ವಿದ್ಯಾರ್ಥಿಗಳ ಶಿಷ್ಯವೇತನ ಸಮಸ್ಯೆ ಪರಿಹಾರಕ್ಕೆ ಮನವಿ
ಸಪ್ತಸಾಗರ ವಾರ್ತೆ,ಬಾಗಲಕೋಟೆ, ಆ. 13:ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕ ಶ್ರೀಶೈಲ ಚಲವಾದಿ ಹಾಗೂ ಬೆಳಗಾವಿ ವಿಭಾಗೀಯ ಸಂಚಾಲಕ ಎಚ್.ಎನ್. ನೀಲನಾಯಕ ಅವರು ಗುರುವಾರ ಬಾಗಲಕೋಟೆ ತೋಟಗಾರಿಕೆ ವಿಶ್ವವಿದ್ಯಾಲಯದ ಕುಲಪತಿ ಡಾ. ವಿಷ್ಣುವರ್ಧನ್ ಅವರ ಜೊತೆಗೆ ಮಹಾವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿ-ವಿದ್ಯಾರ್ಥಿನಿಯರ ಶಿಷ್ಯವೇತನಕ್ಕೆ ಸಂಬಂಧಿಸಿದ ಸಮಸ್ಯೆಗಳ ಕುರಿತು ಚರ್ಚಿಸಿದರು.ಈ ಸಂದರ್ಭದಲ್ಲಿ ಮಹಾವಿದ್ಯಾಲಯದ ಡೀನ್ ಡಾ. ಶಾಂತಪ್ಪ ತಿರಕಣ್ಣವರ ಅವರನ್ನು ಭೇಟಿ ಮಾಡಿ, ವಿದ್ಯಾರ್ಥಿಗಳ ಶಿಷ್ಯವೇತನ ಸೇರಿದಂತೆ ವಿವಿಧ ಕುಂದುಕೊರತೆಗಳ ಕುರಿತು ಗಮನ ಸೆಳೆಯಲಾಯಿತು. ಮನವಿಗೆ…


