ಜನ-ಜಾನುವಾರು ಹಾನಿ ತಪ್ಪಿಸಲು ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಲು ಜಿಲ್ಲಾಧಿಕಾರಿ ಮನವಿ
ಸಪ್ತಸಾಗರ ವಾರ್ತೆ,ವಿಜಯಪುರ, ಮೇ 16:ಮಳೆ-ಗಾಳಿ ಹಾಗೂ ಸಿಡಿಲು-ಮಿಂಚಿನಿಂದ ತಪ್ಪಿಸಿಕೊಳ್ಳಲು ಜನ ಸಾಮಾನ್ಯರು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (KSNDMC) ದ ವರುಣ ಮಿತ್ರ ಸಹಾಯವಾಣಿ ಸಂಖ್ಯೆ 9243345433 ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳಾದ ಡಾ. ಆನಂದ ಕೆ. ಅವರು ತಿಳಿಸಿದ್ದಾರೆ.ಹವಾಮಾನ ಮಾಹಿತಿ ಹಾಗೂ ಗುಡುಗು-ಮಿಂಚು ಮುನ್ನೆಚ್ಚರಿಕೆಗಳನ್ನು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (ಕೆಎಸ್ ಎನ್ ಡಿಎಂಸಿ) ಅಭಿವೃದ್ಧಿಪಡಿಸಿರುವ SIDILU ಆ್ಯಪ್ ನಲ್ಲಿ ಪಡೆಯಬಹುದು ಎಂದವರು ತಿಳಿಸಿದ್ದಾರೆ.ಜೊತೆಗೆ ರಾಷ್ಟ್ರೀಯ ವಿಪತ್ತು ಪ್ರಾಧಿಕಾರ (NDMA) ಅಭಿವೃದ್ಧಿಪಡಿಸಿರುವ…


