ಸ್ವಾತಂತ್ರ್ಯ ದಿನಾಚರಣೆಗೆ ಸಕಲ ಸಿದ್ಧತೆ ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 28:ಆಗಸ್ಟ್ 15ರಂದು ಜಿಲ್ಲಾಡಳಿತದ ವತಿಯಿಂದ ಆಯೋಜಿಸಲಾಗುವ ಜಿಲ್ಲಾ ಮಟ್ಟದ ಸ್ವಾತಂತ್ರ್ಯ ದಿನಾಚರಣೆಯನ್ನು ಅತ್ಯಂತ ಅಚ್ಚುಕಟ್ಟಾಗಿ, ಶಿಸ್ತುಬದ್ಧವಾಗಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ಅಗತ್ಯವಿರುವ ಎಲ್ಲಾ ಪೂರ್ವಸಿದ್ಧತೆಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ. ಆನಂದ ಕೆ. ಅವರು ಸಂಬಂಧಿತ ಇಲಾಖೆಗಳ ಅಧಿಕಾರಿಗಳಿಗೆ ಸೂಚನೆ ನೀಡಿದರು.ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಸ್ವಾತಂತ್ರ್ಯ ದಿನಾಚರಣೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನಗರದ ಡಾ. ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಆಗಸ್ಟ್ 15ರಂದು ಜಿಲ್ಲಾ ಮಟ್ಟದ ಸ್ವಾತಂತ್ರ್ಯ…

Read More

25ನೇ ವರ್ಷದ ಗಂಗಾಪೂಜೆಗೆ ಮಹಾಬಳೇಶ್ವರದತ್ತ ಉತ್ತರ ಕರ್ನಾಟಕದ ರೈತರ ಮಹಾಯಾತ್ರೆ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 28: ಉತ್ತರ ಕರ್ನಾಟಕದ ಜೀವನಾಡಿಯಾದ ಕೃಷ್ಣಾ ನದಿಯ ಉಗಮಸ್ಥಳ ಮಹಾರಾಷ್ಟ್ರದ ಮಹಾಬಳೇಶ್ವರದಲ್ಲಿ ಬುಧವಾರ ನಡೆಯಲಿರುವ 25ನೇ ವರ್ಷದ ನಿರಂತರ ಗಂಗಾಪೂಜೆ ಹಾಗೂ ಬಾಗಿನ ಅರ್ಪಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳ 100ಕ್ಕೂ ಅಧಿಕ ರೈತರು, ರೈತ ಮಹಿಳೆಯರು ಹಾಗೂ ವಿವಿಧ ಸಂಘಟನೆಗಳ ಮುಖಂಡರು ಮಂಗಳವಾರ ಮಹಾಬಳೇಶ್ವರದತ್ತ ಪ್ರಯಾಣ ಬೆಳೆಸಿದರು.ವಿಜಯಪುರ ನಗರದ ಹೊಸ ಪ್ರವಾಸಿ ಮಂದಿರದಿಂದ ಮಾಜಿ ಸಚಿವ ಎಸ್.ಕೆ. ಬೆಳ್ಳುಬ್ಬಿ ಅವರ ನೇತೃತ್ವದಲ್ಲಿ ವಿಶೇಷ ವಾಹನಗಳಲ್ಲಿ ರೈತರ ತಂಡವನ್ನು ಬೀಳ್ಕೊಡಲಾಯಿತು….

