ವಿದ್ಯಾದಾನ ಅತಿ ಶ್ರೇಷ್ಠ: ರಕ್ಷಿತಾ ರಾಜು

ಸಪ್ತಸಾಗರ ವಾರ್ತೆ, ವಿಜಯಪುರ, ಫೆ. 3 :ನಗರದ ಬಿ. ಎಲ್.ಡಿ.ಇ.ಸಂಸ್ಥೆಯ ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಯುವಕ ಯುವತಿಯರಿಗೆ ಪ್ರೇರಣೆಯ ಚಿಲುಮೆ ಎಂಬಂತೆ, “ಬ್ರೆಕಿಂಗ್ ಬ್ಯಾರಿಯರ್ಸ್ ಆನ್ ಇನ್ಸ್ಪೈರಿಂಗ್ ಇಂಟರಾಕ್ಷನ್ ವಿತ್ ಇಂಟರ್ನ್ಯಾಷನಲ್ ಪ್ಯಾರಾ ಅಥ್ಲೆಟ್” ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಮುಖ್ಯ ಅತಿಥಿ ಕುಮಾರಿ ರಕ್ಷಿತಾ ರಾಜು ಅಂತರಾಷ್ಟ್ರೀಯ ಪ್ಯಾರಾ ಅಥ್ಲೆಟ್,ಬೆಂಗಳೂರು ಇವರು ಮಾತನಾಡಿ, ಉಳ್ಳವರು ಶಿವಾಲಯವ ಮಾಡುವರು ಎಂಬ ಬಸವಣ್ಣನವರ ವಚನದಂತೆ ಶಾರೀರಿಕ ಮಿತಿಗಳು ನಮ್ಮ ಸಾಧನೆಯನ್ನು ಅಡ್ಡಿಪಡಿಸಲಾರವು. ನಮ್ಮಲ್ಲಿ ಯಾವ ಶಕ್ತಿ ಇಲ್ಲ…

Read More

ಗ್ರಾಮೀಣ ಕ್ರೀಡಾಪಟುಗಳಿಗೆ ಪ್ರೋತ್ಸಾಹ:ರಕ್ಷಿತಾ ರಾಜು ಹರ್ಷ

ಸಪ್ತಸಾಗರ ವಾರ್ತೆ, ವಿಜಯಪುರ, ಫೆ. 3: ಗ್ರಾಮೀಣ ಕ್ರೀಡಾಪಟುಗಳಿಗೆ ಪ್ರೋತ್ಸಾಹ ಸಿಗುತ್ತಿರುವುದು ಸಂತಸದ ವಿಷಯ ಎಂದು ಅಂತಾರಾಷ್ಟ್ರೀಯ ಪ್ಯಾರಾ ಅಥ್ಲೀಟ್ ರಕ್ಷಿತಾ ರಾಜು ಹೇಳಿದ್ದಾರೆ.ತಿಕೋಟಾದಲ್ಲಿರುವ ಬಿ.ಎಲ್.ಡಿ.ಇ ಸಂಸ್ಥೆಯ ಶ್ರೀ ಎ. ಬಿ. ಜತ್ತಿ ಪಿಯು ಕಾಲೇಜು(ಪ್ರೌಢಶಾಲೆ ವಿಭಾಗ) ನಲ್ಲಿ ಅಂತಾರಾಷ್ಟ್ರೀಯ ಅಥ್ಲೇಟಿಕ್ ಕ್ರೀಡಾಪಟು, ಖ್ಯಾತ ವೈದ್ಯ ದಿ. ಡಾ. ಸಿ. ಆರ್. ಬಿದರಿ ಅವರ ಸ್ಮರಣಾರ್ಥ ಆಯೋಜಿಸಲಾಗಿರುವ ಎರಡು ದಿನಗಳ ಬಿ.ಎಲ್.ಡಿ.ಇ ಸಂಸ್ಥೆಯ 11ನೇ ಅಂತರಶಾಲೆ ಮತ್ತು ಕಾಲೇಜುಗಳ ಅಥ್ಲೇಟಿಕ್ ವಾರ್ಷಿಕ ಕ್ರೀಡಾಕೂಟದ ಸಮಾರೋಪ ಸಮಾರಂಭದಲ್ಲಿ ನಾನಾ…

