ಮಹಿಳೆಯರಿಗೆ ಶೂನ್ಯ ಸ್ಥಾನ, ವಿಜಯಪುರಕ್ಕೂ ನಿರಾಸೆ: ಸಚಿವ ಸಂಪುಟ ವಿಸ್ತರಣೆ ವಿರುದ್ಧ ಆಪ್ ವಾಗ್ದಾಳಿ
ಸಪ್ತಸಾಗರ ವಾರ್ತೆ,ವಿಜಯಪುರ, ಆ. 4: ರಾಜ್ಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಮಹಿಳೆಯರಿಗೆ ಒಂದೇ ಒಂದು ಸಚಿವ ಸ್ಥಾನವನ್ನೂ ನೀಡದಿರುವುದು, ಭ್ರಷ್ಟಾಚಾರದ ಆರೋಪ ಎದುರಿಸಿದ್ದ ನಾಯಕರಿಗೆ ಮತ್ತೆ ಅವಕಾಶ ಕಲ್ಪಿಸಿರುವುದು ಹಾಗೂ ವಿಜಯಪುರ ಜಿಲ್ಲೆಗೆ ಹೆಚ್ಚುವರಿ ಪ್ರಾತಿನಿಧ್ಯ ನೀಡದಿರುವುದು ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯವನ್ನು ಬಯಲಿಗೆಳೆದಿದೆ ಎಂದು ಆಮ್ ಆದ್ಮಿ ಪಕ್ಷದ ವಿಜಯಪುರ ಜಿಲ್ಲಾಧ್ಯಕ್ಷ ಭೋಗೇಶ್ ಸೋಲಾಪುರ್ ಆರೋಪಿಸಿದರು.ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಿಳಾ ಸಬಲೀಕರಣದ ಬಗ್ಗೆ ವೇದಿಕೆಗಳಲ್ಲಿ ಮಾತನಾಡುವ ಕಾಂಗ್ರೆಸ್, ಅಧಿಕಾರ ಹಂಚಿಕೆಯ ಸಂದರ್ಭದಲ್ಲಿ ಮಹಿಳೆಯರನ್ನು ಸಂಪೂರ್ಣವಾಗಿ…