Read More

ಎಬಿವಿ ಸಿಬಿಎಸ್‌ಇ ಶಾಲೆಯಲ್ಲಿ ವಿದ್ಯಾರ್ಥಿ ಪರಿಷತ್ ಚುನಾವಣೆ ಯಶಸ್ವಿ

ಇ.ವಿ.ಎಂ. ಮೂಲಕ 1,500ಕ್ಕೂ ಹೆಚ್ಚು ವಿದ್ಯಾರ್ಥಿಗಳ ಮತದಾನ; ಪ್ರಜಾಪ್ರಭುತ್ವದ ಮೌಲ್ಯಗಳಿಗೆ ಜೀವಂತ ಪಾಠ ಸಪ್ತಸಾಗರ ವಾರ್ತೆ,ವಿಜಯಪುರ, ಜು. 27:ನಗರದ ಎಬಿವಿ ಸಿಬಿಎಸ್‌ಇ ಶಾಲೆಯಲ್ಲಿ 2026–27ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ಪರಿಷತ್ ಚುನಾವಣೆ ಶನಿವಾರ ಅತ್ಯಂತ ಶಿಸ್ತುಬದ್ಧ, ಪಾರದರ್ಶಕ ಹಾಗೂ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಪ್ರತಿಬಿಂಬಿಸುವ ರೀತಿಯಲ್ಲಿ ಯಶಸ್ವಿಯಾಗಿ ನಡೆಯಿತು.ಶಾಲೆಯ ಪ್ರಾಂಶುಪಾಲೆ ಐಶ್ವರ್ಯ ಸಂಗಮ ಹಾಗೂ ಉಪ ಪ್ರಾಂಶುಪಾಲ ರವಿಕಾಂತ ಮೆಂಡೆಗಾರ ಅವರ ಮಾರ್ಗದರ್ಶನದಲ್ಲಿ, ಶಾಲೆಯ ಚುನಾವಣಾ ಆಯೋಗದ ಸಂಚಾಲಕಿ ಅಂಜನಾ ಮಹೇಶ್ ಅವರ ನೇತೃತ್ವದಲ್ಲಿ ಹಾಗೂ ಶಾಲೆಯ ಶಿಕ್ಷಕ-ಶಿಕ್ಷಕಿಯರ…

Read More

ನೀಟ್ ಹಗರಣ: ಕೇಂದ್ರ ಶಿಕ್ಷಣ ಸಚಿವ ಪ್ರಧಾನ್ ರಾಜೀನಾಮೆ

ವಿದ್ಯಾರ್ಥಿ-ಯುವಜನರ ಹೋರಾಟಕ್ಕೆ ಸಂದ ಜಯ: ದಲಿತ ವಿದ್ಯಾರ್ಥಿ ಪರಿಷತ್ ಸಪ್ತಸಾಗರ ವಾರ್ತೆ,ವಿಜಯಪುರ, ಜು. 25:ನೀಟ್ (NEET) ಪರೀಕ್ಷೆಯಲ್ಲಿ ನಡೆದ ಅಕ್ರಮ ಹಾಗೂ ಅವ್ಯವಹಾರಗಳ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿರುವುದು ದೇಶದ ವಿದ್ಯಾರ್ಥಿಗಳು ಮತ್ತು ಯುವಜನರ ನಿರಂತರ ಹೋರಾಟಕ್ಕೆ ಸಂದ ಮಹತ್ವದ ಜಯವಾಗಿದೆ ಎಂದು ದಲಿತ ವಿದ್ಯಾರ್ಥಿ ಪರಿಷತ್ ತಿಳಿಸಿದೆ.ಸಂಘಟನೆಯ ರಾಜ್ಯಾಧ್ಯಕ್ಷ ಶ್ರೀನಾಥ ಪೂಜಾರಿ ಅವರು ಶನಿವಾರ ಬಿಡುಗಡೆ ಮಾಡಿದ ಪತ್ರಿಕಾ ಪ್ರಕಟಣೆಯಲ್ಲಿ ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.ದೇಶದಾದ್ಯಂತ ವಿದ್ಯಾರ್ಥಿಗಳು, ಯುವಜನರು…