Read More

ಸಿಕ್ಯಾಬ್ ಗೆ ಚಿನ್ನದ ಪದಕ

ಸಪ್ತಸಾಗರ ವಾರ್ತೆ, ವಿಜಯಪುರ, ಫೆ. 3: ನಗರದ ಸಿಕ್ಯಾಬ್ ಇಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿ ಕಾಲೇಜಿನ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ಇಬ್ಬರು ಪ್ರತಿಭಾವಂತ ವಿದ್ಯಾರ್ಥಿಗಳು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು) 2025ನೇ ಸಾಲಿನ ಎಂ.ಟೆಕ್ (ಮಷಿನ್ ಡಿಸೈನ್) ಪರೀಕ್ಷೆಯಲ್ಲಿ ಗಣನೀಯ ಸಾಧನೆ ಮಾಡಿದ್ದಾರೆ.ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ಹಾಗೂ ಉನ್ನತ ಶಿಕ್ಷಣ ಸಚಿವ ಡಾ. ಎಂ. ಸಿ. ಸುಧಾಕರ್ ಅವರ ಉಪಸ್ಥಿತಿಯಲ್ಲಿ ಈ ರ‍್ಯಾಂಕಗಳನ್ನು ಘಟಿಕೋತ್ಸವದಲ್ಲಿ ಪ್ರದಾನ ಮಾಡಲಾಯಿತು.ಪ್ರಶಾಂತ ಕೋಟೆಪ್ಪಗೊಳ ಮತ್ತು ಚೈತ್ರಾ ಮಡಿವಾಳಕರ ಅವರು ಯುನಿವರ್ಸಿಟಿ ಚಿನ್ನದ…

Read More

ರೇಷ್ಮೆ ಕೃಷಿ ಪ್ರಶಸ್ತಿ: ರೇಷ್ಮೆ ಬೆಳೆಗಾರರಿಂದ ಅರ್ಜಿ ಆಹ್ವಾನ

ಸಪ್ತಸಾಗರ ವಾರ್ತೆ, ವಿಜಯಪುರ,ಫೆ. 3:ರೇಷ್ಮೆ ಇಲಾಖೆಯಿಂದ 2023-24 ಹಾಗೂ 2024-25ನೇ ಸಾಲಿನ ರೇಷ್ಮೆ ಕೃಷಿ ಪ್ರಶಸ್ತಿಗಾಗಿ ಉತ್ತಮ ಪ್ರಗತಿ ಸಾಧಿಸಿರುವ ರೇಷ್ಮೆ ಬೆಳೆಗಾರರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ಕನಿಷ್ಠ ಒಂದು ಎಕರೆ ಹಿಪ್ಪುನೇರಳೆ ತೋಟ ಹಾಗೂ ಪ್ರತ್ಯೇಕ ಹುಳು ಸಾಕಾಣಿಕಾ ಮನೆ, 100 ಮೊಟ್ಟೆಗೆ 65 ಕೆ.ಜಿ ಹಾಗೂ ಎಕರೆಗೆ ಕನಿಷ್ಠ 500 ಕೆ.ಜಿಗಿಂತ ಕಡಿಮೆ ಇರಬಾರದು. ರೇಷ್ಮೆ ಬೆಳೆಗಾರರು ರೇಷ್ಮೆ ಪಾಸ್ ಬುಕ್ ಹಾಗೂ ರೇಷ್ಮೆ‌ಮೊಟ್ಟೆ-ಚಾಕಿ ಖರೀದಿಸಿರುವ ಹಾಗೂ ಮಾರಾಟ ಮಾಡಿರುವ ದಾಖಲೆ ಹೊಂದಿರಬೇಕು.ಅರ್ಹ ರೇಷ್ನೆ ಬೆಳೆಗಾರರು ಸ್ಥಳೀಯ…

