ಅರ್ಜುಣಗಿಯಲ್ಲಿ ರೈತ ಆತ್ಮಹತ್ಯೆ

ಸಪ್ತ ಸಾಗರ ವಾರ್ತೆ, ವಿಜಯಪುರ, ಜು. 22:ಸಾಲಬಾಧೆಯಿಂದ ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಬಲೇಶ್ವರ ತಾಲೂಕಿನ ಅರ್ಜುಣಗಿ ಗ್ರಾಮದಲ್ಲಿ ನಡೆದಿದೆ.ಶಿವಾಜಿ ಘೋಲಫ (56) ನೇಣಿಗೆ ಶರಣಾದ ರೈತ.ಕೆಬಿಜಿ ಬ್ಯಾಂಕ್ ನಲ್ಲಿ 3 ಲಕ್ಷ ಸಾಲ,ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿಯೂ ಸಾಲ ಮಾಡಿದ್ದ. ಖಾಸಗಿಯವರ ಕಡೆಗೂ ರೈತ ಶಿವಾಜಿ ಸಾಲ ಮಾಡಿದ್ದ.ರೈತ ಶಿವಾಜಿ ತನ್ನ ಜಮೀನಿನ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ಬಬಲೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More