ಕೇಂದ್ರೀಯ ಆಯುಷ್ ಪರೀಕ್ಷೆ ಪ್ರಾಧಿಕಾರದ ಸಲಹಾ ಸಮಿತಿ ಸದಸ್ಯರನ್ನಾಗಿ ಡಾ. ಅಶೋಕ ಪಾಟೀಲ ನಾಮನಿರ್ದೇಶನ

ಸಪ್ತಸಾಗರ ವಾರ್ತೆ, ವಿಜಯಪುರ, ಜ. 14: ಬಿ.ಎಲ್.ಡಿ.ಇ ಸಂಸ್ಥೆಯ ಎ.ವಿಎಸ್ ಆಯುರ್ವೇದ ಮಹಾವಿದ್ಯಾಲಯದ ಪ್ರಾಚಾರ್ಯಡಾ. ಅಶೋಕ ಪಾಟೀಲ ಅವರನ್ನು ಕೇಂದ್ರೀಯ ಆಯುಷ್ ಪರೀಕ್ಷೆ ಪ್ರಾಧಿಕಾರದ ಸಲಹಾ ಸಮಿತಿ ಸದಸ್ಯರನ್ನಾಗಿ ನಾಮನಿರ್ದೇಶನ ಮಾಡಲಾಗಿದೆ.ಭಾರತೀಯ ಚಿಕಿತ್ಸೆ ಪದ್ಧತಿಗಳ ಆಯೋಗ ಮತ್ತು ಆಯುಷ್ ಇಲಾಖೆ ಮೂರು ವರ್ಷಗಳ ಅವಧಿಗೆ ನಾಮ ನಿರ್ದೇಶನ ಮಾಡಲಾಗಿದೆ.ಡಾ. ಅಶೋಕ ಪಾಟೀಲ ಅವರು 19 ವರ್ಷಗಳ ಸುಧೀರ್ಘ ಅಧ್ಯಾಪಕ ವೃತ್ತಿಯಲ್ಲಿದ್ದು ಅನೇಕ ಸಂಶೋಧನೆಗಳನ್ನು ಕೈಗೊಂಡು 35 ಕ್ಕೂ ಹೆಚ್ಚು ಪ್ರಭಂದಗಳನ್ನು ಮಂಡಿಸಿದ್ದಾರೆ. ನಾನಾ ಆರೋಗ್ಯ ವಿಶ್ವವಿದ್ಯಾಲಯಗಳಲ್ಲಿ ಪರೀಕ್ಷಕರಾಗಿ…

Read More

ಜಿಲ್ಲಾ ಕಾನಿಪ ನೂತನ ಅಧ್ಯಕ್ಷ, ಉಪಾಧ್ಯಕ್ಷರಿಗೆ ಗೌರವ ಸನ್ಮಾನ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 30:ತಾಲೂಕಿನ ನಾಗಠಾಣ ಗ್ರಾಮದಲ್ಲಿ ಜರುಗಿದ ಶ್ರೀ ಮಲ್ಲಿಕಾರ್ಜುನ ಪ್ರಾಥಮಿಕ ಮತ್ತು ಪ್ರೌಢ ಶಾಲೆಯ ದಶಮಾನೋತ್ಸವ ಹಾಗೂ ಸಾಂಸ್ಕೃತಿಕ ಸಂಭ್ರಮ ಕಾರ್ಯಕ್ರಮದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ನೂತನವಾಗಿ ಅಧ್ಯಕ್ಷರಾಗಿ ಆಯ್ಕೆಯಾದ ಅಶೋಕ ಯಡಳ್ಳಿ, ಉಪಾಧ್ಯಕ್ಷರಾಗಿ ಆಯ್ಕೆಯಾದ ಶಶಿಕಾಂತ ಮೆಂಡೆಗಾರ ಅವರನ್ನು ಹಾಗೂ ಕರುನಾಡು ಪ್ರಭ ಪತ್ರಿಕೆಯ ಸಂಸ್ಥಾಪಕ ಶರಣು ಮಸಳಿ ಅವರನ್ನು ಶಾಲೆಯ ವತಿಯಿಂದ ಸನ್ಮಾನಿಸಲಾಯಿತು.ಈ ಸಂದರ್ಭದಲ್ಲಿ ಕಲ್ಲಯಾರೂಢ ಮಠದ ಪ್ರಜ್ಞಾನಂದ ಸ್ವಾಮೀಜಿ, ಗೂಳಪ್ಪ ಪೂಜಾರಿ, ಶರಣಬಸು ಪೂಜಾರಿ, ನಾಗಠಾಣ ಮತಕ್ಷೇತ್ರದ…

Read More

ನೂತನ ಅಪರ ಜಿಲ್ಲಾಧಿಕಾರಿ ಡಾ.ಔದ್ರಾಮ ಅಧಿಕಾರ ಸ್ವೀಕಾರ

ಸಪ್ತಸಾಗರ ವಾರ್ತೆ, ವಿಜಯಪುರ,ಡಿ.29: ನೂತನ ಅಪರ ಜಿಲ್ಲಾಧಿಕಾರಿಯಾಗಿ ಡಾ.ಔದ್ರಾಮ ಅವರು ಸೋಮವಾರ ಅಧಿಕಾರ ವಹಿಸಿಕೊಂಡರು.ಡಾ.ಔದ್ರಾಮ ಅವರು 2004ನೇ ಬ್ಯಾಚಿನ ಕೆಎಎಸ್ ಅಧಿಕಾರಿಯಾಗಿದ್ದು, ಅವರು ಈ ಹಿಂದೆ ವಿಜಯಪುರ ಮಹಾನಗರ‌ ಪಾಲಿಕೆ ಆಯುಕ್ತರಾಗಿ, ಅಪರ ಜಿಲ್ಲಾಧಿಕಾರಿಯಾಗಿ, ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾಗಿ ಹಾಗೂ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾಗಿ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ.

