ಬೆಂಗಳೂರಿನಲ್ಲಿ ಭಾರತದ ಮೊದಲ ಸರ್ಕಾರಿ ಪ್ರಾಯೋಜಿತ ಎಐ ವಿಶ್ವವಿದ್ಯಾಲಯ: ಸಿಎಂ ಡಿ.ಕೆ. ಶಿವಕುಮಾರ್ ಘೋಷಣೆ

ಸಪ್ತಸಾಗರ ವಾರ್ತೆ,ಬೆಂಗಳೂರು, ಜು. 14: ಬೆಂಗಳೂರಿನಲ್ಲಿ ಭಾರತದ ಮೊದಲ ಸರ್ಕಾರಿ ಪ್ರಾಯೋಜಿತ ಕೃತಕ ಬುದ್ಧಿಮತ್ತೆ (AI) ವಿಶ್ವವಿದ್ಯಾಲಯವನ್ನು ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಘೋಷಿಸಿದರು.ಬೆಂಗಳೂರು ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದಲ್ಲಿ ಮಂಗಳವಾರ ನಡೆದ ಗೂಗಲ್ ಐ/ಓ ಕನೆಕ್ಟ್ ಇಂಡಿಯಾ 2026 ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕರ್ನಾಟಕವನ್ನು ‘ಎಐ-ನೇಟಿವ್’ ರಾಜ್ಯವನ್ನಾಗಿ ರೂಪಿಸುವ ಗುರಿ ಹೊಂದಿದ್ದು, ಆಡಳಿತ ಹಾಗೂ ಸಾರ್ವಜನಿಕ ಸೇವೆಗಳ ವಿತರಣೆಯಲ್ಲಿ ಎಐ ತಂತ್ರಜ್ಞಾನವನ್ನು ವ್ಯಾಪಕವಾಗಿ ಅಳವಡಿಸಲಾಗುವುದು ಎಂದು ತಿಳಿಸಿದರು.ಸರ್ಕಾರಿ ಪ್ರಾಯೋಜಿತ ಎಐ ವಿಶ್ವವಿದ್ಯಾಲಯದ ಮೂಲಕ ಎಐ…

Read More

ಹಿರಿಯ ಪತ್ರಕರ್ತೆ ಕೆ. ಶಾಂತಕುಮಾರಿ ಸೇರಿ ಹಲವರ ಪುಸ್ತಕ ಬಿಡುಗಡೆ

ಸಪ್ತಸಾಗರ ವಾರ್ತೆ, ಬೆಂಗಳೂರು, ಜೂ. 9:ಕರ್ನಾಟಕ ಸಾಹಿತ್ಯ ಅಕಾಡೆಮಿಯು ‘ ಮಹಿಳಾ ಮುನ್ನಡೆ ” ಯೋಜನೆಯಡಿ ರಾಜ್ಯದ ಸಾಧಕ ಮಹಿಳೆಯರ 54 ಪುಸ್ತಕಗಳನ್ನು ಇತ್ತೀಚಿಗೆ ಬಿಡುಗಡೆ ಮಾಡಲಾಯಿತು.ಬೆಂಗಳೂರಿನ ನಯನ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಕೃತಿ ಬಿಡುಗಡೆ ಮಾಡಲಾಯಿತು.ಈ ಯೋಜನೆ ಅಡಿ ಹಿರಿಯ ಪತ್ರಕರ್ತೆ ಕೆ. ಶಾಂತಕುಮಾರಿ ಬರೆದ ‘ ಕಮಲಾದೇವಿ ಚಟ್ಟೋಪಾಧ್ಯಾಯ ” ಪುಸ್ತಕವು ಬಿಡುಗಡೆಯಾಯಿತು. ಹಿರಿಯ ಪತ್ರಕರ್ತರು ಬೆಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ ಪ್ರೋತ್ಸಾಹಿಸಲು ಮತ್ತೊಮ್ಮೆ ಬಿಡುಗಡೆ ಮಾಡಿದರು. ಈ ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತರಾದ ಹಾಗೂ…

