ಟೊಯೊಟಾ ಕಿರ್ಲೋಸ್ಕರ್ ಕಂಪನಿ ಅನುದಾನ ದಾನದಷ್ಟೇ ಶ್ರೇಷ್ಠ:ಸಚಿವ ಎಂ. ಬಿ. ಪಾಟೀಲ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 8: ಜಾಗತಿಕ ಖ್ಯಾತಿಯ ಟೊಯೊಟಾ ಕಿರ್ಲೋಸ್ಕರ್ ಕಂಪನಿ ಸಿ.ಎಸ್.ಆರ್. ಅನುದಾನದಡಿ ಸರಕಾರಿ ಶಾಲಾ, ಕಾಲೇಜುಗಳ ಅಭಿವೃದ್ಧಿಗೆ ಅನುದಾನ ಒದಗಿಸಿರುವುದು ದಾನಗಳಲ್ಲಿಯೇ ಶ್ರೇಷ್ಠವಾಗಿದೆ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.ರವಿವಾರ ಬಬಲೇಶ್ವರ ತಾಲೂಕಿನ ಮಮದಾಪುರ ಸರಕಾರಿ ಪದವಿ ಕಾಲೇಜು ನೂತನ ಕಟ್ಟಡ ಉದ್ಘಾಟಿಸಿ ಅವರು ಮಾತನಾಡಿದರು.ನಗರದ ಖಾಸಗಿ ಶಾಲೆ ಕಾಲೇಜುಗಳನ್ನು ಮೀರಿಸುವ ಕಟ್ಟಡಗಳನ್ಬು ಮಮದಾಪುರ ಭಾಗದಲ್ಲಿ ನಿರ್ಮಿಸಲಾಗಿದೆ. ಶಾಲೆಯೇ ದೇವಾಲಯ, ಮಕ್ಕಳೇ ದೇವರು…

Read More

ದಿವಟಗೇರಿ ಗಲ್ಲಿಯ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ 50 ವಸಂತಗಳ ಸಂಭ್ರಮ

ಸಪ್ತಸಾಗರ ವಾರ್ತೆ ವಿಜಯಪುರ,ಡಿ. 7 : ದಿವಟಗೇರಿ ಗಲ್ಲಿಯ ಶ್ರೀ ಗುರು ರಾಘವೇಂದ್ರ ಮಹಾಸ್ವಾಮಿಗಳ ಮಠಕ್ಕೆ 50 ವಸಂತಗಳ ಸಂಭ್ರಮದ ಅಂಗವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಶ್ರದ್ಧಾ-ಭಕ್ತಿಯಿಂದ ನೆರವೇರಿದವು. ಉತ್ತರಾಧಿ ಮಠಾಧೀಶರಾದ ಶ್ರೀ ಸತ್ಯಾತ್ಮತೀರ್ಥ ಶ್ರೀಪಾದಂಗಳವರು ಶ್ರೀಮಠಕ್ಕೆ ಭೇಟಿ ನೀಡಿ ರಾಯರ ಪವಿತ್ರ ಬೃಂದಾವನಕ್ಕೆ ಪಂಚಾಮೃತ ಅಭಿಷೇಕ ನೆರವೇರಿಸಿದರು.ಅದಕ್ಕೂ ಮೊದಲು ಬೆಳಿಗ್ಗೆ 8 ಗಂಟೆಗೆ ಶ್ರೀ ಸತ್ಯಾತ್ಮತೀರ್ಥ ಶ್ರೀಪಾದಂಗಳವರಿಗೆ ಪೂರ್ಣ ಕುಂಭ ಸ್ವಾಗತಿಸಲಾಯಿತು. ನಂತರ ಪಂಚಾಮೃತ ಅಭಿಷೇಕ, ಸಾವಿರಾರು ಭಕ್ತರಿಗೆ ಮುದ್ರಾಧಾರಣ, ಹೋಮದ ಪೂರ್ಣಾಹುತಿ ಕಾರ್ಯಕ್ರಮ ಜರುಗಿತು.ನಂತರ…

