ತಾತ್ಕಾಲಿಕ ಅತಿಥಿ ಉಪನ್ಯಾಸಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ 19:2026-27ನೇ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯ ನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮಹಿಳಾ ಪದವಿ ಪೂರ್ವ ಕಾಲೇಜಿನಲ್ಲಿ ಖಾಲಿಯಿರುವ 15 ತಾತ್ಕಾಲಿಕ ಅತಿಥಿ ಉಪನ್ಯಾಸಕ ಹುದ್ದೆಗಳಿಗೆ ಆಫ್‌ಲೈನ್ ಅರ್ಜಿ ಆಹ್ವಾನಿಸಲಾಗಿದೆ.ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ನೇರ ನೇಮಕಾತಿ, ಬಡ್ತಿ, ವರ್ಗಾವಣೆ ಮೂಲಕ ಹುದ್ದೆ ಭರ್ತಿ ಮಾಡುವವರೆಗೆ ಅಥವಾ ಪ್ರಸ್ತುತ ಸಾಲಿನ ಅಂತ್ಯದವರೆಗೆ ಇವುಗಳಲ್ಲಿ ಯಾವುದು ಮೊದಲು ಅಲ್ಲಿಯವರೆಗೆ ಈ ತಾತ್ಕಾಲಿಕ ಅತಿಥಿ ಉಪನ್ಯಾಸಕರನ್ನು ಮುಂದುವರಿಸಲಾಗುವುದು.ಆಸಕ್ತ ಅಭ್ಯರ್ಥಿಗಳು ಮೇ 25 ರೊಳಗಾಗಿ ಆಯಾ ವಿಷಯದ‌ ಹುದ್ದೆಗಳಿಗೆ ಜಿಲ್ಲಾ…

Read More

ಕಾಲೇಜ್ ಪ್ರವೇಶಕ್ಕೆ ಅರ್ಜಿ ಆಹ್ವಾನ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ 19:2026-27ನೇ ಸಾಲಿಗೆ ಅಲ್ಪಸಂಖ್ಯಾತರ ಮಹಿಳಾ ಪದವಿ ಪೂರ್ವ ಕಾಲೇಜಿಗೆ ಪ್ರಥಮ ಪಿಯುಸಿ ದಾಖಲಾತಿಗೆ ವಿಜ್ಞಾನ(ಪಿಸಿಎಂಬಿ), ವಾಣಿಜ್ಯ ಮತ್ತು ಕಲಾ ವಿಭಾಗಕ್ಕೆ ಅಲ್ಪಸಂಖ್ಯಾತರ ಸಮುದಾಯ ಶೇ.75 ಹಾಗೂ ಇತರೆ ಸಮುದಾಯದವರಿಂದ ಶೇ.25 ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತ ವಿದ್ಯಾರ್ಥಿಗಳು ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಜೂನ್ 1 ಅರ್ಜಿ ಸಲ್ಲಿಕೆಗೆ‌ ಕೊನೆಯ ದಿನವಾಗಿದ್ದು, ಹಾಗಾಗಿ ಜೂ. 1 ರೊಳಗಾಗಿ‌ ಅರ್ಜಿಯನ್ನು ಜಿಲ್ಲಾ ಕಛೇರಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ವಿಜಯಪುರ ಇಲ್ಲಿಗೆ ಸಲ್ಲಿಸಬಹುದಾಗಿದೆ.‌ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: ಜಿಲ್ಲಾ ಕಚೇರಿ…

Read More

ಬೈಕ್ ಸವಾರಿ ಮಾಡಿದ ಸಂಸದ ಜಿಗಜಿಣಗಿ

ಸಪ್ತಸಾಗರ ವಾರ್ತೆ, ವಿಜಯಪುರ, ಮೇ. 18:ಪ್ರಧಾನಿ ನರೇಂದ್ರ ಮೋದಿ ಅವರ ಮಿತ ವ್ಯಯ ಸೂತ್ರ ಪಾಲನೆ ಹಿನ್ನೆಲೆಯಲ್ಲಿ ಸಂಸದ ರಮೇಶ ಜಿಗಜಿಣಗಿ ಹೆಲ್ಮೇಟ್ ಧರಿಸಿ ಇಲೆಕ್ಟ್ರಿಕ್ ವಾಹನದ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಿದರು.ಬಿಜೆಪಿ ಮುಖಂಡ ಪಾಪುಸಿಂಗ್ ರಜಪೂತ ಅವರ ಜೊತೆ ಹೆಲ್ಮೇಟ್ ಧರಿಸಿ ಜಿಲ್ಲಾದಿಕಾರಿಗಳ ಕಚೇರಿಗೆ ಆಗಮಿಸಿದಾಗ ಎಲ್ಲರಿಗೂ ಅಚ್ಚರಿ…..ಯುದ್ಧದ ಸಂಕಷ್ಟಗಳ ಕಾಲಘಟ್ಟದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಂಧನ ಮಿತ ಬಳಕೆ, ಚಿನ್ನ ಖರೀದಿ ಮುಂದೂಡಿಕೆ ಸಲಹೆ ನೀಡಿದ್ದಾರೆ. ಈ ಸಲಹೆ ಪಾಲನೆ ಹಿನ್ನೆಲೆಯಲ್ಲಿ ನಾನು…

