ಅವಧಿಗೆ ಮುನ್ನವೇ ಶೇ.100 ಸಾಧನೆ: ಬಬಲೇಶ್ವರದ ಮತಗಟ್ಟೆ ಅಧಿಕಾರಿಗಳಿಗೆ ಸನ್ಮಾನ

ಸಪ್ತಸಾಗರ ವಾರ್ತೆ,ವಿಜಯಪುರ, ಜು.16:2026ರ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ನಿಗದಿತ ಅವಧಿಗೂ ಮುನ್ನವೇ ಶೇ.100ರಷ್ಟು ಪ್ರಗತಿ ಸಾಧಿಸಿದ ಬಬಲೇಶ್ವರ ವಿಧಾನಸಭಾ ಮತಕ್ಷೇತ್ರದ ಮತಗಟ್ಟೆ ಮಟ್ಟದ ಅಧಿಕಾರಿಗಳು (ಬಿಎಲ್‌ಒ) ಹಾಗೂ ಮತಗಟ್ಟೆ ಮೇಲ್ವಿಚಾರಕರನ್ನು ಗುರುವಾರ ನಗರದ ಉಪ ವಿಭಾಗಾಧಿಕಾರಿಗಳ ಕಚೇರಿಯಲ್ಲಿ ಸನ್ಮಾನಿಸಿ ಅಭಿನಂದಿಸಲಾಯಿತು.ಮತದಾರರ ಪಟ್ಟಿ ಪರಿಷ್ಕರಣೆಯ ಅಂಗವಾಗಿ ಗಣತಿ ನಮೂನೆಗಳ ವಿತರಣೆ ಹಾಗೂ ಡಿಜಿಟೈಜೇಶನ್ ಕಾರ್ಯವನ್ನು ಸಮಯಕ್ಕಿಂತ ಮುಂಚಿತವಾಗಿ ಯಶಸ್ವಿಯಾಗಿ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಈ ಗೌರವ ಸಲ್ಲಿಸಲಾಯಿತು.29-ಬಬಲೇಶ್ವರ ವಿಧಾನಸಭಾ ಮತಕ್ಷೇತ್ರದ ಭಾಗ ಸಂಖ್ಯೆ 84ರ ಮತಗಟ್ಟೆ…

Read More

ಬಬಲೇಶ್ವರದಲ್ಲಿ ಎಸ್‌ ಐ ಆರ್‌ ಶೇ. 99.84 ರಷ್ಟು ಪ್ರಗತಿ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 14:ಬಬಲೇಶ್ವರ ವಿಧಾನಸಭಾ ಮತಕ್ಷೇತ್ರದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ ಐಆರ್‌)ಗೆ ಸಂಬಂಧಿಸಿದಂತೆ ಮತಕ್ಷೇತ್ರದ ರಾಜಕೀಯ ಪಕ್ಷದ ಮುಖಂಡರೊಂದಿಗೆ ನಗರದ ಉಪ ವಿಭಾಗಾಧಿಕಾರಿಗಳ ಕಚೇರಿಯಲ್ಲಿ ಸಭೆ ನಡೆಯಿತು.ವಿಜಯಪುರ ಉಪ ವಿಭಾಗಾಧಿಕಾರಿ ಗುರುನಾಥ ದಡ್ಡೆ ಮಾತನಾಡಿ, ಬಬಲೇಶ್ವರ ಮತಕ್ಷೇತ್ರದ ಒಟ್ಟು 2,25,779 ಮತದಾರರ ಪೈಕಿ 2,25,421 ಮತದಾರರಿಗೆ ಗಣತಿ ನಮೂನೆ ವಿತರಿಸಲಾಗಿದ್ದು, ಶೇ. 99.84 ರಷ್ಟು ಪ್ರಗತಿ ಸಾಧಿಸಲಾಗಿದೆ ಎಂದರು.ಮತದಾರರಿಂದ ಗಣತಿ ನಮೂನೆಗಳನ್ನು ಭರ್ತಿ ಮಾಡಿ ರುಜು ಪಡೆದು ಮರಳಿ ಬಿ.ಎಲ್.ಓ ತಂತ್ರಾಂಶದಲ್ಲಿ…

Read More

ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನದಲ್ಲಿ ಬಬಲೇಶ್ವರ ಮತಕ್ಷೇತ್ರ ರಾಜ್ಯದಲ್ಲಿಯೇ ಮೊದಲ ಸ್ಥಾನ