Read More

ಟಿಇಟಿ ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ.ಕೆ ಭೇಟಿ-ಪರಿಶೀಲನೆ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ.7: ಜಿಲ್ಲಾಧಿಕಾರಿ ಡಾ.ಆನಂದ.ಕೆ ಅವರು ರವಿವಾರ ನಗರದ ಮರಾಠಿ ವಿದ್ಯಾಲಯ ಹಾಗೂ ಅಂಜುಮನ್ ಬಾಲಕಿಯರ ಪದವಿ-ಪೂರ್ವ ಕಾಲೇಜಿನಲ್ಲಿ ನಡೆಯುತ್ತಿರುವ ಟಿಇಟಿ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ, ಪರೀಕ್ಷಾ ವ್ಯವಸ್ಥೆ,ಪರೀಕ್ಷೆ ಕೇಂದ್ರಗಳಲ್ಲಿ ಕಲ್ಪಿಸಲಾಗಿರುವ ಮೂಲಭೂತ ಸೌಲಭ್ಯಗಳ ಕುರಿತು ಪರಿಶೀಲನೆ ನಡೆಸಿದರು.ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳ ಹಾಜರಾತಿ, ಪರೀಕ್ಷಾ ಕೇಂದ್ರಗಳ ಕೊಠಡಿ, ವಿದ್ಯಾರ್ಥಿಗಳಿಗೆ ಆಸನಗಳ ವ್ಯವಸ್ಥೆ, ವಿದ್ಯುತ್ ವ್ಯವಸ್ಥೆ ಹಾಗೂ ಪರೀಕ್ಷಾ ಕೇಂದ್ರಗಳಿಗೆ ಪೊಲೀಸ್ ಭದ್ರತಾ ವ್ಯವಸ್ಥೆ ಮಾಡಿರುವ ಕುರಿತು ಸಮಗ್ರ ಪರಿಶೀಲನೆ ನಡೆಸಿದ ಅವರು, ಪರೀಕ್ಷಾ…

Read More

ಸಶಸ್ತ್ರ ಪಡೆಗಳ ಧ್ವಜ ನಿಧಿ ಸಂಗ್ರಹದಲ್ಲಿ ವಿಜಯಪುರ ಜಿಲ್ಲೆಗೆ ಪ್ರಶಸ್ತಿ ಗರಿ

ಸಪ್ತಸಾಗರ ವಾರ್ತೆ,ವಿಜಯಪುರ,ಡಿ.7:2022ನೇ ಸಾಲಿನಲ್ಲಿ ಜಿಲ್ಲೆಗೆ ನಿಗದಿಪಡಿಸಿದ ಗುರಿಗಿಂತ ಅತಿ ಹೆಚ್ಚು ಸಶಸ್ತ್ರ ಪಡೆಗಳ ಧ್ವಜ ನಿಧಿ ಸಂಗ್ರಹ ಮಾಡಿದ ಹೆಗ್ಗಳಿಕೆಗೆ ವಿಜಯಪುರ ಜಿಲ್ಲೆಯು ಪ್ರಶಸ್ತಿಗೆ ಭಾಜನವಾಗಿದ್ದು, ಸಶಸ್ತ್ರ ಪಡೆಗಳ ದ್ವಜ ದಿನಾಚರಣೆ ಅಂಗವಾಗಿ ಬೆಂಗಳೂರಿನ ರಾಜಭವನದಲ್ಲಿ ಡಿಸೆಂಬರ್ 7ರಂದು ನಡೆದ ಸಮಾರಂಭದಲ್ಲಿ ಆಹಾರ ಇಲಾಖೆಯ ಉಪ ನಿರ್ದೇಶಕರೂ ಆದ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರೂ ಆದ ವಿನಯಕುಮಾರ ಪಾಟೀಲ ಅವರು ಗೃಹ ಸಚಿವರಾದ ಡಾ.ಜಿ.ಪರಮೇಶ್ವರ ಅವರಿಂದ ಪ್ರಶಸ್ತಿ ಸ್ವೀಕರಿಸಿದರು.ಕಳೆದ ವರ್ಷವೂ ಕೂಡಾ ವಿಜಯಪುರ ಜಿಲ್ಲೆಗೆ…

Read More

ವಿಜಯಪುರದಲ್ಲಿ ಚಳಿ ಲೆಕ್ಕಿಸದೇ ಓಡಿದ ಓಟಗಾರರು….!

ಸಪ್ತಸಾಗರ ವಾರ್ತೆ ವಿಜಯಪುರ, ಡಿ. 7 :ಮೈ ಕೊರೆವ ಚಳಿ ಲೆಕ್ಕಿಸದೇ ನೂರಾರು ಓಟಗಾರರು ವಿಜಯಪುರದ ಪ್ರಮುಖ ಬೀದಿಗಳಲ್ಲಿ ಭಾನುವಾರ ಬೆಳ್ಳಂಬೆಳಗ್ಗೆಓಡುವ ಮೂಲಕ ಜನರಲ್ಲಿ ಪರಿಸರ ಜಾಗೃತಿ ಮೂಡಿಸಿದರು.ಪರಿಸರ ರಕ್ಷಣೆಯ ಧ್ಯೇಯದೊಂದಿಗೆ ನಡೆದ ಮ್ಯಾರಾಥಾನ್ ಯಶಸ್ವಿಯಾಗಿ ನಡೆಯಿತು.ಡಾ.ಬಿ.ಆರ್. ಅಂಬೇಡ್ಕರ ಜಿಲ್ಲಾ ಕ್ರೀಡಾಂಗಣದಿಂದ ಆರಂಭಗೊಂಡ ಮ್ಯಾರಾಥಾನ್‌ನಲ್ಲಿ ಪರಿಸರ ರಕ್ಷಣೆಯ ಕಾಳಜಿಯ ರಣ ಕಹಳೆ ಮೊಳಗಿತು.ಎಲ್ಲೆಡೆ ಹಳದಿ ವರ್ಣದ ಟೀ-ಶರ್ಟ್ ಧರಿಸಿ ಉತ್ಸಾಹದಿಂದ ಓಟದಲ್ಲಿ ಪಾಲ್ಗೊಂಡ ಯುವಕರ, ಹಿರಿಯ ದಂಡು ಕಂಡು ಬಂದಿತು. ಓಡು…ಓಡು….ಪರಿಸರಕ್ಕಾಗಿ ಓಡು ಎಂಬ ದಿವ್ಯ ಸಂದೇಶದೊಂದಿಗೆ…

