ಮಠಗಳ ಕಾರ್ಯ ಅನನ್ಯ: ಡಾ. ಸಂಗಮೇಶ ಮೇತ್ರಿ

ಸಪ್ತಸಾಗರ ವಾರ್ತೆ,ಇಂಡಿ, ಜು. 25:ಮಠಗಳು ತಮ್ಮ ಅಸ್ತಿತ್ವ ಉಳಿಸಿಕೊಂಡು ಸಾಮಾಜಿಕ ಪರಿವರ್ತನೆಗೆ ಕಾರಣವಾಗಿ ಸಂಸ್ಕೃತಿ ಉಳಿಸಿ ಬೆಳೆಸಿಕೊಂಡು ಬಂದಿವೆ ಎಂದು ಸಾಹಿತಿ ಡಾ ಸಂಗಮೇಶ ಮೇತ್ರಿ ಹೇಳಿದರು.ಶನಿವಾರ ಭೀಮಾಂತರಂಗ ಆನ್ ಲೈನ್ ಸಾಹಿತ್ಯಿಕ ಮತ್ತು ಸಾಂಸ್ಕೃತಿಕ ಜಗಲಿ ಕೇಂದ್ರದ ವತಿಯಿಂದ ಹಮ್ಮಿಕೊಂಡ ‘ಇಂಡಿ ತಾಲೂಕಿನ ಮಠ ಮಾನ್ಯಗಳು’ ಕುರಿತ ಆನ್ ಲೈನ್ ಉಪನ್ಯಾಸ ಕಾರ್ಯಕ್ರಮದಲ್ಲಿ ಉಪನ್ಯಾಸಕರಾಗಿ ಅವರು ಮಾತನಾಡಿದರು.ಸ್ವಾತಂತ್ರ್ಯ ಹೋರಾಟ ಸಂದರ್ಭದಲ್ಲಿ ಹಾಗೂ ಶಿಕ್ಷಣ ಬಿತ್ತುವಲ್ಲಿ, ಸಂಸ್ಕೃತಿ ಹಂಚುವಲ್ಲಿ ಇಂಡಿ ತಾಲೂಕಿನ ಹಲವು ಮಠಗಳು ಕೆಲಸ ಮಾಡಿವೆ….

Read More

ವಂದೇ ಮಾತರಂ ಮಸೂದೆಗೆ ಕಾಂಗ್ರೆಸ್ ವಿರೋಧ: ‘ಡೋಂಗಿ ರಾಷ್ಟ್ರೀಯವಾದ’ ಬಯಲಾಗಿದೆ – ರಮೇಶ ಜಿಗಜಿಣಗಿ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 25:‘ವಂದೇ ಮಾತರಂ’ ಗೀತೆಗೆ ಅವಮಾನ ಮಾಡಿದವರಿಗೆ ಶಿಕ್ಷೆ ವಿಧಿಸುವ ಉದ್ದೇಶದಿಂದ ಮಂಡಿಸಲಾದ ‘ರಾಷ್ಟ್ರೀಯ ಗೌರವಕ್ಕೆ ಅವಮಾನಗಳ ತಡೆಗಟ್ಟುವಿಕೆ (ತಿದ್ದುಪಡಿ) ಮಸೂದೆ–2026’ಗೆ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸಿರುವುದು ಅದರ “ಡೋಂಗಿ ರಾಷ್ಟ್ರೀಯವಾದ”ವನ್ನು ಬಯಲಿಗೆಳೆದಿದೆ ಎಂದು ಸಂಸದ ರಮೇಶ ಜಿಗಜಿಣಗಿ ಆರೋಪಿಸಿದ್ದಾರೆ.ಶನಿವಾರ ಬಿಡುಗಡೆ ಮಾಡಿದ ಪ್ರಕಟಣೆಯಲ್ಲಿ ಅವರು, ಸ್ವಾತಂತ್ರ್ಯ ಹೋರಾಟಗಾರರಿಗೆ ಸ್ಫೂರ್ತಿಯಾಗಿದ್ದ ಹಾಗೂ ಕ್ರಾಂತಿಕಾರಿಗಳ ಧ್ಯೇಯಗೀತೆಯಾಗಿದ್ದ ಬಂಕಿಮಚಂದ್ರ ಚಟರ್ಜಿ ವಿರಚಿತ ‘ವಂದೇ ಮಾತರಂ’ಗೆ ಗೌರವ ನೀಡುವ ಉದ್ದೇಶದಿಂದ ಕೇಂದ್ರ ಸರ್ಕಾರ ಮಸೂದೆ ಮಂಡಿಸಿದೆ ಎಂದು ಹೇಳಿದರು.ರಾಜ್ಯಸಭೆಯಲ್ಲಿ ಮಸೂದೆ…

