ರೈತರ ಹಿತಾಸಕ್ತಿ, ಕೃಷಿ ಅಭಿವೃದ್ಧಿಗೆ ಪೂರಕ ಕಾರ್ಯಾಗಾರ ಹಮ್ಮಿಕೊಳ್ಳಿ : ಶಿವಪ್ಪಗೌಡ ಬಿರಾದಾರ
ಸಪ್ತಸಾಗರ ವಾರ್ತೆ,ಸಿಂದಗಿ, ಏ. 19: ರೈತರ ಹಿತಾಸಕ್ತಿ, ಕೃಷಿ ಅಭಿವೃದ್ಧಿಗೆ ಪೂರಕ ಕಾರ್ಯಾಗಾರವನ್ನು ಆಯೋಜಿಸಬೇಕು ಎಂದು ತಾಲೂಕಾ ಕೃಷಿಕ ಸಮಾಜದ ಅಧ್ಯಕ್ಷ ಶಿವಪ್ಪಗೌಡ ಬಿರಾದಾರ ಹೇಳಿದರು.ನಗರದಲ್ಲಿನ ಸಹಾಯಕ ಕೃಷಿ ನಿರ್ದೇಶಕರ ಕಾರ್ಯಾಲಯದಲ್ಲಿ ತಾಲೂಕಾ ಕೃಷಿಕ ಸಮಾಜದ ಕಾರ್ಯಕಾರಿ ಸಮಿತಿ ಸದಸ್ಯರ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಮಣ್ಣಿನ ಆರೋಗ್ಯ ಕಾಪಾಡಲು ಸಾವಯವ ಕೃಷಿ ಮತ್ತು ಸಮಗ್ರ ಪೋಷಕಾಂಶ ನಿರ್ವಹಣೆಯ ಮಹತ್ವ, ತಾಲೂಕಿನಲ್ಲಿ ಕಬ್ಬಿನ ಕ್ಷೇತ್ರ ಹೆಚ್ಚಾಗಿದ್ದು ಕಬ್ಬಿನ ಬೆಳೆಗೆ ನೀರು ನಿರ್ವಹಣೆ ಮುಂತಾದ ವಿಷಯಗಳ ಬಗ್ಗೆ ಜಾಗೃತಿ…


