ಆರೋಗ್ಯಕ್ಕೆ ಅಕ್ಕಡಿ ಕಾಳು ಸೇವನೆ ಅಗತ್ಯ: ತೊಗರಿಯಲ್ಲಿ ಉತ್ಪಾದನಾ ತಾಂತ್ರಿಕತೆಗಳ ಕಾರ್ಯಾಗಾರ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ 16:ಆಹಾರ ಪದ್ಧತಿಯಲ್ಲಿ ದ್ವಿದಳ ಧಾನ್ಯಗಳಿಗೆ ಅಗ್ರಸ್ಥಾನವಿದೆ. ಅಕ್ಕಡಿ‌ ಕಾಳಿಲ್ಲದ ಊಟಿಲ್ಲ, ಅಷ್ಟರ ಮಟ್ಟಿಗೆ ತೊಗರಿಯೂ ನಮ್ಮ ನಿತ್ಯದ ಜೀವನದಲ್ಲಿ ಹಾಸುಹೊಕ್ಕಾಗಿದೆ. ಅವು ನಮ್ಮ ‌ಜೀವನಕ್ಕೆ ಬೇಕಾದ ಪೋಷಕಾಂಶ ನೀಡುತ್ತವೆ ಎಂದು ಧಾರವಾಡ ಕೃಷಿ ವಿಶ್ವವಿದ್ಯಾಲಯದ ಉಪ ಕುಲಪತಿಗಳಾದ ಪಿ.ಎಲ್‌ ಪಾಟೀಲ ಹೇಳಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೃಷಿ ಇಲಾಖೆ, ಧಾರವಾಡ ಕೃಷಿ ವಿಶ್ವವಿದ್ಯಾಲಯ, ವಿಜಯಪುರದ ಕೃಷಿ ತಂತ್ರಜ್ಞರ ಸಂಸ್ಥೆ, ಮತ್ತು ಜಿಲ್ಲಾ ಕೃಷಿಕ ಸಮಾಜದ ಸಹಯೋಗದಲ್ಲಿ ಹಿಟ್ನಳ್ಳಿ ಕೃಷಿ ಮಹಾವಿದ್ಯಾಲಯದ ಸಭಾಂಗಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ…

Read More

17ರಿಂದ 23ರ ವರೆಗೆ ಗುಮ್ಮಟನಗರಿಯಲ್ಲಿ ಬ್ಯಾಡ್ಮಿಂಟನ್‌ ಪಂದ್ಯ: 7 ದಿನಗಳವರೆಗೆ ಕ್ರೀಡಾ ಪ್ರೇಮಿಗಳಿಗೆ ಬ್ಯಾಡ್ಮಿಂಟನ್ ಆಕ್ಷನ್ ರಸದೌತಣ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ 16:ಕರ್ನಾಟಕ ಬ್ಯಾಡ್ಮಿಂಟನ್ ಅಸೋಸಿಯೇಷನ್ (KBA) ಅಧಿಕೃತ ಮಾನ್ಯತೆಯೊಂದಿಗೆ, ಯೋನೆಕ್ಸ್ ಸನ್‌ರೈಸ್ ಪ್ರಾಯೋಜಕತ್ವದಲ್ಲಿ ರಾಜ್ಯ ಮಟ್ಟದ ಯು-15 ಮತ್ತು ಯು-17 ಬ್ಯಾಡ್ಮಿಂಟನ್ ಪಂದ್ಯಾವಳಿ-2026 ಮೇ 17 ರಿಂದ ಮೇ 23 ರವರೆಗೆ ಐತಿಹಾಸಿಕ ನಗರಿ ವಿಜಯಪುರದಲ್ಲಿ ಅದ್ಧೂರಿಯಾಗಿ ನಡೆಯಲಿದೆ ಎಂದು ಬ್ಯಾಡ್ಮಿಂಟನ್‌ ಅಸೋಸಿಯೇಶನ್‌ ಅಧ್ಯಕ್ಷ ಹಾಗೂ ಮಾಜಿ ಸಚಿವ ಕುಮಾರ ಬಂಗಾರಪ್ಪ ತಿಳಿಸಿದರು.ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕದಾದ್ಯಂತ ಇರುವ ಉದಯೋನ್ಮುಖ ಹಾಗೂ ಖ್ಯಾತ ಬ್ಯಾಡ್ಮಿಂಟನ್ ಆಟಗಾರರು ತಮ್ಮ ಕೌಶಲ್ಯ ಪ್ರದರ್ಶಿಸಲು ವಿಜಯಪುರಕ್ಕೆ ಲಗ್ಗೆ…

