ನಾಮನಿರ್ದೇಶಿತ ಸದಸ್ಯತ್ವಕ್ಕಾಗಿ ಅರ್ಜಿ ಆಹ್ವಾನ

ಸಪ್ತಸಾಗರ ವಾರ್ತೆ,ವಿಜಯಪುರ, ಸೆ.2:2025-26ನೇ ಸಾಲಿಗೆ ಕರ್ನಾಟಕ ಮೇದಾರ ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ದಿ ನಿಗಮದ ವ್ಯಾಪ್ತಿಗೆ ಬರುವ ಅಲೆಮಾರಿ ಸಮುದಾಯದವರು ಆರ್ಥಿಕ ಅಭಿವೃದ್ಧಿಯನ್ನು ಹೊಂದಲು ವಿವಿಧ ಯೋಜನೆಯಡಿ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಲು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ಅನುಷ್ಠಾನ ಸಮಿತಿ ರಚಿಸಬೇಕಾಗಿದ್ದು, ಸಮಿತಿಯ ನಾಮನಿರ್ದೇಶಿತ ಸದಸ್ಯತ್ವಕ್ಕಾಗಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.ಮೇದಾರ ಪರಿಶಿಷ್ಟ ಪಂಗಡದ ಅಲೆಮಾರಿ ಸಮುದಾಯಕ್ಕೆ ಸೇರಿದ ಅರ್ಹ ಆಸಕ್ತರು ಸೆ. 20ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ…

Read More

ವಾಹನ ಖರೀದಿಗೆ ಮೀನುಗಾರರಿಂದ ಅರ್ಜಿ ಆಹ್ವಾನ

ಸಪ್ತಸಾಗರ ವಾರ್ತೆ ವಿಜಯಪುರ, ಸೆ.1: ಮೀನುಗಾರಿಕೆ ಇಲಾಖೆಯಿಂದ 2025-26ನೇ ಸಾಲಿನ ರಾಜ್ಯ ವಲಯ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆಯಡಿ ನಾಲ್ಕು ಚಕ್ರ ವಾಹನ ಖರೀದಿಸಲು ಸಹಾಯಧನ ಪಡೆಯಲು ಅರ್ಹ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀನುಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ.ಈ ಯೋಜನೆಯಡಿ ಮೀನುಗಾರರಿಗೆ ನಾಲ್ಕು ಚಕ್ರ ವಾಹನ ಖರೀದಿಸಲು ಶೇ.50ರಷ್ಟು ಅಥವಾ ಗರಿಷ್ಠ 3 ಲಕ್ಷ ರೂಪಾಯಿ ಆರ್ಥಿಕ ನೆರವು ನೀಡಲಾಗುವುದು.ಅರ್ಜಿಯನ್ನು ಸೆಪ್ಟಂಬರ್ 15ರೊಳಗಾಗಿ ಜಿಲ್ಲೆಯ ಆಯಾ ತಾಲೂಕಿನ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಗೆ…

Read More

ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗೆ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆಗೆ ಆಹ್ವಾನ

ಸಪ್ತಸಾಗರ ವಾರ್ತೆ,ವಿಜಯಪುರ, ಆ. 21:ಜಿಲ್ಲೆಯ ಇಂಡಿ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಲ್ಲಿನ ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿಯ‌ನ್ನು ಇಂಡಿ ಶಿಶು ಅಭಿವೃದ್ಧಿ ಯೋಜನಾ ಕಚೇರಿಯ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ.ಈ ತಾತ್ಕಾಲಿಕ ಆಯ್ಕೆ ಪಟ್ಟಿಗೆ ಆಕ್ಷೇಪಣೆಗಳಿದ್ದಲ್ಲಿ, ಆ.19 ರಿಂದ ಸೆ.1 ರೊಳಗಾಗಿ ಅಗತ್ಯ ದಾಖಲಾತಿಗಳೊಂದಿಗೆ ಸಂಬಂಧಿಸಿದ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಆಕ್ಷೇಪಣೆಗಳನ್ನು ಸಲ್ಲಿಸಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಆಡಳಿತ ನ್ಯಾಯಾಧೀಕರಣ ತರಬೇತಿಗೆ ಅರ್ಜಿ ಆಹ್ವಾನ

ಸಪ್ತಸಾಗರ ವಾರ್ತೆ ವಿಜಯಪುರ,ಆ. 18 : ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2025-26ನೇ ಸಾಲಿನ ಪರಿಶಿಷ್ಟ ಪಂಗಡದ ಕಾನೂನು ಪದವೀಧರರಿಗೆ ಆಡಳಿತ ನ್ಯಾಯಾಧೀಕರಣ ತರಬೇತಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ತರಬೇತಿಯ ಅವಧಿ ಎರಡು ವರ್ಷದಾಗಿದ್ದು, ತರಬೇತಿಯಲ್ಲಿ ಅಭ್ಯರ್ಥಿಗಳಿಗೆ ಮಾಸಿಕ ಆದಾಯ 10,000 ಶಿಷ್ಯ ವೇತನ ನೀಡಲಾಗುವುದು.ಅರ್ಜಿ ಸಲ್ಲಿಸುವ ಅಭ್ಯರ್ಥಿಯು ವಿಜಯಪುರ ಜಿಲ್ಲೆಯವರಾಗಿಬೇಕು. 40 ವರ್ಷ ವಯಸ್ಸು ಹಾಗೂ ಕುಟುಂಬದ ವಾರ್ಷಿಕ ಆದಾಯ 2ಲಕ್ಷ 50ಸಾವಿರ ರೂ. ಮೀರಿರಬಾರದು. ಎರಡು ವರ್ಷದ ಒಳಗೆ…

