ಮಕರ ಸಂಕ್ರಮಣ: ಹೋಮ ಹವನಪಲ್ಲಕ್ಕಿಯೊಂದಿಗೆ ನಂದಿ ಧ್ವಜಗಳ ಉತ್ಸವ

ಸಪ್ತಸಾಗರ ವಾರ್ತೆ, ವಿಜಯಪುರ, ಜ. 14: ಶ್ರೀ ಸಿದ್ಧೇಶ್ವರ ಸಂಸ್ಥೆಯ ಸಂಕ್ರಮಣದ ಮಹೋತ್ಸವ ಅಂಗವಾಗಿ ಶ್ರೀ ಸಿದ್ಧೇಶ್ವರ ದೇವಸ್ಥಾನದ ಮುಂದೆ ಸಂಕ್ರಮಣ ಎಂದರೆ ಕೂಡಿ ಬಾಳುವುದು ಎಂದರ್ಥ ಇಂದು ಎಳ್ಳು ಬೆಲ್ಲ ವಿತರಣೆಯೊಂದಿಗೆ ಸ್ನೇಹ ಬಾಂಧವ್ಯ ಬೆಳೆಸಿಕೊಳ್ಳುವ ಶ್ರೀ ಸಿದ್ಧೇಶ್ವರ ಜಾತ್ರೆಯ ವಿಶಿಷ್ಠ ಕಾರ್ಯಕ್ರಮವಾದ “ಹೋಮ ಹವನ” ದೇವಾಲಯದ ಆವರಣದ ಮುಂದೆ ಶ್ರೀ ಸಿದ್ಧೇಶ್ವರ ಸಂಸ್ಥೆ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ (ಯತ್ನಾಳ) ಇವರ ನೇತೃತ್ವದಲ್ಲಿ ಮಧ್ಯಾಹ್ನ ೧೨-೪೫ ಗಂಟೆಗೆ ಸಹಸ್ರಾರು ಭಕ್ತಾಧಿಗಳ ಮಧ್ಯೆ “ಹೋಮ…

Read More

ಜ.14ರಂದು ಶಿವಯೋಗಿ ಸಿದ್ದರಾಮೇಶ್ವರ ಜಯಂತಿ

ಸಪ್ತಸಾಗರ ವಾರ್ತೆ, ವಿಜಯಪುರ,ಜ.14: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದಲ್ಲಿ ಶಿವಯೋಗಿ ಸಿದ್ದರಾಮೇಶ್ವರ ಜಯಂತಿ ಕಾರ್ಯಕ್ರಮವನ್ನು ಜ.14ರಂದು ವಿಜಯಪುರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ.ಅಂದು ಬೆಳಿಗ್ಗೆ 9-30ಕ್ಕೆ ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಭಾವಚಿತ್ರ ಮೆರವಣಿಗೆಗೆ ಚಾಲನೆ ನಡೆಯಲಿದ್ದು, ಬೆಳಿಗ್ಗೆ 10.30ಕ್ಕೆ ನಡೆಯುವ ಕಾರ್ಯಕ್ರಮವನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವ, ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ. ಪಾಟೀಲ ಅವರು ಉದ್ಘಾಟಿಸುವರು.ಜವಳಿ,ಕಬ್ಬು ಅಭಿವೃದ್ಧಿ ಮತ್ತು…

Read More

ಸಂಕ್ರಮಣ ಜಾತ್ರೆ: ಅಕ್ಷತಾರ್ಪಣೆ-ಬೋಗಿ

ಸಪ್ತಸಾಗರ ವಾರ್ತೆ, ವಿಜಯಪುರ, ಜ. 13: ನಗರದ ಆರಾಧ್ಯ ದೈವ ಶ್ರೀ ಸಿದ್ದೇಶ್ವರ ಸಂಕ್ರಮಣ ಜಾತ್ರಾ ಮಹೋತ್ಸವದ ೩ನೇ ದಿನವಾದ ಮಂಗಳವಾರ ವಿವಿಧ ಪುಷ್ಪಗಳಿಂದ ಅಲಂಕೃತ ಸಪ್ತ ನಂದಿಕೋಲುಗಳು, ಶ್ವೇತ ವಸ್ತ್ರಧಾರಿ ಭಕ್ತರು ಹಾಗೂ ಪಂಚ ಕಮಿಟಿ ಸದಸ್ಯರ ಮಧ್ಯ ಸಿದ್ಧರಾಮನ ಯೋಗ ದಂಡಕ್ಕೆ ಅಕ್ಷತಾರ್ಪಣೆ ಭೋಗಿ ಕಾರ್ಯಕ್ರಮವು ಶ್ರದ್ಧಾ-ಭಕ್ತಿ, ಸಂಭ್ರಮದಿಂದ ಜರುಗಿತು.ಸಿದ್ದೇಶ್ವರ ಜಾತ್ರೆಯಲ್ಲಿ ಅಕ್ಷತಾರ್ಪಣೆ ಭೋಗಿ ಕಾರ್ಯಕ್ರಮವು ತನ್ನದೆಯಾದ ವಿಶೇಷತೆ ಹೊಂದಿದೆ. ಸಹಸ್ರಾರು ಸಂಖ್ಯೆಯ ಭಕ್ತರ ಸಮ್ಮುಖದಲ್ಲಿ ಸಿದ್ಧರಾಮನ ಯೋಗ ದಂಡದೊಂದಿಗೆ ಕುಂಬಾರ ಕನ್ಯೆ ಗುಂಡಮ್ಮಳಿಗೆ…