Read More

ಮಠಗಳ ಕಾರ್ಯ ಅನನ್ಯ: ಡಾ. ಸಂಗಮೇಶ ಮೇತ್ರಿ

ಸಪ್ತಸಾಗರ ವಾರ್ತೆ,ಇಂಡಿ, ಜು. 25:ಮಠಗಳು ತಮ್ಮ ಅಸ್ತಿತ್ವ ಉಳಿಸಿಕೊಂಡು ಸಾಮಾಜಿಕ ಪರಿವರ್ತನೆಗೆ ಕಾರಣವಾಗಿ ಸಂಸ್ಕೃತಿ ಉಳಿಸಿ ಬೆಳೆಸಿಕೊಂಡು ಬಂದಿವೆ ಎಂದು ಸಾಹಿತಿ ಡಾ ಸಂಗಮೇಶ ಮೇತ್ರಿ ಹೇಳಿದರು.ಶನಿವಾರ ಭೀಮಾಂತರಂಗ ಆನ್ ಲೈನ್ ಸಾಹಿತ್ಯಿಕ ಮತ್ತು ಸಾಂಸ್ಕೃತಿಕ ಜಗಲಿ ಕೇಂದ್ರದ ವತಿಯಿಂದ ಹಮ್ಮಿಕೊಂಡ ‘ಇಂಡಿ ತಾಲೂಕಿನ ಮಠ ಮಾನ್ಯಗಳು’ ಕುರಿತ ಆನ್ ಲೈನ್ ಉಪನ್ಯಾಸ ಕಾರ್ಯಕ್ರಮದಲ್ಲಿ ಉಪನ್ಯಾಸಕರಾಗಿ ಅವರು ಮಾತನಾಡಿದರು.ಸ್ವಾತಂತ್ರ್ಯ ಹೋರಾಟ ಸಂದರ್ಭದಲ್ಲಿ ಹಾಗೂ ಶಿಕ್ಷಣ ಬಿತ್ತುವಲ್ಲಿ, ಸಂಸ್ಕೃತಿ ಹಂಚುವಲ್ಲಿ ಇಂಡಿ ತಾಲೂಕಿನ ಹಲವು ಮಠಗಳು ಕೆಲಸ ಮಾಡಿವೆ….

Read More

ವಂದೇ ಮಾತರಂ ಮಸೂದೆಗೆ ಕಾಂಗ್ರೆಸ್ ವಿರೋಧ: ‘ಡೋಂಗಿ ರಾಷ್ಟ್ರೀಯವಾದ’ ಬಯಲಾಗಿದೆ – ರಮೇಶ ಜಿಗಜಿಣಗಿ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 25:‘ವಂದೇ ಮಾತರಂ’ ಗೀತೆಗೆ ಅವಮಾನ ಮಾಡಿದವರಿಗೆ ಶಿಕ್ಷೆ ವಿಧಿಸುವ ಉದ್ದೇಶದಿಂದ ಮಂಡಿಸಲಾದ ‘ರಾಷ್ಟ್ರೀಯ ಗೌರವಕ್ಕೆ ಅವಮಾನಗಳ ತಡೆಗಟ್ಟುವಿಕೆ (ತಿದ್ದುಪಡಿ) ಮಸೂದೆ–2026’ಗೆ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸಿರುವುದು ಅದರ “ಡೋಂಗಿ ರಾಷ್ಟ್ರೀಯವಾದ”ವನ್ನು ಬಯಲಿಗೆಳೆದಿದೆ ಎಂದು ಸಂಸದ ರಮೇಶ ಜಿಗಜಿಣಗಿ ಆರೋಪಿಸಿದ್ದಾರೆ.ಶನಿವಾರ ಬಿಡುಗಡೆ ಮಾಡಿದ ಪ್ರಕಟಣೆಯಲ್ಲಿ ಅವರು, ಸ್ವಾತಂತ್ರ್ಯ ಹೋರಾಟಗಾರರಿಗೆ ಸ್ಫೂರ್ತಿಯಾಗಿದ್ದ ಹಾಗೂ ಕ್ರಾಂತಿಕಾರಿಗಳ ಧ್ಯೇಯಗೀತೆಯಾಗಿದ್ದ ಬಂಕಿಮಚಂದ್ರ ಚಟರ್ಜಿ ವಿರಚಿತ ‘ವಂದೇ ಮಾತರಂ’ಗೆ ಗೌರವ ನೀಡುವ ಉದ್ದೇಶದಿಂದ ಕೇಂದ್ರ ಸರ್ಕಾರ ಮಸೂದೆ ಮಂಡಿಸಿದೆ ಎಂದು ಹೇಳಿದರು.ರಾಜ್ಯಸಭೆಯಲ್ಲಿ ಮಸೂದೆ…

