ಬಿಜೆಪಿಯವರು ಟ್ರೈನ್ ಹೋದ ಮೇಲೆ ಟಿಕೆಟ್ ತಗೆಯಲು ಬಂದಿದ್ದಾರೆ- ಸಚಿವ ಎಂ.ಬಿ. ಪಾಟೀಲ ವ್ಯಂಗ್ಯ
ಸಪ್ತ ಸಾಗರ ವಾರ್ತೆ ವಿಜಯಪುರ, ಅ. 3:ಬಿಜೆಪಿಯವರು ಟ್ರೈನ್ ಹೋದ ಮೇಲೆ ಟಿಕೆಟ್ ತೆಗೆಯಲು ಬಂದಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಮ್.ಬಿ. ಪಾಟೀಲ್ ವ್ಯಂಗ್ಯವಾಡಿದ್ದಾರೆ.ಶುಕ್ರವಾರ ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಭೀಮಾನದಿ ಪ್ರವಾಹ ಸಂಬಂಧ ಬಿಜೆಪಿ ನಿಯೋಗ ವೀಕ್ಷಣೆಗೆ ಆಗಮಿಸಿದ ಹಿನ್ನೆಲೆಯಲ್ಲಿ ಬಿಜೆಪಿಗೆ ಅವರು ಮೇಲಿನಂತೆ ಟಾಂಗ್ ನೀಡಿದರು.ಪ್ರವಾಹ ಕುರಿತು ಸಿಎಂ ಹಾಗೂ ನಾವು ವೈಮಾನಿಕ ಸಮೀಕ್ಷೆ ಮಾಡಿದ ಬಳಿಕ ತುರ್ತಾಗಿ ಹೆಕ್ಟೇರ್ ಗೆ 17000 ರೂಪಾಯಿ ಪರಿಹಾರ ಘೋಷಣೆ ಮಾಡಿದ್ದೇವೆ. ಕೇಂದ್ರದ 14…