Read More

2030 ರೊಳಗೆ 2.5 ಲಕ್ಷ ಮನೆಗಳಿಗೆ ಸಿ.ಎನ್.ಜಿ ಗ್ಯಾಸ್ ಸಂಪರ್ಕ ಗುರಿ: ಯತ್ನಾಳ

ಸಪ್ತಸಾಗರ ವಾರ್ತೆ ವಿಜಯಪುರ, ಡಿ. 6: ಮನೆಗಳಿಗೆ ನೇರವಾಗಿ ಸಿ.ಎನ್.ಜಿ ಸರಬರಾಜು ಮಾಡಿ, ನಗರವನ್ನು ಮಾಲಿನ್ಯ ಮುಕ್ತವಾಗಿಡುವ ಬಹಳ ದಿನಗಳ ಕನಸು ಥಿಂಕ್ ಗ್ಯಾಸ್ ಸಿ.ಎನ್.ಸಿ ಮೂಲಕ ನಡೆಯುತ್ತಿದೆ. 2030 ರೊಳಗೆ 2.5 ಲಕ್ಷ ಮನೆಗಳಿಗೆ ನೇರವಾಗಿ ಪಿ.ಎನ್.ಜಿ ಗ್ಯಾಸ್ ಸಂಪರ್ಕ ನೀಡುವ ಗುರಿ ಹೊಂದಲಾಗಿದೆ ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ರವರು ತಿಳಿಸಿದರು.ನಗರದಲ್ಲಿ ಶುಕ್ರವಾರ ಥಿಂಕ್ ಗ್ಯಾಸ್ ಸಿ.ಎನ್.ಜಿ ಸ್ಟೇಶನ್ ಉದ್ಘಾಟಿಸಿ ಮಾತನಾಡಿದ ಅವರು, ಈಗಾಗಲೇ ವಿಜಯಪುರ ನಗರದಲ್ಲಿ 120 ಮನೆಗಳು ಮತ್ತು…

Read More

ಭೂಮಿ ಉಳಿದರೆ ಮನುಸಂಕುಲ ಉಳಿಯಲು ಸಾದ್ಯ

ಸಪ್ತಸಾಗರ ವಾರ್ತೆ ವಿಜಯಪುರ, ಡಿ.6: ಭೂಮಿ ಉಳಿದರೆ ಮನುಸಂಕುಲ ಉಳಿಯಲು ಸಾಧ್ಯ. ಉತ್ತಮ ಪರಿಸರದಿಂದಲೇ ಉತ್ತಮ ಆರೋಗ್ಯ ಹೊಂದಬಹುದು. ನಮ್ಮ ಸುತ್ತಮುತ್ತಲಿನ ಪರಿಸರ ನಮ್ಮ ನಡವಳಿಕೆ ಹಾಗೂ ವಿಚಾರಗಳ ಮೇಲೆ ಸಾಕಷ್ಟು ಪರಿಣಾಮ ಬೀರುತ್ತದೆ ಎಂದು ಚಿಂತಕರು, ಇತಿಹಾಸ ತಜ್ಞರು, ಹಿರಿಯ ಅಧಿಕಾರಿಗಳು, ಪರಿಸರ ಪ್ರೇಮಿಗಳು ಹೇಳಿದ್ದಾರೆ.ವೃ,ಕ್ಷಥಾನ್ ಹೆರಿಟೇಜ್ ರನ್-2025ರ ಮುನ್ನಾ ದಿನವಾದ ಇಂದು ಶನಿವಾರ ನಗರದ ಡಾ. ಬಿ. ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ನಾನಾ ಚರ್ಚಾಗೋಷ್ಠಿಯಲ್ಲಿ ಮಾತನಾಡಿದ ಗಣ್ಯರು ಪರಿಸರ ಸಂರಕ್ಷಣೆ, ಪ್ರಾಚೀನ…