Read More

ಪ್ರಯಾಣಿಕ ಸ್ನೇಹಿ ಸಾರಿಗೆಗೆ ಒತ್ತು: ಕೆಕೆಆರ್‌ಟಿಸಿ ಸೇವೆಗಳ ಉನ್ನತೀಕರಣಕ್ಕೆ ಅಧ್ಯಕ್ಷ ಅರುಣಕುಮಾರ ಪಾಟೀಲ ಸೂಚನೆ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 25:ಪ್ರಯಾಣಿಕರಿಗೆ ಮತ್ತಷ್ಟು ಜನಸ್ನೇಹಿ, ಸುರಕ್ಷಿತ ಹಾಗೂ ಸುಗಮ ಸಾರಿಗೆ ಸೇವೆ ಒದಗಿಸಲು ಅಧಿಕಾರಿಗಳು ಯೋಜನಾಬದ್ಧವಾಗಿ ಕಾರ್ಯ ನಿರ್ವಹಿಸಬೇಕು ಎಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ (ಕೆಕೆಆರ್‌ಟಿಸಿ) ಅಧ್ಯಕ್ಷ ಅರುಣಕುಮಾರ ಎಂ.ವೈ. ಪಾಟೀಲ ಅಧಿಕಾರಿಗಳಿಗೆ ಸೂಚಿಸಿದರು.ವಿಜಯಪುರ ವಿಭಾಗೀಯ ಕಚೇರಿಯಲ್ಲಿ ಶುಕ್ರವಾರ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ನಿಗಮದ ಸೇವಾ ಗುಣಮಟ್ಟವನ್ನು ಇನ್ನಷ್ಟು ಸುಧಾರಿಸುವ ಉದ್ದೇಶದಿಂದ ನಡೆದ ಸಭೆಯಲ್ಲಿ ಬಸ್ ನಿಲ್ದಾಣಗಳ ಸ್ವಚ್ಛತೆ, ನೈರ್ಮಲ್ಯ, ಪ್ರಯಾಣಿಕರಿಗೆ ಅಗತ್ಯ ಮೂಲಭೂತ ಸೌಲಭ್ಯಗಳ…

Read More

ವಿಶ್ವವಿಖ್ಯಾತ ವಿಜಯಪುರಕ್ಕೆ ಇನ್ನೂ ಇಲ್ಲ ನಗರ ಬಸ್ ಟರ್ಮಿನಲ್!

80ಕ್ಕೂ ಹೆಚ್ಚು ಐತಿಹಾಸಿಕ ಸ್ಮಾರಕಗಳು, ಸಾವಿರಾರು ದೇಶ-ವಿದೇಶಿ ಪ್ರವಾಸಿಗರು, 4 ಲಕ್ಷ ಜನಸಂಖ್ಯೆ… ಆದರೂ ರಸ್ತೆಯೇ ನಗರ ಬಸ್ ನಿಲ್ದಾಣ! ಮೂರು ಕೆಎಸ್‌ಆರ್‌ಟಿಸಿ ಡಿಪೋ, 50ಕ್ಕೂ ಹೆಚ್ಚು ನಗರ ಬಸ್‌ಗಳಿದ್ದರೂ ಮೂಲಸೌಕರ್ಯ ಶೂನ್ಯ; ಅಧಿಕಾರಿಗಳ ನಿರ್ಲಕ್ಷ್ಯ, ಜನಪ್ರತಿನಿಧಿಗಳ ಇಚ್ಛಾಶಕ್ತಿ ಕೊರತೆಗೆ ಸಾರ್ವಜನಿಕರ ಆಕ್ರೋಶ ರುದ್ರಪ್ಪ ಆಸಂಗಿಸಪ್ತಸಾಗರ ವಾರ್ತೆ,ವಿಜಯಪುರ, ಜು. 24:ವಿಶ್ವವಿಖ್ಯಾತ ಗೋಳಗುಮ್ಮಟ, ಇಬ್ರಾಹಿಂ ರೋಜಾ, ಬಾರಾ ಕಮಾನ್, ಉಪ್ಪಲಿ ಬುರುಜ್, ಮಲಿಕ್-ಎ-ಮೈದಾನ್ ಸೇರಿದಂತೆ 80ಕ್ಕೂ ಹೆಚ್ಚು ಐತಿಹಾಸಿಕ ಸ್ಮಾರಕಗಳ ತವರೂರು ವಿಜಯಪುರ. ದೇಶ-ವಿದೇಶಗಳಿಂದ ಪ್ರತಿದಿನ ಸಾವಿರಾರು ಪ್ರವಾಸಿಗರು…

