ಉಪರಾಷ್ಟ್ರಪತಿಚುನಾವಣೆ; ನಮ್ಮಅಭ್ಯರ್ಥಿಪರವಾಗಿಆತ್ಮಸಾಕ್ಷಿಯಮತಗಳನ್ನುಕೇಳಿದ್ದೇವೆ: ಡಿಸಿಎಂಡಿ.ಕೆ.ಶಿವಕುಮಾರ್

ಸಪ್ತಸಾಗರ ವಾರ್ತೆ, ಕೊಯಮತ್ತೂರು, ಸೆ.9:ಇಂಡಿಯಾ ಒಕ್ಕೂಟ ಒಟ್ಟಾಗಿ ಉಪ ರಾಷ್ಟ್ರಪತಿ ಚುನಾವಣೆ ಎದುರಿಸಲಿದೆ. ನಾವು ಆತ್ಮಸಾಕ್ಷಿಯ ಮತಗಳನ್ನು ಕೋರಿದ್ದೇವೆ. ಇಂಡಿಯಾ ಒಕ್ಕೂಟ ಮತ್ತು ವಿರೋಧ ಪಕ್ಷಗಳು ಎನ್ಡಿಎ ಅಭ್ಯರ್ಥಿ ಸಿ.ಪಿ ರಾಧಾಕೃಷ್ಣನ್ ವಿರುದ್ಧ ಮತ ಚಲಾಯಿಸುತ್ತವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.ತಮಿಳುನಾಡಿನ ಕೊಯಮತ್ತೂರು ವಿಮಾನ ನಿಲ್ದಾಣದಲ್ಲಿ ಮಂಗಳವಾರ ಉಪರಾಷ್ಟ್ರಪತಿ ಚುನಾವಣೆಯ ಬಗ್ಗೆ ಕೇಳಿದಾಗ ಡಿಸಿಎಂ ಅವರು ಹೀಗೆ ಉತ್ತರಿಸಿದರು.ಉಪರಾಷ್ಟ್ರಪತಿ ಚುನಾವಣೆಯಲ್ಲಿ ಅಡ್ಡ ಮತದಾನವಾಗುವ ಸಾಧ್ಯತೆ ಇದೆಯೇ ಎಂದು ಕೇಳಿದಾಗ, ನಾನು ಆತ್ಮಸಾಕ್ಷಿಯ ಮತಗಳ ಬಗ್ಗೆ ನಂಬಿಕೆಯಿಟ್ಟಿದ್ದೇನೆ….

Read More

ಧರ್ಮಸ್ಥಳ ಯೋಜನೆಯ ಒಕ್ಕೂಟ ಪದಾಧಿಕಾರಿಗಳ ಮಾಹಿತಿ ಕಾರ್ಯಾಗಾರ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 9: ಜಿಲ್ಲೆಯ ತಾಳಿಕೋಟೆಯ ವಿಠ್ಠಲ್ ಮಂದಿರದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮುದ್ದೇಬಿಹಾಳ ತಾಲ್ಲೂಕಿನ ಗಣೇಶನಗರ ವಲಯದ 10 ಒಕ್ಕೂಟದ ಪದಾಧಿಕಾರಿಗಳಿಗೆ ಒಂದು ದಿನದ ವಿಶೇಷ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು.ಜಿಲ್ಲಾ ನಿರ್ದೇಶಕ ಸಂತೋಷ ಕುಮಾರ ಅವರು ಕಾರ್ಯಾಗಾರ ಉದ್ಘಾಟಿಸಿದರು.ವಲಯ ಮಟ್ಟದಲ್ಲಿ 25 ರಿಂದ 30 ತಂಡಗಳನ್ನು ಒಳಗೊಂಡಂತೆ ಒಂದು ಒಕ್ಕೂಟದಂತೆ 10 ಒಕ್ಕೂಟಗಳು ಕಾರ್ಯ ನಿರ್ವಹಿಸುತ್ತಿದ್ದು. 10 ಒಕ್ಕೂಟದಿಂದ 50 ಜನ ಪದಾಧಿಕಾರಿಗಳು ಈ ತರಬೇತಿ ಕಾರ್ಯಗಾರದಲ್ಲಿ ಭಾಗವಹಿಸಿದ್ದರು.ವಿಜಯಪುರ ಜಿಲ್ಲಾ ನಿರ್ದೇಶಕ…