Read More

ಸಕಾಲಕ್ಕೆ ರೋಗಿಗಳಿಗೆ ಗುಣಮಟ್ಟದ ಚಿಕಿತ್ಸೆ ನೀಡಿ: ಮನಗೂಳಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸಿಇಒ ಭೇಟಿ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ 18:ಪ್ರತಿ ರೋಗಿಗೂ ಸಮರ್ಪಕ ಮತ್ತು ಗುಣಮಟ್ಟದ ಚಿಕಿತ್ಸೆಯನ್ನು ಸಕಾಲಕ್ಕೆ ನೀಡಬೇಕು. ಯಾವುದೇ ರೀತಿಯ ನಿರ್ಲಕ್ಷ್ಯಕ್ಕೆ ಅವಕಾಶ ನೀಡಬಾರದು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ರಿಷಿ ಆನಂದ ಅವರು ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗೆ ಸೂಚಿಸಿದರು.ಮನಗೂಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸೋಮವಾರ ದಿಢೀರ್‌ ಭೇಟಿ ನೀಡಿ, ಕೇಂದ್ರದ ಕಾರ್ಯನಿರ್ವಹಣೆ ಹಾಗೂ ಸೇವೆಗಳ ಗುಣಮಟ್ಟವನ್ನು ಸಮಗ್ರವಾಗಿ ಪರಿಶೀಲಿಸಿದ ಬಳಿಕ ಅವರು ಈ ಸೂಚನೆ ನೀಡಿದರು.ಔಷಧ ಲಭ್ಯತೆ ಖಚಿತಪಡಿಸಿಕೊಳ್ಳಬೇಕು. ಅವಶ್ಯಕ…

Read More

ನರೇಗಾ ಕಾಮಗಾರಿ ಸ್ಥಳಕ್ಕೆ ಪ್ರಕಾಶ ವಡ್ಡರ ಭೇಟಿ: ವಿವಿಧ ಯೋಜನೆಗಳ ಪ್ರಗತಿ ಪರಿಶೀಲನೆ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ 18:ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಪ್ರಕಾಶ ವಡ್ಡರ ಅವರು ಸೋಮವಾರ ಬಬಲೇಶ್ವರ ತಾಲೂಕಿನ ಹೊನಗನಹಳ್ಳಿ ಹಾಗೂ ಕಾರಜೊಳ ಗ್ರಾಪಂ ನರೇಗಾ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಮತ್ತು ವಿವಿಧ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿದರು.ಹೊನಗನಹಳ್ಳಿ ಗ್ರಾಮದ ತುಂಗಾಬಾಯಿ ಬಿದರಿ ಇವರ ಹೊಲದಿಂದ ಪಾರ್ವತಿಬಾಯಿ ಪಾಟೀಲ್ ಇವರ ಹೊಲದವರೆಗೆ ಡೋಣಿ ಹೂಳೆತ್ತುವ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.ನಂತರ ನರೇಗಾ ಕಾರ್ಮಿಕರೊಂದಿಗೆ ಸಮಾಲೋಚಿಸಿದ ಅವರು, ಎಲ್ಲ ಕೂಲಿಕಾರರು ಪ್ರತಿ ದಿನ ಬೆಳಿಗ್ಗೆ ಬೇಗನೆ ಆಗಮಿಸಿ…

