ಬಸವೇಶ್ವರರ ಜನ್ಮಭೂಮಿ ಇಂಗಳೇಶ್ವರ ಅಭಿವೃದ್ಧಿಗೆ ಆಗ್ರಹ

ಅಭಿವೃದ್ಧಿ ಪ್ರಾಧಿಕಾರಕ್ಕೆ ಸೇರ್ಪಡೆ, ಸರ್ಕಾರಿ ಕಾಲೇಜು–ಆರೋಗ್ಯ ಕೇಂದ್ರ ಸ್ಥಾಪನೆಗೆ ಒತ್ತಾಯ; ಇಲ್ಲದಿದ್ದರೆ ಉಪವಾಸ ಸತ್ಯಾಗ್ರಹ ಎಚ್ಚರಿಕೆ ಸಪ್ತಸಾಗರ ವಾರ್ತೆ,ವಿಜಯಪುರ, ಆ.1: ಜಗಜ್ಯೋತಿ ಬಸವೇಶ್ವರರ ಜನ್ಮಭೂಮಿ ಇಂಗಳೇಶ್ವರ ಗ್ರಾಮ ಇಂದಿಗೂ ಮೂಲಸೌಕರ್ಯಗಳಿಂದ ವಂಚಿತವಾಗಿದ್ದು, ಗ್ರಾಮವನ್ನು ತಕ್ಷಣವೇ ಬಸವನ ಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಗೆ ಸೇರಿಸಿ ಸಮಗ್ರ ಅಭಿವೃದ್ಧಿಗೆ ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ ಮುಂದಿನ ತಿಂಗಳಿನಿಂದ ಗ್ರಾಮಸ್ಥರು ಉಪವಾಸ ಸತ್ಯಾಗ್ರಹ ಆರಂಭಿಸಲಿದ್ದಾರೆ ಎಂದು ಗ್ರಾಮದ ಮುಖಂಡರು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.ನಗರದಲ್ಲಿ ಶನಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರೈತ ಮುಖಂಡ ಅರವಿಂದ…

Read More