Read More

ತೆಲಂಗಾಣದ ಮಾಂಗಳ್ಯ ಮಾಲ್ ಗುಮ್ಮಟ ನಗರಿಯಲ್ಲೂ ಆರಂಭ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 8 : ಐತಿಹಾಸಿಕ ವಿಜಯಪುರ ಮಹಾನಗರದಲ್ಲಿತೆಲಂಗಾಣದ ವಾರಂಗಲ್‌ ಮೂಲದ ಮಾಂಗಳ್ಯ ಶಾಪಿಂಗ್ ಮಾಲ್ ತನ್ನ ಶಾಖೆಯನ್ನು ಆರಂಭಿಸಿದ್ದು ಅದ್ಧೂರಿ ಚಾಲನೆ ಪಡೆದಿದೆ. ಜವಳಿ, ಸಕ್ಕರೆ, ಕಬ್ಬು ಅಭಿವೃದ್ಧಿ, ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ ಹಾಗೂ ಕನ್ನಡ ಚಲನಚಿತ್ರದ ಪ್ರಖ್ಯಾತ ನಟಿ ಆಶಿಕಾ ರಂಗನಾಥ ಜ್ಯೊತಿ ಬೆಳಗಿಸಿ ಚಾಲನೆ ನೀಡಿದರು.ತೆಲಂಗಾಣ ರಾಜ್ಯದ ವಾರಂಗಲ್ ಮೂಲದ ಮಾಂಗಳ್ಯ ಶಾಪಿಂಗ್ ಮಾಲ್ 2012 ರಲ್ಲಿ ಆರಂಭಗೊಂಡು ವಿವಿಧ ಮಹಾನಗರದಲ್ಲಿ ತನ್ನ 24 ಶಾಖೆಗಳನ್ನು ತೆರೆದಿದೆ….

Read More

ಗೃಹ ಬಳಕೆ ಸಿಲಿಂಡರ್ ಅನಧಿಕೃತ ರಿಫಿಲಿಂಗ್ : ಆಹಾರ ಇಲಾಖೆ ದಾಳಿ, ಸಿಲಿಂಡರ್ ವಶಕ್ಕೆ

ಸಪ್ತಸಾಗರ ವಾರ್ತೆ ವಿಜಯಪುರ, ಸೆ.8: ಗೃಹ ಬಳಕೆಯ ಸಿಲಿಂಡರ್ ಗಳಿಂದ ಅನಧಿಕೃತವಾಗಿ ರಿಫಿಲಿಂಗ್ ಮಾಡುತ್ತಿರುವ ಸ್ಥಳಕ್ಕೆ ಆಹಾರ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ, 31920 ರೂ. ಮೌಲ್ಯದ ಒಟ್ಟು 10 ಹೆಚ್‍ಪಿ ಕಂಪನಿ ಸಿಲಿಂಡರ್ ಗಳನ್ನು ವಶಪಡಿಸಿಕೊಂಡಿದ್ದಾರೆ.ವಿಜಯಪುರ ನಗರದ ಇಬ್ರಾಹಿಂ ರೋಜಾ ಹತ್ತಿರದಲ್ಲಿ ಪತ್ರಾಸ ಶೆಡ್‍ನಲ್ಲಿ ಹಾಗೂ ನಗರದ ಬಾಗಲಕೋಟೆ ಕ್ರಾಸ್ ಹತ್ತಿರದ ಒಂದು ಪತ್ರಾಸ್ ಶೆಡ್‍ನಲ್ಲಿ ಅನಧಿಕೃತವಾಗಿ ಗೃಹ ಬಳಕೆ ಎಲ್‍ಪಿಜಿ ಸಿಲಿಂಡರ್ ಸಂಗ್ರಹಣೆ ಮಾಡಿ ರಿಫಿಲಿಂಗ್ ಮಾಡುತ್ತಿದ್ದ ಸ್ಥಳದಲ್ಲಿ ಅಧಿಕಾರಿಗಳು ದಾಳಿ ನಡೆಸಿ, ಸಿಲಿಂಡರ್…

