ದಿವಂಗತ ವಿಷ್ಣುವರ್ಧನ್ ಅವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ನೀಡಿ

ಸಪ್ತಸಾಗರ ವಾರ್ತೆ, ಬೆಂಗಳೂರು, ಸೆ. 2: ಕನ್ನಡ ಚಲನಚಿತ್ರ ರಂಗದ ಹಿರಿಯ ನಟಿಯರಾದ ಜಯಮಾಲ, ಶ್ರತಿ ಮತ್ತು ಮಾಳವಿಕ ಅವಿನಾಶ್ ಅವರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ದಿವಂಗತ ವಿಷ್ಣುವರ್ಧನ್ ಅವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ನೀಡುವಂತೆ ಮನವಿ ಸಲ್ಲಿಸಿದರು.ಇತ್ತೀಚೆಗೆ ನಿಧನರಾದ ಪಂಚಭಾಷಾ ನಟಿ ಬಿ. ಸರೋಜಾದೇವಿ ಅವರ ಹೆಸರನ್ನು ಅವರು ವಾಸವಿದ್ದ ಮಲ್ಲೇಶ್ವರದ ನಾಮಕರಣ ಮಾಡುವಂತೆಯೂ ಮನವಿ ಮಾಡಿದರು.

Read More

ನಾಗರಿಕಸ್ನೇಹಿಸೇವೆ, ಉತ್ತಮಆಡಳಿತ, ಯೋಜನೆಗಳಪರಿಣಾಮಕಾರಿಜಾರಿಗಾಗಿಜಿಬಿಎಅಸ್ತಿತ್ವಕ್ಕೆ: ಡಿಸಿಎಂಡಿ.ಕೆ. ಶಿವಕುಮಾರ್

ಸಪ್ತಸಾಗರ ವಾರ್ತೆ, ಬೆಂಗಳೂರು, ಸೆ.2:“ಬೆಂಗಳೂರಿನಲ್ಲಿ ನಾಗರಿಕ ಸ್ನೇಹಿ ಸೇವೆ, ಉತ್ತಮ ಆಡಳಿತ, ಪರಿಣಾಮಕಾರಿಯಾಗಿ ಯೋಜನೆಗಳನ್ನು ಜಾರಿಗೊಳಿಸುವ ಉದ್ದೇಶದಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಜಾರಿಗೆ ತಂದು ಐದು ಪಾಲಿಕೆಗಳನ್ನು ಅಸ್ತಿತ್ವಕ್ಕೆ ತರಲಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.ವಿಧಾನಸೌಧದಲ್ಲಿ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಶಿವಕುಮಾರ್ ಅವರು ಮಂಗಳವಾರ ಮಾತನಾಡಿದರು.“02-09-2025ರಂದು ಬೆಂಗಳೂರು ಮಹಾನಗರದ ಪಾಲಿಗೆ ವಿಶೇಷವಾದ ದಿನ. ಈ ದಿನದಿಂದ ಬೆಂಗಳೂರಿನಲ್ಲಿ ಐದು ಪಾಲಿಕೆಗಳು ಅಸ್ತಿತ್ವಕ್ಕೆ ಬಂದಿವೆ. ಬೆಂಗಳೂರು ಕೇಂದ್ರ ನಗರ ಪಾಲಿಕೆ, ಬೆಂಗಳೂರು ಉತ್ತರ ನಗರ ಪಾಲಿಕೆ,…

Read More

ದುಡಿಯುವ ಜನರ ಆರ್ಥಿಕ ಸ್ವಾತಂತ್ರ್ಯಕ್ಕಾಗಿ ನಡೆದದ್ದು ಸಹಕಾರ ಚಳವಳಿ: ಕೆ.ವಿ.ಪ್ರಭಾಕರ

ಸಪ್ತಸಾಗರ ವಾರ್ತೆ, ಬೆಂಗಳೂರು, ಆ 23: 2016 ರಲ್ಲಿ ನೋಟು ನಿಷೇಧ ಜಾರಿ ಆದಾಗ ದೇಶದ ನಗರ ಆರ್ಥಿಕತೆ ಪಾತಾಳ ಸೇರಿತು. ಆದರೆ, ಗ್ರಾಮೀಣ ಭಾರತದ ಆರ್ಥಿಕತೆ ಕುಸಿಯದಂತೆ ತಡೆದದ್ದು ಸಹಕಾರಿ ತತ್ವ ಮತ್ತು ಸಹಕಾರಿ ಚಳವಳಿಯ ಮೌಲ್ಯ ಎನ್ನುವುದನ್ನು ನಾವು ಮರೆಯಬಾರದು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅಭಿಪ್ರಾಯಪಟ್ಟರು.ಪತ್ರಕರ್ತರ ಸಹಕಾರಿ ಸಂಘಕ್ಕೆ 75 ವರ್ಷಗಳು ತುಂಬಿದ ಸಂದರ್ಭದಲ್ಲಿ ಆಯೋಜಿಸಿದ್ದ “ಅಮೃತ ಸಂಭ್ರಮ” ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ದೇಶದ ಸ್ವಾತಂತ್ರ್ಯ ಚಳವಳಿಕ ಜೊತೆ ಜೊತೆಗೇ ನಡೆದದ್ದು ನಮ್ಮ…