Read More

ನಿಗಮಗಳಿಂದ ವಿವಿಧ ಯೋಜನೆಯಡಿ ಅರ್ಜಿ ಆಹ್ವಾನ

ಸಪ್ತಸಾಗರ ವಾರ್ತೆ, ವಿಜಯಪುರ, ಆ.16:ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ,ಕರ್ನಾಟಕ ಅದಿಜಾಂಬವ ಅಭಿವೃದ್ಧಿ ನಿಗಮ,ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ,ಕರ್ನಾಟಕ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ ಮತ್ತು ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದ ಮೂಲಕ 2025-26 ನೇ ಸಾಲಿಗಾಗಿ ಅನುಷ್ಠಾನಗೊಳಿಸುತ್ತಿರುವ ವಿವಿಧ ಯೋಜನೆಗಳಡಿ ಅರ್ಜಿ ಆಹ್ವಾನಿಸಲಾಗಿದೆ.ಸ್ವಯಂ ಉದ್ಯೋಗ ನೇರಸಾಲ ಯೋಜನೆಯಡಿ ಕುರಿ ಸಾಕಾಣಿಕ ಉದ್ದೇಶಕ್ಕಾಗಿ ಹಾಗೂ ಸ್ವಾವಲಂಬಿ ಸಾರಥಿ, ಪುಡ್ ಕಾರ್ಟ್ (ಮೊಬೈಲ್ ಕಿಚನ್ ಉದ್ದೇಶಕ್ಕಾಗಿ ಮಾತ್ರ) ಯೋಜನೆ, ಉದ್ಯಮಶೀಲತಾ ಅಭಿವೃದ್ಧಿ ಯೋಜನೆ (ಇತರೆ ಉದ್ದೇಶ) ಹಾಗೂ ಮೈಕ್ರೋ ಕ್ರೆಡಿಟ್ ಪ್ರೇರಣಾ…

Read More

ಕಾನೂನ ಪದವಿ ಪಡೆದ ಅಲ್ಪಸಂಖ್ಯಾತ ಅಭ್ಯರ್ಥಿಗಳಿಗೆ ತರಬೇತಿ : ಅರ್ಜಿ ಆಹ್ವಾನ

ಸಪ್ತಸಾಗರ ವಾರ್ತೆ,ವಿಜಯಪುರ, ಆ. 8:ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಕಾನೂನು ಪದವಿ ಪಡೆದಿರುವ ಅಲ್ಪಸಂಖ್ಯಾತ ಅಭ್ಯರ್ಥಿಗಳಿಗೆ ಸರ್ಕಾರಿ ಅಡ್ವೋಕೇಟ್ ಅಥವಾ 20 ವರ್ಷಗಳಿಗಿಂತ ಹೆಚ್ಚಿನ ಅನುಭವವುಳ್ಳ ವಕೀಲರಿಂದ ತರಬೇತಿ ನೀಡಲಾಗುತ್ತಿದ್ದು, ತರಬೇತಿ ಪಡೆಯಲಿಚ್ಛಿಸುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಬಾರ್ ಕೌನ್ಸಿಲ್‍ನಲ್ಲಿ ನೋಂದಾಯಿಸಿರಬೇಕು. ಕುಟುಂಬದ ವಾರ್ಷಿಕ ಆದಾಯ ರೂ.3.50ಲಕ್ಷಕ್ಕೆ ಮೀರಿರಬಾರದು. ಅರ್ಜಿ ಸಲ್ಲಿಸುವ ಕೊನೆಯ ದಿನಾಂಕಕ್ಕೆ 30 ವರ್ಷದೊಳಗಿರಬೇಕು. ಅರ್ಜಿ ಸಲ್ಲಿಸುವ ಕೊನೆಯ ದಿನಾಂಕಕ್ಕೆ 2 ವರ್ಷಗಳ ಅವಧಿಯೊಳಗೆ ಕಾನೂನು ಪದವಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿಬೇಕು.ಅರ್ಜಿ ಸಲ್ಲಿಸಲು…

