ಬೆಂಗಳೂರಿನಲ್ಲಿ ಬಿ.ಎಲ್.ಡಿ.ಇ. ವಿಶ್ವವಿದ್ಯಾಲಯದ ಕ್ಯಾಂಪಸ್ ಶೀಘ್ರ ಆರಂಭ:

ಸಪ್ತಸಾಗರ ವಾರ್ತೆ, ವಿಜಯಪುರ, ಆ. 21:ಬಿ.ಎಲ್.ಡಿ.ಇ. ವಿಶ್ವವಿದ್ಯಾಲಯವು ಬೆಂಗಳೂರಿನಲ್ಲಿ ಅತ್ಯಾಧುನಿಕ ಸೌಲಭ್ಯಗಳೊಂದಿಗೆ ತನ್ನ ಕ್ಯಾಂಪಸ್‍ ಅನ್ನು ಸ್ಥಾಪಿಸುತ್ತಿದೆ ಎಂದು ಬಿಎಲ್ ಡಿಇ ಡೀಮ್ಡ್ ವಿಶ್ವವಿದ್ಯಾಲಯ ಕುಲಾಧಿಪತಿ ಬಸನಗೌಡ ಎಂ. ಪಾಟೀಲ ತಿಳಿಸಿದರು.ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, Engineering, Computer Applications, Business Administration, Pharmacy, Law, Architecture, Design and Applied Sciences ಸೇರಿದಂತೆ ಹಂತ ಹಂತವಾಗಿ 8-10 ಕಾಲೇಜುಗಳನ್ನು ಆರಂಭಿಸಲಿದೆ. ಇದಲ್ಲದೇ ಅಂತಾರಾಷ್ಟ್ರೀಯ ಶಾಲೆಯನ್ನೂ ಸಹ ಪ್ರಾರಂಭಿಸಲು ಯೋಜಿಸಿದೆ ಎಂದರು.ವಿವಿ ಈಗಾಗಲೇ ಇಂಜಿನಿಯರಿಂಗ್ ಮಹಾವಿದ್ಯಾಲಯ ಹೊಂದಿದ್ದು,ಬಿ.ಎಲ್.ಡಿ.ಇ….

Read More

ಸ್ಕೇಟಿಂಗ್ ಸ್ಪರ್ಧೆಯಲ್ಲಿ ಬಿಎಲ್ ಡಿಇ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 17: ಬಿ.ಎಲ್.ಡಿ.ಇ ಸಂಸ್ಥೆಯ ಜಮಖಂಡಿಯಲ್ಲಿರುವ ಬಿ.ಎಲ್.ಡಿ.ಇ ಸ್ಪೋರ್ಟ್ ಅಕಾಡೆಮಿಯ ವಿದ್ಯಾರ್ಥಿಗಳು 79ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಆಯೋಜಿಸಲಾಗಿದ್ದ 79 ನಿಮಿಷಗಳ ಸತತ ಸ್ಕೇಟಿಂಗ್ ನಲ್ಲಿ ಅತ್ಯುತ್ತಮ ಸಾಧನೆ ಮಾಡುವ ಮೂಲಕ ಗಮನ ಸೆಳೆದಿದ್ದಾರೆ.ಯುನೈಟೆಟ್ ಸ್ಟೇಟ್ ಆಫ್ ಅಮೇರಿಕಾ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್, ಜೀನಿಯಸ್ ಇಂಡಿಯನ್ ಬುಕ್ ಆಫ್ ವರ್ಡ್ಲ್ ರೆಕಾರ್ಡ್ಸ್ ಮತ್ತು ಯು. ಎನ್. ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ಜಂಟಿಯಾಗಿ ಶುಕ್ರವಾರ ದೇಶಾದ್ಯಂತ ಜಿಲ್ಲಾ ಕೇಂದ್ರದಲ್ಲಿ ಸ್ಕೇಟಿಂಗ್ ಆಯೋಜಿಸಿತ್ತು….