Read More

ದಸರಾ ಹಬ್ಬಕ್ಕಾಗಿ ವಿಶೇಷ ರೈಲುಗಳ ಓಡಾಟ

ಸಪ್ತ ಸಾಗರ ವಾರ್ತೆ ಹುಬ್ಬಳ್ಳಿ, ಸೆ. 8:ದಸರಾ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು, ನೈಋತ್ಯ ರೈಲ್ವೆಯು ಈ ಕೆಳಗಿನಂತೆ ವಿಶೇಷ ರೈಲುಗಳನ್ನು ಓಡಿಸಲು ನಿರ್ಧರಿಸಿದೆ. ರೈಲು ಸಂಖ್ಯೆ 07379 ಎಸ್‌ಎಸ್‌ಎಸ್ ಹುಬ್ಬಳ್ಳಿ – ಯಶವಂತಪುರ ಒನ್‌-ವೇ ಎಕ್ಸ್‌ಪ್ರೆಸ್ ಸ್ಪೆಷಲ್: ರೈಲು ಸಂಖ್ಯೆ 07379 ಎಸ್‌ಎಸ್‌ಎಸ್ ಹುಬ್ಬಳ್ಳಿ – ಯಶವಂತಪುರ ಒನ್‌-ವೇ ಎಕ್ಸ್‌ಪ್ರೆಸ್ ಸ್ಪೆಷಲ್ ರೈಲು ಸೆಪ್ಟೆಂಬರ್ 30, 2025 ರಂದು ಮಧ್ಯಾಹ್ನ 12:00ಕ್ಕೆ ಎಸ್‌ಎಸ್‌ಎಸ್ ಹುಬ್ಬಳ್ಳಿಯಿಂದ ಹೊರಟು ಅದೇ ದಿನ ರಾತ್ರಿ 08:15ಕ್ಕೆ ಯಶವಂತಪುರ…

Read More

ಬಿ ಎಲ್ ಡಿ ಇ ಟೀಚರ್ಸ್ ಕಾಲೋನಿಯಲ್ಲಿ ಮಹಾಮೃತ್ಯುಂಜಯ ಜಪ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 8: ರಾಹುಗ್ರಸ್ತ ಚಂದ್ರಗ್ರಹಣ ಅಂಗವಾಗಿ ನಗರದ ಬಿ.ಎಲ್.ಡಿ.ಇ ಟೀಚರ್ಸ್ ಕಾಲನಿಯ ಬಿ. ಎಂ.‌ಪಾಟೀಲ ನಗರದ ಶಿವಾಲಯದಲ್ಲಿ ಲೋಕಕಲ್ಯಾಣಕ್ಕಾಗಿ ಮತ್ತು ಅಶುಭ ಫಲ ಇರುವ ರಾಶಿಯವರಿಗೆ ಶುಭ ಫಲವನ್ನು ಬಯಸಿ ಸಂಕಲ್ಪಿಸಿ ಶ್ರೀ ಫಕೀರಯ್ಯ ಶಾಸ್ತ್ರಿಗಳು ಹಾಗೂ ಶ್ರೀ ಸಿದ್ದರಾಮಯ್ಯ ಶಾಸ್ತ್ರಿಗಳ ನೇತೃತ್ವದಲ್ಲಿ ಮಹಾಮೃತ್ಯುಂಜಯ ಜಪ ನಡೆಯಿತು.ಬಡಾವಣೆಯ ಸದ್ಭಕ್ತರು ಇದರಲ್ಲಿ ಪಾಲ್ಗೊಂಡರು. ಸೋಮವಾರ ಗ್ರಹಣ ಮೋಕ್ಷದ ನಂತರ ಮಹಾಶಿವನಿಗೆ ವಿಶೇಷವಾಗಿ ರುದ್ರಾಭಿಷೇಕ ನೆರವೇರಿಸಿ ಸಮಾಜದ ಒಳಿತಿಗಾಗಿ, ಸಾರ್ವಜನಿಕರ ಆಯುಷ್ಯ ಆರೋಗ್ಯ ಅಭಿವೃದ್ಧಿಗಾಗಿ ಮಹಾಮೃತ್ಯುಂಜಯ…

