂರ್ವ ಕಾಲೇಜ್ ಹಾಗೂ ಖೇಡ ಕಾಲೇಜಿನಲ್ಲಿ ನಡೆದ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ, ಸುಸೂತ್ರ ಹಾಗೂ ಸುಗಮ ಪರೀಕ್ಷೆ ನಡೆಸಲು‌ ಕೈಗೊಳ್ಳಲಾದ ವ್ಯವಸ್ಥೆ ಕುರಿತಾಗಿ ಪರಿಶೀಲನೆ ನಡೆಸಿ,ಪರೀಕ್ಷೆಗೆ ನಿಯೋಜಿತ ಅಧಿಕಾರಿಗಳಿಗೆ ಅಗತ್ಯ ನಿರ್ದೇಶನ ನೀಡಿದರು.ವಿದ್ಯಾರ್ಥಿಗಳು ಯಾವುದೇ…

Read More

ಶಾಸಕ ಯತ್ನಾಳರಿಗೆ ಮಂತ್ರಾಲಯ ಪರಿಮಳ ಪ್ರಶಸ್ತಿ ಪ್ರದಾನ

ಸಪ್ತಸಾಗರ ವಾರ್ತೆ,ವಿಜಯಪುರ, ಫೆ. 28:ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರಿಗೆ ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದಿಂದ ನೀಡುವ ಶ್ರೀ ಮಂತ್ರಾಲಯ ಪರಿಮಳ ಪ್ರಶಸ್ತಿ-2026 ನೀಡಿ ಈಚೆಗೆ ಗೌರವಿಸಲಾಗಿದೆ.ಮಂತ್ರಾಲಯದ ಶ್ರೀ ಮಠದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಗದ್ಗುರು ಶ್ರೀಮನ್ಮಧ್ವಾಚಾರ್ಯರ ಮೂಲಮಹಾಸಂಸ್ಥಾನ ಶ್ರೀ ರಾಘವೇಂದ್ರ ಸ್ವಾಮಿಗಳವರ ಮಠದ ಪೀಠಾಧಿಪತಿಗಳಾದ ಡಾ.ಶ್ರೀ 108 ಶ್ರೀ ಮತ್ಸುಬುಧೇಂದ್ರತೀರ್ಥ ಶ್ರೀ ಪಾದಂಗಳ ದಿವ್ಯ ಸಾನ್ನಿಧ್ಯದಲ್ಲಿ ಪ್ರತಿಷ್ಠಿತ ಮಂತ್ರಾಲಯ ಪರಿಮಳ ಪ್ರಶಸ್ತಿ ನೀಡಿ ಗೌರವಿಸಲಾಯಿತು.ದೇಶ ಕಂಡ ಶ್ರೇಷ್ಠ ಪ್ರಧಾನಮಂತ್ರಿಗಳಾದ ಅಟಲ್ ಬಿಹಾರಿ ವಾಜಪೇತಿ ಸರ್ಕಾರದಲ್ಲಿ…

Read More

ರೈಲ್ವೆ ರಾಜ್ಯ ಸಚಿವ ವಿ. ಸೋಮಣ್ಣ ಶೆಟ್ಟಿಹಳ್ಳಿಯಲ್ಲಿ ಪಾದಚಾರಿ ಸಬ್‌ವೇ ಉದ್ಘಾಟನೆ, ಕ್ಯಾಸಂದ್ರದಲ್ಲಿ ಪಾದಚಾರಿ ಮೇಲ್ಸೇತುವೆಗೆ ಶಿಲಾನ್ಯಾಸ

