ತಂತ್ರಜ್ಞಾನ-ಕೌಶಲ್ಯಾಭಿವೃದ್ದಿ ಅಳವಡಿಸಿಕೊಂಡು ಉದ್ಯೋಗ ಪಡೆಯಲು ಮುಂದಾಗಿ-ಸಚಿವ ಡಾ. ಎಂ.ಬಿ. ಪಾಟೀಲ ಕರೆ
ಸಪ್ತಸಾಗರ ವಾರ್ತೆ, ವಿಜಯಪುರ, ಫೆ.2: ಇಂದಿನ ತಾಂತ್ರಿಕ ಯುಗದಲ್ಲಿ ಎಲ್ಲ ಕ್ಷೇತ್ರಗಳಲ್ಲಿಯೂ ಆರ್ಟಿಫಿಸಿಯಲ್ ಇಂಟಲಿಜೆನ್ಸ್ (ಎಆಯ್), ರೋಬೋಟ ತಂತ್ರಜ್ಞಾನ, ಗ್ರೀನ್ ಎನರ್ಜಿ ದಾಪುಗಾಲಿಟ್ಟಿದ್ದು, ಈ ಕಾಲಕ್ಕೆ ತಕ್ಕಂತೆ ಹೊಂದಿಕೊಂಡು, ತಂತ್ರಜ್ಞಾನವನ್ನು ಅಳವಡಿಸಿಕೊಂಡು, ಕೌಶಲ್ಯಕ್ಕೆ ತಕ್ಕಂತೆ ಉದ್ಯೋಗ ಪಡೆಯಲು ಇಂದಿನ ಯುವ ಜನಾಂಗ ಮುಂದಾಗಬೇಕು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ದಿ ಖಾತೆ ಸಚಿವ, ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಬಿ. ಪಾಟೀಲ ಹೇಳಿದರು.ಕೌಶಲ್ಯಾಭಿವೃದ್ಧಿ, ಉದ್ಯಮಶಿಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯ ಅಭಿವೃದ್ಧಿ…