Read More

ಸ್ವಾತಂತ್ರ್ಯೋತ್ಸವ ಅಂಗವಾಗಿ ರಕ್ತದಾನ ಶಿಬಿರ

ಸಪ್ತಸಾಗರ ವಾರ್ತೆ ವಿಜಯಪುರ, ಆ. 16: 79ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎ. ಎಸ್. ಪಾಟೀಲ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಶುಕ್ರವಾರ ರಕ್ತದಾನ ಶಿಬಿರ ನಡೆಯಿತು.ಎಂ. ಬಿ. ಪಾಟೀಲ ಫೌಂಡೇಶನ್ ಸಹಯೋಗದಲ್ಲಿ ನಡೆದ ಈ‌ ಶಿಬಿರದಲ್ಲಿ 41 ವಿದ್ಯಾರ್ಥಿಗಳು ರಕ್ತದಾನ ಮಾಡಿದರು.ಈ‌ ಸಂದರ್ಭದಲ್ಲಿ ಕಾಲೇಜಿನ ಪ್ರಾಚಾರ್ಯ ಡಾ. ಎಸ್. ಬಿ. ಕಮತಿ, ಉಪಪ್ರಾಚಾರ್ಯ ಎಸ್. ಎ. ಪಾಟೀಲ, ಸಂಸ್ಥೆಯ ಕಾನೂನು ಸಲಹೆಗಾರ ಹಾಗೂ ವಿದ್ಯಾರ್ಥಿಗಳ ಕ್ಷೇಮಾಭಿವೃದ್ಧಿ ಸಂಯೋಜಕ ಸೂರ್ಯಕಾಂತ ಬಿರಾದಾರ, ಶ್ರೀ ಬಿ. ಎಂ….

Read More

ಬಿಎಲ್ ಡಿಇ ಡೀಮ್ಡ್ ವಿವಿ ವತಿಯಿಂದ ಹರ್ ಘರ್ ತಿರಂಗಾ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 12: ಹರ್ ಘರ್ ತಿರಂಗಾ ಅಭಿಯಾನದ ಅಂಗವಾಗಿ ನಗರದ ಬಿ.ಎಲ್.ಡಿ.ಇ. ಡೀಮ್ಡ್ ವಿಶ್ವವಿದ್ಯಾಲಯದಲ್ಲಿ ಇಂದು ಮಂಗಳವಾರ ಹರ್ ಘರ್ ತಿರಂಗಾ ರ‍್ಯಾಲಿ ನಡೆಯಿತು.ಡೀಮ್ಡ್ ವಿವಿ‌ ಸಮಕುಲಾಧಿಪತಿ ಡಾ. ವೈ. ಎಂ. ಜಯರಾಜ ಅವರು ತಿರಂಗಾ ರ‍್ಯಾಲಿಗೆ ಚಾಲನೆ ನೀಡಿದರು.ಈ ರ‍್ಯಾಲಿಯು ಬಿ.ಎಲ್.ಡಿ.ಇ. ಡೀಮ್ಡ್ ವಿಶ್ವವಿದ್ಯಾಲಯದ ಮುಂಭಾಗದ ಸೋಲಾಪೂರ ರಸ್ತೆಯಿಂದ 770 ಲಿಂಗದ ದೇವಸ್ಥಾನ, ಸಂಗನಬಸವ ಕಲ್ಯಾಣ ಮಂಟಪ ಮಾರ್ಗವಾಗಿ ಬಿ.ಎಲ್.ಡಿ.ಇ. ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಏನ್.ಆರ್.ಐ ಹಾಸ್ಟೇಲ್ ಮಾರ್ಗವಾಗಿ ಮರಳಿ ವಿಶ್ವವಿದ್ಯಾಲಯದಲ್ಲಿ…

