ಮಕ್ಕಳನ್ನು ಪ್ರಬುದ್ದ ನಾಗರಿಕರನ್ನಾಗಿ ನಿರ್ಮಾಣ ಮಾಡಿ: ಬಿಇಒ ಬಸವರಾಜ ತಳವಾರ
ಸಪ್ತಸಾಗರ ವಾರ್ತೆ, ಬಬಲೇಶ್ವರ, ಡಿ. 5: ಮಕ್ಕಳಿಗೆ ಉತ್ತಮವಾದ ಶಿಕ್ಷಣವನ್ನು ನೀಡಿ ಪ್ರಬುದ್ದ ನಾಗರಿಕರನ್ನಾಗಿ ನಿರ್ಮಾಣ ಮಾಡಬೇಕು ಎಂದು ವಿಜಯಪುರ ಗ್ರಾಮೀಣ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಬಸವರಾಜ ತಳವಾರ ಹೇಳಿದರು.ತಾಲ್ಲೂಕಿನ ಕಾಖಂಡಕಿ ಗ್ರಾಮದ ನಂದಗೋಕುಲ ಆಂಗ್ಲ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯಲ್ಲಿ ಜಿಲ್ಲಾ ಪಂಚಾಯತಿ ಶಾಲಾ ಶಿಕ್ಷಣ ಇಲಾಖೆ ವಿಜಯಪುರ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಗ್ರಾಮೀಣ ವಲಯ ವಿಜಯಪುರ ಸಹಯೋಗದಲ್ಲಿ ಶುಕ್ರವಾರ ನಡೆದ ೨೦೨೫-೨೬ ನೇ ಸಾಲಿನ ತಾಲ್ಲೂಕ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ…


