ವಿಜಯಪುರದಲ್ಲಿ ಭೀಕರ ರಸ್ತೆ ಅಪಘಾತ: ಲಾರಿ–ಬೈಕ್ ಡಿಕ್ಕಿಗೆ ಇಬ್ಬರು ಯುವಕರು ಸ್ಥಳದಲ್ಲೇ ಸಾವು

ಸಪ್ತಸಾಗರ ವಾರ್ತೆ,ವಿಜಯಪುರ, ಜು.7: ನಗರದ ಹೊರವಲಯದ ಸೊಲ್ಲಾಪುರ ರಸ್ತೆಯ ರಾಷ್ಟ್ರೀಯ ಹೆದ್ದಾರಿ-50 (ಎನ್‌ಎಚ್-50)ರಲ್ಲಿ ಮಂಗಳವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್‌ನಲ್ಲಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮತ್ತೋರ್ವ ಪಾದಚಾರಿ ಯುವಕ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.ಮೃತರನ್ನು ವಿಜಯಪುರ ಮೂಲದ ಭೂಷಣ್ ನಾಯಕ (24) ಹಾಗೂ ಗಗನ್ ಪರಮೇಶ (19) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಗಾಯಗೊಂಡಿರುವ ಬಿಲಾಲ್ ಜಾತಗಾರ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ಲಾರಿ ಮತ್ತು ಬೈಕ್ ನಡುವೆ ಸಂಭವಿಸಿದ ಡಿಕ್ಕಿಯ ರಭಸಕ್ಕೆ ಇಬ್ಬರೂ ಯುವಕರು…

Read More

ಟಿಪ್ಪರ್ – ಬಸ್ ಮಧ್ಯೆ ಭೀಕರ ರಸ್ತೆ ಅಪಘಾತ: ಮಹಿಳೆ ಸೇರಿ ಮೂವರ ಸಾವು

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 16:ಟಿಪ್ಪರ್ ಹಾಗೂ ಸರ್ಕಾರಿ ಬಸ್ ಮಧ್ಯೆ ಡಿಕ್ಕಿ ಸಂಭವಿಸಿ ಸ್ಥಳದಲ್ಲೇ ಮೂವರು ಮೃತಪಟ್ಟು ಇತರ ಹತ್ತು ಜನರು ಗಾಯಗೊಂಡಿರುವ ಘಟನೆ ಜಿಲ್ಲೆಯ ಚಡಚಣ ತಾಲೂಕಿನ ಲೋಣಿ ಕ್ರಾಸ್ ಬಳಿ ಮಂಗಳವಾರ ನಡೆದಿದೆ.ಟಿಪ್ಪರ್ ಟೈರ್ ಬ್ಲಾಸ್ಟ್ ಆಗಿ ಚಾಲಕನ ನಿಯಂತ್ರಣ ತಪ್ಪಿ ಈ ಅಪಘಾತ ಸಂಭವಿಸಿದೆ ಎಂದು ಗೊತ್ತಾಗಿದೆ.ಟಿಪ್ಪರ್ ನಲ್ಲಿದ್ದ ಚಾಲಕ ಹಾಗೂ ಆತನ ಪತ್ನಿ ಮತ್ತು ಸರ್ಕಾರಿ ಬಸ್ ಚಾಲಕ ಸೇರಿ ಮೂವರು ಮೃತಪಟ್ಟಿದ್ದಾರೆ.ಟಿಪ್ಪರ್ ಚಾಲಕ ಅಶೋಕ ಉಟಗಿ ಹಾಗೂ ಪತ್ನಿ ರಾಧಾಬಾಯಿ…