Read More

ಕುಮಾರಸ್ವಾಮಿ ಪಂಥಾಹ್ವಾನಕ್ಕೆ ಸಿದ್ಧ:ಡಿಕೆಶಿ

ಸಪ್ತಸಾಗರ ವಾರ್ತೆ,ಬೆಂಗಳೂರು, ಮೇ 20:“ಬಿಡದಿ ಟೌನ್ ಶಿಪ್ ವಿಚಾರವಾಗಿ ಕುಮಾರಸ್ವಾಮಿ ಅವರು ಪಂಥಾಹ್ವಾನ ಕರೆದಿದ್ದಾರಂತೆ. ಅವರ ಪಂಥಾಹ್ವಾನವನ್ನು ನಾನು ಸ್ವೀಕರಿಸುವೆ. ನನಗೆ ಮೂರು ದಿನ ಸಮಯ ಸಾಕು. ಯಾವತ್ತು ಸಮಯ ನಿಗದಿ ಮಾಡುವಿರೋ ನಾನು ಅಂದು ತಯಾರಿದ್ದೇನೆ. ಜಾಗ ಹಾಗೂ ಸಮಯ ಅವರೇ ನಿಗದಿ ಮಾಡಲಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.ಸರ್ಕಾರಿ ಗೃಹ ಕಚೇರಿ ಕುಮಾರಪಾರ್ಕ್ ನಲ್ಲಿ ಶಿವಕುಮಾರ್ ಅವರು ಬುಧವಾರ ಬಿಡದಿ ಟೌನ್ ಶಿಪ್ ಯೋಜನೆ ಕುರಿತು ಆ ಭಾಗದ ರೈತರೊಂದಿಗೆ ಸಭೆ…

Read More

ಕರ್ನಾಟಕ ಲೋಕಾಯುಕ್ತದ ನಾಲ್ಕು ದಶಕಗಳ ಸಾರ್ಥಕ ಪಯಣ: ಏಪ್ರಿಲ್ 18 ರಂದು ವಿಶೇಷ ಕಾರ್ಯಕ್ರಮ

ಸಪ್ತಸಾಗರ ವಾರ್ತೆ, ಬೆಂಗಳೂರು, ಏ. 17:ಭ್ರಷ್ಟಾಚಾರ ನಿರ್ಮೂಲನೆ ಮತ್ತು ಆಡಳಿತ ಸುಧಾರಣೆಯಲ್ಲಿ ಮಹತ್ತರ ಪಾತ್ರ ವಹಿಸಿರುವ ‘ಕರ್ನಾಟಕ ಲೋಕಾಯುಕ್ತ’ ಸಂಸ್ಥೆಯು ತನ್ನ ಯಶಸ್ವಿ ನಾಲ್ಕು ದಶಕಗಳ ಪಯಣವನ್ನು ಪೂರೈಸಿದ್ದು, ಈ ಅಂಗವಾಗಿ 2026ರ ಏಪ್ರಿಲ್ 18, ಶನಿವಾರದಂದು ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.ಈ ಐತಿಹಾಸಿಕ ಕಾರ್ಯಕ್ರಮಕ್ಕೆ ಭಾರತದ ಮುಖ್ಯ ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿ ಉದ್ಘಾಟನೆ ನೆರವೇರಿಸಲಿದ್ದಾರೆ. ಸುಪ್ರೀಂ ಕೋರ್ಟ್‍ನ ನ್ಯಾಯಮೂರ್ತಿಗಳಾದ ಅರವಿಂದ್ ಕುಮಾರ್ ಅವರು ಗೌರವ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ….

