ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಸೂಪರ್ ಮಾಮ್’ ಆಡಿಷನ್ ಆಗಸ್ಟ್ 1ರಂದು ವಿಜಯಪುರದಲ್ಲಿ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 29:ಜೀ ಕನ್ನಡ ವಾಹಿನಿಯ ಅತ್ಯಂತ ಜನಪ್ರಿಯ ನೃತ್ಯ ರಿಯಾಲಿಟಿ ಶೋ ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್’ ಇದೀಗ ‘ಸೂಪರ್ ಮಾಮ್’ ವಿಶೇಷ ಆವೃತ್ತಿಯೊಂದಿಗೆ ಕನ್ನಡಿಗರ ಮುಂದೆ ಬರಲಿದ್ದು, ಇದರ ಆಡಿಷನ್‌ಗಳು ಆಗಸ್ಟ್ 1ರಂದು ವಿಜಯಪುರದಲ್ಲಿ ನಡೆಯಲಿವೆ.ಮನೆ, ಕುಟುಂಬ, ಉದ್ಯೋಗ ಹಾಗೂ ಮಕ್ಕಳ ಜವಾಬ್ದಾರಿಗಳ ನಡುವೆ ತಮ್ಮ ಪ್ರತಿಭೆಯನ್ನು ಮರೆಮಾಚಿಕೊಂಡಿರುವ ಅಮ್ಮಂದಿರಿಗೆ ವೇದಿಕೆ ಕಲ್ಪಿಸುವ ಉದ್ದೇಶದಿಂದ ಈ ವಿಶೇಷ ಆಡಿಷನ್ ಆಯೋಜಿಸಲಾಗಿದೆ. ನೃತ್ಯದ ಬಗ್ಗೆ ಆಸಕ್ತಿ ಹೊಂದಿರುವ ಹಾಗೂ ಉತ್ತಮವಾಗಿ ಹೆಜ್ಜೆ ಹಾಕಬಲ್ಲ ಅಮ್ಮಂದಿರು ಆಡಿಷನ್‌ನಲ್ಲಿ…

Read More

ಆಗಸ್ಟ್‌ನಲ್ಲಿ ಅದ್ದೂರಿ ರಾಯಣ್ಣ ಉತ್ಸವ: ಸಿದ್ಧತೆ ಆರಂಭ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 14:ದೇಶಕ್ಕಾಗಿ ಪ್ರಾಣಾರ್ಪಣೆ ಮಾಡಿದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಸ್ಮರಣಾರ್ಥ ರಾಯಣ್ಣ ಉತ್ಸವವನ್ನು ಆಗಸ್ಟ್ ತಿಂಗಳಲ್ಲಿ ವಿಜಯಪುರ ನಗರದ ದರಬಾರ ಪ್ರೌಢಶಾಲೆ ಮೈದಾನದಲ್ಲಿ ಅದ್ದೂರಿಯಾಗಿ ಆಯೋಜಿಸಲಾಗುವುದು ಎಂದು ಹುಲಜಂತಿ ಪಟ್ಟದ ಮಹಾಳಿಂಗರಾಯ ಮಹಾರಾಯರು ತಿಳಿಸಿದರು.ನಗರದ ಖಾಸಗಿ ಹೋಟೆಲ್ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಉತ್ಸವವನ್ನು ಯಶಸ್ವಿಯಾಗಿ ನಡೆಸಲು ಇಂದಿನಿಂದಲೇ ಅಗತ್ಯ ಸಿದ್ಧತೆಗಳನ್ನು ಆರಂಭಿಸಲಾಗಿದ್ದು, ಸಮಾಜದ ಎಲ್ಲ ವರ್ಗಗಳ ಸಹಕಾರ ಅಗತ್ಯ ಎಂದರು.ಕರ್ನಾಟಕ ಪ್ರದೇಶ ಕುರುಬರ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ…