Read More

ಬೈಕ್ ಹಾಗೂ ಲಾರಿ ಮಧ್ಯೆ ಭೀಕರ ಅಪಘಾತ: ಶಿಕ್ಷಕ ದಂಪತಿ ಸಾವು

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 15:ಬೈಕ್ ಹಾಗೂ ಲಾರಿ ಮಧ್ಯೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಶಿಕ್ಷಕ ದಂಪತಿಗಳು ಸ್ಥಳದಲ್ಲೇ ಮೃತಪಟ್ಟ ಘಟನೆ ತೊರವಿ ಬಳಿ ನಡೆದಿದೆ.ತಾಲ್ಲೂಕಿನ ಖತಿಜಾಪುರ ಎಚ್.ಪಿ.ಎಸ್ ಶಾಲೆಯ ಜಿಪಿಟಿ ಶಿಕ್ಷಕಿ ಅಂಬಿಕಾ ಪೂಜೇರಿ (34) ಹಾಗೂ ಪತಿ ವಿಜಯಪುರ ಚಾಣಕ್ಯ ಕರಿಯರ್ ಅಕಾಡೆಮಿಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ ಗುರಲಿಂಗ ಹುಣಶ್ಯಾಳ (37) ಮೃತಪಟ್ಟ ನತದೃಷ್ಟರು.ಮೃತ ಶಿಕ್ಷಕ ದಂಪತಿಗೆ ಇಬ್ಬರು ಮಕ್ಕಳಿದ್ದು, ಅವರು ಅನಾಥರಾಗಿದ್ದಾರೆ.ತಿಕೋಟಾದಲ್ಲಿ ಸಂಬಂಧಿಕರ ಮನೆಯಲ್ಲಿ ಕಾರ್ಯಕ್ರಮ ಮುಗಿಸಿಕೊಂಡು ವಿಜಯಪುರಕ್ಕೆ ಬೈಕ್ ನಲ್ಲಿ ಶಿಕ್ಷಕ…

Read More

ರಸ್ತೆ ಅಪಘಾತ ತಡೆಯಲು ಸಂಚಾರ ನಿಯಮ ಕಟ್ಟುನಿಟ್ಟಾಗಿ ಪಾಲಿಸಿ: ಬೆಳಗಾವಿ ಲೋಕಾಯುಕ್ತ ಎಸ್ಪಿ ದೇಸಾಯಿ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ. 12:ದೇಶದಲ್ಲಿ ರಸ್ತೆ ಅಪಘಾತಗಳಲ್ಲಿ ಸಾವಿಗೀಡಾಗುವವರ ಸಂಖ್ಯೆ ಪ್ರತಿ ವರ್ಷ ಹೆಚ್ಚಾಗುತ್ತಿದ್ದು, ಸಂಚಾರಿ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದು ಅಗತ್ಯವಾಗಿದೆ ಬೆಳಗಾವಿ ಲೋಕಾಯುಕ್ತ ಕಚೇರಿ ಎಸ್ಪಿ ಪ್ರಸನ್ನ ದೇಸಾಯಿ ಹೇಳಿದ್ದಾರೆ.ನಗರದ ಬಿ.ಎಲ್.ಡಿ.ಇ‌ ಡೀಮ್ಡ್ ವಿಶ್ವವಿದ್ಯಾಲಯದ ಕಾನೂನು ಶಾಲೆಯಲ್ಲಿ ಸೋಮವಾರ ಆಯೋಜಿಸಲಾದ ಅಪಘಾತಗಳನ್ನು ಹೇಗೆ ನಿಯಂತ್ರಿಸಬೇಕು ಎಂಬ ವಿಷಯ ಕುರಿತು ವಿಶೇಷ ಉಪನ್ಯಾನ ನೀಡಿದರು.ಕರ್ನಾಟಕ ಪೊಲೀಸ್ ಕಾಯ್ದೆ, 1963ರ ಕುರಿತು ಮಾತನಾಡಿ, ಭಾರತದ ಪ್ರತಿ ರಾಜ್ಯಕ್ಕೂ ಪ್ರತ್ಯೇಕ ಪೊಲೀಸ್ ಕಾಯ್ದೆಗಳಿವೆ. ಕ್ರಿಮಿನಲ್ ನ್ಯಾಯ ವ್ಯವಸ್ಥೆ, ಹೆಚ್ಚುತ್ತಿರುವ ಸೈಬರ್…

Read More

ಲಾರಿ- ಬೈಕ್ ಡಿಕ್ಕಿ: ಮಹಿಳೆ ಸಾವು

ಸಪ್ತಸಾಗರ ವಾರ್ತೆ, ವಿಜಯಪುರ, ಫೆ. 16:ಜಿಲ್ಲೆಯ ಬಬಲೇಶ್ವರ ತಾಲೂಕಿನ ಸಾರವಾಡ ಗ್ರಾಮದ ಸಂಗಾಪುರ ಕ್ರಾಸ್ ಬಳಿ ಸೋಮವಾರ ಮಧ್ಯಾಹ್ನ ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾಳೆ.ಅಡವಿ ಸಂಗಾಪುರ ಗ್ರಾಮದ ನಿವಾಸಿ ಬಾಳವ್ವ ದಳವಾಯಿ (50) ಮೃತಪಟ್ಟಿದ್ದಾಳೆ.ಬಾಳವ್ವ ಅವರು ತಮ್ಮ ಸಂಬಂಧಿಕರೊಂದಿಗೆ ಬೈಕ್‌ನಲ್ಲಿ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.ವೇಗವಾಗಿ ಬಂದ ಲಾರಿ ಡಿಕ್ಕಿ ಹೊಡೆದಿದ್ದು, ಆಗ ತೀವ್ರವಾಗಿ ಗಾಯಗೊಂಡ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.ಬೈಕ್ ಸವಾರನಿಗೂ ಗಂಭೀರ ಸ್ವರೂಪದ ಗಾಯಗಳಾಗಿದ್ದು ತಕ್ಷಣವೇ ಅವರನ್ನು…