Read More

ವಿಜಯಪುರ-ಬೆಂಗಳೂರ ಕಲ್ಯಾಣ ರಥ ಸಾರಿಗೆಯ ಪ್ರಯಾಣ ದರದಲ್ಲಿ ರಿಯಾಯಿತಿ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ.11: ಪ್ರಯಾಣಿಕರ ಬೇಡಿಕೆಯಂತೆ, ವಿಜಯಪುರ-ಬೆಂಗಳೂರ ಮಾರ್ಗದ ಕಲ್ಯಾಣ ರಥ ವೊಲ್ಲೋ ಮಲ್ಟಿ ಎಕ್ಸಲ್ ಎಸಿ ಸ್ಲಿಪರ್ ಬಸ್ ಪ್ರಯಾಣ ದರದಲ್ಲಿ ರೂ.100 ಅಂದರೆ, ಶೇ 6% ರಷ್ಟು ರಿಯಾಯಿತಿ ನೀಡಲಾಗಿದೆ.ವಿಜಯಪುರ-ಬೆಂಗಳೂರ ಕಲ್ಯಾಣ ರಥ ಬಸ್ಸಿನ ದರ ರೂ. 1,399 ನಿಗದಿಪಡಿಸಲಾಗಿದ್ದು, ಪ್ರಯಾಣಿಕರು ಈ ರಿಯಾಯತಿ ದರದ ಉಪಯೋಗ ಪಡೆದುಕೊಳ್ಳುವಂತೆಕೆಕೆಆರ್ ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ನಾರಾಯಣಪ್ಪ ಕುರುಬರ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.

Read More

ನನ್ನ ಹೆಸರು ನೆನಪಿಸಿಕೊಳ್ಳದಿದ್ದರೆ ಕುಮಾರಸ್ವಾಮಿಗೆ ನಿದ್ದೆ ಬರುವುದಿಲ್ಲ: ಡಿಕೆಶಿ

ಸಪ್ತಸಾಗರ ವಾರ್ತೆ ಬೆಂಗಳೂರು, ಅ.8:“ಸುಪ್ರೀಂಕೋರ್ಟ್ ನಲ್ಲಿ ಮುಖ್ಯ ನ್ಯಾಯಮೂರ್ತಿಗಳ ಮೇಲೆ ಶೂ ಎಸೆತ ಘಟನೆ ತಪ್ಪು. ನ್ಯಾಯ ನೀಡುವ ಸ್ಥಳದಲ್ಲಿ ಅಧರ್ಮ ತೋರಿಸುವುದನ್ನು ನಾವೆಲ್ಲರೂ ಖಂಡಿಸಬೇಕು. ತಪ್ಪಿತಸ್ಥನ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಆಗ್ರಹಿಸಿದರು.ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಬುಧವಾರ ಪ್ರತಿಕ್ರಿಯೆ ನೀಡಿದರು.ಸುಪ್ರೀಂಕೋರ್ಟ್ ನಲ್ಲಿ ಶೂ ಎಸೆತ ಪ್ರಕರಣದ ಬಗ್ಗೆ ಕೇಳಿದಾಗ, “ಮುಖ್ಯ ನ್ಯಾಯಮೂರ್ತಿಯವರು ತಪ್ಪಿತಸ್ಥನ ವಿರುದ್ಧ ಕ್ರಮ ತೆಗದುಕೊಳ್ಳಬೇಡಿ ಎಂದಿದ್ದಾರೆ. ಆದರೂ ಸುಮೋಟೋ ಪ್ರಕರಣ ದಾಖಲಿಸಿ ಕ್ರಮ ತೆಗೆದುಕೊಳ್ಳಬೇಕು” ಎಂದರು….

