ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರಿಂದ ಕಾಂಗ್ರೆಸ್ ಕಚೇರಿ ಮುತ್ತಿಗೆ ಯತ್ನ
ಸಪ್ತಸಾಗರ ವಾರ್ತೆ, ವಿಜಯಪುರ, ಫೆ. 21 :ಎಐ ಶೃಂಗಸಭೆಗೆ ಅಸಂಬದ್ಧವಾಗಿ ಅಡ್ಡಿಪಡಿಸಿದ ಕಾಂಗ್ರೆಸ್ ನಡೆಯನ್ನು ಖಂಡಿಸಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕುವ ವಿಫಲ ಯತ್ನ ಮಾಡಿದರು.ನೂರಾರು ಸಂಖ್ಯೆಯಲ್ಲಿದ್ದ ಬಿಜೆಪಿ ಕಾರ್ಯಕರ್ತರನ್ನು ಕೋರ್ಟ್ ಸರ್ಕಲ್ ಬಳಿಯೇ ಬ್ಯಾರಿಕೇಡ್ ಹಾಕಿ ಪೊಲೀಸರು ತಡೆದರು. ಆಗ ಆಕ್ರೋಶಗೊಂಡ ಬಿಜೆಪಿ ಕಾರ್ಯಕರ್ತರು ಬ್ಯಾರಿಕೇಡ್ ನುಗ್ಗಿ ಕಾಂಗ್ರೆಸ್ ಕಾರ್ಯಾಲಯಕ್ಕೆ ಮುತ್ತಿಗೆ ಹಾಕಲು ಅಣಿಯಾಗುತ್ತಿದ್ದಂತೆ 50 ಕ್ಕೂ ಹೆಚ್ಚು ಕಾರ್ಯಕರ್ತರನ್ನು ಪೊಲೀಸರು ಕೆಲಕಾಲ ತಮ್ಮ ವಶಕ್ಕೆ ಪಡೆದು ನಂತರ ಬಿಡುಗಡೆಗೊಳಿಸಿದರು.ಪ್ರತಿಭಟನೆ…