Read More

ಸಿದ್ದರಾಮಯ್ಯ ಕೇವಲ ಕಾಂಗ್ರೆಸ್ ಸಿಎಂ ಅಲ್ಲ, ಕರ್ನಾಟಕದ ಸಿಎಂ: ಯತ್ನಾಳ

ಸಪ್ತಸಾಗರ ವಾರ್ತೆ, ವಿಜಯಪುರ, ಜ. 12:ಸಿದ್ದರಾಮಯ್ಯ ಕಾಂಗ್ರೆಸ್ ಸಿಎಂ ಅಲ್ಲ, ರಾಜ್ಯದ ಸಿಎಂ ಆಗಿದ್ದಾರೆ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದ್ದಾರೆ. ವಿಜಯಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗಿನ ವೇದಿಕೆ ಹಂಚಿಕೆ ಹಾಗೂ ಅವರನ್ನು ಹೊಗಳಿದ ವಿಚಾರವಾಗಿ ಕೇಳಿಬಂದ ಟೀಕೆಗಳಿಗೆ,ಸಿದ್ದರಾಮಯ್ಯ ಅವರು ಕೇವಲ ಕಾಂಗ್ರೆಸ್ ಪಕ್ಷದ ಮುಖ್ಯಮಂತ್ರಿಯಲ್ಲ. ಅವರು ಇಡೀ ರಾಜ್ಯದ ಮುಖ್ಯಮಂತ್ರಿ. ನಮ್ಮ ಕ್ಷೇತ್ರಕ್ಕೆ ಬಂದಾಗ ಅವರಿಗೆ ಗೌರವ ನೀಡುವುದು ಶಿಷ್ಟಾಚಾರ ಮತ್ತು ನನ್ನ ಕರ್ತವ್ಯ. ನಾನು ಗೌರವ…

Read More

ಸ್ವಾಮಿ ವಿವೇಕಾನಂದ ಜಯಂತಿ: ಪುತ್ಥಳಿಗೆ ಯತ್ನಾಳ ಮಾಲಾರ್ಪಣೆ, ಗೌರವ ನಮನ

ಸಪ್ತಸಾಗರ ವಾರ್ತೆ, ವಿಜಯಪುರ, ಜ. 12: ಭಾರತದ ಆಧ್ಯಾತ್ಮಿಕ ಶಕ್ತಿ ಜಗತ್ತಿಗೆ ಪಸರಿಸಿದ ಅದಮ್ಯ ಚೇತನ ವಿವೇಕಾನಂದವಿಜಯಪುರ: ಭಾರತದ ಆಧ್ಯಾತ್ಮಿಕ ಶಕ್ತಿಯನ್ನು ಜಗತ್ತಿಗೆ ಪಸರಿಸಿದ ಅದಮ್ಯ ಚೇತನ ಸ್ವಾಮಿ ವಿವೇಕಾನಂದರು ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಹೇಳಿದರು.ನಗರದ ಸ್ವಾಮಿ ವಿವೇಕಾನಂದ ವೃತ್ತದಲ್ಲಿ ಸೋಮವಾರ ಸ್ವಾಮಿ ವಿವೇಕಾನಂದರ ಜಯಂತಿ ಅಂಗವಾಗಿ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿ ಅವರು ಮಾತನಾಡಿದರು.ಭಾರತದ ಸಂಸ್ಕೃತಿ, ಪರಂಪರೆ ಹಾಗೂ ಆಧ್ಯಾತ್ಮಿಕ ಶಕ್ತಿಯನ್ನು ಜಗತ್ತಿಗೆ ಪಸರಿಸಿದ ಸ್ವಾವಿ ವಿವೇಕಾನಂದರು ಯುವ…