Read More

ಮನೆಗೊಂದು ಗ್ರಂಥಾಲಯ ಕಾರ್ಯಕ್ರಮ ಜ್ಞಾನಪ್ರಸಾರದಮಾಧ್ಯಮ: ಡಾ. ಕುಶಾಲ ಬರಗೂರು ಅಭಿಮತ

ಸಪ್ತಸಾಗರ ವಾರ್ತೆ, ವಿಜಯಪುರ, ಮೇ. 16:ಕರ್ನಾಟಕ ಸರ್ಕಾರದ ಕನ್ನಡ ಪುಸ್ತಕ ಪ್ರಾಧಿಕಾರದ ಮಹತ್ವಾಕಾಂಕ್ಷಿ ಯೋಜನೆ ಮನೆಗೊಂದು ಗ್ರಂಥಾಲಯ ಅನುಷ್ಠಾನಕಾರ್ಯಕ್ರಮ ರಾಜ್ಯವ್ಯಾಪಿ ಶರವೇಗದಲ್ಲಿ ನಡೆಯುತ್ತಿದೆ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ರಾಜ್ಯ ಸದಸ್ಯ ಡಾ. ಕುಶಾಲ್ ಬರಗೂರು ಹೇಳಿದರು.ವಿಜಯಪುರದ ಗಣೇಶ ನಗರ ಬಡಾವಣೆಯ ಶಿಕ್ಷಕ ಸಾಹಿತಿಸಿದ್ದನಗೌಡ ಪೊಲೀಸಪಾಟೀಲ ಅವರ ನಿವಾಸದಲ್ಲಿ ಮನೆಗೊಂದುಗ್ರಂಥಾಲಯ ಅನುಷ್ಠಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರುಮಾತನಾಡಿದರು.ರಾಜ್ಯದ ಒಂದು ಲಕ್ಷಕ್ಕೂ ಅಧಿಕ ಮನೆಯಲ್ಲಿ ಗ್ರಂಥಾಲಯವನ್ನು ಸ್ಥಾಪಿಸುವ ಗುರಿಯನ್ನು ಪ್ರಾಧಿಕಾರ ಹೊಂದಿದೆ. ಇದು ಬೇರೆ ಬೇರೆ ರಾಜ್ಯಗಳಿಗಷ್ಟೇ ಅಲ್ಲ. ಅಂತರಾಷ್ಟ್ರೀಯ…