Read More

ಮಕ್ಕಳ ಮನೋಲೋಕ ಕುರುಡಾಗಬಾರದು: ಕೆ.ವಿ.ಪ್ರಭಾಕರ

ಸಪ್ತಸಾಗರ ವಾರ್ತೆ ಬೆಂಗಳೂರು, ಸೆ.7:ಮನೆಯೇ ಮೊದಲ ಶಾಲೆ ಎನ್ನುವುದು ಹೋಗಿ ಮೊಬೈಲೇ ಮೊದಲ ಶಾಲೆಯಂತಾಗಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ನುಡಿದರು.ಪ್ರೆಸ್ ಕ್ಲಬ್ ಮತ್ತು ಬಾಲ ಭವನ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ “ಮಕ್ಕಳ ಜಾತ್ರೆ” ಸಾಂಸ್ಕೃತಿಕ ಹಬ್ಬಕ್ಕೆ ಚಾಲನೆ ನೀಡಿ ಮಾತನಾಡಿದರು.ನಗರಗಳಲ್ಲಿ ಇರುವ ಮಕ್ಕಳು ಮಣ್ಣಿನಿಂದ ಬೇರ್ಪಟ್ಟು, ನೆಲದ ಆಟ ಪಾಠಗಳಿಂದ ದೂರ ಆಗಿದ್ದಾರೆ. ವೃದ್ದಾಶ್ರಮಗಳು ಹೆಚ್ಚಾಗುತ್ತಾ ಅಜ್ಜ-ಅಜ್ಜಿ ಕತೆಗಳಿಂದ ಮಕ್ಕಳು ವಂಚಿತರಾಗುತ್ತಿದ್ದಾರೆ. ಜೊತೆಗೆ ತಮ್ಮ ಆಟದ ಸಾಮಾನುಗಳನ್ನು ತಾವೇ ಸೃಷ್ಟಿಸಿಕೊಳ್ಳುವ ಕ್ರಿಯಾಶೀಲತೆಯೂ ಕಾಣೆಯಾಗಿ, ಪ್ಲಾಸ್ಟಿಕ್ ಆಟದ…

Read More

ಪರಧರ್ಮ ಸಹಿಷ್ಣತೆ ಸಂವಿಧಾನದ ಮೂಲ‌ ಆಶಯ: ಸಂವಿಧಾನದ ಪಾಲನೆಯೇ ನಮ್ಮೆಲ್ಲರ ಗುರಿಯಾಗಲಿ- ಸಿಎಂ ಸಿದ್ದರಾಮಯ್ಯ

ಸಪ್ತಸಾಗರ ವಾರ್ತೆ ಬೆಂಗಳೂರು, ಸೆ. 5 :ಪರಧರ್ಮ ಸಹಿಷ್ಣತೆ ಸಂವಿಧಾನದ ಮೂಲ‌ ಆಶಯವಾಗಿದ್ದು ಸಂವಿಧಾನದ ಪಾಲನೆಯೇ ನಮ್ಮೆಲ್ಲರ ಗುರಿಯಾಗಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.ಅರಮನೆ ಮೈದಾನದಲ್ಲಿ ಮಿಲಾದ್ ಸಮಿತಿ ಆಯೋಜಿಸಿದ್ದ “ಅಂತಾರಾಷ್ಟ್ರೀಯ ಮಿಲಾದುನ್ನಬೀ ಸಮಾವೇಶ” ದಲ್ಲಿ ಮಾತನಾಡಿದರು.ಪ್ರವಾದಿಯವರ ಬೋಧನೆಗಳು ಮಾನವ ಇತಿಹಾಸದಲ್ಲಿ ಕ್ರಾಂತಿಕಾರಿ ಬದಲಾವಣೆಗಳನ್ನು ತಂದವು. ಅವರು ಸಮಸ್ತ ಮಾನವಕೋಟಿಗೆ ನ್ಯಾಯ, ಸಮಾನತೆ ಮತ್ತು ಧಾರ್ಮಿಕ ಸೌಹಾರ್ದದ ಮಾರ್ಗಗಳನ್ನು ತೋರಿಸಿದರು. ಬಸವಣ್ಣನವರ ನೇತೃತ್ವದ ಶರಣ ಚಳವಳಿಯೂ ಕೂಡ ಮಾನವ ಕುಲ ಒಂದೇ ಎನ್ನುವ ಮೌಲ್ಯವನ್ನೇ…

Read More

ಯುಕೆಪಿಹಂತ-3 ಯೋಜನೆಸಾಕಾರಕ್ಕೆಬದ್ಧ, ಎರಡು- ಮೂರುದಿನಗಳಲ್ಲಿಅಂತಿಮತೀರ್ಮಾನ: ಡಿಸಿಎಂಡಿ.ಕೆ. ಶಿವಕುಮಾರ್

