ಉಕ್ಕಲಿಯಲ್ಲಿ ಬಿಎಲ್‌ಡಿಇ ಟೆಲಿಮೆಡಿಸಿನ್ ಯೋಜನೆಗೆ ಚಾಲನೆ

ಗ್ರಾಮೀಣರಿಗೆ ತಜ್ಞ ವೈದ್ಯರ ಸೇವೆ ಡಿಜಿಟಲ್ ಮೂಲಕ ಮನೆಬಾಗಿಲಿಗೆ ಸಪ್ತಸಾಗರ ವಾರ್ತೆ,ವಿಜಯಪುರ, ಜು. 31:ಗ್ರಾಮೀಣ ಪ್ರದೇಶದ ಜನರಿಗೆ ಗುಣಮಟ್ಟದ ಆರೋಗ್ಯ ಸೇವೆಯನ್ನು ಡಿಜಿಟಲ್ ತಂತ್ರಜ್ಞಾನದ ಮೂಲಕ ತಲುಪಿಸುವ ಮಹತ್ವಾಕಾಂಕ್ಷಿ ಹೆಜ್ಜೆಯಾಗಿ, ಬಿಎಲ್‌ಡಿಇ ಡೀಮ್ಡ್ ವಿಶ್ವವಿದ್ಯಾಲಯವು ಉಕ್ಕಲಿ ಗ್ರಾಮೀಣ ಆರೋಗ್ಯ ತರಬೇತಿ ಕೇಂದ್ರದಲ್ಲಿ ಟೆಲಿಮೆಡಿಸಿನ್ ಯೋಜನೆಗೆ ಚಾಲನೆ ನೀಡಿದೆ.ಕಾರ್ಯಕ್ರಮವನ್ನು ನವದೆಹಲಿಯ ಸೆಂಟರ್ ಫಾರ್ ಕ್ರಾನಿಕ್ ಡಿಸೀಸ್ ಕಂಟ್ರೋಲ್ (CCDC) ಕಾರ್ಯನಿರ್ವಾಹಕ ನಿರ್ದೇಶಕ ಪ್ರೊ. ಡಿ. ಪ್ರಭಾಕರನ್ ಉದ್ಘಾಟಿಸಿ ಮಾತನಾಡಿ, ದೂರದ ಹಾಗೂ ಹಿಂದುಳಿದ ಪ್ರದೇಶಗಳ ಜನರಿಗೆ ಸಮಾನ ಮತ್ತು…

Read More

ಬಿಎಲ್‌ಡಿಇ ಎಂಜಿನಿಯರಿಂಗ್ ಕಾಲೇಜಿನಲ್ಲಿ ಸೈಬರ್ ಸೆಕ್ಯೂರಿಟಿ ಸೆಂಟರ್ ಆಫ್ ಎಕ್ಸೆಲೆನ್ಸ್ ಉದ್ಘಾಟನೆ

ಸಪ್ತಸಾಗರ ವಾರ್ತೆ ವಿಜಯಪುರ, ಜು. 21:ಸೈಬರ್ ಭದ್ರತಾ ಕ್ಷೇತ್ರದಲ್ಲಿ ವಿದ್ಯಾರ್ಥಿಗಳನ್ನು ಉದ್ಯಮದ ಅಗತ್ಯಗಳಿಗೆ ತಕ್ಕಂತೆ ಸಜ್ಜುಗೊಳಿಸುವ ಮಹತ್ವದ ಹೆಜ್ಜೆಯಾಗಿ, ಬಿಎಲ್‌ಡಿಇ ಸಂಸ್ಥೆಯ ವಿ.ಪಿ. ಡಾ. ಪಿ.ಜಿ. ಹಳಕಟ್ಟಿ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕಾಲೇಜು ಅಮೆರಿಕ ಮೂಲದ ಬರಾಕುಡಾ ನೆಟ್‌ವರ್ಕ್ಸ್ ಸಂಸ್ಥೆಯೊಂದಿಗೆ ಪರಸ್ಪರ ಸಹಕಾರ ಒಪ್ಪಂದ (MoU)ಕ್ಕೆ ಸಹಿ ಹಾಕಿ, ಬರಾಕುಡಾ ಬೆಂಬಲಿತ ಸೈಬರ್ ಸೆಕ್ಯೂರಿಟಿ ಸೆಂಟರ್ ಆಫ್ ಎಕ್ಸೆಲೆನ್ಸ್ ಅನ್ನು ಉದ್ಘಾಟಿಸಿತು.ಸೈಬರ್ ಭದ್ರತಾ ಕ್ಷೇತ್ರದಲ್ಲಿ ಜಾಗತಿಕ ಮಟ್ಟದಲ್ಲಿ ಮುಂಚೂಣಿಯಲ್ಲಿರುವ ಬರಾಕುಡಾ ನೆಟ್‌ವರ್ಕ್ಸ್, ಕೌಶಲ್ಯಾಭಿವೃದ್ಧಿ, ವಿಶೇಷ ತರಬೇತಿ, ಹ್ಯಾಕಥಾನ್‌,…