Read More

7 ಜನ ಕೊಲೆ ಆರೋಪಿತರಿಗೆ ಜೀವಾವಧಿ ಶಿಕ್ಷೆ ಹಾಗೂ ತಲಾ 50,000 ರೂ. ದಂಡ

ಸಪ್ತಸಾಗರ ವಾರ್ತೆ ವಿಜಯಪುರ, ಡಿ. 6:ಜಿಲ್ಲೆಯ ಸಿಂದಗಿ ತಾಲೂಕಿನ ಕೋರವಾರದಲ್ಲಿ ನಡೆದ ಭೀಮನಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಏಳು ಜನ ಆರೋಪಿತರಿಗೆ ಜೀವಾವದಧಿ ಶಿಕ್ಷೆ ಹಾಗೂ ತಲಾ ಐವತ್ತು ಸಾವಿರ ರೂಪಾಯಿ ದಂಡ ವಿಧಿಸಿ 4ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.ಮನೆ ಮುಂದಿನ ಖುಲ್ಲಾ ಜಾಗೆ ಸಲುವಾಗಿ ದಾಯಾದಿಗಳ ಮಧ್ಯೆ ಮೇಲಿಂದ ಮೇಲೆ ಕಲಹ ಉಂಟಾಗುತ್ತಿತ್ತು. 9-10-2013ರಂದು ಈ ಸಂಬಂಧ ಕಲಹ ವಿಕೋಪಕ್ಕೆ ಹೋಗಿ ಭೀಮನಗೌಡ ನಿಂಗನಗೌಡ ಪಾಟೀಲ ಹಾಗೂ ಆತನ ಸಹೋದರರಾದ…

Read More

ಮಕ್ಕಳ ಸರ್ವಾರ್ಗೀಣ ಅಭಿವೃದ್ದಿಗೆ ಕ್ರಮ ವಹಿಸಲು ಶಶಿಧರ ಕೋಸಂಬೆ ಸೂಚನೆ

ಸಪ್ತಸಾಗರ ವಾರ್ತೆ, ವಿಜಯಪುರ ಡಿ.6: ಮಕ್ಕಳ ಸರ್ವಾಂಗಿಣ ವ್ಯಕ್ತಿತ್ವದ ಬೆಳವಣಿಗೆಗಾಗಿ ಶಿಕ್ಷಣ ಇಲಾಖೆಯೊಂದಿಗೆ ಎಲ್ಲ ಇಲಾಖಾಧಿಕಾರಿಗಳು ಸಮನ್ವಯತೆಯಿಂದ ಕಾರ್ಯ ನಿರ್ವಹಿಸಿ ಮಕ್ಕಳಿಗೆ ದೊರಬೇಕಾದ ಸೌಲಭ್ಯಗಳನ್ನು ಒದಗಿಸಲು ಕ್ರಮ ವಹಿಸುವಂತೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಶಶಿಧರ ಕೋಸಂಬೆ ಹೇಳಿದರು.ಶನಿವಾರ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಮತ್ತು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಹಯೋಗದಲ್ಲಿ ಹಮ್ಮಿಕೊಂಡ ಉಚಿತ ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆ ಕುರಿತ…

Read More

ರಾಷ್ಟ್ರೀಯ ಆರೋಗ್ಯ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಶ್ರಮಿಸಿ : ಜಿಪಂ ಸಿಇಒ ರಿಷಿ ಆನಂದ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 6:ಜಿಲ್ಲೆಯಲ್ಲಿರುವ ಎಲ್ಲ ಗರ್ಭಿಣಿ ಮಹಿಳೆಯರ ಮಾಹಿತಿಯನ್ನು ಆರ್.ಸಿ.ಹೆಚ್. ತಂತ್ರಾಂಶದಲ್ಲಿ ಕಡ್ಡಾಯವಾಗಿ ನಿಗದಿತ ಸಮಯದಲ್ಲಿ ನೋಂದಣಿ ಮಾಡಬೇಕು ಹಾಗೂ ನಿಯಮಿತವಾಗಿ ಆರೋಗ್ಯ ತಪಾಸಣೆಯನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಿಷಿ ಆನಂದ ಅವರು ಸೂಚನೆ ನೀಡಿದರು.ಶುಕ್ರವಾರ ನಗರದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಆರೋಗ್ಯ ಸಂಘದ ಕಾರ್ಯಕಾರಿಣಿ ಸಭೆಯ ಅಧ್ಯಕ್ಷತೆ ವಹಿಸಿ, ಆರೋಗ್ಯ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ನಡೆಸಿದ ಅವರು, ಯಾವುದೇ…

Read More