Read More

ವಿಡಿಎ ನೂತನ ಅಧ್ಯಕ್ಷರಾಗಿ ಡಾ. ಸಂಬಣ್ಣಿ ನೇಮಕ

ಸಪ್ತಸಾಗರ ವಾರ್ತೆ, ವಿಜಯಪುರ, ಫೆ. 3: ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರ ನೂತನ ಅಧ್ಯಕ್ಷರಾಗಿ ಡಾ.ಗಂಗಾಧರ ಸಂಬಣ್ಣಿ ನೇಮಕಗೊಂಡಿದ್ದಾರೆ.ಆಯುರ್ವೇದ ವೈದ್ಯಕೀಯ ಪದವೀಧರರಾಗಿರುವ ಸಂಬಣ್ಣಿ ವಿದ್ಯಾರ್ಥಿ ದೆಸೆಯಿಂದಲೇ ವಿದ್ಯಾರ್ಥಿ ಆಂದೋಲನ, ಹೋರಾಟದಲ್ಲಿ 1993-94ರಲ್ಲಿ ತೊಡಗಿಸಿಕೊಂಡಿದ್ದರು.ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನಗರ ಘಟಕದ ಸಹ ಕಾರ್ಯದರ್ಶಿಯಾಗಿದ್ದ ಅವರು ನಂತರ ಯುವ ಮುಖಂಡರಾಗಿದ್ದ ಸುನೀಲಗೌಡ ಪಾಟೀಲರ ಗೆಳೆಯರಾಗಿ 1999ರಲ್ಲಿ ಕಾಂಗ್ರೆಸ್ ಸೇರ್ಪಡೆಗೊಂಡಿದ್ದರು.ಕಳೆದ 27 ವರ್ಷಗಳಿಂದ ಕಾಂಗ್ರೆಸ್ ಪಕ್ಷದ ಕಟ್ಟಾಳಾಗಿ ಸೇವೆ ಸಲ್ಲಿಸಿದ್ದ ಅವರು ಯುವ ಕಾಂಗ್ರೆಸ್ ಸಮಿತಿ ಜಿಲ್ಲಾ ಕಾಂಗ್ರೆಸ್ ಸೇವಾದಳದಲ್ಲಿ ಪದಾಧಿಕಾರಿಯಾಗಿ…

Read More

ಇಗ್ನೊ ಪ್ರವೇಶಾತಿ ಅವಧಿ ವಿಸ್ತರಣೆ

ಸಪ್ತಸಾಗರ ವಾರ್ತೆ, ವಿಜಯಪುರ, ಫೆ.3ಇಂದಿರಾ ಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾಲಯದ ಜನವರಿ 2026ನೇ ಸಾಲಿನ ಪದವಿ, ಸ್ನಾತಕ, ಡಿಪ್ಲೋಮಾ ಹಾಗೂ ಪ್ರಮಾಣಪತ್ರ ಕೋರ್ಸ್‌ಗಳಿಗೆ ಪ್ರವೇಶ ಹಾಗೂ ಮರುಪ್ರವೇಶಾತಿಗಾಗಿ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಫೆಬ್ರವರಿ 15 ರವರೆಗೆ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಕ್ಷೇತ್ರಿಯ ನಿರ್ದೇಶಕರು,ಇಂದಿರಾ‌ ಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾಲಯ,ಒಂದನೇ ಮಹಡಿ,ಪ್ಲಾಜಾ-2 ಪ್ರವಾಸೋದ್ಯಮ ಇಲಾಖಾ ಕಟ್ಟಡ ಇವರನ್ನು ದೂ.08352-252006 ಸಂಪರ್ಕಿಸಬಹುದಾಗಿದೆ ಎಂದು ಪ್ರಾದೇಶಿಕ ನಿರ್ದೇಶಕರ ಪ್ರಕಟಣೆ ತಿಳಿಸಿದೆ.