Read More

ಎಸ್.ವಿ. ಬುರ್ಲಿ ಹಾಗೂ ಜಯಶ್ರೀ ಬುರ್ಲಿ ಇವರಿಗೆ ಜೀವಮಾನದ ಅಂತರಾಷ್ಟ್ರೀಯ ಫೆಲೋಷಿಪ್-26 ಪ್ರಶಸ್ತಿ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ. 15:ಜಿಲ್ಲೆಯ ರಾಜ್ಯ ಪ್ರಶಸ್ತಿ ಪುರಸ್ಕೃತರು, ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತಿನ ಜಿಲ್ಲಾಧ್ಯಕ್ಷರು ನ್ಯಾಷನಲ್ ಕೌನ್ಸಿಲ್ ಆಫ್ ಟೀಚರ್ ಸೈಂಟಿಸ್ಟ್ ಇಂಡಿಯಾದ ನ್ಯಾಷನಲ್ ಡೈರೆಕ್ಟರ್ ಹಾಗೂ ನಿವೃತ್ತ ಮುಖ್ಯೋಪಾಧ್ಯಾಯ ಎಸ್.ವಿ. ಬುರ್ಲಿ ಇವರಿಗೆ ಹಾಗೂ ಜಯಶ್ರೀ ಬುರ್ಲಿ ಜೀವಶಾಸ್ತ್ರಉಪನ್ಯಾಸಕಿ ಇವರಿಗೆ ಇಂಡೋ–ನಾಮ್ ಸೈಂಟಿಫಿಕ್‌ ಸಮ್ಮಿತ್ -26 ಫೆಲೋ ಶಿಪ್ ಪ್ರಶಸ್ತಿ ಘೋಷಿಸಲಾಗಿದೆ.ಮೇ 17 ರಿಂದ22 ರವರೆಗೆ ವಿಯೆಟ್ನಾಂನ ಡನಾಂಗ್ ದಲ್ಲಿ ನಡೆಯಲಿರುವ ಅಂತರಾಷ್ಟ್ರೀಯ ವೈಜ್ಞಾನಿಕ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಗುವುದು ಎಂದು ಕರ್ನಾಟಕ…

Read More

ಗಾನಗಂಗೋತ್ರಿ ಗಾಯನ: ವಿದ್ಯಾಶ್ರೀ ನಡುಗಡ್ಡಿ ಆಯ್ಕೆ

ಸಪ್ತಸಾಗರ ವಾರ್ತೆ, ಇಂಡಿ, ಮೇ 15: ಬೆಂಗಳೂರಿನ ಭಾರತರತ್ನ ಸರ್ ಎಂ ವಿಶ್ವೇಶ್ವರಯ್ಯ ಎಂಜಿನಿಯರಿಂಗ್ ಪ್ರತಿಷ್ಠಾನ ಟ್ರಸ್ಟ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕರ್ನಾಟಕ ಸರ್ಕಾರ ಇವರ ಸಹಯೋಗದಲ್ಲಿ 11 ನೇ ರಾಷ್ಟ್ರೀಯ ನೃತ್ಯ ಕಲಾ ಮೇಳ ಹಾಗೂ 75 ನೇ ರಾಜ್ಯ ಮಟ್ಟದ ಸಾಂಸ್ಕೃತಿಕ ಕಲಾ ಪ್ರತಿಭೋತ್ಸವ ಕಾರ್ಯಕ್ರಮವನ್ನು ಇದೇ ಮೇ 23,24 ರಂದು ಬೆಂಗಳೂರಿನ ಸಂಸ ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ.ಈ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಕವನ ವಾಚನ, ನೃತ್ಯಾoಜಲಿ, ಸಮೂಹ ನೃತ್ಯ ಪ್ರದರ್ಶನ ಹಾಗೂ…