ಸಪ್ತಸಾಗರ ವಾರ್ತೆ,ತುಮಕೂರ, ಫೆ. 27:ರೈಲ್ವೆ ರಾಜ್ಯ ಸಚಿವ ವಿ. ಸೋಮಣ್ಣ ಅವರು ಶುಕ್ರವಾರ ತುಮಕೂರು ಜಿಲ್ಲೆಯ ಶೆಟ್ಟಿಹಳ್ಳಿಯಲ್ಲಿ ಹೊಸದಾಗಿ ನಿರ್ಮಿಸಲಾದ ಪಾದಚಾರಿ ಸಬ್‌ವೇ ಅನ್ನು ಉದ್ಘಾಟಿಸಿ, ಕ್ಯಾಸಂದ್ರ ರೈಲು ನಿಲ್ದಾಣದಲ್ಲಿ ಹೊಸ ಪಾದಚಾರಿ ಮೇಲ್ಸೇತುವೆ (FOB) ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಸೋಮಣ್ಣ ಅವರು, ಹೊಸ ಪಾದಚಾರಿ ಸಬ್‌ವೇ ಮೂಲಕ ಸ್ಥಳೀಯ ನಿವಾಸಿಗಳು ರೈಲು ಹಳಿಗಳನ್ನು ಸುರಕ್ಷಿತವಾಗಿ ಮತ್ತು ಸುಲಭವಾಗಿ ದಾಟಲು ಸಾಧ್ಯವಾಗುತ್ತದೆ ಎಂದು ಹೇಳಿದರು.ತುಮಕೂರು ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವುದರಿಂದ ಪ್ರಯಾಣಿಕರ ಹೆಚ್ಚುತ್ತಿರುವ ಬೇಡಿಕೆಯನ್ನು…

Read More

ಉದ್ಯಾನವನ- ರಸ್ತೆ ಮಧ್ಯೆ ಕಾಮ ದಹನ ನಿಷೇಧ

ಸಪ್ತಸಾಗರ ವಾರ್ತೆ,ವಿಜಯಪುರ, ಫೆ. 27:ಉದ್ಯಾನವ, ರಸ್ತೆ ಮಧ್ಯೆ ಕಾಮ ದಹನ ನಿಷೇಧಿಸಲಾಗಿದೆ ಎಂದು ಪಾಲಿಕೆಯ ಆಯುಕ್ತ ವಿಜಯ ಮೆಕ್ಕಳಕಿ ತಿಳಿಸಿದ್ದಾರೆ.ಪಾಲಿಕೆಯ ವ್ಯಾಪ್ತಿಯ ಉದ್ಯಾನವಗಳಲ್ಲಿ ಕಾಮ‌ದಹನ ಮಾಡುವುದರಿಂದ ಪರಿಸರ ಮಾಲಿನ್ಯ, ಉದ್ಯಾನವನಗಳ ಅಲಂಕಾರಿಕ ಗಿಡಗಳಿಗೆ ಹಾನಿ ಉಂಟು ಆಗುವ ಹಾಗೂ ಬೆಂಕಿ ಅವಘಡ ಸಂಭವಿಸುವ ಸಾಧ್ಯತೆ ಇರುತ್ತದೆ. ಇದರಿಂದ, ಸಾರ್ವಜನಿಕರಿಗೆ ತೊಂದರೆಯಾಗುವ ಸಾಧ್ಯತೆ ಇರುತ್ತದೆ.ಪಾಲಿಕೆಯ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಉದ್ಯಾನವನಗಳಲ್ಲಿ ಕಾಮ ದಹನವನ್ನು ಸಾರ್ವಜನಿಕ ರಸ್ತೆ, ಆಸ್ತಿ ಪಾಸ್ತಿಗಳಿಗೆ ಹಾನಿಯಾಗದಂತೆ ಆಚರಿಸಬೇಕು ಎಂದವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ರಾಜ್ಯದಲ್ಲಿ ಹೆಚ್ಚುತ್ತಿರುವ ನಿರುದ್ಯೋಗ ಸಮಸ್ಯೆ ತಡೆಗಟ್ಟಿ : ಶೀಘ್ರವೇ ಖಾಯಂ ನೇಮಕಾತಿ ಪ್ರಕ್ರಿಯೆ ಆರಂಭಿಸಲು ಆಗ್ರಹ