Read More

ಗೃಹಲಕ್ಷ್ಮಿ ಡಿಜಿಟಲ್ ಮಾರ್ಕೆಟಿಂಗ್ ಆಪ್ ಬಿಡುಗಡೆ

ಸಪ್ತಸಾಗರ ವಾರ್ತೆ, ವಿಜಯಪುರ,ಫೆ.3:ಮಹಿಳಾ ಉದ್ಯಮಿದಾರರು ತಾವು ತಯಾರಿಸಿದ ಉತ್ಪನ್ನಗಳಿಗೆ ಡಿಜಿಟಲ್ ವೇದಿಕೆಯ ಮೂಲಕ ಮಾರುಕಟ್ಟೆ ಒದಗಿಸುವ ಸೌಲಭ್ಯ ಕಲ್ಪಿಸಲಾಗಿದ್ದು, ಜ.9 ರಂದು ಗೃಹಲಕ್ಷ್ಮೀ ಡಿಜಿಟಲ್ ಮಾರ್ಕೆಟಿಂಗ್ ಆಪ್ ಅನ್ನು ಬಿಡುಗಡೆ ಮಾಡಲಾಗಿದೆ.ಮಹಿಳಾ ಉದ್ಯಮಿಗಳ ನೋಂದಣಿ ಕಾರ್ಯ ಕೈಗೊಳ್ಳಲು ಸ್ತ್ರೀ ಶಕ್ತಿ ಸ್ವ ಸಹಾಯ ಗುಂಪಿನ ಸದಸ್ಯರು, ಎನ್ ಆರ್ ಎಲ್ಎಮ್ ಫಲಾನುಭವಿಗಳು ಹಾಗೂ ಎನ್ ಆರ್ ಎಲ್ಎಮ್ ಉದ್ಯಮಿಗಳು, ಅಕ್ಕ ಕೆಫೆ ಘಟಕಗಳನ್ನು ನಿರ್ವಹಿಸುತ್ತಿರುವ ಮಹಿಳೆಯರು, ಕಾಸಿಯಾ (ಕರ್ನಾಟಕ ಸ್ಮಾಲ್ ಸ್ಕೇಲ್ ಇಂಡಸ್ಟ್ರೀಜ್ ಅಸೋಷಿಯೇಶನ್) ಘಟಕಗಳ ಮಹಿಳಾ…

Read More

ಕರ್ನಾಟಕವು ರೈಲ್ವೆ ಮೂಲ ಸೌಕರ್ಯದಲ್ಲಿ ಅಭೂತಪೂರ್ವ ಪರಿವರ್ತನೆಗೆ ಸಾಕ್ಷಿ

ಸಪ್ತಸಾಗರ ವಾರ್ತೆ, ಹುಬ್ಬಳ್ಳಿ, ಫೆ. 3:ಕಳೆದ ದಶಕದಲ್ಲಿ ಬಜೆಟ್ ಹಂಚಿಕೆ ಮತ್ತು ನಿರಂತರ ಹೂಡಿಕೆಯಲ್ಲಿ ನಡೆದ ಐತಿಹಾಸಿಕ ಹೆಚ್ಚಳದಿಂದ ಕರ್ನಾಟಕವು ರೈಲ್ವೆ ಮೂಲಸೌಕರ್ಯದಲ್ಲಿ ಅಭೂತಪೂರ್ವ ಪರಿವರ್ತನೆಗೆ ಸಾಕ್ಷಿಯಾಗಿದೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಮತ್ತು ರೈಲ್ವೆ ರಾಜ್ಯ ಸಚಿವ ವಿ. ಸೋಮಣ್ಣ ಅವರು ಹೇಳಿದರು.ರೈಲ್ವೆ ಸಚಿವ ನವದೆಹಲಿಯಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ 2026-27ರ ಬಜೆಟ್ ಮುಖ್ಯಾಂಶಗಳ ಬಗ್ಗೆ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದರು.2009–14ರ ಅವಧಿಯಲ್ಲಿ ₹835 ಕೋಟಿಯಾಗಿದ್ದ ರಾಜ್ಯಕ್ಕೆ ಸರಾಸರಿ ವಾರ್ಷಿಕ ರೈಲ್ವೆ ಬಜೆಟ್ ಹಂಚಿಕೆ, 2026–27ರಲ್ಲಿ ₹7,748…