Read More

ಆ. 23‌ ರಿಂದ ಹಿಂದುಳಿದ ವರ್ಗಗಳ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ- ಸಹಕಾರಕ್ಕೆ ಆಯೋಗದ ಅಧ್ಯಕ್ಷ ಮಧುಸೂಧನ್ ಆರ್ ನಾಯ್ಕ ಮನವಿ

ಸಪ್ತಸಾಗರ ವಾರ್ತೆ, ಬೆಂಗಳೂರು, ಆ.22:ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ನಾಳೆ ಆಗಸ್ಟ್ 23 ರಿಂದ ಪ್ರಾರಂಭಿಸುತ್ತಿದೆ. ವಿದ್ಯುತ್ ಮೀಟರ್ ರೀಡರ್ ಗಳು ಎಲ್ಲ ಮನೆಗಳನ್ನು ಜಿಯೋ ಟ್ಯಾಗಿಂಗ್ ಮಾಡುವ ಕಾರ್ಯ ಪ್ರಾರಂಭಿಸಲಿದ್ದಾರೆ. ಯಾವುದೇ ಮನೆಗಳು ತಪ್ಪಿ ಹೋಗದಂತೆ ಯಶಸ್ವಿಯಾಗಿ ಸಮೀಕ್ಷೆ ಕೈಗೊಳ್ಳಲು ರಾಜ್ಯದ ಜನತೆ ಸಹಕರಿಸಬೇಕು ಎಂದು ಆಯೋಗದ ಅಧ್ಯಕ್ಷ ಮಧುಸೂಧನ್ ಆರ್. ನಾಯ್ಕ ತಿಳಿಸಿದ್ದಾರೆ.ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ…

Read More

ವಿಶೇಷ ಚೇತನರು ಬುದ್ದನ ಮಕ್ಕಳು: ಕೆ.ವಿ.ಪ್ರಭಾಕರ್

ಸಪ್ತಸಾಗರ ವಾರ್ತೆ,ಬೆಂಗಳೂರು ಆ.22:ಭಿನ್ನ, ವಿಭಿನ್ನ ಸಾಧ್ಯತೆಗಳ ವಿಶೇಷ ಚೇತನರು ಹುಟ್ಟುತ್ತಲೇ ಮನುಷ್ಯ ಜಗತ್ತಿನ‌ ಸಣ್ಣತನಗಳಿಂದ ಮುಕ್ತರಾದವರು. ಹೀಗಾಗಿ ಇವರೆಲ್ಲರೂಬುದ್ದನ ಮಕ್ಕಳು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಬಣ್ಣಿಸಿದರು.ಬಾಲಭವನದಲ್ಲಿ ನಡೆದ “ವಿಶೇಷ ಚೇತನ ಮಕ್ಕಳ ಸ್ವಾತಂತ್ರ್ಯ ದಿನಾಚರಣೆ ಮತ್ತು ಸಾಂಸ್ಕೃತಿಕ ಕಲರವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.ಭಿನ್ನ ಚೇತನರನ್ನು ಸಮಾಜದ ಅಸಹಜ ರೂಢಿಗತ ಕಣ್ಣುಗಳಿಂದ ನೋಡುವುದಕ್ಕಿಂತ ಮನುಷ್ಯ ಸಹಜ ಒಳಗಣ್ಣುಗಳಿಂದ ಗಮನಿಸಬೇಕಿದೆ.ಈ ಮಕ್ಕಳು ಜೀವನ ಪರ್ಯಂತ ಮಕ್ಕಳಾಗೇ ಇರುತ್ತಾರೆ. ಅಂದರೆ ಮಗುವಿನ ಸಹಜ ನಿಷ್ಕಲ್ಮಷ ಸ್ವಭಾವ ಜೀವನವಿಡೀ ಇರುತ್ತದೆ.*ಈ…

