ವಿಜಯಪುರ ಜಿಲ್ಲೆಗೆ 371(ಜೆ) ಮೀಸಲಾತಿ ಕಲ್ಪಿಸಲು ಆಗ್ರಹಿಸಿ ಹೋರಾಟ
ಸಪ್ತಸಾಗರ ವಾರ್ತೆ,ಆಲಮೇಲ, ಆ. 21: ವಿಜಯಪುರ ಜಿಲ್ಲೆಯನ್ನು 371(ಜೆ) ಮೀಸಲಾತಿ ವ್ಯಾಪ್ತಿಗೆ ಸೇರ್ಪಡೆಗೊಳಿಸುವಂತೆ ಆಗ್ರಹಿಸಿ ವಿಜಯಪುರ ಜಿಲ್ಲಾ 371(ಜೆ) ಹೋರಾಟ ಸಮಿತಿ ಹಾಗೂ ಕರ್ನಾಟಕ ರಾಜ್ಯ ಅಂಗವಿಕಲರ ಹಾಗೂ ಪಾಲಕರ ಒಕ್ಕೂಟದ ವತಿಯಿಂದ ಆಲಮೇಲ ತಹಶೀಲ್ದಾರ ಮೂಲಕ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ಹೋರಾಟ ಸಮಿತಿ ಮುಖಂಡ ವಿನೋದ ಖೇಡ ಮಾತನಾಡಿ, 371(ಜೆ) ಮೀಸಲಾತಿಯಿಂದ ವಿಜಯಪುರ ಜಿಲ್ಲೆಯನ್ನು ಹೊರಗಿಟ್ಟಿರುವ ಪರಿಣಾಮ ಜಿಲ್ಲೆಯ ಮಕ್ಕಳಿಗೆ ಶಿಕ್ಷಣದಲ್ಲಿ ಹಾಗೂ ಯುವಕರಿಗೆ ಸರ್ಕಾರಿ ಉದ್ಯೋಗದಲ್ಲಿ ಅನ್ಯಾಯವಾಗುತ್ತಿದೆ. ಈ ಅನ್ಯಾಯವನ್ನು ಸರಿಪಡಿಸಲು…