Read More

ಬಿಎಲ್ ಡಿಇ ಲೈಫ್ ಕೇರ್ ಪ್ರೊಡಕ್ಟ್ಸಗಳ ಆರೋಗ್ಯ ಫಾರ್ಮಸಿ ಉದ್ಘಾಟನೆ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 11: ಬಿ.ಎಲ್.ಡಿ ಲೈಫ್ ಕೇರ್ ಪ್ರೊಡಕ್ಟ್ಸ್ ಗಳ ಘಟಕವಾದ ಆರೋಗ್ಯ ಫಾರ್ಮಸಿ ಉದ್ಘಾಟನೆ ಕಾರ್ಯಕ್ರಮ ಇಂದು ಸೋಮವಾರ ನಡೆಯಿತು.ನಗರದ 770 ಲಿಂಗದ ಗುಡಿ ಹತ್ತಿರವಿರುವ ಬಿ.ಎಲ್.ಡಿ ಸೌಹಾರ್ದ ಸಹಕಾರಿ ಶಾಖೆಯ ನೆಲ ಅಂತಸ್ತಿನಲ್ಲಿ ಕಟ್ಟಡದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜ್ಞಾನಯೋಗಾಶ್ರಮದ ಅಧ್ಯಕ್ಷ ಶ್ರೀ ಬಸವಲಿಂಗ ಸ್ವಾಮೀಜಿ ಸಾನಿಧ್ಯ ವಹಿಸಿ ಪೂಜೆ ನೆರವೇರಿಸಿದರು. ಅಲ್ಲದೇ, ಬಿ.ಎಲ್.ಡಿ ಲೈಫಕೇರ್ ತಯಾರಿಸಿರುವ ಹೈಜೀನ್ ಮತ್ತು ಹೆಲ್ತಕೇರ್ ಉತ್ಪನ್ನಗಳನ್ನು ಬಿಡುಗಡೆ ಮಾಡಿದರು.ಬಳಿಕ ಮಾತನಾಡಿದ ಶ್ರೀಗಳು, ಬಿ.ಎಲ್.ಡಿ.ಇ ಸಂಸ್ಥೆ ಜನಪರ…

Read More

ಸಾವಯವ ತ್ಯಾಜ್ಯ ಕೊಳೆಯುವ ಉಪಕರಣ: ಭಾರತ ಸರ್ಕಾರದ ಪೇಟೆಂಟ್ ಮಂಜೂರು

ಸಪ್ತಸಾಗರ ವಾರ್ತೆ, ವಿಜಯಪುರ, ಆ. 10: ನಗರದ ಬಿಎಲ್‌ಡಿಇ ಸಂಸ್ಥೆಯ ವಚನ ಪಿತಾಮಹ ಡಾ. ಫ.ಗು. ಹಳಕಟ್ಟಿ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕಾಲೇಜಿನ ಸಿವಿಲ್ ಇಂಜಿನಿಯರಿಂಗ್ ವಿಭಾಗದ ಅಧ್ಯಾಪಕರು ಮತ್ತು ವಿದ್ಯಾರ್ಥಿಗಳಿಗೆ “ಸಾವಯವ ತ್ಯಾಜ್ಯವನ್ನು ಕೊಳೆಯುವ ಉಪಕರಣ” ಎಂಬ ಶೀರ್ಷಿಕೆಯ ವಿನ್ಯಾಸಕ್ಕಾಗಿ ಭಾರತ ಸರ್ಕಾರದ ಪೇಟೆಂಟ್ ಕಚೇರಿಯು ಪೇಟೆಂಟ್ ನೀಡಿದೆ.2025ರ ಜು. 30ರಂದು ಸಂಖ್ಯೆ 454549-001 ಹೊಂದಿರುವ ವಿನ್ಯಾಸದ ನೋಂದಣಿ ಪ್ರಮಾಣಪತ್ರದ ಅಡಿಯಲ್ಲಿ ಪೇಟೆಂಟ್ ನೋಂದಾಯಿಸಲಾಗಿದೆ. ಅಧ್ಯಾಪಕರು ಮತ್ತು ವಿದ್ಯಾರ್ಥಿಗಳಾದ ಉತ್ಪನ್ನವನ್ನು ವಿನ್ಯಾಸಗೊಳಿಸುವಲ್ಲಿ ಪ್ರೊ. ಸಂದೀಪ ಶಂಕರ…