Read More

ಬೀದಿಯಲ್ಲಿ ತ್ಯಾಜ್ಯ ಎಸೆದರೆ, ಪಾಲಿಕೆಯಿಂದ ಕಾನೂನು ಕ್ರಮ-ಎಚ್ಚರಿಕೆ

ಸಪ್ತಸಾಗರ ವಾರ್ತೆ ವಿಜಯಪುರ, ಮೇ 18:ಮಾಂಸ ಮಾರಾಟದ ವರ್ತಕರು, ಉದ್ದಿಮೆದಾರರು ಇತರೆ ತ್ಯಾಜ್ಯವನ್ನು ಬೀದಿಯಲ್ಲಿ ಅಥವಾ ವರಾಂಡದಲ್ಲಿ ಎಸೆಯುವುದು ಹಾಗೂ ಹಾಕುವುದನ್ನು ಮಹಾನಗರ ಪಾಲಿಕೆ ನಿಷೇಧಿಸಿದ್ದು, ಆದಾಗ್ಯೂ ಎಲ್ಲೆಂದರಲ್ಲಿ ತ್ಯಾಜ್ಯ ಎಸೆಯುವುದು ಕಂಡು ಬಂದಲ್ಲಿ ಕಾನೂನು ಕ್ರಮ‌ ಕೈಗೊಳ್ಳಲಾಗುವುದು ಎಂದು ಪಾಲಿಕೆ ಪರಿಸರ ವಿಭಾಗದ ಕಾರ್ಯಪಾಲಕ ಅಭಿಯಂತರರು ಎಚ್ಚರಿಕೆ ನೀಡಿದ್ದಾರೆ.ತ್ಯಾಜ್ಯ ಉತ್ಪಾದಿಸುವ ಪ್ರತಿಯೊಬ್ಬ ನಾಗರಿಕರು, ಉದ್ದಿಮೆದಾರರು ಎಲ್ಲೆಂದರಲ್ಲಿ ತ್ಯಾಜ್ಯ ವಿಸರ್ಜಿಸದೆ ತ್ಯಾಜ್ಯ ವಿಂಗಡಣೆ ಮಾಡಬೇಕು. ವಿಂಗಡಣೆ ಮಾಡಿದ ತ್ಯಾಜ್ಯವನ್ನು ಮಹಾ ನಗರಪಾಲಿಕೆ ದಿನನಿತ್ಯ ಕಳುಹಿಸಿಕೊಡುವ ತ್ಯಾಜ್ಯ ವಾಹನಕ್ಕೆ…

Read More

ನೀರಾವರಿಗೆ ನೀಡಿದಷ್ಟೇ ವಿದ್ಯುತ್‌ಗೂ ಪ್ರಾಮುಖ್ಯತೆ: ಐನಾಪುರದಲ್ಲಿ 110 ಕೆವಿ ಸ್ಟೇಶನ್ ನಿರ್ಮಾಣ- ಸಚಿವ ಎಂ.ಬಿ. ಪಾಟೀಲ ಹೇಳಿಕೆ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ 17:ನಮ್ಮ ಸರ್ಕಾರ ನೀರಾವರಿಯಷ್ಟೇ ವಿದ್ಯುತ್ತಿಗೂ ಪ್ರಾಮುಖ್ಯತೆ ನೀಡಿದೆ. ಜಲಕ್ರಾಂತಿಯೊಂದಿಗೆ ಇಂಧನ ಕ್ರಾಂತಿಯಲ್ಲಿ ಅಮೂಲಾಗ್ರ ಬದಲಾವಣೆ ಮಾಡಿ ಅಭಿವೃದ್ದಿ ಕಾರ್ಯಗಳನ್ನು ಕೈಗೊಳ್ಳುತ್ತಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಕರ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಅವರು ಹೇಳಿದರು.ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿಯಿಂದ ನಗರದಲ್ಲಿ ನಿರ್ಮಿಸಲಾದ ವಿಜಯಪುರದ ಕಾರ್ಯ ಮತ್ತು ಪಾಲನೆ ವಿಭಾಗೀಯ ಕಚೇರಿಯ ನೂತನ ಕಟ್ಟಡವನ್ನು ಭಾನುವಾರ ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.ನೀರಿಗೆ ಆದ್ಯತೆ ನೀಡಿದ ಮಾದರಿಯಲ್ಲೇ ರೈತರಿಗೆ ವಿದ್ಯುತ್…

Read More

ಕ್ರೀಡಾ ಚಟುವಟಿಕೆಗಳಿಂದ ಜಿಲ್ಲೆಗೆ ಹೊಸ ಔಟ್‌ಲುಕ್:ಎಂಬಿಪಿ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ 17:ರಾಜ್ಯ ಬ್ಯಾಡ್ಮಿಂಟನ್ ಅಸೋಸಿಯೇಶನ್ ವತಿಯಿಂದ ರಾಜ್ಯ ಮಟ್ಟದ ಬ್ಯಾಡ್ಮಿಂಟನ್ ಪಂದ್ಯಾಟವನ್ನು ವಿಜಯಪುರದಲ್ಲಿ ಆಯೋಜಿಸುವ ಮೂಲಕ ಈ ಬೃಹತ್ ಕ್ರೀಡಾಕೂಟವು ಜಿಲ್ಲೆಯ ಇತಿಹಾಸದಲ್ಲೇ ಮೊದಲ ಬಾರಿಗೆ ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಆಯೋಜನೆಗೊಂಡಿದ್ದು, ವಿಜಯಪುರ ನಗರಕ್ಕೆ ಹೊಸ ಔಟ್‌ಲುಕ್ ನೀಡಿದೆ ಎಂದು ಬೃಹತ್ ಮತ್ತು ಕೈಗಾರಿಕೆ, ಮೂಲಸೌಕರ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಹೇಳಿದರು.ಭಾನುವಾರ ನಗರದಲ್ಲಿ ಆರಂಭವಾದ ರಾಜ್ಯ ಮಟ್ಟದ ಬ್ಯಾಡ್ಮಿಂಟನ್ ಪಂದ್ಯಾಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ರಾಜ್ಯ ಮಟ್ಟದ ಪಂದ್ಯಾಟಗಳನ್ನು…