Read More

ಸಂಭವ ಟ್ರಸ್ಟ್ ಜೊತೆ ದ್ವಿಪಕ್ಷೀಯ ಒಪ್ಪಂದಕ್ಕೆ ಸಹಿ

ಸಪ್ತಸಾಗರ ವಾರ್ತೆ, ವಿಜಯಪುರ, ಜೂ. 29 :ವಿಶೇಷ ಚೇತನ ಮಕ್ಕಳ ಆರೋಗ್ಯ ಹಿತರಕ್ಷಣೆ ಹಾಗೂ ಶೈಕ್ಷಣಿಕ ಕಳಕಳಿಗೆ ಬಿ.ಎಲ್.ಡಿ.ಇ ಸಂಸ್ಥೆ ಮಾನವೀಯ ಕಳಕಳಿಯ ಹೆಜ್ಜೆ ಇರಿಸಿದ್ದು ವಿಶೇಷ ಚೇತನ ಮಕ್ಕಳಿಗೆ ಸಮನ್ವಯ ಶಿಕ್ಷಣವನ್ನು ನೀಡಲು ಸುಸಜ್ಜಿತ ತರಬೇತಿ ಕೇಂದ್ರ ಹಾಗೂ ವಿಶೇಷ ಶಾಲೆ ಸ್ಥಾಪಿಸುವ ಉದ್ದೇಶದಿಂದ ಸಂಭವ ಟ್ರಸ್ಟ್ ಜೊತೆ ದ್ವಿಪಕ್ಷೀಯ ಒಪ್ಪಂದಕ್ಕೆ ಸಹಿ ಹಾಕಲಾಗಿದೆ.ಬಿ.ಎಲ್.ಡಿ.ಇ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಸುನೀಲಗೌಡ ಪಾಟೀಲ ಹಾಗೂ ಸಮನ್ವಯ ಟ್ರಸ್ಟ್‌ ಪ್ರಮುಖರ ನಡುವೆ ಒಡಂಬಡಿಕೆ ಪತ್ರಕ್ಕೆ ಸಹಿ ಹಾಕಿ ಪರಸ್ಪರ…

Read More

ಉದ್ಯೋಗ ಮೇಳದಲ್ಲಿ ಬಿಎಲ್ಡಿಇ ಕಾಲೇಜಿನ 23 ವಿದ್ಯಾರ್ಥಿಗಳು ಆಯ್ಕೆ

ಸಪ್ತಸಾಗರ ವಾರ್ತೆ ವಿಜಯಪುರ, ಜೂ. 21:ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಶ್ರೀ ಸಂಗನಬಸವ ಮಹಾಸ್ವಾಮೀಜಿ ಪಾಲಿಟೆಕ್ನಿಕ್ ವಿದ್ಯಾಲಯದಲ್ಲಿ ಜೂನ್ 9ರಂದು ಬೆಂಗಳೂರಿನ ಸೆಂಟಮ್ ಎಲೆಕ್ಟ್ರಾನಿಕ್ಸ್ ಮತ್ತು ಬೆಳಗಾವಿಯ ಏಕಸ್ ಸಂಸ್ಥೆಗಳು ನಡೆಸಿದ ಕ್ಯಾಂಪಸ್ ಉದ್ಯೋಗ ಮೇಳದಲ್ಲಿ ಕಾಲೇಜಿನ ಒಟ್ಟು 23 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.ಸೆಂಟಮ್ ಎಲೆಕ್ಟ್ರಾನಿಕ್ಸ್ ಸಂಸ್ಥೆಗೆ 17 ಮತ್ತು ಏಕಸ್ ಸಂಸ್ಥೆಗೆ ಆರು ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.ಬೆಂಗಳೂರಿನ ಸೆಂಟಮ್ ಎಲೆಕ್ಟ್ರಾನಿಕ್ಸ್ ಸಂಸ್ಥೆಯ ವತಿಯಿಂದ ಸಹಾಯಕ ವ್ಯವಸ್ಥಾಪಕ ಮತ್ತು ಮಾನವ ಸಂಪನ್ಮೂಲ ಅಧಿಕಾರಿ ಅಂಶಿತ್ ಸಿ. ಡಿ. ಅವರು ಖುದ್ದಾಗಿ ಆಗಮಿಸಿ…

