ವಿದ್ಯೆ ಎಂಬುದು ಅಭ್ಯಾಸ ಮಾಡುವವನ ಕೈವಶವಾಗುತ್ತದೆ-ಐಹೊಳ್ಳಿ
ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 15:ಜೀವನದಲ್ಲಿ ಯಾರು ಸಾಧನೆ ಮಾಡಬೇಕೆಂದು ಬಯಸಿ ಅಭ್ಯಾಸವನ್ನು ಮಾಡುತ್ತಾರೋ ಅವರ ಸಾಧನೆಗೆ ವಿದ್ಯೆಯ ಫಲಗಳು ಬರುತ್ತವೆ. ಶಿವಯೋಗಿ ಸಿದ್ದರಾಮರು ಇದನ್ನು ತಮ್ಮ ವಚನದಲ್ಲಿ ಪ್ರಸ್ತಾಪಿಸಿದ್ದಾರೆ. ಅವಿದ್ಯೆ ಹೋಗಲಾಡಿಸಲು ನಾವೆಲ್ಲ ಸಾಧನಾಶೀಲರಾಗಿ ಸಾಧಿಸಬೇಕೆಂದು ಫ .ಗು. ಹಳಕಟ್ಟಿ ಸಂಶೋಧನಾ ಕೇಂದ್ರದ ಸಂಯೋಜನಾಧಿಕಾರಿ ಡಾ.ವ್ಹಿ.ಡಿ. ಐಹೊಳ್ಳಿ ಇಂದಿಲ್ಲಿ ಅಭಿಪ್ರಾಯ ಪಟ್ಟರು. ನಗರದ ಆಶ್ರಮ ರಸ್ತೆಯ ಐಶ್ವರ್ಯ ಬಡಾವಣೆಯ ವರದಾಂಜನೇಯ ದೇವಸ್ಥಾನದಲ್ಲಿ ಹಮ್ಮಿಕೊಂಡ 549ನೇ ಸತ್ಸಂಗ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡುತ್ತಿದ್ದರು.ವಾಚಿಸಿ ಅನುಭವಿ…


