ಎತ್ತಿನಬಂಡಿ ಓಟ ಕ್ರೀಡೆ ಆಯೋಜನೆ : ಅರ್ಜಿ ಆಹ್ವಾನ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 31:ಜಿಲ್ಲೆಯಲ್ಲಿ ಎತ್ತಿನಬಂಡಿ ಓಟ ಕ್ರೀಡೆಯನ್ನು ಆಯೋಜಿಸಲಾಗುತ್ತಿದ್ದು, ಎತ್ತಿನಬಂಡಿ ಓಟ ಕ್ರೀಡೆಯಲ್ಲಿ ಆಸಕ್ತ ಹೊಂದಿರುವ ಸಂಘ-ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಎತ್ತಿನಬಂಡೆ ಕ್ರೀಡೆಗೆ ಪ್ರೋತ್ಸಾಹ ಮತ್ತು ಉತ್ತೇಜನ ನೀಡುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳು 2025-26ನೇ ಸಾಲಿನ ಆಯವ್ಯಯ ಭಾಷಣದಲ್ಲಿ ಘೋಷಿಸಿರುತ್ತಾರೆ. ಎತ್ತಿನ ಬಂಡೆ ಕ್ರೀಡೆಗೆ ಪ್ರೋತ್ಸಾಹ ಹಾಗೂ ಉತ್ತೇಜನ ನೀಡಲು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಆಯೋಜಿಸುವ 15 ಸಂಘ-ಸಂಸ್ಥೆಗಳಿಗೆ ತಲಾ 2 ಲಕ್ಷ ರೂ.ಗಳನ್ನು ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು ಆಯ್ಕೆ ಮಾಡುವ ಸಂಘ-ಸಂಸ್ಥೆಗಳಿಗೆ ಅನುದಾನ ಒದಗಿಸಲಾಗುತ್ತದೆ.ಜಿಲ್ಲೆಯಲ್ಲಿಯೂ ಸಹ ಜಿಲ್ಲಾಧಿಕಾರಿಗಳ…

Read More

ಶುಲ್ಕ ಮರುಪಾವತಿ ಯೋಜನೆ : ಅರ್ಜಿ ಆಹ್ವಾನ

ಸಪ್ತಸಾಗರ ವಾರ್ತೆ,ವಿಜಯಪುರ,ಜು. 30:ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2025-26ನೇ ಸಾಲಿನ ಮೆಟ್ರಿಕ್ ನಂತರದ ಕೋರ್ಸ್ ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗದ ವಿದ್ಯಾರ್ಥಿಗಳು ಹಾಗೂ ಅಲೆಮಾರಿ, ಅರೆಅಲೆಮಾರಿ ವಿದ್ಯಾರ್ಥಿಗಳಿಂದ ವಿದ್ಯಾರ್ಥಿ ವೇತನ, ಶುಲ್ಕ ಮರುಪಾವತಿ ಹಾಗೂ ವಿದ್ಯಾಸಿರಿ- ಊಟ ಮತ್ತು ವಸತಿ ಸಹಾಯ ಯೋಜನೆಗಾಗಿ ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತ ಅರ್ಹ ವಿದ್ಯಾರ್ಥಿಗಳು https://ssp.postmatric.karnataka.gov.in ವೆಬ್‌ಸೈಟ್ ನಲ್ಲಿ ಸೆಪ್ಟೆಂಬರ್ 30ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.ಹೆಚ್ಚಿನ ಮಾಹಿತಿಗಾಗಿ https://bcwd.karnataka.gov.in ಹಾಗೂ 8050770005 ಸಂಪರ್ಕಿಸಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಆಯುಕ್ತರು…

Read More

ಪ್ರೋತ್ಸಾಹ ಧನ: ಅರ್ಜಿ ಆಹ್ವಾನ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 15:ಸಮಾಜ ಕಲ್ಯಾಣ ಇಲಾಖೆಯಿಂದ ಪ್ರೋತ್ಸಾಹ ಧನ ಪಡೆಯಲು 2024-25ನೇ ಶೈಕ್ಷಣಿಕ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಹಾಗೂ ಮೆಟ್ರಿಕ್ ನಂತರದ ಕೋರ್ಸ್ಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿಯನ್ನುhttps://swdservice.karnataka.gov.in/PrizeMoneyClientAPP/ ವೆಬ್‌ಸೈಟ್ ಮೂಲಕ ಸಲ್ಲಿಸಬಹುದಾಗಿದ್ದು, ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಸಮಾಜ ಕಲ್ಯಾಣ ಇಲಾಖೆ ಜಿಲ್ಲಾ-ತಾಲೂಕಾ ಮಟ್ಟದ ಕಚೇರಿಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More