ಪ್ರೊ. ಕೊಳಮಲಿಯವರಿಗೆ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 22:
ನಗರದ ಚೇತನಾ ಶಿಕ್ಷಣ ಸಂಸ್ಥೆಯ ಚೇತನಾ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಸಾಹಿತಿ, ಕನ್ನಡದ ಪ್ರಾಧ್ಯಾಪಕ ಪ್ರೊ, ಎ. ಎಚ್. ಕೊಳಮಲಿಯವರಿಗೆ ಭಾರತೀಯ ಶಿಕ್ಷಣ ಮಂಡಲ ಉತ್ತರ ಪ್ರಾಂತ ವಿಜಯಪುರ ಜಿಲ್ಲೆ ಇವರು ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಇತ್ತೀಚೆಗೆ ನಡೆದ ಗುರು ನಮನ ಕಾರ್ಯಕ್ರಮದಲ್ಲಿ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದ್ದಾರೆ.
ಕೊಳಮಲಿಯವರ ಶಿಕ್ಷಣ ಕ್ಷೇತ್ರದ ಸಾಧನೆ ಮತ್ತು ಸಾಹಿತ್ಯ ಕ್ಷೇತ್ರದ ಅಮೋಘ ಸಾಧನೆಯ ಪರಿಗಣಿಸಿ ಪ್ರಶಸ್ತಿಯನ್ನು ನೀಡಲಾಗಿದೆ.
ಬಹುಮುಖ ಪ್ರತಿಭಾ ಸಂಪನ್ನರಾದ ಪ್ರೊ. ಎ.ಎಚ್. ಕೊಳಮಲಿಯವರು ನಾಡಿನ ಉದಯೋನ್ಮುಖ ಕವಿಗಳು ಮತ್ತು ಜಾನಪದ ವಿದ್ವಾಂಸರಾಗಿದ್ದಾರೆ. ಈ ಮುಂಚೆ ಶ್ರೀಯುತರಿಗೆ ರಾಷ್ಟ್ರಮಟ್ಟದ ಪ್ರತಿಭಾವಂತ ಶಿಕ್ಷಕ ಪ್ರಶಸ್ತಿ, ಕರುನಾಡು ಸಾಹಿತ್ಯ ರತ್ನ ಪ್ರಶಸ್ತಿ, ಕರುನಾಡು ಮಾಣಿಕ್ಯ ಪ್ರಶಸ್ತಿ, ಪ್ರತಿಷ್ಠಿತ ಬಸವಭೂಷಣ ಪ್ರಶಸ್ತಿ ಹತ್ತು ಹಲವು ಪ್ರಶಸ್ತಿಗಳು ಲಭಿಸಿವೆ.

Share