Read More

ಆ. 24ರಂದು ಸ್ಪರ್ಧಾತ್ಮಕ ಪರೀಕ್ಷೆಗಳ ಸಿದ್ಧತೆ ಕುರಿತು ಕಾರ್ಯಗಾರ, ಪೋಸ್ಟರ್ ಬಿಡುಗಡೆ

ಸಪ್ತಸಾಗರ ವಾರ್ತೆ, ವಿಜಯಪುರ,ಆ. 18: ಜಿಲ್ಲೆಯಲ್ಲಿ ಸರಕಾರಿ ಉದ್ಯೋಗದ ಅಭಿಲಾಷೆಯಿಂದ ಓದುತ್ತಿರುವ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ಉದ್ದೇಶದಿಂದ ಸಮಾಜ ಕಲ್ಯಾಣ ಇಲಾಖೆ ಮತ್ತು ದಲಿತ ವಿದ್ಯಾರ್ಥಿ ಪರಿಷತ್ ಸಹಯೋಗದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ಹೇಗೆ ? ಎಂಬ ಒಂದು ದಿನದ ಕಾರ್ಯಾಗಾರವನ್ನು ಆ. 24ರಂದು ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಆಯೋಜಿಸಲಾಗಿದೆ.ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಮಹೇಶ ಪೋತದಾರ ಅವರು ಕಾರ್ಯಗಾರದ ಪೋಸ್ಟರ್ ಬಿಡುಗಡೆ ಮಾಡಿದರು.ದಲಿತ ವಿದ್ಯಾರ್ಥಿ ಪರಿಷತ್ ಮುಖಂಡ ಅಕ್ಷಯಕುಮಾರ ಅಜಮನಿ ಅವರು ಮಾತನಾಡಿ,…

Read More

ಆ. 18ರಿಂದ ಜಿಲ್ಲೆಯಾದ್ಯಂತ ತಾಲೂಕಾ ಮಟ್ಟದ ಕ್ರೀಡಾಕೂಟ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 16: ಜಿಲ್ಲೆಯಾದ್ಯಂತ ತಾಲೂಕಾ ಮಟ್ಟದ ದಸರಾ ಕ್ರೀಡಾಕೂಟವನ್ನು ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಆಗಸ್ಟ್ 18 ರಿಂದ ಹಮ್ಮಿಕೊಳ್ಳಲಾಗಿದೆ.ಆ.18ರಂದು ಸಿಂದಗಿ ತಾಲೂಕಾ ಕ್ರೀಡಾಕೂಟ ಸಿಂದಗಿ ತಾಲೂಕಾ ಕ್ರಿಡಾಂಗಣದಲ್ಲಿ, ಆಗಸ್ಟ್ 19ರಂದು ಮುದ್ದೇಬಿಹಾಳ ತಾಲೂಕಿನ ಕ್ರೀಡಾಕೂಟವನ್ನು ಮುದ್ದೇಬಿಹಾಳದ ಎಂಜಿವಿಸಿ ಕಾಲೇಜ್ ಮುದ್ದೇಬಿಹಾಳದಲ್ಲಿ ಹಾಗೂ ದೇವರ ಹಿಪ್ಪರಗಿಯ ಶ್ರೀ ಸಿದ್ಧೇಶ್ವರ ಪ್ರೌಢಶಾಲೆ ಮೈದಾನದಲ್ಲಿ, ಆಗಸ್ಟ್ 21ರಂದು ತಾಳಿಕೋಟೆ ತಾಲೂಕಿನ ಕ್ರೀಡಾಕೂಟವನ್ನು ಬ್ರಿಲಿಯಂಟ್ ಹೈಸ್ಕೂಲಿನಲ್ಲಿ ಹಾಗೂ ಆಲಮೇಲ ತಾಲೂಕಿನ ಕ್ರೀಡಾಕೂಟವನ್ನು ಸರಕಾರಿ ಹಿರಿಯ ಮಾದರಿ ಶಾಲೆಯ ಆವರಣದಲ್ಲಿ,…

Read More

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ದೇಶ ಪ್ರೇಮ ಇತರರಿಗೆ ಆದರ್ಶ: ಸಚಿವ ಎಂ. ಬಿ. ಪಾಟೀಲ

ಸಪ್ತಸಾಗರ ವಾರ್ತೆ, ವಿಜಯಪುರ, ಆ.16: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣರ ದೇಶಪ್ರೇಮ, ಹೋರಾಟದ ಕಿಚ್ಚು ಸದಾ ಆದರ್ಶವಾಗಿವೆ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.ಶುಕ್ರವಾರ ತಿಕೋಟಾ ತಾಲೂಕಿನ ರತ್ನಾಪುರ ಗ್ರಾಮದಲ್ಲಿ ಸಂಗೊಳ್ಳಿ ರಾಯಣ್ಣ ಮೂರ್ತಿ ಉದ್ಘಾಟನೆ ಮತ್ತು ಬಬಲೇಶ್ವರ ತಾಲೂಕಿನ ಕಾಖಂಡಕಿ ಬಳಿಯ ಅಗಸನಹಳ್ಳಿಯಲ್ಲಿ ಸಂಗೊಳ್ಳಿ ರಾಯಣ್ಣನವರ 229ನೇ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.ಸಂಗೊಳ್ಳಿ ರಾಯಣ್ಣ ನಾಡಿನ ಏಕತೆ ಮತ್ತು ಸ್ವಾಭಿಮಾನದ ಶಾಶ್ವತ ಸಂಕೇತ. ಕಿತ್ತೂರು ಸಂಸ್ಥಾನವನ್ನು…