Read More

ಖಾದಿ ಸ್ವಾಭಿಮಾನ-ಸ್ವಾವಲಂಬನೆ ಸಂಕೇತ- ಮಂಡಳಿ ಅಧ್ಯಕ್ಷ ಬಸನಗೌಡ ತುರವಿಹಾಳ

ಸಪ್ತಸಾಗರ ವಾರ್ತೆ ವಿಜಯಪುರ, ಸೆ.8:ಖಾದಿ ಬಟ್ಟೆ ಸ್ವಾತಂತ್ರ್ಯ ಚಳುವಳಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದು, ಖಾದಿ ದೇಶಾಭಿಮಾನದ ಪ್ರತೀಕವಾಗಿದೆ. ಖಾದಿ ಗ್ರಾಮೀಣ ಹಾಗೂ ನಗರ ಪ್ರದೇಶದಲ್ಲಿ ಉದ್ಯೋಗಾವಕಾಶ ಹೆಚ್ಚಿಸಿದೆ ಎಂದು ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷರಾದ ಮಸ್ಕಿ ಶಾಸಕರಾದ ಬಸನಗೌಡ ತುರವಿಹಾಳ ಹೇಳಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಬೆಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ಸೋಮವಾರ ನಗರದ ಇಂಡಿ ರಸ್ತೆಯ ಚಾಂದಿನಿ ಫಂಕ್ಷನ್ ಹಾಲ್‍ನಲ್ಲಿ…

Read More

ಸಾಧಕರು ಯಾರೇ ಇರಲಿ ದಸರಾ ಉದ್ಘಾಟನೆ ವಿರೋಧಿಸುವುದು ಸರಿಯಲ್ಲ: ನಿಡುಮಾಮಿಡಿ ಶ್ರೀಗಳು

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 8:ಕನ್ನಡ ನಾಡು ನುಡಿಗಾಗಿ ಶ್ರಮಿಸಿದ ಸಾಧಕರು ಯಾರೇ ಆಗಿದ್ದರೂ ಅವರು ಒಪ್ಪಿಕೊಂಡು ದಸರಾ ಉತ್ಸವದಲ್ಲಿ ಪಾಲ್ಗೊಳ್ಳುವುದಾದರೆ ಅದನ್ನು ಸ್ವೀಕಾರ ಮಾಡಬೇಕು. ವಿರೋಧ ಮಾಡಬಾರದು ಎಂದು ಚನ್ನಮಲ್ಲಿಕಾರ್ಜುನ ಶ್ರೀಗಳು ಪ್ರತಿಕ್ರಿಯೆ ನೀಡಿದರು.ಸೋಮವಾರ ನಗರದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಬಾನು ಮುಸ್ತಾಕ ಅವರು ದಸರಾ ಉತ್ಸವದ ಉಧ್ಘಾಟನೆ ಮಾಡುವುದು ತಪ್ಪೇನಿಲ್ಲ. ಹಿಂದು, ಮುಸ್ಲಿಂ, ಜೈನ್, ಬೌದ್ಧ ಯಾವುದೇ ಧರ್ಮದವರಿರಲಿ. ಸಾಧಕರು ಪಾಲ್ಗೊಳ್ಳುವುದು ತಪ್ಪಿಲ್ಲ ಎಂದು ಸಮರ್ಥಿಸಿಕೊಂಡರು.ವೀರಶೈವ ಲಿಂಗಾಯತ ಗೊಂದಲವನ್ನು ಮತದಾನದ ಮೂಲಕ ಬಗೆಹರಿಸಿಕೊಳ್ಳಬೇಕು….