Read More

ಟಿಕೆಟ್ ಗಿಟ್ಟಿಸಿಕೊಳ್ಳಲು ಯತ್ನಾಳ ಹೊಸ ಪಕ್ಷದ ಬ್ಲಾಕ್ ಮೇಲ್: ಯತ್ನಾಳಗೆ ಸಚಿವ ಎಂಬಿಪಿ ಟಾಂಗ್

ಸಪ್ತಸಾಗರ ವಾರ್ತೆ,ವಿಜಯಪುರ, ಮೇ. 15 :ಶಾಸಕ ಯತ್ನಾಳರಿಗೆ ಬಿಜೆಪಿ ವ್ಯಾಮೋಹ ಹೋಗಿಲ್ಲ. ಬಿಜೆಪಿ ಟಿಕೆಟ್ ಗಿಟ್ಟಿಸಿಕೊಳ್ಳಲು ಈ ರೀತಿ ಹೊಸ ಪಕ್ಷದ ಬ್ಲಾಕ್ ಮೇಲ್ ಮಾಡುತ್ತಿದ್ದಾರೆ. ಅವರು ಹೊಸ ಪಕ್ಷ ಕಟ್ಟುವುದೇ ಇಲ್ಲ ಬಿಡಿ ಎಂದು ಸಚಿವ ಡಾ.ಎಂ.ಬಿ. ಪಾಟೀಲ ಹೇಳಿದರು.ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯತ್ನಾಳ ಅವರು ನಗರ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಗಿಟ್ಟಿಸಿಕೊಳ್ಳಲು ಈ ಪ್ರಯತ್ನ ಅಲ್ಲ. ಬ್ಲಾಕ್ ಮೇಲ್ ಮಾಡುತ್ತಿದ್ದಾರೆ. ಬೇಕಾದರೆ ಯತ್ನಾಳರು ಪಕ್ಷ ಕಟ್ಟಲಿ ಅದಕ್ಕೆ ಶುಭವಾಗಲಿ. ಅವರು ತಮಿಳುನಾಡಿನ…

Read More

ಅಕ್ರಮ ವಾಣಿಜ್ಯ ಚಟುವಟಿಕೆ ನಡೆಸಿದರೆ‌ ಪಾಲಿಕೆಯಿಂದ‌ ಕಠಿಣ ಕ್ರಮದ ಎಚ್ಚರಿಕೆ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ 15:ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಅಕ್ರಮ ವಾಣಿಜ್ಯ ಚಟುವಟಿಕೆ ನಡೆಸುವ ಮೂಲಕ ಯಾವುದಾದರೂ ಅನಾಹುತ ಸಂಭವಿಸಿದಲ್ಲಿ ಅಂತಹರನ್ನು ನೇರ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಮಹಾನಗರ ಪಾಲಿಕೆ ಆಯುಕ್ತ ವಿಜಯ ಮೆಕ್ಕಳಕಿ ತಿಳಿಸಿದ್ದಾರೆ.ಮಹಾನಗರ ಪಾಲಿಕೆ ವ್ಯಾಪ್ತಿಯ ಸಾರ್ವಜನಿಕ ಜಾಗೆಗಳು, ಕಟ್ಟಡಗಳ ನೆಲ ಮಹಡಿ, ವಾಹನ ನಿಲುಗಡೆಗೆ ಕಾಯ್ದಿರಿಸಿದ ಜಾಗೆಗಳು. ಪಾದಚಾರಿ ಮಾರ್ಗಗಳು ಹಾಗೂ ಇತರೆ ಸ್ಥಳಗಳಲ್ಲಿ ಅಕ್ರಮ ವಾಣಿಜ್ಯ ಚಟುವಟಿಕೆಗಳು ನಡೆಯುತ್ತಿವೆ. ಅಕ್ರಮ ಚಟುವಟಿಕೆದಾರರು ಯಾವುದೇ ಪರವಾನಿಗೆ ಪಡೆಯದೇ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳದೇ ಅನಧಿಕೃತ ವ್ಯವಹಾರ…

Read More

ನಮ್ಮನ್ನು ಟೀಕೆ ಮಾಡದಿದ್ದರೆ ಕುಮಾರಸ್ವಾಮಿ ರಾಜಕೀಯವಾಗಿ ಬದುಕಲು ಸಾಧ್ಯವಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಸಪ್ತಸಾಗರ ವಾರ್ತೆ, ಬೆಂಗಳೂರು, ಮೇ 15: “ಕುಮಾರಸ್ವಾಮಿ ಅವರು ನಮ್ಮ ಬಗ್ಗೆ ಟೀಕೆ ಮಾಡಲಿಲ್ಲ ಎಂದರೆ ರಾಜಕೀಯವಾಗಿ ಬದುಕಿರಲು ಆಗುವುದಿಲ್ಲ. ನಾವು ಒಳ್ಳೆಯ ಕೆಲಸ ಮಾಡುತ್ತೇವೆ, ಅವರು ವಿರೋಧ ಮಾಡುತ್ತಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು.ಸದಾಶಿವನಗರದ ನಿವಾಸದ ಬಳಿ ಅವರು ಶುಕ್ರವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.ಕುಮಾರಸ್ವಾಮಿ ಅವರು ಬಿಡದಿ ಟೌನ್ ಶಿಪ್ ಯೋಜನೆಯ ಬಗ್ಗೆ ಟೀಕೆ ವ್ಯಕ್ತಪಡಿಸಿರುವ ಬಗ್ಗೆ ಕೇಳಿದಾಗ, “ಅವರು ಮಾಡಿದ ಯೋಜನೆಯನ್ನೇ ನಾವು ಮುಂದುವರೆಸುತ್ತಾ ಇರುವುದು. ನಾನು ರೈತರ ಬಳಿ ಮಾತನಾಡಲು…