Read More

ಬಿಎಲ್ ಡಿಇ ಡೀಮ್ಡ್ ವಿವಿಗೆ ರ‍್ಯಾಂಕ್

ಸಪ್ತಸಾಗರ ವಾರ್ತೆ, ವಿಜಯಪುರ, ಆ. 8: ದೇಶದ ಹೆಸರಾಂತ ನಿಯತಕಾಲಿಕ ಔಟಲುಕ್-ಐಸಿಎಆರ್‌ಇ ನಡೆಸಿದ ವಿಶ್ವವಿದ್ಯಾಲಯ ರ‍್ಯಾಂಕ್ ಕಿಂಗ್ – 2025ರ ಸಮೀಕ್ಷೆಯಲ್ಲಿ ನಗರದ ಪ್ರತಿಷ್ಠಿತ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯ ಮೂರು ವಿಭಾಗಗಳಲ್ಲಿ ರ‍್ಯಾಂಕ್(Rank) ಪಡೆದಿದೆ.ದೇಶದ 15 ಖಾಸಗಿ ವೈದ್ಯಕೀಯ ವಿಶ್ವವಿದ್ಯಾಲಯಗಳಲ್ಲಿ 4ನೇ ‌ರ‍್ಯಾಂಕ್(Rank), ದೇಶದ 25 ಮಲ್ಟಿ-ಡಿಸಿಪ್ಲಿನರಿ ಡೀಮ್ಡ್ ವಿವಿಗಳಲ್ಲಿ 10ನೇ ‌ರ‍್ಯಾಂಕ್(Rank), ಹಾಗೂ ದೇಶದ 15 ಡೀಮ್ಡ್ ವಿವಿ ನ್ಯಾಶನಲ್ ಎಮಿನನ್ಸ್ ವಿಭಾಗದಲ್ಲಿ 10ನೇ ರ‍್ಯಾಂಕ್ (Rank) ಪಡೆಯುವ ಮೂಲಕ ಗಮನ ಸೆಳೆದಿದೆ.ವಿವಿಯ ಈ ಸಾಧನೆಗೆ…

Read More

ಜಿರಿಯಾಟ್ರಿಕ್ ಕಾನ್ಸೆಪ್ಟ್ ಎರಡನೇ ಆವೃತ್ತಿ ಪುಸ್ತಕ ಬಿಡುಗಡೆ

ಸಪ್ತ ಸಾಗರ ವಾರ್ತೆ, ವಿಜಯಪುರ, ಆ. 5: ನಗರದ ಬಿ. ಎಲ್. ಡಿ.‌ ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯದ ಜೆರಿಯಾಟ್ರಿಕ್ಸ್ ವಿಭಾಗದ ವತಿಯಿಂದ ಸಂಪಾದಿಸಲಾದ ಜಿರಿಯಾಟ್ರಿಕ್ ಕಾನ್ಸೆಪ್ಟ್ (Geriatric Concepts) ಪುಸ್ತಕದ ಎರಡನೇ ಆವೃತ್ತಿಯನ್ನು ವಿವಿ ಸಮಕುಲಾಧಿಪತಿ ಡಾ. ವೈ. ಎಂ. ಜಯರಾಜ ಸೋಮವಾರ ಬಿಡುಗಡೆ ಮಾಡಿದರು.ವಿವಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪುಸ್ತಕ ಬಿಡುಗಡೆ ಮಾಡಿ‌ ಮಾತನಾಡಿದ ಅವರು, ಈ ಪುಸ್ತಕವು ವೈದ್ಯಕೀಯ, ನರ್ಸಿಂಗ್, ಫಾರ್ಮಾ ಮತ್ತು ಭೌತಚಿಕಿತ್ಸೆ ವಿದ್ಯಾರ್ಥಿಗಳಿಗೆ ಅತ್ಯಂತ…