Read More

ಕ್ಯಾಂಪಸ್ ಸಂದರ್ಶನ:ಬಿಎಲ್ಡಿಇ ಪಾಲಿಟೆಕ್ನಿಕ್ ವಿದ್ಯಾರ್ಥಿಗಳ ಆಯ್ಕೆ

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 18:ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಶ್ರೀ ಸಂಗನಬಸವ ಮಹಾಸ್ವಾಮೀಜಿ ಪಾಲಿಟೆಕ್ನಿಕ್ ನಲ್ಲಿ ಜೂನ್ 16 ಮಂಗಳವಾರ ಮತ್ತು ಜೂನ್ 17 ಬುಧವಾರ ಎರಡು ದಿನ ನಡೆದ ಕ್ಯಾಂಪಸ್ ಸಂದರ್ಶನದಲ್ಲಿ 46 ಡಿಪ್ಲೋಮಾ ಮತ್ತು 48 ಐಟಿಐ ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.ಧಾರವಾಡದ ನಿಡೆಕ್(NIDEK) ಸಂಸ್ಥೆ ಮತ್ತು ಬಿ.ಎಲ್.ಡಿ.ಇ ಪಾಲಿಟೆಕ್ನಿಕ್ ಹಾಗೂ ಐಟಿಐ ವತಿಯಿಂದ ಆಯೋಜಿಸಲಾದ ಈ ಕ್ಯಾಂಪಸ್ ಸಂದರ್ಶನದಲ್ಲಿ ನಿಡೆಕ್ ಮುಖ್ಯ ವ್ಯವಸ್ಥಾಪಕ ಸೋಮಶೇಖರ, ವ್ಯವಸ್ಥಾಪಕ ಮಂಜುನಾಥ, ಮಾನವ ಸಂಪನ್ಮೂಲ ವಿಭಾಗದ ಚಂದನಾ ಹಾಗೂ ನಿಶ್ಮಿತಾ ಸಂದರ್ಶನ…

Read More

ಬಿಎಲ್ ಡಿಇ ಆಸ್ಪತ್ರೆಗೆ ದೇಹದಾನ

ಸಪ್ತಸಾಗರ ವಾರ್ತೆ,ವಿಜಯಪುರ, ಏ. 26: ಜಿಲ್ಲೆಯಲ್ಲಿ ದೇಹದಾನದ ಮಹತ್ವದ ಕುರಿತು ಜನರಲ್ಲಿ ಜಾಗೃತಿ ಹೆಚ್ಚಾಗುತ್ತಿದ್ದು, ಸಿಂದಗಿ ತಾಲೂಕಿನ‌ ಹಂದಿಗನೂರು ಗ್ರಾಮದ ಮಹಾದೇವಪ್ಪ ಗುರುಬಸಪ್ಪ ಮುಳವಾಡ(82) ಅವರ ಮೃತದೇಹವನ್ನು ಕುಟುಂಬಸ್ಥರು ಬಿ.ಎಲ್.ಡಿ.ಇ ಆಸ್ಪತ್ರೆಗೆ ದಾನ ಮಾಡಿದ್ದಾರೆ.82 ವರ್ಷದ ಮಹಾದೇವಪ್ಪ ಗುರುಬಸಪ್ಪ ಮುಳವಾಡ ಅವರು ಏಪ್ರಿಲ್ 24 ರಂದು ಶುಕ್ರವಾರ ನಿಧನರಾಗಿದ್ದು. ಮೃತರ ಇಚ್ಛೆಯಂತೆ ಕುಟುಂಬಸ್ಥರು ದೇಹದಾನ ಮಾಡಿದ್ದಾರೆ.ಈ‌ ಸಂದರ್ಭದಲ್ಲಿ ಆಸ್ಪತ್ರೆಯ ಅಂಗರಚನಾಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಆರ್. ಎಸ್. ಬುಲಗೌಡ ಅವರು ಪಾರ್ಥಿವ ಶರೀರ ಸ್ವೀಕರಿಸಿ ಕುಟುಂಬಸ್ಥರಿಗೆ ಕೃತಜ್ಞತೆ…

