ಮಕ್ಕಳು ದೇಶದ ಆಸ್ತಿ, ಅವರನ್ನು ಪ್ರೀತಿಯಿಂದ ಬೆಳೆಸಿ-ಮೇಜರ್ ಎಸ್.ಸಿ. ಆನಂದ
ಸಪ್ತಸಾಗರ ವಾರ್ತೆ ವಿಜಯಪುರ,ಮೇ. 7 : “ಮಕ್ಕಳನ್ನು ಕೇವಲ ಒಳ್ಳೆಯ ಶಾಲೆಗೆ ಸೇರಿಸಿದರೆ ಪಾಲಕರ ಜವಾಬ್ದಾರಿ ಮುಗಿಯುವುದಿಲ್ಲ. ಅವರ ದೈನಂದಿನ ಚಟುವಟಿಕೆಗಳನ್ನು ಗಮನಿಸಿ, ಅವರಲ್ಲಿ ನಾಗರಿಕ ಪ್ರಜ್ಞೆ ಹಾಗೂ ಸಂಸ್ಕಾರ ಬೆಳೆಸುವುದು ತಂದೆ-ತಾಯಂದಿರ ಆದ್ಯ ಕರ್ತವ್ಯವಾಗಿದೆ,” ಎಂದು ಮೇಜರ್ ಎಸ್ ಸಿ ಆನಂದ ಅಭಿಪ್ರಾಯಪಟ್ಟರು. ವಿಜಯಪುರ ಜಿಲ್ಲೆಯ ಕನ್ನೂರಿನ ಶಾಂತಿ ಕುಟೀರ ಆಶ್ರಮದಲ್ಲಿ, ಶಾಂತಿ ಕುಟೀರ ಟ್ರಸ್ಟ್ ಹಾಗೂ ಶ್ರೀಶೈಲೇಶ್ವರ ವಿದ್ಯಾಕೇಂದ್ರ ಸಂಡೂರು ಮತ್ತು ಭಾರತೀಯ ಸುರಾಜ್ಯ ಸಂಸ್ಥೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ ಉಚಿತ ಶೈಕ್ಷಣಿಕ…