ಸಪ್ತಸಾಗರ ವಾರ್ತೆ,ಬೆಂಗಳೂರು, ಸೆ.3:“ಕೃಷ್ಣಾ ಮೇಲ್ದಂಡೆ ಯೋಜನೆಯ ಹಂತ-3ರ ಅನುಷ್ಠಾನಕ್ಕೆ ಕೇಂದ್ರ ಜಲಶಕ್ತಿ ಸಚಿವರಲ್ಲಿ ಮನವಿ ಮಾಡಿದ್ದೇನೆ. ಅವರು ಸಹ ಈ ಬಗ್ಗೆ ಶೀಘ್ರದಲ್ಲೇ ಸಭೆ ನಿಗದಿ ಮಾಡಲಾಗುವುದು ಎಂದು ಭರವಸೆ ನೀಡಿದ್ದಾರೆ. ನಮ್ಮ ಸರ್ಕಾರ ಈ ಯೋಜನೆ ಸಾಕಾರಕ್ಕೆ ಬದ್ಧವಾಗಿದೆ. ಎರಡು- ಮೂರು ದಿನಗಳಲ್ಲಿ ಅಂತಿಮ ತೀರ್ಮಾನ ಮಾಡಲಾಗುತ್ತದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು.ಕೃಷ್ಣಾ ಮೇಲ್ದಂಡೆ ಯೋಜನೆಯ ಹಂತ-3ರ ಅನುಷ್ಠಾನಕ್ಕೆ ಸಂಬಂಧಿಸಿದಂತೆ ವಿಧಾನಸೌಧದಲ್ಲಿ ನಡೆದ ಸಭೆಯ ನಂತರ ಜಲಸಂಪನ್ಮೂಲ ಸಚಿವರೂ ಆಗಿರುವ ಶಿವಕುಮಾರ್ ಅವರು…

Read More

ಯುಕೆಪಿ ಮೂರನೇ ಹಂತದ ಯೋಜನೆ ಕುರಿತು ಡಿಸಿಎಂ ಡಿಕೆಶಿ ಚರ್ಚೆ

ಸಪ್ತಸಾಗರ ವಾರ್ತೆ, ಬೆಂಗಳೂರು, ಸೆ. 3:ಕೃಷ್ಣಾ ಮೇಲ್ದಂಡೆ ಯೋಜನೆಯ ಹಂತ-3ರ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ, ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ ಅವರು ಮಂತ್ರಿಗಳು ಹಾಗೂ ಅಧಿಕಾರಿಗಳೊಂದಿಗೆ ವಿಧಾನಸೌಧದಲ್ಲಿ ಬುಧವಾರ ಸಭೆ ನಡೆಸಿದರು.ಭೂಸ್ವಾಧೀನ, ಪುನರ್ವಸತಿ, ಪುನರ್‌ನಿರ್ಮಾಣ, ಭೂಪರಿಹಾರ ಹಾಗೂ ವಿವಿಧ ನ್ಯಾಯಾಲಯಗಳಲ್ಲಿ ಹೆಚ್ಚುವರಿ ಭೂ ಪರಿಹಾರ ಕೋರಿ ದಾಖಲಿಸಿರುವ ಪ್ರಕರಣಗಳ ಕುರಿತು ಸಭೆಯಲ್ಲಿ ಸುಧೀರ್ಘವಾಗಿ ಚರ್ಚಿಸಲಾಯಿತು.ಸಚಿವರಾದ ಪ್ರಿಯಾಂಕ್ ಖರ್ಗೆ, ಬೋಸರಾಜ್, ಶಿವಾನಂದ ಪಾಟೀಲ, ಆರ್.ಬಿ. ತಿಮ್ಮಾಪುರ, ದರ್ಶನಪೂರ್, ಡಿ. ಸುಧಾಕರ್ ಮತ್ತಿತರರು ಸಭೆಯಲ್ಲಿ ಭಾಗವಹಿಸಿದ್ದರು.

Read More