Read More

ಸಮರ್ಪಣಾ ಭಾವನೆಯಿಂದ ಸೇವೆ ಸಲ್ಲಿಸಿ: ಪ್ರೊ. ಸಿ. ಎಸ್. ಪಾಟೀಲ

ಸಪ್ತಸಾಗರ ವಾರ್ತೆ,ವಿಜಯಪುರ, ಸೆ. 8: ವಿದ್ಯಾರ್ಥಿಗಳು ಕಾನೂನು ಶಿಕ್ಷಣವನ್ನು ಶ್ರದ್ದೆಯಿಂದ ಅಧ್ಯಯನ ಮಾಡಿ ಸಮರ್ಪಣೆ ಮನೋಭಾವದಿಂದ ಸೇವೆ ಮಾಡುವ ಮೂಲಕ ನ್ಯಾಯ ಮತ್ತು ಸಮಗ್ರತೆಯನ್ನು ಎತ್ತಿ ಹಿಡಿಯಬೇಕು ಎಂದು ಬೆಂಗಳೂರಿನ ಕರ್ನಾಟಕ ಸಂಸದೀಯ ಸುಧಾರಣೆ ಸಂಸ್ಥೆ(ಕೆ.ಐ.ಎಲ್.ಪಿ.ಏ.ಆರ್) ನಿರ್ದೇಶಕ ಪ್ರೊ. ಸಿ. ಎಸ್. ಪಾಟೀಲ ಹೇಳಿದ್ದಾರೆ.ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಕಾನೂನು ಶಾಲೆಯಲ್ಲಿ ಬುಧವಾರ ನಡೆದ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ಡೀಮ್ಡ್ ವಿವಿ ಸಮಕುಲಾಧಿಪತಿ ಡಾ. ವೈ. ಎಂ. ಜಯರಾಜ ಮಾತನಾಡಿ, ಕಾನೂನು ವಿದ್ಯಾರ್ಥಿಗಳು…

Read More

ಶಿಕ್ಷಕ ರತ್ನ ಜಿಲ್ಲಾ ಪ್ರಶಸ್ತಿಗೆ ಬಸವರಾಜ ಆಯ್ಕೆ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 8:ಕರಾಟೆ ತರಬೇತಿ ಶಿಕ್ಷಕ ಬಸವರಾಜ ಬಾಗೇವಾಡಿ ಉತ್ನಾಳ ಅವರು ಶಿಕ್ಷಕ ರತ್ನ ಜಿಲ್ಲಾ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.ದೇಶಿಯ ಮತ್ತು ವಿದೇಶಿಯ ಅನೇಕ ಕ್ರೀಡೆಗಳನ್ನು ಜಿಲ್ಲೆಗೆ ಮತ್ತು ರಾಜ್ಯಕ್ಕೆ ಪರಿಚಯಿಸಿ ಸ್ಥಾಪನೆ ಮಾಡಿ ಮತ್ತು ತರಬೇತಿ ನೀಡುತ್ತಿರುವದನ್ನು ಪರಿಗಣಿಸಿ ಅವರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.ಪ್ರಸಕ್ತ ಸಾಲಿನ ಚಡಚಣ ತಾಲೂಕಿನ ಅನುದಾನ ರಹಿತ ಶಿಕ್ಷಣ ಸಂಸ್ಥೆಗಳ ಸಂಘದ ವತಿಯಿಂದ ಸೆ. 9 ರಂದು ಚಡಚಣದ ಶ್ರೀ ಸಂಗಮೇಶ್ವರ ಮಂಗಲ ಕಾರ್ಯಾಲಯದಲ್ಲಿ ಗುರುವಂದನ ಕಾರ್ಯಕ್ರಮ ನಡೆಯಲಿದೆ.ಈ…

Read More