Read More

ಏಷಿಯನ್ ರೋಲರ್ ಸ್ಕೇಟಿಂಗ್ ಚಾಂಪಿಯನ್ ಶಿಪ್ ವಿಜೇತ ಕ್ರೀಡಾಪಟುಗಳಿಗೆ ಸಿಎಂ ಅಭಿನಂದನೆ

ಸಪ್ತಸಾಗರ ವಾರ್ತೆ, ಬೆಂಗಳೂರು, ಆ. 21:ಕೊರಿಯಾದಲ್ಲಿ ನಡೆದ 20ನೇ ಏಷ್ಯನ್ ರೋಲರ್ ಸ್ಕೇಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಭಾರತದ ವೇಗವಾದ ಸ್ಕೇಟರ್ ಹಾಗೂ ಡಬಲ್ ಸಿಲ್ವರ್ ಪದಕ ವಿಜೇತ ಕ್ರೀಡಾಪಟುಗಳಿಗೆಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದ ಕಚೇರಿಯಲ್ಲಿ ಅಭಿನಂದಿಸಿದರು.ಕ್ರೀಡಾಪಟುಗಳಾದ ವೇಗವಾದ ಸ್ಕೇಟರ್ ಧನುಷ್ ಬಾಬು ಮತ್ತು ಸಿಲ್ವರ್ ಪದಕ ವಿಜೇತೆ ಕು. ಪೂರ್ವಿ ಮಠೆ ಅವರನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಸಾಧನೆಯನ್ನು ಪ್ರಶಂಶಿಸಿ ಅಭಿನಂದಿಸಿದ್ದಾರೆ.ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರೂ, ರಾಜ್ಯ ಒಲಂಪಿಕ್ ಅಸೋಸಿಯೇಷನ್ ಅಧ್ಯಕ್ಷ ಗೋವಿಂದರಾಜು ಅವರು ಉಪಸ್ಥಿತರಿದ್ದರು.

Read More

ಆಡುಗೋಡಿಯಲ್ಲಿ ಸಿಲಿಂಡರ್ ಸ್ಪೋಟ: ಓರ್ವ ಬಾಲಕ ಸಾವು, ಹಲವರಿಗೆ ಗಾಯ

ಸಪ್ತಸಾಗರ ವಾರ್ತೆ, ಬೆಂಗಳೂರು, ಆ. 15:ರಾಜ್ಯವೂ ಸೇರಿದಂತೆ ಇಡೀ ದೇಶದ ತುಂಬೆಲ್ಲ 79ನೇ ಸ್ವಾತಂತ್ರ್ಯೋತ್ಸವದ ಸಂಭ್ರಮದಲ್ಲಿ ಜನತೆ ಮುಳುಗಿರುವಾಗಲೇ ನಗರದ ಆಡುಗೋಡಿಯಲ್ಲಿ ಸಿಲಿಂಡರ್ ಸ್ಪೋಟಗೊಂಡು ಓರ್ವ ಬಾಲಕ ಮೃತಪಟ್ಟು ಹಲವರು ಗಾಯಗೊಂಡಿರುವ ದಾರುಣ ದುರಂತ ನಡೆದು ಜನರ ಮನ ಕಲಕುವಂತೆ ಮಾಡಿದೆ.ಮುಬಾರಕ್ (8) ಎಂಬ ಬಾಲಕ ಸಿಲಿಂಡರ್ ಸ್ಫೋಟ ದುರಂತದಲ್ಲಿ ಮೃತಪಟ್ಟಿದ್ದು, ಇತರ 8 ಜನರು ಗಾಯಗೊಂಡಿದ್ದಾರೆ. ಈ ಪೈಕಿ ಮೂವರ ಸ್ಥಿತಿ ಚಿಂತಾಜನಕವಾಗಿದೆ.ಆಡುಗೋಡಿಯ ತಿಮ್ಮರಾಜು ಎಂಬುವವರ ಮನೆಯಲ್ಲಿ ಸಿಲಿಂಡರ್ ಸ್ಫೋಟ ಸಂಭವಿಸಿದ್ದು, ಆ ಮನೆ ಸಂಪೂರ್ಣ…