Read More

ಬಸ್- ಬೈಕ್ ಮಧ್ಯೆ ಮುಖಾಮುಖಿ ಡಿಕ್ಕಿ: ಇಬ್ಬರು ಬೈಕ್ ಸವಾರರ ಸಾವು

ಸಪ್ತಸಾಗರ ವಾರ್ತೆ,ವಿಜಯಪುರ, ಡಿ. 25:ಸಾರಿಗೆ ಬಸ್ ಹಾಗೂ ಬೈಕ್ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟ ದಾರುಣ ಘಟನೆಜಿಲ್ಲೆಯ ನಿಡಗುಂದಿ ತಾಲೂಕಿನ ಮುದ್ದಾಪುರ ಕ್ರಾಸ್ ಬಳಿ ಗುರುವಾರ ಸಂಭವಿಸಿದೆ.ಮುದ್ದೇಬಿಹಾಳ ತಾಲೂಕಿನ ಕೊಪ್ಪ ತಾಂಡಾದ ಶಿವಪ್ಪ ರಾಮಪ್ಪ ಲಮಾಣಿ (60) ಹಾಗೂ ಬಸರಕೋಡ ಗ್ರಾಮದ ಬಸಪ್ಪ ಸಂಗಪ್ಪ ಸೂಳಿಬಾವಿ (67) ಎಂದು ಮೃತಪಟ್ಟ ದುರ್ದೈವಿಗಳು.ಮುದ್ದೇಬಿಹಾಳದಿಂದ ಬಾಗಲಕೋಟೆ ಕಡೆಗೆ ವೇಗವಾಗಿ ಚಲಿಸುತ್ತಿದ್ದ ಕೆಎಸ್‌ಆರ್ಟಿಸಿ ಬಸ್ ಹಾಗೂ ನಿಡಗುಂದಿಯಿಂದ ಬರುತ್ತಿದ್ದ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಬೈಕ್…

Read More

ಅಗ್ನಿ ದುರಂತ ಹಾನಿಗೆ ಪರಿಹಾರ:ದುಷ್ಕೃತ್ಯದ ಬಗ್ಗೆ ತನಿಖೆಗೆ ಆದೇಶ- ಸಚಿವ ಶಿವಾನಂದ ಪಾಟೀಲ ಹೇಳಿಕೆ

ಸಪ್ತಸಾಗರ ವಾರ್ತೆ, ಬಾಗಲಕೋಟೆ, ನ. 14: ಮುಧೋಳ ತಾಲೂಕಿನ ಸಮೀರವಾಡಿಯ ಗೋದಾವರಿ ಬಯೋ ರಿಫೈನರೀಸ್‌ ಲಿಮಿಟೆಡ್‌ ಬಳಿ ಗುರುವಾರ ಸಂಭವಿಸಿದ ಅಹಿತಕರ ಘಟನೆಯಲ್ಲಿ ಸಂಭವಿಸಿದ ಹಾನಿಗೆ ಸಾಧ್ಯವಿರುವ ಪರಿಹಾರ ನೀಡಲಾಗುವುದು ಹಾಗೂ ದುರಂತದ ಬಗ್ಗೆ ತನಿಖೆಗೆ ಆದೇಶ ಮಾಡಲಾಗುವುದು ಎಂದು ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ಸಚಿವ ಶಿವಾನಂದ ಪಾಟೀಲ ಪ್ರಕಟಿಸಿದರು.ದುರಂತದ ಸ್ಥಳಕ್ಕೆ ಶುಕ್ರವಾರ ಜಿಲ್ಲಾ ಉಸ್ತುವಾರಿ ಸಚಿವ ಆರ್.‌ಬಿ. ತಿಮ್ಮಾಪುರ ಅವರೊಂದಿಗೆ ಭೇಟಿ ನೀಡಿ ದುರಂತದಲ್ಲಿ ಹಾನಿಗೀಡಾದ ಕಬ್ಬು, ಟ್ರ್ಯಾಕ್ಟರ್‌ಗಳು, ಬೈಕ್‌ಗಳನ್ನು ವೀಕ್ಷಣೆ ಮಾಡಿ ರೈತರ…

Read More