ಬಿಎಲ್ ಡಿಇ ಡೀಮ್ಡ್ ವಿವಿಯಲ್ಲಿ ರಾಜ್ಯೋತ್ಸವ

ಸಪ್ತಸಾಗರ ವಾರ್ತೆ ವಿಜಯಪುರ, ನ. 1: ನಗರದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದಲ್ಲಿ ಇಂದು ಶನಿವಾರ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು.
ವಿವಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಂಗಾಮಿ ಕುಲಪತಿ ಡಾ. ಅರುಣ ಚಂ. ಇನಾಮದಾರ ತಾಯಿ ಭುವನೇಶ್ವರಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.
ಬಳಿಕ ಮಾತನಾಡಿದ ಅವರು, ಕರ್ನಾಟಕ ಭಾಷೆಯಲ್ಲಿ ಶ್ರೀಮತಂವಾಗಿದೆ. ಇಲ್ಲಿನ ಸಾಹಿತ್ಯ ಪರಂಪರೆ ಸಂಗೀತ ನೃತ್ಯ, ಕಲೆ, ವಿಜ್ಞಾನ, ಜಾನಪದ ಹಾಗೂ ಕೃಷಿ ವಿಶಿಷ್ಟ ಸ್ಥಾನ ಪಡೆದಿವೆ. ಕನ್ನಡ ಭಾಷೆ, ಸಂಸ್ಕೃತಿ ಮತ್ತು ಪರಂರೆಯನ್ನು ಕಾಪಾಡುವದು ಪ್ರತಿಯೊಬ್ಬ ಕನ್ನಡಿಗನ ಜವಾಬ್ದಾರಿಯಾಗಿದೆ. ಕರ್ನಾಟಕ ಏಕೀಕರಣಕ್ಕಾಗಿ ಶ್ರಮಿಸಿರುವ ಮಹನೀಯರು ಸಾಹಿತಿಗಳನ್ನು ಸದಾ ಸ್ಮರಿಸಬೇಕು. ಪ್ರತಿನಿತ್ಯದ ವ್ಯವಹಾರದಲ್ಲಿ ನಾವೆಲ್ಲರೂ ಕನ್ನಡ ಭಾಷೆಯನ್ನು ಬಳಸಿ ಬೆಳೆಸಬೇಕು ಎಂದು ಹೇಳಿದರು.
ಸಮಕುಲಾಧಿಪತಿ ಡಾ. ವೈ. ಎಂ. ಜಯರಾಜ ಮಾತನಾಡಿ, ಇಂದಿನ ಜಾಗತೀಕರಣ ಯುಗದಲ್ಲಿ, ನಾವು ಯಾವುದೇ ಭಾಷೆ ಕಲಿತರೂ ನಮ್ಮ ಮಾತೃಭಾಷೆ ಕನ್ನಡವನ್ನು ಮರೆಯಬಾರದು. ನಮ್ಮ ಯುವ ಪೀಳಿಗೆಗೆ ನಮ್ಮ ನಾಡಿನ ಸಂಸ್ಕೃತಿಯ ಬಗ್ಗೆ ತಿಳಿಸುವದು ನಮ್ಮ ಕರ್ತವ್ಯವಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಕುಲಸಚಿವ ಡಾ. ಆರ್. ವಿ. ಕುಲಕರ್ಣಿ, ವೈದ್ಯಕೀಯ ವಿಭಾಗದ ಡೀನ್ ಹಾಗೂ ಹಂಗಾಮಿ ಪ್ರಾಚಾರ್ಯೆ ಡಾ. ತೇಜಸ್ವಿನಿ ವಲ್ಲಭ, ಅಲೈಡ ಹೆಲ್ತ್ ಸಾಯಿನ್ಸ್ ಡೀನ್ ಡಾ. ಎಸ್. ವಿ. ಪಾಟೀಲ, ಆರ್ ಆ್ಯಂಡ್ ಡಿ ನಿರ್ದೇಶಕ ಡಾ. ಎಂ. ಎಂ. ಪಾಟೀಲ, ವಿದ್ಯಾರ್ಥಿ ವ್ಯವಹಾರಗಳ ಡೀನ್ ಡಾ. ಆನಂದ ಅಂಬಲಿ, ಚೀಫ್ ವಾರ್ಡನ್ ಡಾ. ಉದಯಕುಮಾರ ನುಚ್ಚಿ, ಔಷಧಶಾಸ್ತ್ರ ವಿಭಾಗದ ಮುಖ್ಯಸ್ಥ, ಡಾ. ಶ್ರೀನಿವಾಸ ರಾಯ್ಕರ, ಕಾನೂನು ಶಾಲೆಯ ಪ್ರಾಚಾರ್ಯ, ಡಾ. ಆರ್. ಜಿ. ಕುಲಕರ್ಣಿ, ಉಪಕುಲಸಚಿವ ಸತೀಶ ಪಾಟೀಲ, ಸಹಾಯಕ ಕುಲಸಚಿವ ಡಾ. ಶ್ರೀಧರ ಬಗಲಿ, ಸಹಾಯಕ ಕಾನೂನು ಅಧಿಕಾರಿ, ಐ. ಬಿ. ಮಠಪತಿ, ವಿಶ್ವವಿದ್ಯಾಲಯದ ಸಿಬ್ಬಂದಿ ಉಪಸ್ಥಿತರಿದ್ದರು.

Share this