ಸಪ್ತಸಾಗರ ವಾರ್ತೆ, ವಿಜಯಪುರ, ಮೇ. 6 : ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನದಲ್ಲಿ ಬಬಲೇಶ್ವರ ಮತಕ್ಷೇತ್ರ ರಾಜ್ಯದಲ್ಲಿಯೇ ಮೊದಲ ಸ್ಥಾನದಲ್ಲಿದೆ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.‌ ಬಿ. ಪಾಟೀಲ ಹೇಳಿದ್ದಾರೆ.ಬುಧವಾರ ತಿಕೋಟಾ ತಾಲೂಕಿನ ಮಲಕನದೇವರಹಟ್ಟಿ‌ ಗ್ರಾಮದಲ್ಲಿ ಲೋಕೋಪಯೋಗಿ ಇಲಾಖೆ ವತಿಯಿಂದ ರೂ. 100 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಸೋಮದೇವರಹಟ್ಟಿ- ಮಲಕನದೇವರಹಟ್ಟಿ ವರೆಗೆ ಮೂಲಸೌಕರ್ಯ ಅಭಿವೃದ್ಧಿ ಅನುದಾನದಲ್ಲಿ ಜಿಲ್ಲಾ ಮುಖ್ಯ ರಸ್ತೆ ಸುಧಾರಣೆ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.ಸರಕಾರದ ಯೋಜನೆಗಳನ್ನು…

Read More

ಬಬಲೇಶ್ವರದಲ್ಲಿ ಬಸವಾದಿ ಶರಣರ ಹಿಂದೂ ಸಮಾವೇಶಕ್ಕೆ ಕ್ಷಣಗಣನೆ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 28 :ಬಬಲೇಶ್ವರದ ಶಾರದಾ ಸ್ಕೂಲ್ ವಿಶಾಲ ಮೈದಾನದಲ್ಲಿ ಬಸವಾದಿ ಶರಣರ ಹಿಂದೂ ಸಮಾವೇಶ ಡಿ.೨೯ ರಂದು ನಡೆಯಲಿದ್ದು, ಹಲವಾರು ಹರ-ಗುರು-ಚರ ಮೂರ್ತಿಗಳ ಪಾವನ ಸಾನ್ನಿಧ್ಯದಲ್ಲಿ ಈ ಸಮಾವೇಶ ನಡೆಯಲಿದ್ದು. ಸಮಾವೇಶಕ್ಕೆ ಸಕಲ ಸಿದ್ಧತೆಗಳನ್ನು ಪೂರ್ಣಗೊಳಿಸಲಾಗಿದೆ. 60*100 ಅಳತೆಯ ಬೃಹತ್ ವೇದಿಕೆಯನ್ನು ರೂಪಿಸಲಾಗಿದ್ದು, 10 ಸಾವಿರ ಆಸನಗಳ ವ್ಯವಸ್ಥೆ ಮಾಡಲಾಗಿದೆ.ಬಸವಾದಿ ಶರಣರ ಹಿಂದೂ ಸಮಾವೇಶದಲ್ಲಿ 500 ಕ್ಕೂ ಹೆಚ್ಚು ಮಠಾಧೀಶರು ಭಾಗವಹಿಸುವ ನಿರೀಕ್ಷೆ ಇದ್ದು, ಹಿಂದೂ ಧರ್ಮ ಚಿಂತಕ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್….

Read More

ಬಬಲೇಶ್ವರದಲ್ಲಿ ನಡೆಯಲಿರುವ ಬಸವಾದಿ ಶರಣರ ಹಿಂದೂ ಸಮಾವೇಶ ಕೈಬಿಡಿ: ಶ್ರೀಗಳ ಮನವಿ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 28:ಬಸವ ಸಂಸ್ಕೃತಿ ಅಭಿಯಾನದ ವಿರುದ್ಧ, ಸ್ವಾಮೀಜಿಗಳಿಗೆ ಅವಾಚ್ಯ ಶಬ್ದಗಳಿಂದ ನಿಂಧಿಸಿದ್ದ ಕನ್ಹೇರಿ ಶ್ರೀಗಳ ಬೆಂಬಲವಾಗಿ ನಿಂತು ಯಾವ ಸ್ವಾಮೀಜಿಯವರ ಬೆಂಬಲವಿಲ್ಲದೇ ಬಬಲೇಶ್ವರದಲ್ಲಿ ಸಮಾವೇಶ ಮಾಡಲು ಹೊರಟವರಿಗೆ ಏನೆಂದು ಕರೆಯಬೇಕು? ಎಂದು ಸಮಾವೇಶ ಆಯೋಜಿಸಿದರನ್ನು ಮಮದಾಪುರ ವಿರಕ್ತಮಠದ ಅಭಿನವ ಮುರುಘೇಂದ್ರ ಸ್ವಾಮೀಜಿಗಳು ಪ್ರಶ್ನಿಸಿದ್ದಾರೆ.ವಿಜಯಪುರದಲ್ಲಿ ಭಾನುವಾರ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದ ಸ್ವಾಮೀಜಿ ಅವರು, ಯಾವ ಧರ್ಮದಲ್ಲೂ ದ್ವೇಷ ಮಾಡುವಂತದನ್ನು ಹೇಳಿಲ್ಲ. ಪ್ರೀತಿ, ವಾತ್ಸಲ್ಯ, ಸಹಬಾಳ್ವೆ ಕುರಿತು ಎಲ್ಲ ಪರಂಪರೆಗಳು ತಿಳಿಸುತ್ತವೆ. ಆದರೆ, ಸನ್ಮಾರ್ಗ ತೋರುವ…

Read More