ಪ್ರತಿಯೊಬ್ಬರಿಗೂ ಧರ್ಮ ಪ್ರಜ್ಞೆ ಮುಖ್ಯ-ಉಜ್ಜಯಿನಿ ಜಗದ್ಗುರು ಶ್ರೀಗಳು
ಸಪ್ತಸಾಗರ ವಾರ್ತೆ, ವಿಜಯಪುರ, ಫೆ. 15:ಬದುಕಿನಲ್ಲಿ ಭಗವಂತನನ್ನು ಮರೆಯದಿರಿ. ಪ್ರೀತಿ-ಕರುಣೆಯೇ ನಿಜವಾದ ಧರ್ಮ. ಬದುಕಿನಲ್ಲಿ ಗಳಿಸುವುದನ್ನು ಕಲಿತಂತೆ ಬದುಕುವುದನ್ನು ಕಲಿಯಬೇಕಾದರೆ ಪ್ರತಿಯೊಬ್ಬರಿಗೂ ಧರ್ಮ ಪ್ರಜ್ಞೆ ಮುಖ್ಯ ಎಂದು ಉಜ್ಜಯಿನಿ ಜಗದ್ಗುರು ಶ್ರೀ ಸಿದ್ಧಲಿಂಗ ರಾಜದೇಶಿಕೇಂದ್ರ ಶಿವಾಚಾರ್ಯರು ಹೇಳಿದರು.ರವಿವಾರ ತಾಲೂಕಿನ ನಾಗಠಾಣ ಗ್ರಾಮದ ಉದಯಲಿಂಗೇಶ್ವರ ಹಿರೇಮಠದಲ್ಲಿ ಮಹಾಶಿವರಾತ್ರಿ ನಿಮಿತ್ತ ಉದಯಲಿಂಗೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಹಮ್ಮಿಕೊಂಡ ಧರ್ಮಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.ಜನಮನವನ್ನು ನಿತ್ಯವೂ ಹಸನುಗೊಳಿಸುತ್ತಾ ನಿತ್ಯ ನೂತನ ಬದುಕಿಗೆ ಕಾರಣವಾಗಿ ನೀತಿ-ನಿಯಮ ಪಾಲನೆಗೆ ಉನ್ನತ ಜೀವನ ಮೌಲ್ಯಗಳಿಗೆ ಸದಾ…