Read More

ನಿರಾಶಾದಾಯಕ ಬಜೆಟ್:ಡಾ. ಬಿರಾದಾರ

ಸಪ್ತಸಾಗರ ವಾರ್ತೆ, ವಿಜಯಪುರ, ಫೆ. 2: ಕೇಂದ್ರ ಬಜೆಟ್ ಎಲ್ಲ ವರ್ಗದವರಿಗೆ ನಿರಾಶದಾಯಕ ಬಜೆಟ್ ಆಗಿದೆ ಎಂದು ಕಾಂಗ್ರೆಸ್ ವೈದ್ಯ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ. ರವಿಕುಮಾರ ಬಿರಾದಾರ ಕೇಂದ್ರ ಬಜೆಟ್ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.ದೇಶದ ರೈತರು, ಯುವಜನತೆ ಮತ್ತು ಮಧ್ಯಮ ವರ್ಗದ ಜನರ ನಿರೀಕ್ಷೆಗಳನ್ನು ಹುಸಿಗೊಳಿಸಿದ್ದು, ಕಠಿಣ ಆರ್ಥಿಕ ವಾಸ್ತವಗಳನ್ನು ಎದುರಿಸುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ. ನಿರುದ್ಯೋಗದ ಸಮಸ್ಯೆ ತಾಂಡವವಾಡುತ್ತಿದ್ದರೂ ಮತ್ತು ಉತ್ಪಾದನಾ ವಲಯವು ಕುಸಿತದ ಹಾದಿಯಲ್ಲಿದ್ದರೂ, ಸರ್ಕಾರವು ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳುವ ಬದಲು ಕೇವಲ…

Read More

ಪ್ರಾದೇಶಿಕ ಗ್ರಾಮೀಣ ಬ್ಯಾಂಕ್‌ಗಳಲ್ಲಿ ಖಾಸಗಿ ಬಂಡವಾಳ ಹೂಡಿಕೆಗೆ ವಿರೋಧ

ಸಪ್ತಸಾಗರ ವಾರ್ತೆ, ವಿಜಯಪುರ, ಫೆ. 2: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಕೇಂದ್ರ ಬಜೆಟ್‌ನಲ್ಲಿ ದೇಶದ ಬ್ಯಾಂಕಿಂಗ್ ವಲಯದ ಹಣಕಾಸಿನ ಸ್ಥಿತಿ ಅತ್ಯಂತ ಗಟ್ಟಿಯಾಗಿದೆ ಎಂದು ಹೇಳಿರುವುದನ್ನು ನಾವು ಸ್ವಾಗತಿಸುತ್ತೇವೆ. ಬ್ಯಾಂಕ್‌ಗಳಲ್ಲಿ ಸಿಬ್ಬಂದಿ ಕೊರತೆ ಇದ್ದರೂ, ಬ್ಯಾಂಕ್ ನೌಕರರು ಹೆಚ್ಚಿನ ಶ್ರಮ ಹಾಗೂ ಹೊಣೆಗಾರಿಕೆಯಿಂದ ಕಾರ್ಯನಿರ್ವಹಿಸಿ ಸಾಧಿಸಿದ ಪ್ರಗತಿಯೇ ಇದಕ್ಕೆ ಪ್ರಮುಖ ಕಾರಣವಾಗಿದೆ ಎಂದು ಅಖಿಲ ಭಾರತ ಗ್ರಾಮೀಣ ಬ್ಯಾಂಕ್ ನೌಕರರ ಸಂಘದಪ್ರಧಾನ ಕಾರ್ಯದರ್ಶಿ ಜಿ. ಜಿ. ಗಾಂಧಿ ತಿಳಿಸಿದ್ದಾರೆ.ಭಾರತ ನಿರ್ಮಾಣದ ಉದ್ದೇಶದಿಂದ…

Read More