ಸಪ್ತಸಾಗರ ವಾರ್ತೆ ವಿಜಯಪುರ, ಫೆ. 27 :ಕರ್ನಾಟಕದ ಎಲ್ಲಾ ವರ್ಗದ ಲಕ್ಷಾಂತರ ಉದ್ಯೋಗಾಕಾಂಕ್ಷಿಗಳು ಇಂದು ಅತ್ಯಂತ ಸಂಕಷ್ಟದ ಪರಿಸ್ಥಿತಿಯಲ್ಲಿದ್ದು, ಶೀಘ್ರವೇ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ಮೂಲಕ ನಾಡಿನ ಯುವಜನರಿಗೆ ಖಾಯಂ ಉದ್ಯೋಗ ನೀಡಬೇಕೆಂದು ಆಗ್ರಹಿಸಿ ದಲಿತ ವಿದ್ಯಾರ್ಥಿ ಪರಿಷತ್ ವತಿಯಿಂದ ವಿಜಯಪುರ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.ಈ ಕುರಿತು ಮಾತನಾಡಿದ ದಲಿತ ವಿದ್ಯಾರ್ಥಿ ಪರಿಷತ್ ರಾಜ್ಯ ಸಂಚಾಲಕ ಬಾಲಾಜಿ ಕಾಂಬಳೆ, ಈಗಾಗಲೇ ದಲಿತ ವಿದ್ಯಾರ್ಥಿ ಪರಿಷತ್ ನೇಮಕಾತಿ ಪ್ರಕ್ರಿಯೆ ಆರಂಭಿಸಲು ಹಲವು ಹೋರಾಟದ…

Read More

ಕೃಷಿಯೊಂದಿಗೆ ಮೌಲ್ಯ ವರ್ಧನೆ ಕಲಿತು ಹೆಚ್ಚಿನ ಲಾಭ ಹೊಂದಿ:ಸಂಗಮೇಶ

ಸಪ್ತಸಾಗರ ವಾರ್ತೆ,ತಾಳಿಕೋಟೆ, ಫೆ. 27:ಆಧುನಿಕ ಜಗತ್ತಿನಲ್ಲಿ ಹೆಚ್ಚುತ್ತಿರುವ ಖರ್ಚಿಗೆ ಅನುಗುಣವಾಗಿ ಕೇವಲ ಕೃಷಿ ಮಾಡಿದರೆ ಸಾಲದು ಬೆಳೆದ ಬೆಳೆಗಳನ್ನು ಮೌಲ್ಯ ವರ್ಧನೆ ಮಾಡಿ ಉಪ ಉತ್ಪನ್ನಗಳನ್ನು ಸ್ವತಃ ಮಾರಾಟ ಮಾಡುವುದರಿಂದ 4-5 ಪಟ್ಟು ಲಾಭ ಪಡೆಯಬಹುದು. ಅಂದಾಗ ಮಹಿಳೆಯರು ಸ್ವಾವಲಂಬಿಗಳಾಗಿ ಆರ್ಥಿಕವಾಗಿ ಸಬಲರಾಗಿ ಸಮಾಜದಲ್ಲಿ ಉನ್ನತ ರೀತಿಯಲ್ಲಿ ಬದುಕಲು ಸಾಧ್ಯವಾಗುತ್ತದೆ ಎಂದು ಜಿಲ್ಲಾಧ್ಯಕ್ಷ ಸಂಗಮೇಶ ಸಗರ ಅವರು ಹೇಳಿದರು.ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಹಾಗೂ ರೈತ ಸ್ವಾವಲಂಭಿ ಸಂಘಟನೆ ಪೌಂಢೇಶನ್ ಸಹಯೋಗದಲ್ಲಿ ವಿಜಯಪುರ…

Read More