Read More

ಆ. 19ರೊಳಗಾಗಿ ಒಳ ಮೀಸಲಾತಿ ಜಾರಿ ಮಾಡದಿದ್ದರೆ ಉಗ್ರ ಹೋರಾಟ: ಗೋವಿಂದ ಕಾರಜೋಳ ಎಚ್ಚರಿಕೆ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 16:ನಾಗಮೋಹನ್ ದಾಸ್ ವರದಿ ಶಿಫಾರಸ್ಸು ಆಧರಿಸಿ ರಾಜ್ಯದಲ್ಲೂ ಒಳ ಮೀಸಲಾತಿ ಜಾರಿ ಮಾಡಬೇಕು ಎಂದು ಚಿತ್ರದುರ್ಗ ಸಂಸದ ಗೋವಿಂದ ಕಾರಜೋಳ ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.ಶನಿವಾರ ನಗರದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಒಳ ಮೀಸಲಾತಿ ವಿಷಯದಲ್ಲಿ ರಾಜ್ಯ ಸರ್ಕಾರ ಜಗಳ ಹಚ್ಚುವ ಕೆಲಸದಲ್ಲಿ ತೊಡಗಿದೆ. ಇದು ಸರಿಯಲ್ಲ ಎಂದು ಕಾರಜೋಳ ಹೇಳಿದರು.ಮೀಸಲಾತಿಯಲ್ಲಿ ಎಸ್ ಸಿ 101 ಹಾಗೂ ಎಸ್ ಟಿ 56 ಜಾತಿಗಳಿವೆ. ಒಳ ಮೀಸಲಾತಿ ವಿಚಾರವಾಗಿ 2004 ರಲ್ಲಿ ಸದಾಶಿವ…

Read More

ಬೆಂಗಳೂರಿನಲ್ಲಿ ಆ. 17ರಂದು ರಾಜ್ಯಮಟ್ಟದ ರೋಲ್ ಬಾಲ್ ಕ್ರೀಡಾಕೂಟ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 15: ಪ್ರಸಕ್ತ ಸಾಲಿನ 8 ನೇ ರಾಜ್ಯಮಟ್ಟದ ರೋಲ್ ಕ್ರೀಡಾಕೂಟವು ಆ. 17 ರಂದು ಸ್ಕೆಟಿಂಗ್ ಅಕಾಡೆಮಿ ಮಲ್ಲಸಂದ್ರ ವತಿಯಿಂದ ಬೆಂಗಳೂರಿನಲ್ಲಿ ನಡೆಯಲಿದೆ. ಸುಪರ ಮಿನಿ 9 ವರ್ಷದ ಒಳಗಡೆ, ಮಿನಿ, 11 ವರ್ಷದ ಒಳಗಡೆ ಮತ್ತು 14 ವರ್ಷದ ಒಳಗಡೆ ಬಾಲಕ, ಬಾಲಕಿಯರು ಈ ಕ್ರೀಡಾಕೂಟದಲ್ಲಿ ವಿಜಯಪುರ ಜಿಲ್ಲಾ ರೊಲ ಬಾಲ ಕ್ರೀಡಾಪಟುಗಳು ಭಾಗವಹಿಸಬೇಕೆಂದು ವಿಜಯಪುರ ಜಿಲ್ಲಾ ರೋಲ್ ಬಾಲ ಸಂಸ್ಥೆ ಯ, ಸಂಸ್ಥಾಪಕ ಪ್ರಧಾನ ಕಾರ್ಯದರ್ಶಿ ಬಸವರಾಜ ಬಾಗೇವಾಡಿ…

Read More

ಸುಕ್ಷೇತ್ರ ಧರ್ಮಸ್ಥಳದ ಅಪಪ್ರಚಾರದ ವಿರುದ್ಧ ಆಗಸ್ಟ್ 13ರಂದು ಪ್ರತಿಭಟನೆ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 11:ಸುಕ್ಷೇತ್ರ ಧರ್ಮಸ್ಥಳದ ವಿರುದ್ಧ ನಡೆದಿರುವ ಅಪಪ್ರಚಾರವನ್ನು ಖಂಡಿಸಿ ಆ. 13ರಂದು ಬೃಹತ್ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ ಎಂದು ಶ್ರೀಧರ್ಮಸ್ಥಳ ಭಕ್ತಾಭಿಮಾನಿ ಹಾಗೂ ಲಿಂಬೆ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಅಶೋಕ ಅಲ್ಲಾಪುರ ಹೇಳಿದರು.ಸೋಮವಾರ ನಗರದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿದರು.ಶ್ರೀ ಧರ್ಮಸ್ಥಳದ ಬಗ್ಗೆ ಷಡ್ಯಂತ್ರ ರೂಪಿಸಿ ಸುಕ್ಷೇತ್ರಕ್ಕೆ ಕೆಟ್ಟ ಹೆಸರು ತರಲು ಪ್ರಯತ್ನ ನಡೆದಿದೆ. ಇದನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ ಎಂದರು.ಆ. 13ರಂದು ವಿಜಯಪುರ ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಡಾ….

