ದೌರ್ಜನ್ಯ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ತ್ವರಿತ ಇತ್ಯರ್ಥ ಪಡಿಸಿ -ಜಿಲ್ಲಾಧಿಕಾರಿ ಡಾ. ಆನಂದ ಸೂಚನೆ
ಸಪ್ತಸಾಗರ ವಾರ್ತೆ ವಿಜಯಪುರ ಡಿ.23: ದೌರ್ಜನ್ಯ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ, ಆದ್ಯತೆ ಮೇಲೆ ತ್ವರಿತವಾಗಿ ಇತಥ್ಯಗೊಳಿಸಲು ಕ್ರಮ ವಹಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ಸೂಚಿಸಿದರು.ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ದೌರ್ಜನ್ಯ ಪ್ರಕರಣಗಳಿಗೆ ಸಂಬಂಧಿಸಿದಂತೆ ಪ್ರತಿ ಪ್ರಕರಣಗಳನ್ನು ಅತ್ಯಂತ ಸೂಕ್ತ ರೀತಿಯಲ್ಲಿ ಪರಿಶೀಲನೆ ನಡೆಸಬೇಕು. ಅಧಿಕಾರಿಗಳು ದೌರ್ಜನ್ಯ ಪ್ರಕರಣಗಳನ್ನು ತ್ವರಿತ ಇತ್ಯರ್ಥಕ್ಕೆ ಆದ್ಯತೆ ನೀಡಬೇಕು. ದೌರ್ಜನ್ಯ ಪ್ರಕರಣಗಳ ಪರಿಹಾರ…


