ಶುದ್ಧ ಸಚ್ಚಾರಿತ್ರ್ಯದ ರಾಜಕಾರಣಿ ವಾಜಪೇಯಿ: ಯತ್ನಾಳ

ಸಪ್ತಸಾಗರ ವಾರ್ತೆ ವಿಜಯಪುರ, ಡಿ. 25: ಪರಮಾಣು ಶಕ್ತಿಯಲ್ಲಿ ಭಾರತ ಮತ್ತೊಂದು ಹಂತಕ್ಕೆ ಹೋಗಲು ವಾಜಪೇಯಿ ಅವರ ದೂರದರ್ಶಿತ್ವ ಮತ್ತು ದೇಶಪ್ರೇಮವೇ ಕಾರಣ ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಹೇಳಿದರು.ನಗರದ ಭಾರತರತ್ನ ಅಟಲ್ ಬಿಹಾರಿ ವಾಜಪೇಯಿ ವೃತ್ತದಲ್ಲಿ ಗುರುವಾರ ವಾಜಪೇಯಿ ಅವರ 101ನೇ ಜನ್ಮ ದಿನದ ಅಂಗವಾಗಿ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದ ನಂತರ ಮಾತನಾಡಿದ ಅವರು, ವಾಜಪೇಯಿ ಅವರು ಶುದ್ಧ ಸಚ್ಚಾರಿತ್ರ್ಯದ ರಾಜಕಾರಣಿ, ಅಜಾತಶತ್ರುರಾಗಿದ್ದ ಅವರು ರಾಷ್ಟ್ರ…

Read More

ದ್ವೇಷ ಭಾಷಣ ವಿಧೇಯಕ ಅನುಮೋದನೆ ತಡೆಹಿಡಿಯಲು ರಾಜ್ಯಪಾಲರಿಗೆ ಶಾಸಕ ಯತ್ನಾಳ ಪತ್ರ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 22:ಜನತೆಯ ವಾಕ್ ಸ್ವಾತಂತ್ರ್ಯ ಹಾಗೂ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ಪ್ರತಿಬಂಧಕ) ವಿಧೇಯಕ-2025ನ್ನು ಅಂಗೀಕರಿಸಬಾರದೆಂದು ಕೋರಿ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ರಾಜ್ಯಪಾಲರಿಗೆ ಶನಿವಾರ ಪತ್ರ ಬರೆದಿದ್ದಾರೆ.ಈಗಾಗಲೇ ಭಾರತೀಯ ನ್ಯಾಯ ಸಂಹಿತೆಯಲ್ಲಿ ದ್ವೇಷ ಭಾಷಣ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಲು ಕಾನೂನು ಇರುವುದರಿಂದ, ಇದಕ್ಕೆ ಪ್ರತ್ಯೇಕ ವಿಧೇಯಕ ಅವಶ್ಯವಿರುವುದಿಲ್ಲ. ಆದರೆ ಕಾಂಗ್ರೆಸ್ ಸರ್ಕಾರ ಈ ವಿಧೇಯಕವನ್ನು ಬಳಸಿ ರಾಜಕೀಯ ವಿರೋಧಿಗಳನ್ನು ದಮನಿಸುವ…

Read More

ದ್ವೇಷ ಭಾಷಣ ವಿಧೇಯಕ ಮಂಡನೆ: ಸುಪ್ರೀಂ ಕೋರ್ಟ್ ನಲ್ಲಿ ಪ್ರಶ್ನೆ-ಯತ್ನಾಳ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 20:ಸುಪ್ರೀಂ ಕೋರ್ಟ್ ನಲ್ಲಿ ದ್ವೇಷ ಭಾಷಣ ವಿಧೇಯಕ ಮಂಡನೆ ವಿರುದ್ಧ ಪ್ರಶ್ನೆ ಮಾಡುತ್ತೇವೆ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.ಶನಿವಾರ ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ರಾಜ್ಯಪಾಲರಿಗೂ ಈ ಕುರಿತು ಮನವಿ ಸಲ್ಲಿಸುತ್ತೇವೆ ಎಂದು ಹೇಳಿದರು.ಈಗಾಗಲೇ ಸಂವಿಧಾನದಲ್ಲಿ ಮಾತನಾಡುವ ಹಕ್ಕನ್ನು ನೀಡಲಾಗಿದೆ.19/ A ಕಲಂನಲ್ಲಿ ಅಭಿವ್ಯಕ್ತಿ ಸ್ವಾತಂತ್ಯ ಹಕ್ಕು ನೀಡಲಾಗಿದೆ. ದ್ವೇಷ ಭಾಷಣ ವಿಧೇಯಕ ಇದಕ್ಕೆ ತದ್ವಿರುದ್ಧವಾಗಿದೆ. ಹೀಗಾಗಿ ನಾವು ಇದನ್ನು ಸುಪ್ರೀಂ ಕೋರ್ಟ್ ನಲ್ಲಿ…