Read More

ವಿದೇಶದಲ್ಲಿ ಅಧ್ಯಯನ ಮಾಡಲು ಬಯಸುವವರಿಗೆ ಅವಕಾಶ

ಸಪ್ತಸಾಗರ ವಾರ್ತೆ,ಬೆಂಗಳೂರು, ಆ. 14: ಕರ್ನಾಟಕ ವೃತ್ತಿಪರ ತರಬೇತಿ ಹಾಗೂ ಕೌಶಲ್ಯ ನಿಗಮ ವತಿಯಿಂದ ಆ. 17ರಂದು ಬೆಂಗಳೂರಿನ ಹೋಟೆಲ್ ಲಲಿತ್ ಅಶೋಕ್‌ನಲ್ಲಿ 2025 ನೇ ಸಾಲಿನ ವಿದೇಶಗಳಲ್ಲಿ ಅಧ್ಯಯನ ಮೇಳ ಆಯೋಜಿಸಿದೆ ಎಂದು ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಕಾಂತಾ ( ಶಿವಕಾಂತಮ್ಮ) ನಾಯಕ ತಿಳಿಸಿದ್ದಾರೆ.ಎಕ್ಸ್‌ಪೋದಲ್ಲಿ 60 ಕ್ಕೂ ಹೆಚ್ಚು ಪ್ರಮುಖ ಜಾಗತಿಕ ವಿಶ್ವವಿದ್ಯಾಲಯಗಳು ಭಾಗವಹಿಸುವ ನಿರೀಕ್ಷೆ ಇದ್ದು, ವಿಶ್ವವಿದ್ಯಾಲಯದ ಪ್ರತಿನಿಧಿಗಳೊಂದಿಗೆ ಒನ್-ಆನ್-ಒನ್ ಸೆಷನ್, ಸ್ಪಾಟ್ ವಿದ್ಯಾರ್ಥಿ ವೇತನಗಳು ಮತ್ತು ಅರ್ಹತಾ ಮೌಲ್ಯಮಾಪನಗಳು, ವೀಸಾ…

Read More

ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲರ ಪ್ರವಾಸ

ಸಪ್ತಸಾಗರ ವಾರ್ತೆ, ವಿಜಯಪುರ, ಆ.4:ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ ಅವರು ಆ.8ರಿಂದ 12 ರವರೆಗೆ ವಿಜಯಪುರ ಜಿಲ್ಲಾ ಪ್ರವಾಸ ಕೈಗೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.ಆ.8ರಂದು ಸಂಜೆ ಬೆಳಗಾವಿಯಿಂದ ಜಿಲ್ಲೆಯ ಪಡೇಕನೂರಗೆ ಆಗಮಿಸಿ ವಾಸ್ತವ್ಯ ಮಾಡಲಿದ್ದಾರೆ.ಆ.9 ಹಾಗೂ 10ರಂದು ಪರಿಶೀಲನೆ ನಡೆಸುವರು.ಆ.11 ರಂದು ಬೆಳಿಗ್ಗೆ 8-30ಕ್ಕೆ ಪಡೇಕನೂರದಿಂದ ಹೊರಟು ವಿಜಯಪುರಕ್ಕೆ ಆಗಮಿಸಿ, ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ವಿವಿಧ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಮತ್ತೆ ಪಡೇಕನೂರಗೆ ಪ್ರಯಾಣ ಬೆಳೆಸಿ ವಾಸ್ತವ್ಯ ಮಾಡಲಿದ್ದಾರೆ.ಆ.12 ರಂದು ಬೆಳಿಗ್ಗೆ 9…

Read More

ಚೇತನಾ ಆಂಗ್ಲ ಮಾಧ್ಯಮ ಶಾಲೆ ವಿದ್ಯಾರ್ಥಿಗಳ ಅಮೋಘ ಸಾಧನೆ

ಸಪ್ತಸಾಗರ ವಾರ್ತೆ, ವಿಜಯಪುರ, ಆ.3:ನಗರದ ಚೇತನಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ರಾಜ್ಯ ಮಟ್ಟದ ಟೆಕ್ವಾಂಡೋ ಜಿ4 ನಲ್ಲಿ ಬೆಳ್ಳಿ ಪದಕ (ಎರಡನೇ ಸ್ಥಾನ) ಪಡೆದುಕೊಂಡು ಅಮೋಘ ಸಾಧನೆಯನ್ನು ಮಾಡಿದ್ದಾರೆ.ಬೆಂಗಳೂರಿನ ಕೋರಮಂಗಲ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ 42 ನೆಯ ರಾಜ್ಯ ಟೆಕ್ವಾಂಡೋ 2025 ರ ಪಂದ್ಯಾವಳಿಯಲ್ಲಿ ಭಾಗವಹಿಸಿ ನಗರದ ಚೇತನಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಾದ ಕುಮಾರಿ ಪೂರ್ವಿ ಮಲ್ಲಿಕಾರ್ಜುನ ಮನಗೂಳಿ ಹಾಗೂ ಅಕುಲ್ ಮಲ್ಲಿಕಾರ್ಜುನ ಮನಗೂಳಿ ಭಾಗವಹಿಸಿ ಸಬ್ ಜೂನಿಯರ್ ಮತ್ತು ಕೆಡೆಟ್ ಕೆಟಗರಿಯಲ್ಲಿ ಸ್ಪರ್ಧೆ…

Read More