ಜೀವನದ ಕಷ್ಟಗಳಿಗೆ ಬೆನ್ನೆಲುಬಾದ ತಾಯಿ ಅಕ್ಷಯ ಪಾತ್ರೆ ಇದ್ದಂತೆ-ಸಂತೋಷ ಬಂಡೆ
ಸಪ್ತಸಾಗರ ವಾರ್ತೆ, ವಿಜಯಪುರ, ಮೇ. 10:ತಾಯಿ ಮಕ್ಕಳಿಗೆ ಒಂದು ನೈತಿಕ ಶಕ್ತಿ. ಇಂದಿನ ಆಧುನಿಕ ಯುಗದಲ್ಲಿ ಮಕ್ಕಳು ದಾರಿ ತಪ್ಪದಂತೆ, ಸಂಸ್ಕೃತಿ ಮತ್ತು ಆಧುನಿಕತೆಯ ನಡುವೆ ಸಮತೋಲನ ಕಾಪಾಡಲು ತಾಯಿ ಪಾತ್ರ ಅನನ್ಯವಾಗಿದ್ದು, ಅವಳು ಜೀವನದ ಕಷ್ಟಗಳಲ್ಲಿ ಬೆನ್ನೆಲುಬಾಗಿ ನಿಲ್ಲುವ ಅಕ್ಷಯ ಪಾತ್ರೆ ಇದ್ದಂತೆ ಎಂದು ಶಿಕ್ಷಕ ಸಾಹಿತಿ ಸಂತೋಷ ಬಂಡೆ ಹೇಳಿದರು.ರವಿವಾರ ತಾಲೂಕಿನ ನಾಗಠಾಣ ಗ್ರಾಮದ ಶ್ರೀ ಮಲ್ಲಿಕಾರ್ಜುನ ಹಿರಿಯ ಪ್ರಾಥಮಿಕ ಮತ್ತು ಪ್ರೌಢ ಶಾಲೆಯಲ್ಲಿ ಹಮ್ಮಿಕೊಂಡ ವಿಶ್ವ ತಾಯಂದಿರ ದಿನದ ಕಾರ್ಯಕ್ರಮದಲ್ಲಿ ‘ಆಧುನಿಕ ಜಗತ್ತಿನಲ್ಲಿ…