Read More

ಪ್ರಯಾಣಿಕ ಸ್ನೇಹಿ ಸಾರಿಗೆಗೆ ಒತ್ತು: ಕೆಕೆಆರ್‌ಟಿಸಿ ಸೇವೆಗಳ ಉನ್ನತೀಕರಣಕ್ಕೆ ಅಧ್ಯಕ್ಷ ಅರುಣಕುಮಾರ ಪಾಟೀಲ ಸೂಚನೆ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 25:ಪ್ರಯಾಣಿಕರಿಗೆ ಮತ್ತಷ್ಟು ಜನಸ್ನೇಹಿ, ಸುರಕ್ಷಿತ ಹಾಗೂ ಸುಗಮ ಸಾರಿಗೆ ಸೇವೆ ಒದಗಿಸಲು ಅಧಿಕಾರಿಗಳು ಯೋಜನಾಬದ್ಧವಾಗಿ ಕಾರ್ಯ ನಿರ್ವಹಿಸಬೇಕು ಎಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ (ಕೆಕೆಆರ್‌ಟಿಸಿ) ಅಧ್ಯಕ್ಷ ಅರುಣಕುಮಾರ ಎಂ.ವೈ. ಪಾಟೀಲ ಅಧಿಕಾರಿಗಳಿಗೆ ಸೂಚಿಸಿದರು.ವಿಜಯಪುರ ವಿಭಾಗೀಯ ಕಚೇರಿಯಲ್ಲಿ ಶುಕ್ರವಾರ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ನಿಗಮದ ಸೇವಾ ಗುಣಮಟ್ಟವನ್ನು ಇನ್ನಷ್ಟು ಸುಧಾರಿಸುವ ಉದ್ದೇಶದಿಂದ ನಡೆದ ಸಭೆಯಲ್ಲಿ ಬಸ್ ನಿಲ್ದಾಣಗಳ ಸ್ವಚ್ಛತೆ, ನೈರ್ಮಲ್ಯ, ಪ್ರಯಾಣಿಕರಿಗೆ ಅಗತ್ಯ ಮೂಲಭೂತ ಸೌಲಭ್ಯಗಳ…

Read More

ವಿಶ್ವವಿಖ್ಯಾತ ವಿಜಯಪುರಕ್ಕೆ ಇನ್ನೂ ಇಲ್ಲ ನಗರ ಬಸ್ ಟರ್ಮಿನಲ್!

80ಕ್ಕೂ ಹೆಚ್ಚು ಐತಿಹಾಸಿಕ ಸ್ಮಾರಕಗಳು, ಸಾವಿರಾರು ದೇಶ-ವಿದೇಶಿ ಪ್ರವಾಸಿಗರು, 4 ಲಕ್ಷ ಜನಸಂಖ್ಯೆ… ಆದರೂ ರಸ್ತೆಯೇ ನಗರ ಬಸ್ ನಿಲ್ದಾಣ! ಮೂರು ಕೆಎಸ್‌ಆರ್‌ಟಿಸಿ ಡಿಪೋ, 50ಕ್ಕೂ ಹೆಚ್ಚು ನಗರ ಬಸ್‌ಗಳಿದ್ದರೂ ಮೂಲಸೌಕರ್ಯ ಶೂನ್ಯ; ಅಧಿಕಾರಿಗಳ ನಿರ್ಲಕ್ಷ್ಯ, ಜನಪ್ರತಿನಿಧಿಗಳ ಇಚ್ಛಾಶಕ್ತಿ ಕೊರತೆಗೆ ಸಾರ್ವಜನಿಕರ ಆಕ್ರೋಶ ರುದ್ರಪ್ಪ ಆಸಂಗಿಸಪ್ತಸಾಗರ ವಾರ್ತೆ,ವಿಜಯಪುರ, ಜು. 24:ವಿಶ್ವವಿಖ್ಯಾತ ಗೋಳಗುಮ್ಮಟ, ಇಬ್ರಾಹಿಂ ರೋಜಾ, ಬಾರಾ ಕಮಾನ್, ಉಪ್ಪಲಿ ಬುರುಜ್, ಮಲಿಕ್-ಎ-ಮೈದಾನ್ ಸೇರಿದಂತೆ 80ಕ್ಕೂ ಹೆಚ್ಚು ಐತಿಹಾಸಿಕ ಸ್ಮಾರಕಗಳ ತವರೂರು ವಿಜಯಪುರ. ದೇಶ-ವಿದೇಶಗಳಿಂದ ಪ್ರತಿದಿನ ಸಾವಿರಾರು ಪ್ರವಾಸಿಗರು…