Read More

ನಾಳೆ ಬಿ.ಎಲ್.ಡಿ.ಇ ಹೈಟೆಕ್ ಆಯುರ್ವೇದ ಆಸ್ಪತ್ರೆ ಉದ್ಘಾಟನೆ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 26:ಬಿ.ಎಲ್.ಡಿ.ಇ ಆಸ್ಪತ್ರೆ ನಗರ ಆರೋಗ್ಯ ಕೇಂದ್ರ ಮತ್ತು ಹೈಟೆಕ್ ಆಯುರ್ವೇದ ಆಸ್ಪತ್ರೆ ಹಾಗೂ ಶೈಕ್ಷಣಿಕ ಭವನದ ಉದ್ಘಾಟನೆ ಸಮಾರಂಭ ಜು. 27 ರಂದು ನಗರದಲ್ಲಿ ನಡೆಯಲಿದೆ.ಬಿ.ಎಲ್.ಡಿ.ಇ. ಸಂಸ್ಥೆಯ ಎ.ವಿ.ಎಸ್.ಆಯುರ್ವೇದ ಮಹಾವಿದ್ಯಾಲಯ ಆಸ್ಪತ್ರೆ ಹಾಗೂ ಸಂಶೋಧನ ಕೇಂದ್ರದ ಆವರಣದಲ್ಲಿ ಬೆಳಗ್ಗೆ 8 ಗಂಟೆಗೆ ನಡೆಯಲಿರುವ ಕಾರ್ಯಕ್ರಮದಲ್ಲಿ ಬೆಂಗಳೂರಿನ ಶ್ರೀ ಬೇಲಿಮಠ ಮಹಾಸಂಸ್ಥಾನದ ಶ್ರೀ ಶಿವಾನುಭವ ಚರಮೂರ್ತಿ ಶಿವರುದ್ರ ಮಹಾಸ್ವಾಮಿಜಿ ಉದ್ಘಾಟನೆ ನೆರವೇರಿಸಲಿದ್ದಾರೆ.ಬಿ.ಎಲ್.ಡಿ.ಇ ಸಂಸ್ಥೆಯ ಅಧ್ಯಕ್ಷ ಮತ್ತು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ…

Read More

ಶಸ್ತ್ರ ಚಿಕಿತ್ಸೆ ಗಾಯ ಗುಣಪಡಿಸಲು ಪ್ಲಾಸ್ಟಿಕ್ ಸರ್ಜರಿ ವರದಾನ: ಡಾ. ಹೊನ್ನುಟಗಿ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 15:ಗಾಯಗಳು, ದೋಷಗಳು, ಶಸ್ತ್ರಚಿಕಿತ್ಸೆಯಿಂದಾಗುವ ಕಲೆಗಳನ್ನು ಸರಿಪಡಿಸಲು ಮತ್ತು ವ್ಯಕ್ತಿಯ ಸೌಂದರ್ಯವನ್ನು ಹೆಚ್ಚಿಸಲು ಪ್ಲಾಸ್ಟಿಕ್ ಸರ್ಜರಿ ವರದಾನವಾಗಿದೆ ಎಂದು ಬಿ.ಎಲ್.ಡಿ.ಇ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ರಾಜೇಶ ಹೊನ್ನುಟಗಿ ಹೇಳಿದ್ದಾರೆ.ಮಂಗಳವಾರ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ.ಎಂ.ಪಾಟೀಲ ಸೂಪರ್ ಸ್ಪೇಷಾಲಿಟಿ ಆಶ್ಪತ್ರೆಯಲ್ಲಿ ನಡೆದ ವಿಶ್ವ ಪ್ಲಾಸ್ಟಿಕ್ ಸರ್ಜರಿ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.ಈ ಹಿಂದೆ ಮನುಷ್ಯನ‌ ಮುಖಚರ್ಯೆ, ಅಂಗವೀಕಲತೆ ಸೇರಿದಂತೆ ನಾನಾ ವಿಕಲತೆಗಳನ್ನು ಸರಿಪಡಿಸುವುದು ಕಷ್ಟಸಾಧ್ಯವಾಗಿತ್ತು. ಆದರೆ ಇಂದು ವೈದ್ಯಕೀಯ ಕ್ಷೇತ್ರದಲ್ಲಿ ಆಗಿರುವ…

Read More