Read More

ಶಾಸಕ ಯತ್ನಾಳ ಜನ್ಮದಿನ: ಬಡ ವಿದ್ಯಾರ್ಥಿಗೆ ರೂ.50 ಸಾವಿರ ನೆರವು

ಸಪ್ತ ಸಾಗರ ವಾರ್ತೆ ವಿಜಯಪುರ, ಡಿ. 15:ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ಜನ್ಮ ದಿನದ ಅಂಗವಾಗಿ ಶನಿವಾರ ನಗರದ ಆರಾಧ್ಯದೈವ ಸಿದ್ದೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಬೆಂಗಳೂರಿನ ಆರ್.ವಿ.ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ಎಂಜನಿಯರಿಂಗ್ ವಿದ್ಯಾರ್ಥಿಗೆ ರೂ. 50,000 ಆರ್ಥಿಕ ನೆರವು ನೀಡುವ ಮೂಲಕ ವಿಶಿಷ್ಟ ರೀತಿಯಲ್ಲಿ ಯತ್ನಾಳ ಹುಟ್ಟು ಹಬ್ಬ ಆಚರಿಸಲಾಯಿತು. ಬೆಂಗಳೂರಿನ ಆರ್ ವಿ ಕಾಲೇಜಿನಲ್ಲಿ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿರುವ ತಂದೆ ಇಲ್ಲದ ಬಡ ಯುವಕ ಗಿರೀಶ್ ಗೌಡರ ಎಂಬಾತನ ಕಾಲೇಜು…

Read More

ಸದನದಲ್ಲಿ ನಿರುದ್ಯೋಗಿಗಳ ಪರ ಧ್ವನಿ ಎತ್ತಿದ ಯತ್ನಾಳ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 10: ಅರ್ಹ ಯುವಕ ಯುವತಿಯರಿಗೆ ಉದ್ಯೋಗ ನೀಡಬೇಕಾಗಿದ್ದ ರಾಜ್ಯ ಕಾಂಗ್ರೆಸ್ ಸರ್ಕಾರ ವೋಟ್ ಬ್ಯಾಂಕ್ ರಾಜಕಾರಣಕ್ಕೆ ಹಣವನ್ನೆಲ್ಲ ಬಳಸಿ, ಉದ್ಯೋಗಾಂಕ್ಷಿಗಳಿಗೆ ನಿರಾಸೆ ಮೂಡಿಸಿದೆ ಎಂದು ಬಸನಗೌಡ ಪಾಟೀಲ ಯತ್ನಾಳ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.ಬೆಳಗಾವಿ ಚಳಿಗಾಲ ಅಧಿವೇಶನದಲ್ಲಿ ಚುಕ್ಕೆ ರಹಿತ ಪ್ರಶ್ನೆ ಸಂಖ್ಯೆ 400 ರ ಮೂಲಕ ರಾಜ್ಯದ ವಿವಿಧ ಇಲಾಖೆಗಳಲ್ಲಿ ಹುದ್ದೆಗಳು ಖಾಲಿಯಿರುವ ಬಗ್ಗೆ ಮತ್ತು ನೇಮಕಾತಿ ಮಾಡಿಕೊಳ್ಳುವ ಕುರಿತಂತೆ ಗಮನ ಸೆಳೆದು ಖಾಲಿಯಿರುವ ಸರ್ಕಾರಿ ಹುದ್ದೆಗಳನ್ನು ಸಮರೋಪಾದಿಯಲ್ಲಿ ಭರ್ತಿ ಮಾಡಬೇಕೆಂದು…