Read More

ಕಾನೂನು ಸುವ್ಯವಸ್ಥೆ ಕುಸಿತ ಆರೋಪ: ವಿಜಯಪುರದಲ್ಲಿ ಬಿಜೆಪಿ ಬೃಹತ್ ರ‍್ಯಾಲಿ

ರಾಜ್ಯಪಾಲರ ಮಧ್ಯಪ್ರವೇಶಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಕೆ ಸಪ್ತಸಾಗರ ವಾರ್ತೆ,ವಿಜಯಪುರ, ಜು. 24:ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ ಎಂದು ಆರೋಪಿಸಿ, ರಾಜ್ಯಪಾಲರು ಮಧ್ಯಪ್ರವೇಶಿಸಿ ರಾಜ್ಯ ಸರ್ಕಾರಕ್ಕೆ ಅಗತ್ಯ ನಿರ್ದೇಶನ ನೀಡಬೇಕೆಂದು ಆಗ್ರಹಿಸಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಜಿಲ್ಲಾ ಘಟಕದ ನೇತೃತ್ವದಲ್ಲಿ ಶುಕ್ರವಾರ ವಿಜಯಪುರದಲ್ಲಿ ಬೃಹತ್ ಪ್ರತಿಭಟನಾ ರ‍್ಯಾಲಿ ನಡೆಯಿತು. ನಗರದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಿಂದ ಆರಂಭವಾದ ಪ್ರತಿಭಟನಾ ರ‍್ಯಾಲಿ ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಜಿಲ್ಲಾಧಿಕಾರಿಗಳ ಕಚೇರಿಗೆ ತಲುಪಿತು. ಬಳಿಕ…

Read More

ನೀಟ್ ಪರೀಕ್ಷೆ ರದ್ದತಿಗೆ ಆಗ್ರಹಿಸಿ ರಾಷ್ಟ್ರಪತಿಗಳಿಗೆ ಮನವಿ: ಜಂತರ್ ಮಂತರ್ ಪ್ರತಿಭಟನೆಗೆ ಭೀಮ್ ರಾಜ್ಯ ದಲಿತ್ ಸೇವಾ ಸಮಿತಿ ಬೆಂಬಲ

ಸಪ್ತಸಾಗರ ವಾರ್ತೆ,ವಿಜಯಪುರ, ಜು.24:ನೀಟ್ (NEET) ಪರೀಕ್ಷೆ ವಿರೋಧಿಸಿ ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಬೃಹತ್ ಪ್ರತಿಭಟನೆಗೆ ಬೆಂಬಲ ಸೂಚಿಸಿ, ಭೀಮ್ ರಾಜ್ಯ ದಲಿತ್ ಸೇವಾ ಸಮಿತಿ (ರಿ.) ವಿಜಯಪುರ ಜಿಲ್ಲಾ ಘಟಕವು ಜಿಲ್ಲಾಧಿಕಾರಿಗಳ ಮೂಲಕ ಭಾರತದ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿತು.ಮನವಿಯಲ್ಲಿ, ನೀಟ್ ಪರೀಕ್ಷೆಗೆ ಸಂಬಂಧಿಸಿದಂತೆ ದೇಶಾದ್ಯಂತ ವಿದ್ಯಾರ್ಥಿಗಳು, ಪೋಷಕರು ಹಾಗೂ ವಿವಿಧ ಸಾಮಾಜಿಕ ಸಂಘಟನೆಗಳು ವ್ಯಕ್ತಪಡಿಸುತ್ತಿರುವ ಆತಂಕವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಒತ್ತಾಯಿಸಲಾಗಿದೆ. ವಿದ್ಯಾರ್ಥಿಗಳಿಗೆ ಸಮಾನ ಶಿಕ್ಷಣದ ಅವಕಾಶ, ಸಾಮಾಜಿಕ ನ್ಯಾಯ ಹಾಗೂ ಸಂವಿಧಾನಬದ್ಧ ಹಕ್ಕುಗಳ ರಕ್ಷಣೆಗೆ…