Read More

ಆ. 11 ರಂದು ಬಿ.ಎಲ್.ಡಿ.ಇ ಲೈಫ್ ಕೇರ್ ಪ್ರೊಡಕ್ಟ್ಸ್ ಘಟಕ ಉದ್ಘಾಟನೆ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 8: ನಗರದ ಬಿ.ಎಲ್.ಡಿ.ಇ ಲೈಫ್ ಕೇರ್ ಪ್ರೊಡಕ್ಟ್ಸ್ ಗಳ ಘಟಕವಾದ ಆರೋಗ್ಯ ಫಾರ್ಮಸಿ ಉದ್ಘಾಟನೆ ಕಾರ್ಯಕ್ರಮ ಆಗಷ್ಡ 11ರಂದು ಸೋಮವಾರ ನಡೆಯಲಿದೆ.770 ಲಿಂಗದ ಗುಡಿ ಹತ್ತಿರವಿರುವ ಬಿ.ಎಲ್.ಡಿ ಸೌಹಾರ್ದ ಸಹಕಾರಿ ಶಾಖೆಯ ನೆಲ ಅಂತಸ್ತಿನಲ್ಲಿ ಕಟ್ಟಡದಲ್ಲಿ ಬೆಳಿಗ್ಗೆ 10 ಗಂಟೆಗೆ ನಡೆಯಲಿರುವ ಕಾರ್ಯಕ್ರಮದಲ್ಲಿ ಜ್ಞಾನಯೋಗಾಶ್ರಮದ ಅಧ್ಯಕ್ಷ ಶ್ರೀ ಬಸವಲಿಂಗ ಸ್ವಾಮೀಜಿ ಸಾನಿಧ್ಯ ವಹಿಸಲಿದ್ದಾರೆ. ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಶಿವಾನಂದ ಮಾಸ್ತಿಹೊಳಿ, ಬಿ.ಎಲ್.ಡಿ.ಇ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನ ಪರಿಷತ ಶಾಸಕ…

Read More

ಆ. ೧೨ರಿಂದ೧೪ ರವರೆಗೆ ರಾಜ್ಯವ್ಯಾಪಿ ಜಿಲ್ಲಾ ಮಟ್ಟದ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಪ್ರತಿಭಟನಾ ಧರಣಿ

ಸಪ್ತಸಾಗರ ವಾರ್ತೆ, ವಿಜಯಪುರ,ಆ.7:ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆ.೧೨, ೧೩ ಹಾಗೂ ೧೪ರಂದು ರಾಜ್ಯಾದ್ಯಂತ ಅಹೋರಾತ್ರಿ ಧರಣಿ ನಡೆಸಲು ನಿರ್ಧರಿಸಿದ್ದಾರೆ. ಎಂದು ಆಶಾ ಸಂಘಟನೆ ರಾಜ್ಯ ಉಪಾಧ್ಯಕ್ಷ ಮಲ್ಲಿಕಾರ್ಜುನ ಎಚ್.ಟಿ. ಅವರು ತಿಳಿಸಿದ್ದಾರೆ.ಗುರುವಾರ ನಗರದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.ಆಶಾ ಕಾರ್ಯಕರ್ತೆಯರು ಗ್ರಾಮೀಣ ಮತ್ತು ನಗರ ಕೊಳಚೆ ಪ್ರದೇಶದ ಆರೋಗ್ಯದ ಆಶಾಕಿರಣ. ಆರೋಗ್ಯ ಸೇವೆಗಳನ್ನು ಪಡೆಯಲು ಕಷ್ಟಪಡುವ ಗ್ರಾಮೀಣ ಜನತೆಯ, ವಿಶೇಷವಾಗಿ ಮಹಿಳೆಯರು ಮತ್ತು ಮಕ್ಕಳ ಯಾವುದೇ ಆರೋಗ್ಯ ಸಂಬಂಧಿತ ಬೇಡಿಕೆಗಳಿಗೆ ಆಶಾ ಮೊದಲ ಕರೆ ಕೇಂದ್ರವಾಗಿದೆ. ಜನತೆಯ…

Read More