Read More

ಮೇಲ್ಚಾವಣಿ ಕುಸಿತ ಪ್ರಕರಣ: ಬದುಕುಳಿದ ಎರಡು ಜೀವ- ಸಚಿವ ಎಂ. ಬಿ. ಪಾಟೀಲ್ ಭೇಟಿ ತಲಾ 5 ಲಕ್ಷ ಪರಿಹಾರ ಘೋಷಣೆ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ. 15: ಆಲಮೇಲ‌ ತಾಲೂಕಿನ ಮೊರಟಗಿ ಗ್ರಾಮದಲ್ಲಿ ಮನೆಯ ಮೇಲ್ಛಾವಣಿ ಕುಸಿದು ಸಾವಿಗೀಡಾದವರ ನಾಲ್ಕು ಜನರು ಸಾವಿಗೀಡಾದ ಘಟನಾ ಸ್ಥಳಕ್ಕೆ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ‌ ಅವರು ಇಂದು ಶುಕ್ರವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಜಿಲ್ಲಾಧಿಕಾರಿ ಡಾ. ಆನಂದ ಕೆ., ಎಸ್ಪಿ ಲಕ್ಷ್ಮಣ ನಿಂಬರಗಿ ಹಾಗೂ ಜಿ. ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಿಷಿ ಆನಂದ ಅವರು ಸಚಿವರಿಗೆ ಘಟನೆಯ ಬಗ್ಗೆ…

Read More

ಮೋರಟಗಿಯಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ:ಮನೆ ಮೇಲ್ಚಾವಣಿ ಕುಸಿದು ನಾಲ್ವರು ಜೀವಂತ ಸಮಾಧಿ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ. 15:ಭಾರೀ ಗಾಳಿ ಸಹಿತ‌ ಮಳೆಗೆ ಮನೆಯ ಮೇಲ್ಚಾವಣೆ ಕುಸಿದು ಒಂದೇ ಕುಟುಂಬದ ನಾಲ್ವರು ಜೀವಂತ ಸಮಾಧಿಯಾಗಿರುವ ದುರಂತ ಜಿಲ್ಲೆಯ ಆಲಮೇಲ ತಾಲೂಕಿನ ಮೋರಟಗಿಯಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ.ಈ ದುರಂತದಲ್ಲಿ ಪತಿ, ಪತ್ನಿ ಹಾಗೂ ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ.ಮೋರಟಗಿ ಗ್ರಾಮದ ಗುರುನಾಥ ಬಡಿಗೇರ (35), ಜ್ಯೋತಿ ಬಡಿಗೇರ (28), ಕಾಳಮ್ಮ ಬಡಿಗೇರ (13), ಕೀರ್ತಿ ಬಡಿಗೇರ (9) ಮೃತಪಟ್ಟ ನತದೃಷ್ಟರು.ತಮ್ಮ ಮನೆಯನ್ನು ದುರಸ್ತಿ ಮಾಡುವ ಕಾರಣ ಹಳೆಯ ಮನೆಯಲ್ಲಿ ಈ ಕುಟುಂಬ ಬಾಡಿಗೆಯಿಂದ ವಾಸವಾಗಿತ್ತು.ನಿನ್ನೆ…

Read More