Read More

ರಾಷ್ಟ್ರೀಯ ಮಟ್ಟದಲ್ಲಿ ಮತ್ತೊಂದು ಗರಿ: ಬಿಎಲ್‌ಡಿಇ ಎಸ್‌ಎಸ್‌ಎಂ ಫಾರ್ಮಸಿ ಕಾಲೇಜಿಗೆ 2ನೇ ರ‍್ಯಾಂಕ್

ಸಪ್ತಸಾಗರ ವಾರ್ತೆ,ವಿಜಯಪುರ, ಜು. 24:ಶಿಕ್ಷಣ ಮತ್ತು ಸಂಶೋಧನಾ ಕ್ಷೇತ್ರದಲ್ಲಿ ನಿರಂತರ ಸಾಧನೆ ಮಾಡುತ್ತಿರುವ ನಗರದ ಪ್ರತಿಷ್ಠಿತ ಬಿಎಲ್‌ಡಿಇ ಸಂಸ್ಥೆಯ ಎಸ್.ಎಸ್.ಎಂ ಕಾಲೇಜ್ ಆಫ್ ಫಾರ್ಮಸಿ ಆ್ಯಂಡ್ ರಿಸರ್ಚ್ ರಾಷ್ಟ್ರೀಯ ಮಟ್ಟದಲ್ಲಿ ಮತ್ತೊಂದು ಮಹತ್ವದ ಗೌರವಕ್ಕೆ ಪಾತ್ರವಾಗಿದೆ. ದೇಶದ ಹೆಸರಾಂತ ನಿಯತಕಾಲಿಕ ಔಟ್‌ಲುಕ್ ಐಸಿಎಆರ್‌ಇ–2026 ನಡೆಸಿದ ರಾಷ್ಟ್ರೀಯ ಸಮೀಕ್ಷೆಯಲ್ಲಿ ಕಾಲೇಜು ದೇಶದ ಅತ್ಯುತ್ತಮ ಫಾರ್ಮಸಿ ಕಾಲೇಜುಗಳ ಪೈಕಿ 2ನೇ ಸ್ಥಾನ ಪಡೆದು ವಿಜಯಪುರಕ್ಕೆ ಹೆಮ್ಮೆ ತಂದಿದೆ.ಕಳೆದ ವರ್ಷದ ಸಮೀಕ್ಷೆಯಲ್ಲಿ ಕಾಲೇಜು 3ನೇ ಸ್ಥಾನ ಪಡೆದಿದ್ದರೆ, ಈ ಬಾರಿ ಒಂದು…

Read More

ಯುವಕರ ನ್ಯಾಯಯುತ ಹೋರಾಟವನ್ನು ಗೌರವಿಸಿ: ಸಂಗಮೇಶ ಬಬಲೇಶ್ವರ

ಸಪ್ತಸಾಗರ ವಾರ್ತೆ,ವಿಜಯಪುರ, ಜು.24:ಯುವಕರ ನ್ಯಾಯಯುತ ಹೋರಾಟವನ್ನು ಗೌರವಿಸಿ, ಅವರ ನ್ಯಾಯಸಮ್ಮತ ಬೇಡಿಕೆಗಳನ್ನು ಈಡೇರಿಸುವುದು ಸರ್ಕಾರದ ನೈತಿಕ ಜವಾಬ್ದಾರಿಯಾಗಿದೆ ಎಂದು ಕರ್ನಾಟಕ ರಾಜ್ಯ ಬಾಲವಿಕಾಸ ಅಕಾಡೆಮಿಯ ನಿಕಟಪೂರ್ವ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಹೇಳಿದ್ದಾರೆ.ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಯುವಕರ ನ್ಯಾಯಯುತ ಬೇಡಿಕೆಗಳನ್ನು ಹತ್ತಿಕ್ಕುವ ಯಾವುದೇ ಪ್ರಜಾಪ್ರಭುತ್ವ ವಿರೋಧಿ ನಿಲುವು ದೇಶದ ಪ್ರಜಾಸತ್ತಾತ್ಮಕ ಮೌಲ್ಯಗಳಿಗೆ ಧಕ್ಕೆಯಾಗಿದ್ದು, ಇಂತಹ ನಡೆ ಅಪಾಯಕಾರಿ ಹಾಗೂ ಆತ್ಮಹತ್ಯಾತ್ಮಕ ಬೆಳವಣಿಗೆಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.“ಅನ್ಯಾಯದ ವಿರುದ್ಧ ಪ್ರತಿಭಟಿಸುವುದು ಪ್ರತಿಯೊಬ್ಬ ಭಾರತೀಯ ನಾಗರಿಕನ ಸಂವಿಧಾನಬದ್ಧ ಹಕ್ಕು. ನೀಟ್…