Read More

2030 ರೊಳಗೆ 2.5 ಲಕ್ಷ ಮನೆಗಳಿಗೆ ಸಿ.ಎನ್.ಜಿ ಗ್ಯಾಸ್ ಸಂಪರ್ಕ ಗುರಿ: ಯತ್ನಾಳ

ಸಪ್ತಸಾಗರ ವಾರ್ತೆ ವಿಜಯಪುರ, ಡಿ. 6: ಮನೆಗಳಿಗೆ ನೇರವಾಗಿ ಸಿ.ಎನ್.ಜಿ ಸರಬರಾಜು ಮಾಡಿ, ನಗರವನ್ನು ಮಾಲಿನ್ಯ ಮುಕ್ತವಾಗಿಡುವ ಬಹಳ ದಿನಗಳ ಕನಸು ಥಿಂಕ್ ಗ್ಯಾಸ್ ಸಿ.ಎನ್.ಸಿ ಮೂಲಕ ನಡೆಯುತ್ತಿದೆ. 2030 ರೊಳಗೆ 2.5 ಲಕ್ಷ ಮನೆಗಳಿಗೆ ನೇರವಾಗಿ ಪಿ.ಎನ್.ಜಿ ಗ್ಯಾಸ್ ಸಂಪರ್ಕ ನೀಡುವ ಗುರಿ ಹೊಂದಲಾಗಿದೆ ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ರವರು ತಿಳಿಸಿದರು.ನಗರದಲ್ಲಿ ಶುಕ್ರವಾರ ಥಿಂಕ್ ಗ್ಯಾಸ್ ಸಿ.ಎನ್.ಜಿ ಸ್ಟೇಶನ್ ಉದ್ಘಾಟಿಸಿ ಮಾತನಾಡಿದ ಅವರು, ಈಗಾಗಲೇ ವಿಜಯಪುರ ನಗರದಲ್ಲಿ 120 ಮನೆಗಳು ಮತ್ತು…

Read More

ಪ್ರವಾಹ ಪೀಡಿತ ಪ್ರದೇಶಗಳಿಗೆ ತುರ್ತು ಪರಿಹಾರ ಘೋಷಣೆಗೆ ಶಾಸಕ ಯತ್ನಾಳ ಪ್ರಧಾನಿಗೆ ಪತ್ರ

ಸಪ್ತಸಾಗರ ವಾರ್ತೆ, ವಿಜಯಪುರ, ಅ. 8: ಉತ್ತರ ಕರ್ನಾಟಕದ ಪ್ರವಾಹ ಪೀಡಿತ ಪ್ರದೇಶಗಳಿಗೆ ತುರ್ತು ಪರಿಹಾರಕ್ಕಾಗಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಬುಧವಾರ ಪತ್ರ ಬರೆದು ಮನವಿ ಮಾಡಿದ್ದಾರೆ.ಉತ್ತರ ಕರ್ನಾಟಕದ ಹಲವಾರು ಜಿಲ್ಲೆಗಳಲ್ಲಿ ಉಂಟಾಗಿರುವ ಪ್ರವಾಹದಿಂದ ದೊಡ್ಡ ಪ್ರಮಾಣದಲ್ಲಿ ಹಾನಿ ಮತ್ತು ಸ್ಥಳಾಂತರಕ್ಕೆ ಕಾರಣವಾಗಿದೆ. ಭೀಮಾ ನದಿಯ ದಡದಲ್ಲಿ ಉಂಟಾದ ಭಾರಿ ಪ್ರವಾಹವು 10 ಲಕ್ಷ ಹೆಕ್ಟೇರ್ ಗೂ ಹೆಚ್ಚು ಪ್ರದೇಶದಲ್ಲಿ ಬೆಳೆ ನಷ್ಟಕ್ಕೆ ಕಾರಣವಾಗಿದ್ದು, ರೈತರು ತಾವು ಬೆಳೆದ ಬೆಳೆಗಳು…

Read More

ಏಕತಾರಿ ರಾಮಯ್ಯನವರಿಗೆ ರಾಜ್ಯ ಪ್ರಶಸ್ತಿ ನೀಡಲು ಸಿಎಂಗೆ ಯತ್ನಾಳ್ ಒತ್ತಾಯ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 24: ಜಾನಪದ ಗಾಯಕ, ತಂತಿ ವಾದ್ಯಗಳ ತಯಾರಕರಾದ ಏಕತಾರಿ ರಾಮಯ್ಯನವರ ಅವರಿಗೆ ರಾಜ್ಯ ಪ್ರಶಸ್ತಿ ನೀಡುವಂತೆ ಒತ್ತಾಯಿಸಿ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ರವರು, ಮುಖ್ಯಮಂತ್ರಿಗಳಾದ ಸಿದ್ದರಾಯಯ್ಯನವರಿಗೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶಿವರಾಜ ತಂಗಡಗಿ ಅವರಿಗೆ ಬುಧವಾರ ಪತ್ರ ಬರೆದಿದ್ದಾರೆ.ಬೆಂಗಳೂರಿನ ಗೊಲ್ಲಹಳ್ಳಿ ಹೋಬಳಿಯ ಕೆಂಚನಪಾಳ್ಯ ಗ್ರಾಮದ ನಿವಾಸಿಯಾಗಿರುವ ಜಾನಪದ ಗಾಯಕ ಏಕತಾರಿ ರಾಮಯ್ಯನವರು ತಮ್ಮ ಕಂಚಿನ ಕಂಠ ಹಾಗೂ ವಿಶಿಷ್ಟ ಪ್ರತಿಭೆಯ ಮೂಲಕ ಜಾನಪದ ಲೋಕಕ್ಕೆ ಸಾಕಷ್ಟು…

Read More