Read More

ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಸಪ್ತ ಸಾಗರ ವಾರ್ತೆ, ವಿಜಯಪುರ,ಆ.6: ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2025-26ನೇ ಸಾಲಿನಲ್ಲಿ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ಕೋರ್ಸ್‍ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಂದ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತ ಅರ್ಹ ವಿದ್ಯಾರ್ಥಿಗಳು https://scholarships.gov.in ವೆಬ್‍ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆಯ ಗ್ರೇಡ್-1 ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಛಾಯಾಗ್ರಾಹಕರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 5: ಜಿಲ್ಲಾ ನೂತನ ಛಾಯಾಗ್ರಾಹಕರ ಸಂಘದಿಂದ ಜಿಲ್ಲೆಯ ಛಾಯಾಗ್ರಾಹಕರ ಮಕ್ಕಳಿಗೆ ೨೦೨೪-೨೫ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ. ಮತ್ತು ದ್ವಿತೀಯ ಪಿ.ಯು.ಸಿ.ಯಲ್ಲಿ ಶೇ.೮೦ ಕಿಂತ ಹೆಚ್ಚು ಅಂಕ ಪಡೆದು ಉತ್ತೀರ್ಣರಾದ ಛಾಯಾಗ್ರಾಹಕರ ಮಕ್ಕಳಿಗೆ ಜಿಲ್ಲಾ ಮಟ್ಟದಲ್ಲಿ ಸಂಘದಿಂದ ಪ್ರತಿಭಾ ಪುರಸ್ಕಾರ ಮಾಡಲು ನಿರ್ಧರಿಸಲಾಗಿದೆ. ವಿಜಯಪುರ ಜಿಲ್ಲೆಯ ಎಲ್ಲ ತಾಲೂಕಿನ ಛಾಯಾಗ್ರಾಹಕರು ತಮ್ಮ ಮಕ್ಕಳ ಪ್ರಸಕ್ತ ಸಾಲಿನ ಶಾಲೆಯ ಧೃಢೀಕೃತ ಎಸ್.ಎಸ್.ಎಲ್.ಸಿ. ಮತ್ತು ಧೃಢೀಕೃತ ಕಾಲೇಜಿನ ದ್ವಿತೀಯ ಪಿ.ಯು.ಸಿ ಅಂಕಪಟ್ಟಿ, ಆಧಾರ ಕಾರ್ಡ್, ವಿದ್ಯಾರ್ಥಿಯ ಬ್ಯಾಂಕ್…

Read More

ವಿಶ್ವ ಹಿರಿಯ ನಾಗರಿಕರ ದಿನಾಚರಣೆ : ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

ಸಪ್ತ ಸಾಗರ ವಾರ್ತೆ, ವಿಜಯಪುರ, ಆ.4: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ರಾಜ್ಯ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.ಅ.1ರಂದು ರಾಜ್ಯ ಮಟ್ಟದಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆಯನ್ನು ಆಚರಿಸುವ ಸಂದರ್ಭದಲ್ಲಿ ವಿವಿಧ ಕ್ಷೇತ್ರದಲ್ಲಿ ಮತ್ತು ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಸಮಾಜ ಸೇವೆ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಹಿರಿಯ ನಾಗರಿಕರಿಗೆ 6 ವೈಯಕ್ತಿಕ ಪ್ರಶಸ್ತಿ ಹಾಗೂ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿರುವ 1 ಸಂಸ್ಥೆಗೆ…

Read More

ಎತ್ತಿನಬಂಡಿ ಓಟ ಕ್ರೀಡೆ ಆಯೋಜನೆ : ಅರ್ಜಿ ಆಹ್ವಾನ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 31:ಜಿಲ್ಲೆಯಲ್ಲಿ ಎತ್ತಿನಬಂಡಿ ಓಟ ಕ್ರೀಡೆಯನ್ನು ಆಯೋಜಿಸಲಾಗುತ್ತಿದ್ದು, ಎತ್ತಿನಬಂಡಿ ಓಟ ಕ್ರೀಡೆಯಲ್ಲಿ ಆಸಕ್ತ ಹೊಂದಿರುವ ಸಂಘ-ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಎತ್ತಿನಬಂಡೆ ಕ್ರೀಡೆಗೆ ಪ್ರೋತ್ಸಾಹ ಮತ್ತು ಉತ್ತೇಜನ ನೀಡುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳು 2025-26ನೇ ಸಾಲಿನ ಆಯವ್ಯಯ ಭಾಷಣದಲ್ಲಿ ಘೋಷಿಸಿರುತ್ತಾರೆ. ಎತ್ತಿನ ಬಂಡೆ ಕ್ರೀಡೆಗೆ ಪ್ರೋತ್ಸಾಹ ಹಾಗೂ ಉತ್ತೇಜನ ನೀಡಲು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಆಯೋಜಿಸುವ 15 ಸಂಘ-ಸಂಸ್ಥೆಗಳಿಗೆ ತಲಾ 2 ಲಕ್ಷ ರೂ.ಗಳನ್ನು ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು ಆಯ್ಕೆ ಮಾಡುವ ಸಂಘ-ಸಂಸ್ಥೆಗಳಿಗೆ ಅನುದಾನ ಒದಗಿಸಲಾಗುತ್ತದೆ.ಜಿಲ್ಲೆಯಲ್ಲಿಯೂ ಸಹ ಜಿಲ್ಲಾಧಿಕಾರಿಗಳ…

Read More