Read More

ಕಾನೂನು ಸುವ್ಯವಸ್ಥೆ ಕುಸಿತ ಆರೋಪ: ವಿಜಯಪುರದಲ್ಲಿ ಬಿಜೆಪಿ ಬೃಹತ್ ರ‍್ಯಾಲಿ

ರಾಜ್ಯಪಾಲರ ಮಧ್ಯಪ್ರವೇಶಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಕೆ ಸಪ್ತಸಾಗರ ವಾರ್ತೆ,ವಿಜಯಪುರ, ಜು. 24:ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ ಎಂದು ಆರೋಪಿಸಿ, ರಾಜ್ಯಪಾಲರು ಮಧ್ಯಪ್ರವೇಶಿಸಿ ರಾಜ್ಯ ಸರ್ಕಾರಕ್ಕೆ ಅಗತ್ಯ ನಿರ್ದೇಶನ ನೀಡಬೇಕೆಂದು ಆಗ್ರಹಿಸಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಜಿಲ್ಲಾ ಘಟಕದ ನೇತೃತ್ವದಲ್ಲಿ ಶುಕ್ರವಾರ ವಿಜಯಪುರದಲ್ಲಿ ಬೃಹತ್ ಪ್ರತಿಭಟನಾ ರ‍್ಯಾಲಿ ನಡೆಯಿತು. ನಗರದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಿಂದ ಆರಂಭವಾದ ಪ್ರತಿಭಟನಾ ರ‍್ಯಾಲಿ ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಜಿಲ್ಲಾಧಿಕಾರಿಗಳ ಕಚೇರಿಗೆ ತಲುಪಿತು. ಬಳಿಕ…

Read More

ನೀಟ್ ಪರೀಕ್ಷೆ ರದ್ದತಿಗೆ ಆಗ್ರಹಿಸಿ ರಾಷ್ಟ್ರಪತಿಗಳಿಗೆ ಮನವಿ: ಜಂತರ್ ಮಂತರ್ ಪ್ರತಿಭಟನೆಗೆ ಭೀಮ್ ರಾಜ್ಯ ದಲಿತ್ ಸೇವಾ ಸಮಿತಿ ಬೆಂಬಲ

ಸಪ್ತಸಾಗರ ವಾರ್ತೆ,ವಿಜಯಪುರ, ಜು.24:ನೀಟ್ (NEET) ಪರೀಕ್ಷೆ ವಿರೋಧಿಸಿ ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಬೃಹತ್ ಪ್ರತಿಭಟನೆಗೆ ಬೆಂಬಲ ಸೂಚಿಸಿ, ಭೀಮ್ ರಾಜ್ಯ ದಲಿತ್ ಸೇವಾ ಸಮಿತಿ (ರಿ.) ವಿಜಯಪುರ ಜಿಲ್ಲಾ ಘಟಕವು ಜಿಲ್ಲಾಧಿಕಾರಿಗಳ ಮೂಲಕ ಭಾರತದ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿತು.ಮನವಿಯಲ್ಲಿ, ನೀಟ್ ಪರೀಕ್ಷೆಗೆ ಸಂಬಂಧಿಸಿದಂತೆ ದೇಶಾದ್ಯಂತ ವಿದ್ಯಾರ್ಥಿಗಳು, ಪೋಷಕರು ಹಾಗೂ ವಿವಿಧ ಸಾಮಾಜಿಕ ಸಂಘಟನೆಗಳು ವ್ಯಕ್ತಪಡಿಸುತ್ತಿರುವ ಆತಂಕವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಒತ್ತಾಯಿಸಲಾಗಿದೆ. ವಿದ್ಯಾರ್ಥಿಗಳಿಗೆ ಸಮಾನ ಶಿಕ್ಷಣದ ಅವಕಾಶ, ಸಾಮಾಜಿಕ ನ್ಯಾಯ ಹಾಗೂ ಸಂವಿಧಾನಬದ್ಧ ಹಕ್ಕುಗಳ ರಕ್ಷಣೆಗೆ…

Read More