ರಾಜ್ಯ ಬಾರ್ ಕೌನ್ಸಿಲ್ ಚುನಾವಣೆಗೆ ವಕೀಲ ಭೃಂಗಿಮಠ ನಾಮಪತ್ರ ಸಲ್ಲಿಕೆ
ಸಪ್ತಸಾಗರ ವಾರ್ತೆ, ಬೆಂಗಳೂರು, ಫೆ. 9 : ರಾಜ್ಯ ವಕೀಲರ ಪರಿಷತ್ತಿಗೆ ಸ್ಪರ್ಧಿಸುತ್ತಿರುವ ನಾನು ಗೆದ್ದರೆ ಕರ್ನಾಟಕ ರಾಜ್ಯದಲ್ಲಿ ಸುಪ್ರೀಂ ಕೋರ್ಟ್ ಪೀಠ ಸ್ಥಾಪನೆ ಸೇರಿದಂತೆ ವಿವಿಧ ಸೌಲಭ್ಯಗಳಿಗೆ ಹೋರಾಟ ಮಾಡುವ ಸದಿಚ್ಚೆ ತಮಗಿದೆ ಎಂದು ಪ್ರಖ್ಯಾತ ಹಿರಿಯ ನ್ಯಾಯವಾದಿ ಮಲ್ಲಿಕಾರ್ಜುನ ಭೃಂಗಿಮಠ ಹೇಳಿದರು. ಬೆಂಗಳೂರಿನ ಕೆ ಎಸ್ ಬಿ ಸಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿ ಹೊರ ಬಂದು ತಮ್ಮ ಬೆಂಬಲಿಗರನ್ನುದ್ದೇಶಿ ಮಾತನಾಡಿದ ಅವರು, ವಕೀಲರ ಹಿತ ಕಾಪಾಡುವುದು ಪರಿಷತ್ತಿನ ಮಹತ್ವದ ಉದ್ದೇಶವಾಗಿದೆ. ಅದಕ್ಕಾಗಿ ವಕೀಲರ ಕಲ್ಯಾಣಕ್ಕಾಗಿ…


