ಸಂಕ್ರಮಣ ಜಾತ್ರೆ: ಅಕ್ಷತಾರ್ಪಣೆ-ಬೋಗಿ
ಸಪ್ತಸಾಗರ ವಾರ್ತೆ, ವಿಜಯಪುರ, ಜ. 13: ನಗರದ ಆರಾಧ್ಯ ದೈವ ಶ್ರೀ ಸಿದ್ದೇಶ್ವರ ಸಂಕ್ರಮಣ ಜಾತ್ರಾ ಮಹೋತ್ಸವದ ೩ನೇ ದಿನವಾದ ಮಂಗಳವಾರ ವಿವಿಧ ಪುಷ್ಪಗಳಿಂದ ಅಲಂಕೃತ ಸಪ್ತ ನಂದಿಕೋಲುಗಳು, ಶ್ವೇತ ವಸ್ತ್ರಧಾರಿ ಭಕ್ತರು ಹಾಗೂ ಪಂಚ ಕಮಿಟಿ ಸದಸ್ಯರ ಮಧ್ಯ ಸಿದ್ಧರಾಮನ ಯೋಗ ದಂಡಕ್ಕೆ ಅಕ್ಷತಾರ್ಪಣೆ ಭೋಗಿ ಕಾರ್ಯಕ್ರಮವು ಶ್ರದ್ಧಾ-ಭಕ್ತಿ, ಸಂಭ್ರಮದಿಂದ ಜರುಗಿತು.ಸಿದ್ದೇಶ್ವರ ಜಾತ್ರೆಯಲ್ಲಿ ಅಕ್ಷತಾರ್ಪಣೆ ಭೋಗಿ ಕಾರ್ಯಕ್ರಮವು ತನ್ನದೆಯಾದ ವಿಶೇಷತೆ ಹೊಂದಿದೆ. ಸಹಸ್ರಾರು ಸಂಖ್ಯೆಯ ಭಕ್ತರ ಸಮ್ಮುಖದಲ್ಲಿ ಸಿದ್ಧರಾಮನ ಯೋಗ ದಂಡದೊಂದಿಗೆ ಕುಂಬಾರ ಕನ್ಯೆ ಗುಂಡಮ್ಮಳಿಗೆ…