Read More

ನಮ್ಮೂರ ಜಾತ್ರೆ: ಗೋಮಾತೆ ಪೂಜೆಯೊಂದಿಗೆ ಆರಂಭ

ಸಪ್ತಸಾಗರ ವಾರ್ತೆ, ವಿಜಯಪುರ, ಜ. 11: ಶ್ರೀ ಸಿದ್ಧೇಶ್ವರ ಸಂಕ್ರಮಣದ ಜಾತ್ರಾ ಮಹೋತ್ಸವದ ಅಂಗವಾಗಿ ಶ್ರೀ ಸಿದ್ಧೇಶ್ವರ ದೇವಾಲಯದಲ್ಲಿ ನಮ್ಮೂರ ಜಾತ್ರೆಯ ಗೋ ಪೂಜೆಯೊಂದಿಗೆ ನಂದಿಕೊಲ ಪೂಜೆಗಳನ್ನು ಶ್ರೀ ಸಿದ್ಧೇಶ್ವರ ಸಂಸ್ಥೆಯ ಅಧ್ಯಕ್ಷ, ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ(ಯತ್ನಾಳ) ನೆರವೇರಿಸಿದರು.ನಂದಿಕೋಲಗಳನ್ನು ಹಿಡಿಯುವ ಪಟುಗಳು ನೀಲುವ ಅಂಗಿ, ಧೋತ್ರ, ಪಟ್ಟವಡಿ, ಹಾಕಿಕೊಂಡು ಭಕ್ತಿ ಶ್ರದ್ದೆಯಿಂದ ನಂದಿಕೋಲಗಳನ್ನು ಹಿಡಿದರು. ಅಟಲ್ ಬಿಹಾರಿ ವಾಜಪೇಯಿ ರಸ್ತೆಯಲ್ಲಿರುವ ಚತುರ್ಮುಖ ಗಣೇಶನಿಗೆ ವಿಶೇಷ ಪೂಜೆ ಮಾಡಲಾಯಿತು.ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ಉಪಾಧ್ಯಕ್ಷ ಸಂಗು ಸಜ್ಜನ,…

Read More

ನಾಳೆಯಿಂದ ವೈಭವದ ಶ್ರೀ ಸಿದ್ದೇಶ್ವರ ಜಾತ್ರಾ ಮಹೋತ್ಸವ

ಸಪ್ತಸಾಗರ ವಾರ್ತೆ, ವಿಜಯಪುರ, ಜ. 10: ಉತ್ತರ ಕರ್ನಾಟಕದ ಸುಪ್ರಸಿದ್ದ ಶ್ರೀ ಸಿದ್ದೇಶ್ವರ ಸಂಕ್ರಮಣ ಜಾತ್ರಾ ಮಹೋತ್ಸವ ಜನವರಿ 11ರಿಂದ 7 ದಿನಗಳ ಕಾಲ ವೈಭವದಿಂದ ನಡೆಯಲಿದ್ದು, ಜಾತ್ರಾ ಮಹೋತ್ಸವಕ್ಕೆ ಸಕಲ ಸಿದ್ಧತೆ ಪೂರ್ಣಗೊಳಿಸಲಾಗಿದೆ ಎಂದರು.ಜಾತ್ರಾ ಮಹೋತ್ಸವ ಅಂಗವಾಗಿ ನಡೆಯುವ ವಿವಿಧ ಧಾರ್ಮಿಕ ಕಾರ್ಯಕ್ರಮಗಳು, ಸಾಂಸ್ಕೃತಿಕ ಕಾರ್ಯಕ್ರಮಗಳ ಕುರಿತು ನಗರ ಶಾಸಕ ಹಾಗೂ ಶ್ರೀ ಸಿದ್ದೇಶ್ವರ ಸಂಸ್ಥೆಯ ಅಧ್ಯಕ್ಷ ಬಸನಗೌಡ ಪಾಟೀಲ ಯತ್ನಾಳ ಹಾಗೂ ಶ್ರೀ ಸಿದ್ದೇಶ್ವರ ಸಂಸ್ಥೆಯ ಸರ್ವ ನಿರ್ದೇಶಕರ ಸಮ್ಮುಖದಲ್ಲಿ ಚೇರಮನ್ ಬಸಯ್ಯ ಹಿರೇಮಠ…