Read More

ನಾನಾ ಕ್ಷೇತ್ರಗಳ ಗಣ್ಯರ ವಿಜನ್ ಗ್ರುಪ್ ರಚನೆ: ಸದಸ್ಯರಾಗಿ ಡಾ. ಬಿರಾದಾರ ನೇಮಕ

ಸಪ್ತ ಸಾಗರ ವಾರ್ತೆ, ವಿಜಯಪುರ, ಸೆ. 24: ರಾಜ್ಯ ಧಾರ್ಮಿಕ ಇಲಾಖೆ ವ್ಯಾಪ್ತಿಯ ಐತಿಹಾಸಿಕ ದೇವಾಲಯಗಳ ಸಮಗ್ರ ಅಭಿವೃದ್ಧಿ ಕೈಗೊಳ್ಳಲು ನಾನಾ ಕ್ಷೇತ್ರಗಳ ಗಣ್ಯರ ವಿಜನ್ ಗ್ರುಪ್ ರಚಿಸಲಾಗಿದ್ದು, ಸಮಿತಿಯ ಸದಸ್ಯರಾಗಿ ಡಾ. ಮಹಾಂತೇಶ ಬಿರಾದಾರ ಅವರನ್ನು ನೇಮಕ ಮಾಡಲಾಗಿದೆ. ಇವರು ಉತ್ತರ ಕರ್ನಾಟಕದ ಏಕೈಕ ಪ್ರತಿನಿಧಿಯಾಗಿದ್ದಾರೆ.ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ ಅವರ ಸಾರ್ವಜನಿಕ ಸಂಪರ್ಕಾಧಿಕಾರಿಯೂ ಆಗಿರುವ ಡಾ. ಮಹಾಂತೇಶ ಬಿರಾದಾರ ಅವರನ್ನು ಏಳು ಜನ ಸದಸ್ಯರನ್ನು ಹೊಂದಿರುವ ವಿಜನ್ ಗ್ರುಪ್ ಸದಸ್ಯರನ್ನಾಗಿ ಧಾರ್ಮಿಕ ಇಲಾಖೆ ಆಯುಕ್ತರು…

Read More

ವಿಜಯಪುರ ತಾಲೂಕು ರೈತ ಸಂಘದ ನೂತನ ಪದಾಧಿಕಾರಿಗಳ ನೇಮಕ

ಸಪ್ತಸಾಗರ ವಾರ್ತೆ ವಿಜಯಪುರ, ಆ. 30: ತಾಲೂಕಿನ ಕರ್ನಾಟಕ ರಾಜ್ಯ ರೈತ ಸಂಘದ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದೆ.ಮಹಾದೇವಪ್ಪ ತೇಲಿ (ಅಧ್ಯಕ್ಷ), ಜಯಸಿಂಗ್ ರಜಪೂತ ( ಪ್ರಧಾನ ಕಾರ್ಯದರ್ಶಿ) ಪ್ರಭುಲಿಂಗ ಕಾರಜೋಳ ( ಯುವ ಘಟಕ ಅಧ್ಯಕ್ಷ) ಅವರನ್ನು ಬೆಳಗಾವಿ ವಿಭಾಗದ ಉಪಾಧ್ಯಕ್ಷ ಬಸನಗೌಡ ಧರ್ಮಗೊಂಡ ಹಾಗೂ ರಾಜ್ಯ ಯುವ ಘಟಕದ ಸಂಚಾಲಕ ಸಿದ್ಧನಗೌಡ ಪಾಟೀಲ ಅವರು ಎಲ್ಲ ಪದಾಧಿಕಾರಿಗಳ ಸಮಕ್ಷಮದಲ್ಲಿ ಒಮ್ಮತದಿಂದ ಆಯ್ಕೆ ಮಾಡಿ ಆದೇಶ ಹೊರಡಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Read More

ವಿಜಯಪುರ ಬಿಜೆಪಿ ನಗರ ಮಂಡಲ ಅಧ್ಯಕ್ಷರಾಗಿ ಪಾಟೀಲ್ ನೇಮಕ

ಸಪ್ತಸಾಗರ ವಾರ್ತೆ, ವಿಜಯಪುರ,ಆ. 18:ವಿಜಯಪುರ ಬಿಜೆಪಿ ನಗರ ಮಂಡಲ ಅಧ್ಯಕ್ಷರಾಗಿ ಸಂದೀಪ್ ರಾಮನಗೌಡ ಪಾಟೀಲ್ ಅವರನ್ನು ನೇಮಕ ಮಾಡಲಾಗಿದೆ.ರಾಜ್ಯದ್ಯಕ್ಷರ ಸೂಚನೆ ಮೇರೆಗೆ ಪಕ್ಷದ ಸಂಘಟನೆ ಹಿತ ದೃಷ್ಟಿಯಿಂದ ಪಾಟೀಲ್ ಅವರನ್ನು ನೇಮಕ ಮಾಡಿ ಜಿಲ್ಲಾ ಅಧ್ಯಕ್ಷ ಗುರುಲಿಂಗಪ್ಪ ಅಂಗಡಿ ಆದೇಶ ಹೊರಡಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Read More