ಬ್ಲ್ಯಾಕ್ ಮೇಲ್ ಮಾಡುವ ಸಂಸ್ಕೃತಿ ನನ್ನದಲ್ಲ: ಯತ್ನಾಳ ಹೇಳಿಕೆ
ಸಪ್ತಸಾಗರ ವಾರ್ತೆ,ವಿಜಯಪುರ, ಮೇ. 17:ಬ್ಲ್ಯಾಕ್ಮೇಲ್ ಮಾಡುವ ಸಂಸ್ಕೃತಿ ನನ್ನದಲ್ಲ. ಬ್ಲ್ಯಾಕ್ಮೇಲ್ ಮಾಡಿದ್ದರೆ ಎಂದೋ ಸಚಿವನಾಗಿರುತ್ತಿದ್ದೆ.ಮಾಜಿ ಸಿಎಂ ಯಡಿಯೂರಪ್ಪನವರ ಸಾಕಷ್ಟು ಭ್ರಷ್ಟಾಚಾರ ನನ್ನ ಬಳಿ ಇದ್ದವು.ಪಕ್ಷದ ಹಿತ ದೃಷ್ಟಿಯಿಂದ ಬ್ಲಾಕ್ಮೇಲ್ ಮಾಡಲಿಲ್ಲ ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಸಚಿವ ಎಂ.ಬಿ. ಪಾಟೀಲರಿಗೆ ಟಾಂಗ್ ನೀಡಿದರು.ಟಿಕೆಟ್ ಗಾಗಿ ಯತ್ನಾಳ ಬಿಜೆಪಿಗೆ ಬ್ಲ್ಯಾಕಮೇಲ್ ಮಾಡುತ್ತಿದ್ದಾರೆ ಎಂಬ ಸಚಿವ ಎಂ. ಬಿ. ಪಾಟೀಲರ ಹೇಳಿಕೆಗೆ ಪ್ರತಿಕ್ರಿಯೆ ನೀಡಿ ಯತ್ನಾಳ ಸುದ್ದಿಗಾರರ ಜೊತೆಗೆ ಮಾತನಾಡಿದರು.ಯಡ್ಡಿ ಕುರಿತು ಹೈಕಮಾಂಡ್ ಗಮನಕ್ಕೆ ತರಲು ಪ್ರಯತ್ನಿಸಿದೆ….