Read More

ಯುವಕರನ್ನು ಕೆಣಕಿದವರು ಉದ್ಧಾರವಾಗಿಲ್ಲ; ಅವರ ಧ್ವನಿಗೆ ಕೇಂದ್ರ ಸರ್ಕಾರ ಸ್ಪಂದಿಸಲಿ: ಸುನೀಲಗೌಡ ಪಾಟೀಲ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 24:ದೇಶದ ಯುವಕರನ್ನು ಯಾರೂ ಕೆಣಕಬಾರದು. ಅವರನ್ನು ಕೆಣಕಿದವರು ಯಾರೂ ಉದ್ಧಾರವಾಗಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲ ಎಚ್ಚರಿಕೆ ನೀಡಿದ್ದಾರೆ.ಮಾಧ್ಯಮ ಪ್ರಕಟಣೆ ನೀಡಿರುವ ಅವರು, “ಭಾರತ ಯುವಕರ ದೇಶ. ಯುವಶಕ್ತಿಯೇ ರಾಷ್ಟ್ರದ ನಿಜವಾದ ಬಲವಾಗಿದ್ದು, ದೇಶದ ಭವಿಷ್ಯ ಅವರ ಕೈಯಲ್ಲಿದೆ. ಯುವಕರು ಮನಸ್ಸು ಮಾಡಿದರೆ ಇತಿಹಾಸವನ್ನೇ ಬದಲಾಯಿಸುವ ಸಾಮರ್ಥ್ಯ ಹೊಂದಿದ್ದಾರೆ” ಎಂದು ಹೇಳಿದರು.ದೇಶದಲ್ಲಿ ಪ್ರತಿವರ್ಷ 20 ಲಕ್ಷಕ್ಕೂ ಹೆಚ್ಚು ಯುವಕರು ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹಾಜರಾಗುತ್ತಿದ್ದು, ಯಶಸ್ಸಿಗಾಗಿ ಹಗಲು-ರಾತ್ರಿ ಶ್ರಮಿಸುತ್ತಾರೆ. ಆದರೆ…

Read More

ಕಬ್ಬು ನುರಿಸುವ ಸಾಮರ್ಥ್ಯ 12 ಸಾವಿರ ಟಿಸಿಡಿಗೆ ಹೆಚ್ಚಳ: ಸಾರ್ವಜನಿಕ ಸಭೆಯಲ್ಲಿ ರೈತರ ಬೆಂಬಲ

ಸಪ್ತಸಾಗರ ವಾರ್ತೆ,ಚಡಚಣ, ಜು. 24: ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಹಾವಿನಾಳ ಗ್ರಾಮದಲ್ಲಿರುವ ಶ್ರೀ ದತ್ತ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಸಕ್ಕರೆ ಕಾರ್ಖಾನೆಯ ಕಬ್ಬು ನುರಿಸುವ ಸಾಮರ್ಥ್ಯ ಹೆಚ್ಚಳ ಯೋಜನೆ ಕುರಿತು ಸಾರ್ವಜನಿಕ ಸಭೆ ಬುಧವಾರ ಕಾರ್ಖಾನೆ ಆವರಣದಲ್ಲಿ ನಡೆಯಿತು. ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ಔದ್ರಮ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ರೈತರು ಹಾಗೂ ಸಾರ್ವಜನಿಕರು ಯೋಜನೆಗೆ ವ್ಯಾಪಕ ಬೆಂಬಲ ವ್ಯಕ್ತಪಡಿಸಿದರು.ಸಭೆಯಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ವಿಜಯಪುರ ಪ್ರಾದೇಶಿಕ ಅಧಿಕಾರಿ ಎಸ್. ರಮೇಶ್ ಮಾತನಾಡಿ,…

Read More