Read More

ಗೊಳಸಾರದಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ ಯಶಸ್ವಿ

ಸಪ್ತಸಾಗರ ವಾರ್ತೆ, ವಿಜಯಪುರ, ಜ. 13: ಸದ್ಗುರು ಶ್ರೀ ಚಿನ್ಮಯಮೂರ್ತಿ ತ್ರಿಮೂರ್ತಿ ಮಹಾಶಿವಯೋಗಿಗಳ 32ನೇ ಪುಣ್ಯಾರಾಧನೆ ಮಹೋತ್ಸವದ ಅಂಗವಾಗಿ ಇಂಡಿ ತಾಲೂಕಿನ ಗೊಳಸಾರದಲ್ಲಿ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯದ ಆಸ್ಪತ್ರೆಯ ವತಿಯಿಂದ ಪ್ರಾಥಮಿಕ ಆರೋಗ್ಯ ಕೇಂದ್ರ ಚಿಕ್ಕಬೇನೂರ ಮತ್ತು ಅಗರಖೇಡ ಸಹಯೋಗದಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ ಮತ್ತು ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಸೋಮವಾರ ನಡೆಯಿತು.ಶ್ರೀ ತ್ರಿಮೂರ್ತಿ ಮಹಾಶಿವಯೋಗಿಗಳ ಭಾವಚಿತ್ರಕ್ಕೆ ಪೂಜಿಸುವ ಮತ್ತು ಸಸಿಗೆ ನೀರುಣಿಸುವ ಮೂಲಕ ಅಭಿನವ…

Read More

ಡಿ. 19ರಂದು ಬಿಎಲ್ ಡಿಇ ಡೀಮ್ಡ್ ವಿವಿ ಘಟಿಕೋತ್ಸವ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 15: ನಗರದ ಪ್ರತಿಷ್ಠಿತ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ 13ನೇ ಘಟಿಕೋತ್ಸವ ಡಿಸೆಂಬರ್ 19 ಶುಕ್ರವಾರ ವಿವಿಯ ಗ್ರಂಥಾಲಯ ಸಭಾಂಗಣದಲ್ಲಿ ನಡೆಯಲಿದೆ.ಬೆಳಗ್ಗೆ 11 ಗಂಟೆಗೆ ನಡೆಯಲಿರುವ ಈ ಘಟಿಕೋತ್ಸವದಲ್ಲಿ ನವದೆಹಲಿ ರಾಷ್ಟ್ರೀಯ ವೈದ್ಯಕೀಯ ಆಯೋಗದ ವೈದ್ಯಕೀಯ ಮೌಲ್ಯಮಾಪನ ಮತ್ತು ಶ್ರೇಯಾಂಕ ಮಂಡಳಿಯ ಅಧ್ಯಕ್ಷ ಡಾ. ಎಂ. ಕೆ. ರಮೇಶ್ ಅವರು ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಘಟಿಕೋತ್ಸವ ಭಾಷಣ ಮಾಡಲಿದ್ದಾರೆ.ಈ ಸಂದರ್ಭದಲ್ಲಿ ಬಿ.ಎಲ್.ಡಿ.ಇ ಸಂಸ್ಥೆಯ ಅಧ್ಯಕ್ಷ, ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ…

Read More

ಬಿ. ಎಲ್. ಡಿ. ಇ. ಎಫ್. ಎಂ ರೆಡಿಯೋ ಚಾಲನೆ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 3: ಶಿಕ್ಷಣ, ಆರೋಗ್ಯ, ಸಮಾಜ ಸೇವೆಯ ಮೂಲಕ ಮನೆಮಾತಾಗಿರುವ ನಗರದ ಪ್ರತಿಷ್ಠಿತ ಬಿ.ಎಲ್.ಡಿ.ಇ ಸಂಸ್ಥೆ ಇದೀಗ ಮಾಧ್ಯಮ ಕ್ಷೇತ್ರಕ್ಕೂ ಮುಂದಡಿ ಇಟ್ಟಿದೆ. ಜಿಲ್ಲೆಯ ಜನರಿಗೆ ಎಫ್. ಎಂ. ರೇಡಿಯೂ ಮೂಲಕ ಮತ್ತಷ್ಟು ಹತ್ತಿರವಾಗಲು ಸಂಸ್ಥೆ ಈಗ ಬಿ.ಎಲ್.ಡಿ.ಇ ಧ್ವನಿ 98.6 ಎಫ್‌.ಎಂ ಸಮುದಾಯ ರೇಡಿಯೋ ಕೇಂದ್ರ ಪ್ರಾರಂಭಿಸಿದೆ.ರೈತರು, ಮಹಿಳೆಯರು, ಯುವಕರು ಹಾಗೂ ಸಮಾಜದ ನಾನಾ ಸ್ತರದ ಜನರನ್ನು ಕೇಂದ್ರೀಕರಿಸಿ ಅನೇಕ ಕಾರ್ಯಕ್ರಮಗಳನ್ನೂ ಈ ಬಾನುಲಿ ಕೇಂದ್ರ ಸಿದ್ಧಪಡಿಸಿದ್ದು, ಇದೇ ಡಿಸೆಂಬರ್ 7…

Read More