Read More

ಅಲ್ಪಸಂಖ್ಯಾತರ ಓಲೈಕೆಗೆ ಅಕ್ರಮವಾಗಿ ಮನೆ ಹಂಚಿಕೆ ನಿರ್ಧಾರ ಖಂಡನೀಯ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 31: ನಿಯಮಾವಳಿಗಳನ್ನು ಗಾಳಿಗೆ ತೂರಿ ಅಲ್ಪ ಸಂಖ್ಯಾತರನ್ನು ಓಲೈಸಲು ಕೋಗಿಲು ಸಂತ್ರಸ್ತರಿಗೆ ಅಕ್ರಮವಾಗಿ ಮನೆ ಹಂಚಿಕೆ ಮಾಡುತ್ತಿರುವುದು ಖಂಡನೀಯ ಹಾಗೂ ಈ ಯೋಜನೆಯನ್ನು ಸರ್ಕಾರ ಕೂಡಲೇ ಕೈಬಿಡಬೇಕು ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಆಗ್ರಹಿಸಿದ್ದಾರೆ.ಕಾಂಗ್ರೆಸ್ ಹೈಕಮಾಂಡ್ ಒತ್ತಡಕ್ಕೆ ಮಣಿದು ಬೆಂಗಳೂರಿನ ಯಲಹಂಕದ ಕೋಗಿಲುವಿನಲ್ಲಿ ಅಕ್ರಮವಾಗಿ ವಾಸಿಸುತ್ತಿದ್ದ ಕುಟುಂಬಗಳನ್ನು ತೆರವು ಮಾಡಿದ ನಂತರ ಅವರಿಗೆ ರಾಜ್ಯ ಸರ್ಕಾರದ ವಸತಿ ಇಲಾಖೆಯ ಮೂಲಕ ಮನೆಗಳನ್ನು ಜನವರಿ 1, 2026 ರಂದು ಹಸ್ತಾಂತರ…

Read More

ದೇಶದಲ್ಲಿನ ಬಾಂಗ್ಲಾ ವಲಸಿಗರನ್ನು ಹೊರ ಹಾಕಬೇಕು-ಶಾಸಕ ಯತ್ನಾಳ

ಸಪ್ತಸಾಗರ ವಾರ್ತೆ ವಿಜಯಪುರ, ಡಿ. 25:ಬಾಂಗ್ಲಾ ವಲಸಿಗರಿಂದ ದೇಶಕ್ಕೆ ಅಪಾಯ. ಹೀಗಾಗಿ ಬಾಂಗ್ಲಾ ಒಲಸಿಗರು ಹಾಗೂ ಅವರಿಗೆ ಸಾಥ್ ನೀಡುವವರನ್ನು ದೇಶದಿಂದ ಹೊರ ಹಾಕಬೇಕು ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಒತ್ತಾಯಿಸಿದ್ದಾರೆ.ಗುರುವಾರ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಬಾಂಗ್ಲಾ ದೇಶದಲ್ಲಿ ಮುಗ್ಧ ಹಿಂದೂ ಯುವಕನ ಸಜೀವ ದಹನ ಅತ್ಯಂತ ನೋವಿನ ಸಂಗತಿ ಎಂದರು.ಕಾಂಗ್ರೆಸ್ ಹಾಗೂ ಅಲ್ಪಸಂಖ್ಯಾತರ ಪಕ್ಷಗಳು ಬಾಂಗ್ಲಾ ವಲಸಿಗರನ್ನು ಓಟ ಬ್ಯಾಂಕ್ ಮಾಡಿಕೊಂಡಿದ್ದಾರೆ. ಅದಕ್ಕಾಗಿ ಅಕ್ರಮ ಬಾಂಗ್ಲಾ ವಲಸಿಗರಿಗೆ ಅಂತಿಮ ಗಡುವು ನೀಡಬೇಕು…

Read More

ಶುದ್ಧ ಸಚ್ಚಾರಿತ್ರ್ಯದ ರಾಜಕಾರಣಿ ವಾಜಪೇಯಿ: ಯತ್ನಾಳ

ಸಪ್ತಸಾಗರ ವಾರ್ತೆ ವಿಜಯಪುರ, ಡಿ. 25: ಪರಮಾಣು ಶಕ್ತಿಯಲ್ಲಿ ಭಾರತ ಮತ್ತೊಂದು ಹಂತಕ್ಕೆ ಹೋಗಲು ವಾಜಪೇಯಿ ಅವರ ದೂರದರ್ಶಿತ್ವ ಮತ್ತು ದೇಶಪ್ರೇಮವೇ ಕಾರಣ ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಹೇಳಿದರು.ನಗರದ ಭಾರತರತ್ನ ಅಟಲ್ ಬಿಹಾರಿ ವಾಜಪೇಯಿ ವೃತ್ತದಲ್ಲಿ ಗುರುವಾರ ವಾಜಪೇಯಿ ಅವರ 101ನೇ ಜನ್ಮ ದಿನದ ಅಂಗವಾಗಿ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದ ನಂತರ ಮಾತನಾಡಿದ ಅವರು, ವಾಜಪೇಯಿ ಅವರು ಶುದ್ಧ ಸಚ್ಚಾರಿತ್ರ್ಯದ ರಾಜಕಾರಣಿ, ಅಜಾತಶತ್ರುರಾಗಿದ್ದ ಅವರು ರಾಷ್ಟ್ರ…

Read More