Read More

ಬ್ಲ್ಯಾಕ್ ಮೇಲ್ ಮಾಡುವ ಸಂಸ್ಕೃತಿ ನನ್ನದಲ್ಲ: ಯತ್ನಾಳ ಹೇಳಿಕೆ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ. 17:ಬ್ಲ್ಯಾಕ್ಮೇಲ್ ಮಾಡುವ ಸಂಸ್ಕೃತಿ ನನ್ನದಲ್ಲ. ಬ್ಲ್ಯಾಕ್ಮೇಲ್ ಮಾಡಿದ್ದರೆ ಎಂದೋ ಸಚಿವನಾಗಿರುತ್ತಿದ್ದೆ.ಮಾಜಿ ಸಿಎಂ ಯಡಿಯೂರಪ್ಪನವರ ಸಾಕಷ್ಟು ಭ್ರಷ್ಟಾಚಾರ ನನ್ನ ಬಳಿ ಇದ್ದವು.ಪಕ್ಷದ ಹಿತ ದೃಷ್ಟಿಯಿಂದ ಬ್ಲಾಕ್ಮೇಲ್ ಮಾಡಲಿಲ್ಲ ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಸಚಿವ ಎಂ.ಬಿ. ಪಾಟೀಲರಿಗೆ ಟಾಂಗ್ ನೀಡಿದರು.ಟಿಕೆಟ್ ಗಾಗಿ ಯತ್ನಾಳ ಬಿಜೆಪಿಗೆ ಬ್ಲ್ಯಾಕಮೇಲ್ ಮಾಡುತ್ತಿದ್ದಾರೆ ಎಂಬ ಸಚಿವ ಎಂ. ಬಿ. ಪಾಟೀಲರ ಹೇಳಿಕೆಗೆ ಪ್ರತಿಕ್ರಿಯೆ ನೀಡಿ ಯತ್ನಾಳ ಸುದ್ದಿಗಾರರ ಜೊತೆಗೆ ಮಾತನಾಡಿದರು.ಯಡ್ಡಿ ಕುರಿತು ಹೈಕಮಾಂಡ್ ಗಮನಕ್ಕೆ ತರಲು ಪ್ರಯತ್ನಿಸಿದೆ….

Read More

ಭೃಷ್ಟಾಚಾರ: ಕಾರ್ಮಿಕ ಇಲಾಖೆ ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರ ದಾಳಿ

ಸಪ್ತಸಾಗರ ವಾರ್ತೆ, ವಿಜಯಪುರ, ಮೇ. 16:ವಿಜಯಪುರ ಜಿಲ್ಲೆಯಲ್ಲಿನ ಕಾರ್ಮಿಕ ಅಧಿಕಾರಿ ಕಛೇರಿಯಲ್ಲಿ ವ್ಯಾಪಕವಾಗಿ ಅವ್ಯವಹಾರ ಮತ್ತು ಭೃಷ್ಟಾಚಾರದ ಆರೋಪಗಳ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರು ಜಿಲ್ಲೆಯ ಕಾರ್ಮಿಕ ಇಲಾಖೆ ಕಚೇರಿ ಮೇಲೆ ದಾಳಿ ನಡೆಸಿ ಶೋಧನಾ ಕಾರ್ಯ ಕೈಗೊಂಡಿದ್ದಾರೆ.ಕಾರ್ಮಿಕ ಇಲಾಖೆಯಲ್ಲಿ ಅವ್ಯವಹಾರ ಹಾಗೂ ವ್ಯಾಪಕ ಭ್ರಷ್ಟಾಚಾರ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬಂದ ಕಾರಣ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಅವರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ಕಾರ್ಮಿಕ ಇಲಾಖೆಯನ್ನು ಶೋಧನೆ ಮಾಡಲು ಶೋಧನಾ ವಾರಂಟ್ ಹೊರಡಿಸಿದ್ದು, ಹೀಗಾಗಿ ವಿಜಯಪುರ ಜಿಲ್ಲೆಯ…

Read More